Homeಕರ್ನಾಟಕಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

ಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

- Advertisement -
- Advertisement -

ಕೊರೊನ ಬಡಜನರ ನೈತಿಕ ಸ್ಥೈರ್ಯವನ್ನು ಕುಗ್ಗುವಂತೆ ಮಾಡಿದೆ. ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಗೂಡು ಸೇರಿದವರ ಪಾಡು ಕೇಳುವವರೇ ಇಲ್ಲ. ಮನೆಯಲ್ಲಿ ಅಕ್ಕಿ ಇಲ್ಲ, ಜೇಬಿನಲ್ಲಿ ಹಣ ಕಂಡಿಲ್ಲ, ಮಾಡಲು ಕೆಲಸವೂ ಇಲ್ಲ. ನಗರದಿಂದ ಹಳ್ಳಿಗೆ ಹಿಂತಿರುಗಿರುವವರು ಮಂಕಾಗಿದ್ದಾರೆ. ಕಡಿಮೆ ಕೂಲಿ ಅಂದ್ರೂ ಕೆಲಸಕ್ಕೆ ಹೋಗುವ ಪರಿಸ್ಥಿತಿ ಇದೆ. ಲಾಕ್ ಡೌನ್ ಬಡವರ ಹೊಟ್ಟೆಯನ್ನು ಬರಿದು ಮಾಡಿದಲ್ಲದೆ ಅವರ ಜೀವನವನ್ನೂ ಲಾಕ್ ಮಾಡಿ ಬಿಟ್ಟಿದೆ.

ಕೊರೊನ ಲಾಕ್‌ಡೌನ್ ರೈತರು, ವಲಸೆ ಕಾರ್ಮಿಕರು, ಮಹಿಳೆಯರು, ಯುವಕರ ಬದುಕನ್ನು ಮೂರಾಬಟ್ಟೆ ಮಾಡಿದೆ. ಇಂಥ ಹೊತ್ತಿನಲ್ಲಿ ಕಾರ್ಮಿಕರು, ಕೃಷಿಕರು, ಗ್ರಾಮೀಣ ಆರ್ಥಿಕತೆ ಮತ್ತು ಪರಿಸರವನ್ನು ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಪೊಲಿಟಿಕ್ಸ್ ಫಾರ್ ದಿ ಪೂರ್ ಎಂಬ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಜೂನ್ 5ರಂದು ಉದ್ಘಾಟನೆಯಾಗಿರುವ ಈ ಸಂಘಟನೆ ದೇಶಾದ್ಯಂತ ಸರಣಿ ಉಪವಾಸ ನಡೆಸುತ್ತಾ ಬರುತ್ತಿದೆ.

ಬಿಹಾರದ ಚಂಪಾರಣ್ ಕೇಂದ್ರಬಿಂದುವನ್ನಾಗಿ ಇಟ್ಟುಕೊಂಡು ಸರಣಿ ಉಪವಾಸ ಆರಂಭವಾಗಿದೆ. ದಿನಕ್ಕೆ ಒಬ್ಬರಂತೆ ಸರಣಿ ಉಪವಾಸ ನಡೆಸುವುದು ಸಂಘಟನೆಯ ಭಾಗವಾಗಿದೆ. ಜೂನ್ 5 ರ ಪರಿಸರ ದಿನದಂದು ಆರಂಭವಾಗಿರುವ ಸರಣಿ ಉಪವಾಸ ಸತ್ಯಾಗ್ರಹ ಮಹಾತ್ಮಗಾಂಧೀ ಅವರ ಗ್ರಾಮೋದ್ದಾರದ ಕನಸನ್ನು ಹೊತ್ತು ಸಾಗುತ್ತಿದೆ. ಉಪವಾಸ ಸತ್ಯಾಗ್ರಹ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಪೂರ್ಣಗೊಳ್ಳಲಿದೆ

ಗಾಂಧೀಜಿ ಚಂಪಾರಣ್‌‌ನಲ್ಲಿ ಸತ್ಯಾಗ್ರಹ ನಡೆಸಿದ್ದರು. ಹಾಗಾಗಿ ಅಲ್ಲಿಂದಲೇ ಈ ಸರಣಿ ಸತ್ಯಾಗ್ರಹ ಆರಂಭಿಸಿರುವ ಪೊಲಿಟಿಕ್ಸ್ ಫಾರ್ ದಿ ಪೂರ್ ಗ್ರಾಮೀಣ ಅಭಿವೃದ್ದಿ ಮತ್ತು ಪರಿಸರ ಜಾಗೃತಿ ಮೂಡಿಸುತ್ತಿದೆ. ಕಳೆದ ಆರು ದಿನಗಳಿಂದ ದೇಶದ ಎಲ್ಲಾ ರಾಜ್ಯಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.

ಇದರ ಭಾಗವಾಗಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಪರಿಸರ, ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಸಾಹಿತ್ಯ ಪರಿಷತ್ ಇದರ ತಾಲೂಕು ಅಧ್ಯಕ್ಷೆ ಎನ್. ಇಂದಿರಮ್ಮ ಜೂನ್ 10ರ ಬೆಳಗ್ಗೆ 6 ಗಂಟೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ನಾಳೆ ಬೆಳಗ್ಗೆ 6ಗಂಟೆಗೆ ಪೂರ್ಣಗೊಳಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಎನ್. ಇಂದಿರಾ, ಕೊರೊನ ವೇಳೆ ವಲಸೆ ಕಾರ್ಮಿಕರು, ಕೃಷಿಕರು, ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. ಅವರಲ್ಲಿ ನೈತಿಕ ಬಲ ತುಂಬುದು ಇದರ ಉದ್ದೇಶ. ರಾಜಕೀಯ ವ್ಯಕ್ತಿಗಳು ನಾಯಕರು ಬಡವರು, ಕೃಷಿಕರು, ಕಾರ್ಮಿಕರ ಪರ ನಿಂತಿಲ್ಲ, ನಿಲ್ಲುವುದೂ ಇಲ್ಲ. ಇಂಥ ಸಂದರ್ಭದಲ್ಲಿ ದುಡಿಯುವ ಜನರಿಗ ನೈತಿಕ ಬಲ ತುಂಬುತ್ತೇವೆ. ಕಾರ್ಮಿಕರು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವಂತೆ ಒತ್ತಾಯಿಸುವುದು ಕೂಡ ಉದ್ದೇಶದಲ್ಲೊಂದು.

ಅಮೇಜಾನ್ ಕಾಡು ಕಡಿದು ನಾಶವಾಗುತ್ತಿದೆ. ಕೃಷಿ ಪದ್ದತಿ ಬದಲಾಗಿದೆ. ಬೆಳೆಗೆ ರಾಸಾಯಿನಿಕ ಗೊಬ್ಬರ ಹಾಕುತ್ತಿದ್ದಾರೆ. ಯಂತ್ರನಾಗರಿಕತೆ ಬಂದಿದೆ. ಈ ಎಲ್ಲಾ ಕಾರಣಗಳಿಗೆ ಪರಿಸರ ಅಸಮತೋಲನವಾಗಿದೆ. ಹಾಗಾಗಿ ಪರಿಸರ ಉಳಿಸಬೇಕು. ಗಿಡಮರಗಳನ್ನು ಬೆಳೆಸಬೇಕು. ಪರಿಸರ ಸ್ನೇಹಿ ಯೋಜನೆ ರೂಪಿಸಬೇಕು.  ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ, ಸೊಪ್ಪು ತರಕಾರಿ ಬೆಳೆಯುವುದು, ಗುಡಿಕೈಗಾರಿಕೆ ಕೈಗೊಂಡರೆ ಗ್ರಾಮೋದ್ದಾರ ಆಗುತ್ತದೆ. ಜೀವನವೂ ಹಸನಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದ ಜನ ನಗರಗಳಿಗೆ ಹೋಗಕೂಡದು. ನಗರದ ಜನರೇ ಹಳ್ಳಿಗೆ ಬಂದು ವಸ್ತುಗಳನ್ನು ಖರೀದಿಸುವಂತಹ ವಾತಾವರಣ ಸೃಷ್ಠಿಯಾಗಬೇಕು. ಹಣ ನಗರದಿಂದ ಗ್ರಾಮೀಣ ಭಾಗಕ್ಕೆ ಹರಿದರೆ ಗಾಂಧೀ ಕನಸು ನನಸಾಗುತ್ತದೆ ಎಂದು ತಿಳಿಸಿದ್ದಾರೆ.


ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...