Homeಮುಖಪುಟಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

- Advertisement -
- Advertisement -

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ  ದೆಹಲಿ, ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ.

ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾನೆ.

ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ ಎಂದು ಆರೋಪಿಸಿದ್ದಾನೆ.

4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಇಂದು ನಡೆದ ಯಹೋವನ ಸಾಕ್ಷಿಗಳ ಧಾರ್ಮಿಕ ಪ್ರಾರ್ಥನೆ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. ಪ್ರಾರ್ಥನೆಯ ಮಧ್ಯೆ ಸ್ಫೋಟ ಸಂಭವಿಸಿದೆ ಎಂದು ಕನ್ವೆನ್ಷನ್ ಸೆಂಟರ್‌ನಲ್ಲಿದ್ದ ಜನರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಟಿಫಿನ್ ಬಾಕ್ಸ್ ನಲ್ಲಿ ಸ್ಫೋಟಕಗಳನ್ನು ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

45 ಗಾಯಾಳುಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 18 ಜನರು ಐಸಿಯುನಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿರುವ ಐವರ ಸ್ಥಿತಿ ಚಿಂತಾಜನಕವಾಗಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಫೋಟವನ್ನು ದುರದೃಷ್ಟಕರ ಎಂದು ಹೇಳಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೊಚ್ಚಿ; ಸರಣಿ ಸ್ಪೋಟ ಘಟನೆ ಗಂಭೀರವಾದುದು; ಸಿಎಂ ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...