Homeಕರ್ನಾಟಕಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

ಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

- Advertisement -
- Advertisement -

ಕೊರೊನ ಬಡಜನರ ನೈತಿಕ ಸ್ಥೈರ್ಯವನ್ನು ಕುಗ್ಗುವಂತೆ ಮಾಡಿದೆ. ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಗೂಡು ಸೇರಿದವರ ಪಾಡು ಕೇಳುವವರೇ ಇಲ್ಲ. ಮನೆಯಲ್ಲಿ ಅಕ್ಕಿ ಇಲ್ಲ, ಜೇಬಿನಲ್ಲಿ ಹಣ ಕಂಡಿಲ್ಲ, ಮಾಡಲು ಕೆಲಸವೂ ಇಲ್ಲ. ನಗರದಿಂದ ಹಳ್ಳಿಗೆ ಹಿಂತಿರುಗಿರುವವರು ಮಂಕಾಗಿದ್ದಾರೆ. ಕಡಿಮೆ ಕೂಲಿ ಅಂದ್ರೂ ಕೆಲಸಕ್ಕೆ ಹೋಗುವ ಪರಿಸ್ಥಿತಿ ಇದೆ. ಲಾಕ್ ಡೌನ್ ಬಡವರ ಹೊಟ್ಟೆಯನ್ನು ಬರಿದು ಮಾಡಿದಲ್ಲದೆ ಅವರ ಜೀವನವನ್ನೂ ಲಾಕ್ ಮಾಡಿ ಬಿಟ್ಟಿದೆ.

ಕೊರೊನ ಲಾಕ್‌ಡೌನ್ ರೈತರು, ವಲಸೆ ಕಾರ್ಮಿಕರು, ಮಹಿಳೆಯರು, ಯುವಕರ ಬದುಕನ್ನು ಮೂರಾಬಟ್ಟೆ ಮಾಡಿದೆ. ಇಂಥ ಹೊತ್ತಿನಲ್ಲಿ ಕಾರ್ಮಿಕರು, ಕೃಷಿಕರು, ಗ್ರಾಮೀಣ ಆರ್ಥಿಕತೆ ಮತ್ತು ಪರಿಸರವನ್ನು ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಪೊಲಿಟಿಕ್ಸ್ ಫಾರ್ ದಿ ಪೂರ್ ಎಂಬ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಜೂನ್ 5ರಂದು ಉದ್ಘಾಟನೆಯಾಗಿರುವ ಈ ಸಂಘಟನೆ ದೇಶಾದ್ಯಂತ ಸರಣಿ ಉಪವಾಸ ನಡೆಸುತ್ತಾ ಬರುತ್ತಿದೆ.

ಬಿಹಾರದ ಚಂಪಾರಣ್ ಕೇಂದ್ರಬಿಂದುವನ್ನಾಗಿ ಇಟ್ಟುಕೊಂಡು ಸರಣಿ ಉಪವಾಸ ಆರಂಭವಾಗಿದೆ. ದಿನಕ್ಕೆ ಒಬ್ಬರಂತೆ ಸರಣಿ ಉಪವಾಸ ನಡೆಸುವುದು ಸಂಘಟನೆಯ ಭಾಗವಾಗಿದೆ. ಜೂನ್ 5 ರ ಪರಿಸರ ದಿನದಂದು ಆರಂಭವಾಗಿರುವ ಸರಣಿ ಉಪವಾಸ ಸತ್ಯಾಗ್ರಹ ಮಹಾತ್ಮಗಾಂಧೀ ಅವರ ಗ್ರಾಮೋದ್ದಾರದ ಕನಸನ್ನು ಹೊತ್ತು ಸಾಗುತ್ತಿದೆ. ಉಪವಾಸ ಸತ್ಯಾಗ್ರಹ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಪೂರ್ಣಗೊಳ್ಳಲಿದೆ

ಗಾಂಧೀಜಿ ಚಂಪಾರಣ್‌‌ನಲ್ಲಿ ಸತ್ಯಾಗ್ರಹ ನಡೆಸಿದ್ದರು. ಹಾಗಾಗಿ ಅಲ್ಲಿಂದಲೇ ಈ ಸರಣಿ ಸತ್ಯಾಗ್ರಹ ಆರಂಭಿಸಿರುವ ಪೊಲಿಟಿಕ್ಸ್ ಫಾರ್ ದಿ ಪೂರ್ ಗ್ರಾಮೀಣ ಅಭಿವೃದ್ದಿ ಮತ್ತು ಪರಿಸರ ಜಾಗೃತಿ ಮೂಡಿಸುತ್ತಿದೆ. ಕಳೆದ ಆರು ದಿನಗಳಿಂದ ದೇಶದ ಎಲ್ಲಾ ರಾಜ್ಯಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.

ಇದರ ಭಾಗವಾಗಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಪರಿಸರ, ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಸಾಹಿತ್ಯ ಪರಿಷತ್ ಇದರ ತಾಲೂಕು ಅಧ್ಯಕ್ಷೆ ಎನ್. ಇಂದಿರಮ್ಮ ಜೂನ್ 10ರ ಬೆಳಗ್ಗೆ 6 ಗಂಟೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ನಾಳೆ ಬೆಳಗ್ಗೆ 6ಗಂಟೆಗೆ ಪೂರ್ಣಗೊಳಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಎನ್. ಇಂದಿರಾ, ಕೊರೊನ ವೇಳೆ ವಲಸೆ ಕಾರ್ಮಿಕರು, ಕೃಷಿಕರು, ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. ಅವರಲ್ಲಿ ನೈತಿಕ ಬಲ ತುಂಬುದು ಇದರ ಉದ್ದೇಶ. ರಾಜಕೀಯ ವ್ಯಕ್ತಿಗಳು ನಾಯಕರು ಬಡವರು, ಕೃಷಿಕರು, ಕಾರ್ಮಿಕರ ಪರ ನಿಂತಿಲ್ಲ, ನಿಲ್ಲುವುದೂ ಇಲ್ಲ. ಇಂಥ ಸಂದರ್ಭದಲ್ಲಿ ದುಡಿಯುವ ಜನರಿಗ ನೈತಿಕ ಬಲ ತುಂಬುತ್ತೇವೆ. ಕಾರ್ಮಿಕರು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವಂತೆ ಒತ್ತಾಯಿಸುವುದು ಕೂಡ ಉದ್ದೇಶದಲ್ಲೊಂದು.

ಅಮೇಜಾನ್ ಕಾಡು ಕಡಿದು ನಾಶವಾಗುತ್ತಿದೆ. ಕೃಷಿ ಪದ್ದತಿ ಬದಲಾಗಿದೆ. ಬೆಳೆಗೆ ರಾಸಾಯಿನಿಕ ಗೊಬ್ಬರ ಹಾಕುತ್ತಿದ್ದಾರೆ. ಯಂತ್ರನಾಗರಿಕತೆ ಬಂದಿದೆ. ಈ ಎಲ್ಲಾ ಕಾರಣಗಳಿಗೆ ಪರಿಸರ ಅಸಮತೋಲನವಾಗಿದೆ. ಹಾಗಾಗಿ ಪರಿಸರ ಉಳಿಸಬೇಕು. ಗಿಡಮರಗಳನ್ನು ಬೆಳೆಸಬೇಕು. ಪರಿಸರ ಸ್ನೇಹಿ ಯೋಜನೆ ರೂಪಿಸಬೇಕು.  ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ, ಸೊಪ್ಪು ತರಕಾರಿ ಬೆಳೆಯುವುದು, ಗುಡಿಕೈಗಾರಿಕೆ ಕೈಗೊಂಡರೆ ಗ್ರಾಮೋದ್ದಾರ ಆಗುತ್ತದೆ. ಜೀವನವೂ ಹಸನಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದ ಜನ ನಗರಗಳಿಗೆ ಹೋಗಕೂಡದು. ನಗರದ ಜನರೇ ಹಳ್ಳಿಗೆ ಬಂದು ವಸ್ತುಗಳನ್ನು ಖರೀದಿಸುವಂತಹ ವಾತಾವರಣ ಸೃಷ್ಠಿಯಾಗಬೇಕು. ಹಣ ನಗರದಿಂದ ಗ್ರಾಮೀಣ ಭಾಗಕ್ಕೆ ಹರಿದರೆ ಗಾಂಧೀ ಕನಸು ನನಸಾಗುತ್ತದೆ ಎಂದು ತಿಳಿಸಿದ್ದಾರೆ.


ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...