Homeಕರ್ನಾಟಕಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

ಸರಣಿ ಉಪವಾಸ ಸತ್ಯಾಗ್ರಹ ಸಡೆಸುತ್ತಿರುವ ’ಪೊಲಿಟಿಕ್ಸ್ ಫಾರ್ ದಿ ಪೂರ್’

- Advertisement -
- Advertisement -

ಕೊರೊನ ಬಡಜನರ ನೈತಿಕ ಸ್ಥೈರ್ಯವನ್ನು ಕುಗ್ಗುವಂತೆ ಮಾಡಿದೆ. ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಗೂಡು ಸೇರಿದವರ ಪಾಡು ಕೇಳುವವರೇ ಇಲ್ಲ. ಮನೆಯಲ್ಲಿ ಅಕ್ಕಿ ಇಲ್ಲ, ಜೇಬಿನಲ್ಲಿ ಹಣ ಕಂಡಿಲ್ಲ, ಮಾಡಲು ಕೆಲಸವೂ ಇಲ್ಲ. ನಗರದಿಂದ ಹಳ್ಳಿಗೆ ಹಿಂತಿರುಗಿರುವವರು ಮಂಕಾಗಿದ್ದಾರೆ. ಕಡಿಮೆ ಕೂಲಿ ಅಂದ್ರೂ ಕೆಲಸಕ್ಕೆ ಹೋಗುವ ಪರಿಸ್ಥಿತಿ ಇದೆ. ಲಾಕ್ ಡೌನ್ ಬಡವರ ಹೊಟ್ಟೆಯನ್ನು ಬರಿದು ಮಾಡಿದಲ್ಲದೆ ಅವರ ಜೀವನವನ್ನೂ ಲಾಕ್ ಮಾಡಿ ಬಿಟ್ಟಿದೆ.

ಕೊರೊನ ಲಾಕ್‌ಡೌನ್ ರೈತರು, ವಲಸೆ ಕಾರ್ಮಿಕರು, ಮಹಿಳೆಯರು, ಯುವಕರ ಬದುಕನ್ನು ಮೂರಾಬಟ್ಟೆ ಮಾಡಿದೆ. ಇಂಥ ಹೊತ್ತಿನಲ್ಲಿ ಕಾರ್ಮಿಕರು, ಕೃಷಿಕರು, ಗ್ರಾಮೀಣ ಆರ್ಥಿಕತೆ ಮತ್ತು ಪರಿಸರವನ್ನು ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಪೊಲಿಟಿಕ್ಸ್ ಫಾರ್ ದಿ ಪೂರ್ ಎಂಬ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಜೂನ್ 5ರಂದು ಉದ್ಘಾಟನೆಯಾಗಿರುವ ಈ ಸಂಘಟನೆ ದೇಶಾದ್ಯಂತ ಸರಣಿ ಉಪವಾಸ ನಡೆಸುತ್ತಾ ಬರುತ್ತಿದೆ.

ಬಿಹಾರದ ಚಂಪಾರಣ್ ಕೇಂದ್ರಬಿಂದುವನ್ನಾಗಿ ಇಟ್ಟುಕೊಂಡು ಸರಣಿ ಉಪವಾಸ ಆರಂಭವಾಗಿದೆ. ದಿನಕ್ಕೆ ಒಬ್ಬರಂತೆ ಸರಣಿ ಉಪವಾಸ ನಡೆಸುವುದು ಸಂಘಟನೆಯ ಭಾಗವಾಗಿದೆ. ಜೂನ್ 5 ರ ಪರಿಸರ ದಿನದಂದು ಆರಂಭವಾಗಿರುವ ಸರಣಿ ಉಪವಾಸ ಸತ್ಯಾಗ್ರಹ ಮಹಾತ್ಮಗಾಂಧೀ ಅವರ ಗ್ರಾಮೋದ್ದಾರದ ಕನಸನ್ನು ಹೊತ್ತು ಸಾಗುತ್ತಿದೆ. ಉಪವಾಸ ಸತ್ಯಾಗ್ರಹ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಪೂರ್ಣಗೊಳ್ಳಲಿದೆ

ಗಾಂಧೀಜಿ ಚಂಪಾರಣ್‌‌ನಲ್ಲಿ ಸತ್ಯಾಗ್ರಹ ನಡೆಸಿದ್ದರು. ಹಾಗಾಗಿ ಅಲ್ಲಿಂದಲೇ ಈ ಸರಣಿ ಸತ್ಯಾಗ್ರಹ ಆರಂಭಿಸಿರುವ ಪೊಲಿಟಿಕ್ಸ್ ಫಾರ್ ದಿ ಪೂರ್ ಗ್ರಾಮೀಣ ಅಭಿವೃದ್ದಿ ಮತ್ತು ಪರಿಸರ ಜಾಗೃತಿ ಮೂಡಿಸುತ್ತಿದೆ. ಕಳೆದ ಆರು ದಿನಗಳಿಂದ ದೇಶದ ಎಲ್ಲಾ ರಾಜ್ಯಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.

ಇದರ ಭಾಗವಾಗಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಪರಿಸರ, ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಸಾಹಿತ್ಯ ಪರಿಷತ್ ಇದರ ತಾಲೂಕು ಅಧ್ಯಕ್ಷೆ ಎನ್. ಇಂದಿರಮ್ಮ ಜೂನ್ 10ರ ಬೆಳಗ್ಗೆ 6 ಗಂಟೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ನಾಳೆ ಬೆಳಗ್ಗೆ 6ಗಂಟೆಗೆ ಪೂರ್ಣಗೊಳಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಎನ್. ಇಂದಿರಾ, ಕೊರೊನ ವೇಳೆ ವಲಸೆ ಕಾರ್ಮಿಕರು, ಕೃಷಿಕರು, ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. ಅವರಲ್ಲಿ ನೈತಿಕ ಬಲ ತುಂಬುದು ಇದರ ಉದ್ದೇಶ. ರಾಜಕೀಯ ವ್ಯಕ್ತಿಗಳು ನಾಯಕರು ಬಡವರು, ಕೃಷಿಕರು, ಕಾರ್ಮಿಕರ ಪರ ನಿಂತಿಲ್ಲ, ನಿಲ್ಲುವುದೂ ಇಲ್ಲ. ಇಂಥ ಸಂದರ್ಭದಲ್ಲಿ ದುಡಿಯುವ ಜನರಿಗ ನೈತಿಕ ಬಲ ತುಂಬುತ್ತೇವೆ. ಕಾರ್ಮಿಕರು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವಂತೆ ಒತ್ತಾಯಿಸುವುದು ಕೂಡ ಉದ್ದೇಶದಲ್ಲೊಂದು.

ಅಮೇಜಾನ್ ಕಾಡು ಕಡಿದು ನಾಶವಾಗುತ್ತಿದೆ. ಕೃಷಿ ಪದ್ದತಿ ಬದಲಾಗಿದೆ. ಬೆಳೆಗೆ ರಾಸಾಯಿನಿಕ ಗೊಬ್ಬರ ಹಾಕುತ್ತಿದ್ದಾರೆ. ಯಂತ್ರನಾಗರಿಕತೆ ಬಂದಿದೆ. ಈ ಎಲ್ಲಾ ಕಾರಣಗಳಿಗೆ ಪರಿಸರ ಅಸಮತೋಲನವಾಗಿದೆ. ಹಾಗಾಗಿ ಪರಿಸರ ಉಳಿಸಬೇಕು. ಗಿಡಮರಗಳನ್ನು ಬೆಳೆಸಬೇಕು. ಪರಿಸರ ಸ್ನೇಹಿ ಯೋಜನೆ ರೂಪಿಸಬೇಕು.  ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ, ಸೊಪ್ಪು ತರಕಾರಿ ಬೆಳೆಯುವುದು, ಗುಡಿಕೈಗಾರಿಕೆ ಕೈಗೊಂಡರೆ ಗ್ರಾಮೋದ್ದಾರ ಆಗುತ್ತದೆ. ಜೀವನವೂ ಹಸನಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದ ಜನ ನಗರಗಳಿಗೆ ಹೋಗಕೂಡದು. ನಗರದ ಜನರೇ ಹಳ್ಳಿಗೆ ಬಂದು ವಸ್ತುಗಳನ್ನು ಖರೀದಿಸುವಂತಹ ವಾತಾವರಣ ಸೃಷ್ಠಿಯಾಗಬೇಕು. ಹಣ ನಗರದಿಂದ ಗ್ರಾಮೀಣ ಭಾಗಕ್ಕೆ ಹರಿದರೆ ಗಾಂಧೀ ಕನಸು ನನಸಾಗುತ್ತದೆ ಎಂದು ತಿಳಿಸಿದ್ದಾರೆ.


ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...