Homeಕರ್ನಾಟಕಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

ಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

- Advertisement -
- Advertisement -

ಕೊರೊನ ಬಡಜನರ ನೈತಿಕ ಸ್ಥೈರ್ಯವನ್ನು ಕುಗ್ಗುವಂತೆ ಮಾಡಿದೆ. ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಗೂಡು ಸೇರಿದವರ ಪಾಡು ಕೇಳುವವರೇ ಇಲ್ಲ. ಮನೆಯಲ್ಲಿ ಅಕ್ಕಿ ಇಲ್ಲ, ಜೇಬಿನಲ್ಲಿ ಹಣ ಕಂಡಿಲ್ಲ, ಮಾಡಲು ಕೆಲಸವೂ ಇಲ್ಲ. ನಗರದಿಂದ ಹಳ್ಳಿಗೆ ಹಿಂತಿರುಗಿರುವವರು ಮಂಕಾಗಿದ್ದಾರೆ. ಕಡಿಮೆ ಕೂಲಿ ಅಂದ್ರೂ ಕೆಲಸಕ್ಕೆ ಹೋಗುವ ಪರಿಸ್ಥಿತಿ ಇದೆ. ಲಾಕ್ ಡೌನ್ ಬಡವರ ಹೊಟ್ಟೆಯನ್ನು ಬರಿದು ಮಾಡಿದಲ್ಲದೆ ಅವರ ಜೀವನವನ್ನೂ ಲಾಕ್ ಮಾಡಿ ಬಿಟ್ಟಿದೆ.

ಕೊರೊನ ಲಾಕ್‌ಡೌನ್ ರೈತರು, ವಲಸೆ ಕಾರ್ಮಿಕರು, ಮಹಿಳೆಯರು, ಯುವಕರ ಬದುಕನ್ನು ಮೂರಾಬಟ್ಟೆ ಮಾಡಿದೆ. ಇಂಥ ಹೊತ್ತಿನಲ್ಲಿ ಕಾರ್ಮಿಕರು, ಕೃಷಿಕರು, ಗ್ರಾಮೀಣ ಆರ್ಥಿಕತೆ ಮತ್ತು ಪರಿಸರವನ್ನು ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಪೊಲಿಟಿಕ್ಸ್ ಫಾರ್ ದಿ ಪೂರ್ ಎಂಬ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಜೂನ್ 5ರಂದು ಉದ್ಘಾಟನೆಯಾಗಿರುವ ಈ ಸಂಘಟನೆ ದೇಶಾದ್ಯಂತ ಸರಣಿ ಉಪವಾಸ ನಡೆಸುತ್ತಾ ಬರುತ್ತಿದೆ.

ಬಿಹಾರದ ಚಂಪಾರಣ್ ಕೇಂದ್ರಬಿಂದುವನ್ನಾಗಿ ಇಟ್ಟುಕೊಂಡು ಸರಣಿ ಉಪವಾಸ ಆರಂಭವಾಗಿದೆ. ದಿನಕ್ಕೆ ಒಬ್ಬರಂತೆ ಸರಣಿ ಉಪವಾಸ ನಡೆಸುವುದು ಸಂಘಟನೆಯ ಭಾಗವಾಗಿದೆ. ಜೂನ್ 5 ರ ಪರಿಸರ ದಿನದಂದು ಆರಂಭವಾಗಿರುವ ಸರಣಿ ಉಪವಾಸ ಸತ್ಯಾಗ್ರಹ ಮಹಾತ್ಮಗಾಂಧೀ ಅವರ ಗ್ರಾಮೋದ್ದಾರದ ಕನಸನ್ನು ಹೊತ್ತು ಸಾಗುತ್ತಿದೆ. ಉಪವಾಸ ಸತ್ಯಾಗ್ರಹ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಪೂರ್ಣಗೊಳ್ಳಲಿದೆ

ಗಾಂಧೀಜಿ ಚಂಪಾರಣ್‌‌ನಲ್ಲಿ ಸತ್ಯಾಗ್ರಹ ನಡೆಸಿದ್ದರು. ಹಾಗಾಗಿ ಅಲ್ಲಿಂದಲೇ ಈ ಸರಣಿ ಸತ್ಯಾಗ್ರಹ ಆರಂಭಿಸಿರುವ ಪೊಲಿಟಿಕ್ಸ್ ಫಾರ್ ದಿ ಪೂರ್ ಗ್ರಾಮೀಣ ಅಭಿವೃದ್ದಿ ಮತ್ತು ಪರಿಸರ ಜಾಗೃತಿ ಮೂಡಿಸುತ್ತಿದೆ. ಕಳೆದ ಆರು ದಿನಗಳಿಂದ ದೇಶದ ಎಲ್ಲಾ ರಾಜ್ಯಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.

ಇದರ ಭಾಗವಾಗಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಪರಿಸರ, ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಸಾಹಿತ್ಯ ಪರಿಷತ್ ಇದರ ತಾಲೂಕು ಅಧ್ಯಕ್ಷೆ ಎನ್. ಇಂದಿರಮ್ಮ ಜೂನ್ 10ರ ಬೆಳಗ್ಗೆ 6 ಗಂಟೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ನಾಳೆ ಬೆಳಗ್ಗೆ 6ಗಂಟೆಗೆ ಪೂರ್ಣಗೊಳಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಎನ್. ಇಂದಿರಾ, ಕೊರೊನ ವೇಳೆ ವಲಸೆ ಕಾರ್ಮಿಕರು, ಕೃಷಿಕರು, ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. ಅವರಲ್ಲಿ ನೈತಿಕ ಬಲ ತುಂಬುದು ಇದರ ಉದ್ದೇಶ. ರಾಜಕೀಯ ವ್ಯಕ್ತಿಗಳು ನಾಯಕರು ಬಡವರು, ಕೃಷಿಕರು, ಕಾರ್ಮಿಕರ ಪರ ನಿಂತಿಲ್ಲ, ನಿಲ್ಲುವುದೂ ಇಲ್ಲ. ಇಂಥ ಸಂದರ್ಭದಲ್ಲಿ ದುಡಿಯುವ ಜನರಿಗ ನೈತಿಕ ಬಲ ತುಂಬುತ್ತೇವೆ. ಕಾರ್ಮಿಕರು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವಂತೆ ಒತ್ತಾಯಿಸುವುದು ಕೂಡ ಉದ್ದೇಶದಲ್ಲೊಂದು.

ಅಮೇಜಾನ್ ಕಾಡು ಕಡಿದು ನಾಶವಾಗುತ್ತಿದೆ. ಕೃಷಿ ಪದ್ದತಿ ಬದಲಾಗಿದೆ. ಬೆಳೆಗೆ ರಾಸಾಯಿನಿಕ ಗೊಬ್ಬರ ಹಾಕುತ್ತಿದ್ದಾರೆ. ಯಂತ್ರನಾಗರಿಕತೆ ಬಂದಿದೆ. ಈ ಎಲ್ಲಾ ಕಾರಣಗಳಿಗೆ ಪರಿಸರ ಅಸಮತೋಲನವಾಗಿದೆ. ಹಾಗಾಗಿ ಪರಿಸರ ಉಳಿಸಬೇಕು. ಗಿಡಮರಗಳನ್ನು ಬೆಳೆಸಬೇಕು. ಪರಿಸರ ಸ್ನೇಹಿ ಯೋಜನೆ ರೂಪಿಸಬೇಕು.  ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ, ಸೊಪ್ಪು ತರಕಾರಿ ಬೆಳೆಯುವುದು, ಗುಡಿಕೈಗಾರಿಕೆ ಕೈಗೊಂಡರೆ ಗ್ರಾಮೋದ್ದಾರ ಆಗುತ್ತದೆ. ಜೀವನವೂ ಹಸನಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದ ಜನ ನಗರಗಳಿಗೆ ಹೋಗಕೂಡದು. ನಗರದ ಜನರೇ ಹಳ್ಳಿಗೆ ಬಂದು ವಸ್ತುಗಳನ್ನು ಖರೀದಿಸುವಂತಹ ವಾತಾವರಣ ಸೃಷ್ಠಿಯಾಗಬೇಕು. ಹಣ ನಗರದಿಂದ ಗ್ರಾಮೀಣ ಭಾಗಕ್ಕೆ ಹರಿದರೆ ಗಾಂಧೀ ಕನಸು ನನಸಾಗುತ್ತದೆ ಎಂದು ತಿಳಿಸಿದ್ದಾರೆ.


ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...