Homeಕರ್ನಾಟಕಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

ಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

- Advertisement -
- Advertisement -

ಕೊರೊನ ಬಡಜನರ ನೈತಿಕ ಸ್ಥೈರ್ಯವನ್ನು ಕುಗ್ಗುವಂತೆ ಮಾಡಿದೆ. ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಗೂಡು ಸೇರಿದವರ ಪಾಡು ಕೇಳುವವರೇ ಇಲ್ಲ. ಮನೆಯಲ್ಲಿ ಅಕ್ಕಿ ಇಲ್ಲ, ಜೇಬಿನಲ್ಲಿ ಹಣ ಕಂಡಿಲ್ಲ, ಮಾಡಲು ಕೆಲಸವೂ ಇಲ್ಲ. ನಗರದಿಂದ ಹಳ್ಳಿಗೆ ಹಿಂತಿರುಗಿರುವವರು ಮಂಕಾಗಿದ್ದಾರೆ. ಕಡಿಮೆ ಕೂಲಿ ಅಂದ್ರೂ ಕೆಲಸಕ್ಕೆ ಹೋಗುವ ಪರಿಸ್ಥಿತಿ ಇದೆ. ಲಾಕ್ ಡೌನ್ ಬಡವರ ಹೊಟ್ಟೆಯನ್ನು ಬರಿದು ಮಾಡಿದಲ್ಲದೆ ಅವರ ಜೀವನವನ್ನೂ ಲಾಕ್ ಮಾಡಿ ಬಿಟ್ಟಿದೆ.

ಕೊರೊನ ಲಾಕ್‌ಡೌನ್ ರೈತರು, ವಲಸೆ ಕಾರ್ಮಿಕರು, ಮಹಿಳೆಯರು, ಯುವಕರ ಬದುಕನ್ನು ಮೂರಾಬಟ್ಟೆ ಮಾಡಿದೆ. ಇಂಥ ಹೊತ್ತಿನಲ್ಲಿ ಕಾರ್ಮಿಕರು, ಕೃಷಿಕರು, ಗ್ರಾಮೀಣ ಆರ್ಥಿಕತೆ ಮತ್ತು ಪರಿಸರವನ್ನು ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಪೊಲಿಟಿಕ್ಸ್ ಫಾರ್ ದಿ ಪೂರ್ ಎಂಬ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಜೂನ್ 5ರಂದು ಉದ್ಘಾಟನೆಯಾಗಿರುವ ಈ ಸಂಘಟನೆ ದೇಶಾದ್ಯಂತ ಸರಣಿ ಉಪವಾಸ ನಡೆಸುತ್ತಾ ಬರುತ್ತಿದೆ.

ಬಿಹಾರದ ಚಂಪಾರಣ್ ಕೇಂದ್ರಬಿಂದುವನ್ನಾಗಿ ಇಟ್ಟುಕೊಂಡು ಸರಣಿ ಉಪವಾಸ ಆರಂಭವಾಗಿದೆ. ದಿನಕ್ಕೆ ಒಬ್ಬರಂತೆ ಸರಣಿ ಉಪವಾಸ ನಡೆಸುವುದು ಸಂಘಟನೆಯ ಭಾಗವಾಗಿದೆ. ಜೂನ್ 5 ರ ಪರಿಸರ ದಿನದಂದು ಆರಂಭವಾಗಿರುವ ಸರಣಿ ಉಪವಾಸ ಸತ್ಯಾಗ್ರಹ ಮಹಾತ್ಮಗಾಂಧೀ ಅವರ ಗ್ರಾಮೋದ್ದಾರದ ಕನಸನ್ನು ಹೊತ್ತು ಸಾಗುತ್ತಿದೆ. ಉಪವಾಸ ಸತ್ಯಾಗ್ರಹ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಪೂರ್ಣಗೊಳ್ಳಲಿದೆ

ಗಾಂಧೀಜಿ ಚಂಪಾರಣ್‌‌ನಲ್ಲಿ ಸತ್ಯಾಗ್ರಹ ನಡೆಸಿದ್ದರು. ಹಾಗಾಗಿ ಅಲ್ಲಿಂದಲೇ ಈ ಸರಣಿ ಸತ್ಯಾಗ್ರಹ ಆರಂಭಿಸಿರುವ ಪೊಲಿಟಿಕ್ಸ್ ಫಾರ್ ದಿ ಪೂರ್ ಗ್ರಾಮೀಣ ಅಭಿವೃದ್ದಿ ಮತ್ತು ಪರಿಸರ ಜಾಗೃತಿ ಮೂಡಿಸುತ್ತಿದೆ. ಕಳೆದ ಆರು ದಿನಗಳಿಂದ ದೇಶದ ಎಲ್ಲಾ ರಾಜ್ಯಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.

ಇದರ ಭಾಗವಾಗಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಪರಿಸರ, ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಸಾಹಿತ್ಯ ಪರಿಷತ್ ಇದರ ತಾಲೂಕು ಅಧ್ಯಕ್ಷೆ ಎನ್. ಇಂದಿರಮ್ಮ ಜೂನ್ 10ರ ಬೆಳಗ್ಗೆ 6 ಗಂಟೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ನಾಳೆ ಬೆಳಗ್ಗೆ 6ಗಂಟೆಗೆ ಪೂರ್ಣಗೊಳಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಎನ್. ಇಂದಿರಾ, ಕೊರೊನ ವೇಳೆ ವಲಸೆ ಕಾರ್ಮಿಕರು, ಕೃಷಿಕರು, ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. ಅವರಲ್ಲಿ ನೈತಿಕ ಬಲ ತುಂಬುದು ಇದರ ಉದ್ದೇಶ. ರಾಜಕೀಯ ವ್ಯಕ್ತಿಗಳು ನಾಯಕರು ಬಡವರು, ಕೃಷಿಕರು, ಕಾರ್ಮಿಕರ ಪರ ನಿಂತಿಲ್ಲ, ನಿಲ್ಲುವುದೂ ಇಲ್ಲ. ಇಂಥ ಸಂದರ್ಭದಲ್ಲಿ ದುಡಿಯುವ ಜನರಿಗ ನೈತಿಕ ಬಲ ತುಂಬುತ್ತೇವೆ. ಕಾರ್ಮಿಕರು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವಂತೆ ಒತ್ತಾಯಿಸುವುದು ಕೂಡ ಉದ್ದೇಶದಲ್ಲೊಂದು.

ಅಮೇಜಾನ್ ಕಾಡು ಕಡಿದು ನಾಶವಾಗುತ್ತಿದೆ. ಕೃಷಿ ಪದ್ದತಿ ಬದಲಾಗಿದೆ. ಬೆಳೆಗೆ ರಾಸಾಯಿನಿಕ ಗೊಬ್ಬರ ಹಾಕುತ್ತಿದ್ದಾರೆ. ಯಂತ್ರನಾಗರಿಕತೆ ಬಂದಿದೆ. ಈ ಎಲ್ಲಾ ಕಾರಣಗಳಿಗೆ ಪರಿಸರ ಅಸಮತೋಲನವಾಗಿದೆ. ಹಾಗಾಗಿ ಪರಿಸರ ಉಳಿಸಬೇಕು. ಗಿಡಮರಗಳನ್ನು ಬೆಳೆಸಬೇಕು. ಪರಿಸರ ಸ್ನೇಹಿ ಯೋಜನೆ ರೂಪಿಸಬೇಕು.  ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ, ಸೊಪ್ಪು ತರಕಾರಿ ಬೆಳೆಯುವುದು, ಗುಡಿಕೈಗಾರಿಕೆ ಕೈಗೊಂಡರೆ ಗ್ರಾಮೋದ್ದಾರ ಆಗುತ್ತದೆ. ಜೀವನವೂ ಹಸನಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದ ಜನ ನಗರಗಳಿಗೆ ಹೋಗಕೂಡದು. ನಗರದ ಜನರೇ ಹಳ್ಳಿಗೆ ಬಂದು ವಸ್ತುಗಳನ್ನು ಖರೀದಿಸುವಂತಹ ವಾತಾವರಣ ಸೃಷ್ಠಿಯಾಗಬೇಕು. ಹಣ ನಗರದಿಂದ ಗ್ರಾಮೀಣ ಭಾಗಕ್ಕೆ ಹರಿದರೆ ಗಾಂಧೀ ಕನಸು ನನಸಾಗುತ್ತದೆ ಎಂದು ತಿಳಿಸಿದ್ದಾರೆ.


ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...