Homeಮುಖಪುಟಲಿಫ್ಟ್ ನೀಡುವುದಾಗಿ ನಂಬಿಸಿ 11 ಜನರನ್ನು ಕೊಂದ ಸರಣಿ ಹಂತಕ; ಶವದ ಮೇಲೆ 'ಧೋಕೆಬಾಜ್' ಎಂದು...

ಲಿಫ್ಟ್ ನೀಡುವುದಾಗಿ ನಂಬಿಸಿ 11 ಜನರನ್ನು ಕೊಂದ ಸರಣಿ ಹಂತಕ; ಶವದ ಮೇಲೆ ‘ಧೋಕೆಬಾಜ್’ ಎಂದು ಬರೆದಿದ್ದ ಕೊಲೆಗಾರ 

- Advertisement -
- Advertisement -

ಪಂಜಾಬ್‌ನಲ್ಲಿ ಭಾರಿ ಸಂಚಲನ ಸೃಷ್ಠಿಸಿದ್ದ ಸರಣಿ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಈತ 18 ತಿಂಗಳ ಅವಧಿಯಲ್ಲಿ 11 ಜನರನ್ನು ಹತ್ಯೆಗೈದಿದ್ದು, ಶವವೊಂದರ ಮೇಲೆ ‘ಧೋಕೆಬಾಜ್’ (ಮೋಸಗಾರ) ಎಂದು ಬರೆದಿದ್ದ ಎಂದು ತಿಳಿದುಬಂದಿದೆ.

ಲಿಫ್ಟ್ ನೀಡುವುದಾಗಿ ಹೇಳಿ ಕಾರು ಹತ್ತಿಸಿಕೊಳ್ಳುತ್ತಿದ್ದ ಈತ, ನಂತರ ದರೋಡೆ ಮಾಡುತ್ತಿದ್ದ. ಮಂಗಳವಾರ ರೂಪನಗರ ಜಿಲ್ಲೆಯಿಂದ ಕೊಲೆಗಾರನ್ನು ಬಂಧಿಸಲಾಗಿದೆ. ಆರೋಪಿಯನ್ನು 33 ವರ್ಷದ ರಾಮ್ ಸರೂಪ್ ಎಂದು ಗುರುತಿಸಲಾಗಿದ್ದು, ಆತ ಹೋಶಿಯಾರ್‌ಪುರದ ಗರ್ಶಂಕರ್‌ನ ಚೌರಾ ಗ್ರಾಮದ ನಿವಾಸಿಯಾಗಿದ್ದಾನೆ.

ಪೊಲೀಸರ ಪ್ರಕಾರ, ಬಲಿಪಶುಗಳೆಲ್ಲರೂ ಪುರುಷರಾಗಿದ್ದು, ಮುಖ್ಯವಾಗಿ ಅವರಿಗೆ ಲಿಫ್ಟ್ ನೀಡಿದ ನಂತರ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಎನ್ನಲಾಗಿದೆ. ಆರೋಪಿಯು ನಂತರ ಕೊಲೆ ಮಾಡಿದ ವ್ಯಕ್ತಿಗಳನ್ನು ದರೋಡೆ ಮಾಡಿ, ಸಂತ್ರಸ್ತರು ಹಣ ನೀಡಲು ನಿರಾಕರಿಸಿದ ನಂತರ ಅವರನ್ನು ಕೊಲ್ಲುತ್ತಿದ್ದ. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಯು ತನ್ನ ಬಲಿಪಶುಗಳನ್ನು ತುಂಡು ಬಟ್ಟೆಯಿಂದ ಕತ್ತು ಹಿಸುಕಿದರೆ, ಇತರ ಪ್ರಕರಣಗಳಲ್ಲಿ ತಲೆಗೆ ಗಾಯಗಳಾಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಕೊಲೆಯಲ್ಲಿ, ಆರೋಪಿಯು ಬಲಿಪಶುವಿನ ಬೆನ್ನಿನ ಮೇಲೆ ‘ಧೋಕೆಬಾಜ್’ (ವಂಚಕ) ಎಂದು ಬರೆದಿದ್ದಾನೆ. ಮೃತ ವ್ಯಕ್ತಿ ಖಾಸಗಿ ಕಾರ್ಖಾನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಾಜಿ ಸೈನಿಕರಾಗಿದ್ದರು.

ಆಗಸ್ಟ್ 18 ರಂದು ಟೋಲ್ ಪ್ಲಾಜಾ ಮೋದ್ರಾದಲ್ಲಿ ಚಹಾ ಮತ್ತು ನೀರು ಬಡಿಸುತ್ತಿದ್ದ 37 ವರ್ಷದ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಆರಂಭದಲ್ಲಿ ಬಂಧಿಸಲಾಯಿತು. ವಿಚಾರಣೆ ವೇಳೆ ಸರೂಪ್ ಅವರು ಇನ್ನೂ 10 ಜನರನ್ನು ಕೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾನೆ. ಈ ಪೈಕಿ ಐದು ಪ್ರಕರಣಗಳು ಈವರೆಗೆ ದೃಢಪಟ್ಟಿದ್ದು, ಉಳಿದ ಕೊಲೆಗಳ ಪತ್ತೆಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 5 ರಂದು 34 ವರ್ಷದ ಟ್ರ್ಯಾಕ್ಟರ್ ರಿಪೇರಿ ಮಾಡುವವರ ಕೊಲೆ ಮತ್ತು ಜನವರಿ 24 ರಂದು ಕಾರಿನಲ್ಲಿ ಪತ್ತೆಯಾದ ಯುವಕನನ್ನು ಹತ್ಯೆ ಮಾಡಿದ ಪ್ರಕರಣಗಳು ಸೇರಿವೆ. ಹೋಶಿಯಾರ್ಪುರ್ ಮತ್ತು ಫತೇಗಢ್ ಜಿಲ್ಲೆಗಳಲ್ಲಿ ಕೃತ್ಯ ನಡೆದಿವೆ. ಕೂಲಿ ಕೆಲಸ ಮಾಡುತ್ತಿದ್ದ ಆರೋಪಿ ಮಾದಕ ವ್ಯಸನಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರಣಿ ಹಂತಕನ ಪ್ರಕಾರ, ಅವನು ಮೃತರ ಪಾದಗಳನ್ನು ಸ್ಪರ್ಶಿಸುತ್ತಿದ್ದನು ಮತ್ತು ಅವರನ್ನು ಕೊಂದ ನಂತರ ಪಶ್ಚಾತ್ತಾಪ ಪಡುತ್ತಿದ್ದನು. ನಶೆ ಏರಿದ ನಂತರವೇ ಅಪರಾಧಗಳನ್ನು ಎಸಗಿರುವುದಾಗಿ ಒಪ್ಪಿಕೊಂಡಿರುವ ಆತ, ಇನ್ನು ಮುಂದೆ ಅವುಗಳನ್ನು ನೆನಪಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾನೆ.

ಆರೋಪಿಯು ಮೂರು ಮದುವೆಯಾಗಿದ್ದನೆಂದು ವರದಿಯಾಗಿದೆ. ಆದರೆ, ಆತನ ಸಲಿಂಗಿಯಾಗಿದ್ದ ಕಾರಣ ಎರಡು ವರ್ಷಗಳ ಹಿಂದೆ ಆತನ ತನ್ನ ಮನೆ ತೊರೆದಿದ್ದ.

“ನಾವು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌| ಸೂರತ್‌ ಪೊಲೀಸರ ಕಾರ್ಯಾಚರಣೆ; 10, 12ನೇ ತರಗತಿವರೆಗೆ ಓದಿದ್ದ ನಕಲಿ ವೈದ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...