Homeಕರ್ನಾಟಕಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

ಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

- Advertisement -
- Advertisement -

ಕೊರೊನ ಬಡಜನರ ನೈತಿಕ ಸ್ಥೈರ್ಯವನ್ನು ಕುಗ್ಗುವಂತೆ ಮಾಡಿದೆ. ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಗೂಡು ಸೇರಿದವರ ಪಾಡು ಕೇಳುವವರೇ ಇಲ್ಲ. ಮನೆಯಲ್ಲಿ ಅಕ್ಕಿ ಇಲ್ಲ, ಜೇಬಿನಲ್ಲಿ ಹಣ ಕಂಡಿಲ್ಲ, ಮಾಡಲು ಕೆಲಸವೂ ಇಲ್ಲ. ನಗರದಿಂದ ಹಳ್ಳಿಗೆ ಹಿಂತಿರುಗಿರುವವರು ಮಂಕಾಗಿದ್ದಾರೆ. ಕಡಿಮೆ ಕೂಲಿ ಅಂದ್ರೂ ಕೆಲಸಕ್ಕೆ ಹೋಗುವ ಪರಿಸ್ಥಿತಿ ಇದೆ. ಲಾಕ್ ಡೌನ್ ಬಡವರ ಹೊಟ್ಟೆಯನ್ನು ಬರಿದು ಮಾಡಿದಲ್ಲದೆ ಅವರ ಜೀವನವನ್ನೂ ಲಾಕ್ ಮಾಡಿ ಬಿಟ್ಟಿದೆ.

ಕೊರೊನ ಲಾಕ್‌ಡೌನ್ ರೈತರು, ವಲಸೆ ಕಾರ್ಮಿಕರು, ಮಹಿಳೆಯರು, ಯುವಕರ ಬದುಕನ್ನು ಮೂರಾಬಟ್ಟೆ ಮಾಡಿದೆ. ಇಂಥ ಹೊತ್ತಿನಲ್ಲಿ ಕಾರ್ಮಿಕರು, ಕೃಷಿಕರು, ಗ್ರಾಮೀಣ ಆರ್ಥಿಕತೆ ಮತ್ತು ಪರಿಸರವನ್ನು ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಪೊಲಿಟಿಕ್ಸ್ ಫಾರ್ ದಿ ಪೂರ್ ಎಂಬ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಜೂನ್ 5ರಂದು ಉದ್ಘಾಟನೆಯಾಗಿರುವ ಈ ಸಂಘಟನೆ ದೇಶಾದ್ಯಂತ ಸರಣಿ ಉಪವಾಸ ನಡೆಸುತ್ತಾ ಬರುತ್ತಿದೆ.

ಬಿಹಾರದ ಚಂಪಾರಣ್ ಕೇಂದ್ರಬಿಂದುವನ್ನಾಗಿ ಇಟ್ಟುಕೊಂಡು ಸರಣಿ ಉಪವಾಸ ಆರಂಭವಾಗಿದೆ. ದಿನಕ್ಕೆ ಒಬ್ಬರಂತೆ ಸರಣಿ ಉಪವಾಸ ನಡೆಸುವುದು ಸಂಘಟನೆಯ ಭಾಗವಾಗಿದೆ. ಜೂನ್ 5 ರ ಪರಿಸರ ದಿನದಂದು ಆರಂಭವಾಗಿರುವ ಸರಣಿ ಉಪವಾಸ ಸತ್ಯಾಗ್ರಹ ಮಹಾತ್ಮಗಾಂಧೀ ಅವರ ಗ್ರಾಮೋದ್ದಾರದ ಕನಸನ್ನು ಹೊತ್ತು ಸಾಗುತ್ತಿದೆ. ಉಪವಾಸ ಸತ್ಯಾಗ್ರಹ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಪೂರ್ಣಗೊಳ್ಳಲಿದೆ

ಗಾಂಧೀಜಿ ಚಂಪಾರಣ್‌‌ನಲ್ಲಿ ಸತ್ಯಾಗ್ರಹ ನಡೆಸಿದ್ದರು. ಹಾಗಾಗಿ ಅಲ್ಲಿಂದಲೇ ಈ ಸರಣಿ ಸತ್ಯಾಗ್ರಹ ಆರಂಭಿಸಿರುವ ಪೊಲಿಟಿಕ್ಸ್ ಫಾರ್ ದಿ ಪೂರ್ ಗ್ರಾಮೀಣ ಅಭಿವೃದ್ದಿ ಮತ್ತು ಪರಿಸರ ಜಾಗೃತಿ ಮೂಡಿಸುತ್ತಿದೆ. ಕಳೆದ ಆರು ದಿನಗಳಿಂದ ದೇಶದ ಎಲ್ಲಾ ರಾಜ್ಯಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.

ಇದರ ಭಾಗವಾಗಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಪರಿಸರ, ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಸಾಹಿತ್ಯ ಪರಿಷತ್ ಇದರ ತಾಲೂಕು ಅಧ್ಯಕ್ಷೆ ಎನ್. ಇಂದಿರಮ್ಮ ಜೂನ್ 10ರ ಬೆಳಗ್ಗೆ 6 ಗಂಟೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ನಾಳೆ ಬೆಳಗ್ಗೆ 6ಗಂಟೆಗೆ ಪೂರ್ಣಗೊಳಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಎನ್. ಇಂದಿರಾ, ಕೊರೊನ ವೇಳೆ ವಲಸೆ ಕಾರ್ಮಿಕರು, ಕೃಷಿಕರು, ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. ಅವರಲ್ಲಿ ನೈತಿಕ ಬಲ ತುಂಬುದು ಇದರ ಉದ್ದೇಶ. ರಾಜಕೀಯ ವ್ಯಕ್ತಿಗಳು ನಾಯಕರು ಬಡವರು, ಕೃಷಿಕರು, ಕಾರ್ಮಿಕರ ಪರ ನಿಂತಿಲ್ಲ, ನಿಲ್ಲುವುದೂ ಇಲ್ಲ. ಇಂಥ ಸಂದರ್ಭದಲ್ಲಿ ದುಡಿಯುವ ಜನರಿಗ ನೈತಿಕ ಬಲ ತುಂಬುತ್ತೇವೆ. ಕಾರ್ಮಿಕರು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವಂತೆ ಒತ್ತಾಯಿಸುವುದು ಕೂಡ ಉದ್ದೇಶದಲ್ಲೊಂದು.

ಅಮೇಜಾನ್ ಕಾಡು ಕಡಿದು ನಾಶವಾಗುತ್ತಿದೆ. ಕೃಷಿ ಪದ್ದತಿ ಬದಲಾಗಿದೆ. ಬೆಳೆಗೆ ರಾಸಾಯಿನಿಕ ಗೊಬ್ಬರ ಹಾಕುತ್ತಿದ್ದಾರೆ. ಯಂತ್ರನಾಗರಿಕತೆ ಬಂದಿದೆ. ಈ ಎಲ್ಲಾ ಕಾರಣಗಳಿಗೆ ಪರಿಸರ ಅಸಮತೋಲನವಾಗಿದೆ. ಹಾಗಾಗಿ ಪರಿಸರ ಉಳಿಸಬೇಕು. ಗಿಡಮರಗಳನ್ನು ಬೆಳೆಸಬೇಕು. ಪರಿಸರ ಸ್ನೇಹಿ ಯೋಜನೆ ರೂಪಿಸಬೇಕು.  ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ, ಸೊಪ್ಪು ತರಕಾರಿ ಬೆಳೆಯುವುದು, ಗುಡಿಕೈಗಾರಿಕೆ ಕೈಗೊಂಡರೆ ಗ್ರಾಮೋದ್ದಾರ ಆಗುತ್ತದೆ. ಜೀವನವೂ ಹಸನಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದ ಜನ ನಗರಗಳಿಗೆ ಹೋಗಕೂಡದು. ನಗರದ ಜನರೇ ಹಳ್ಳಿಗೆ ಬಂದು ವಸ್ತುಗಳನ್ನು ಖರೀದಿಸುವಂತಹ ವಾತಾವರಣ ಸೃಷ್ಠಿಯಾಗಬೇಕು. ಹಣ ನಗರದಿಂದ ಗ್ರಾಮೀಣ ಭಾಗಕ್ಕೆ ಹರಿದರೆ ಗಾಂಧೀ ಕನಸು ನನಸಾಗುತ್ತದೆ ಎಂದು ತಿಳಿಸಿದ್ದಾರೆ.


ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...