Homeಮುಖಪುಟಲಿಫ್ಟ್ ನೀಡುವುದಾಗಿ ನಂಬಿಸಿ 11 ಜನರನ್ನು ಕೊಂದ ಸರಣಿ ಹಂತಕ; ಶವದ ಮೇಲೆ 'ಧೋಕೆಬಾಜ್' ಎಂದು...

ಲಿಫ್ಟ್ ನೀಡುವುದಾಗಿ ನಂಬಿಸಿ 11 ಜನರನ್ನು ಕೊಂದ ಸರಣಿ ಹಂತಕ; ಶವದ ಮೇಲೆ ‘ಧೋಕೆಬಾಜ್’ ಎಂದು ಬರೆದಿದ್ದ ಕೊಲೆಗಾರ 

- Advertisement -
- Advertisement -

ಪಂಜಾಬ್‌ನಲ್ಲಿ ಭಾರಿ ಸಂಚಲನ ಸೃಷ್ಠಿಸಿದ್ದ ಸರಣಿ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಈತ 18 ತಿಂಗಳ ಅವಧಿಯಲ್ಲಿ 11 ಜನರನ್ನು ಹತ್ಯೆಗೈದಿದ್ದು, ಶವವೊಂದರ ಮೇಲೆ ‘ಧೋಕೆಬಾಜ್’ (ಮೋಸಗಾರ) ಎಂದು ಬರೆದಿದ್ದ ಎಂದು ತಿಳಿದುಬಂದಿದೆ.

ಲಿಫ್ಟ್ ನೀಡುವುದಾಗಿ ಹೇಳಿ ಕಾರು ಹತ್ತಿಸಿಕೊಳ್ಳುತ್ತಿದ್ದ ಈತ, ನಂತರ ದರೋಡೆ ಮಾಡುತ್ತಿದ್ದ. ಮಂಗಳವಾರ ರೂಪನಗರ ಜಿಲ್ಲೆಯಿಂದ ಕೊಲೆಗಾರನ್ನು ಬಂಧಿಸಲಾಗಿದೆ. ಆರೋಪಿಯನ್ನು 33 ವರ್ಷದ ರಾಮ್ ಸರೂಪ್ ಎಂದು ಗುರುತಿಸಲಾಗಿದ್ದು, ಆತ ಹೋಶಿಯಾರ್‌ಪುರದ ಗರ್ಶಂಕರ್‌ನ ಚೌರಾ ಗ್ರಾಮದ ನಿವಾಸಿಯಾಗಿದ್ದಾನೆ.

ಪೊಲೀಸರ ಪ್ರಕಾರ, ಬಲಿಪಶುಗಳೆಲ್ಲರೂ ಪುರುಷರಾಗಿದ್ದು, ಮುಖ್ಯವಾಗಿ ಅವರಿಗೆ ಲಿಫ್ಟ್ ನೀಡಿದ ನಂತರ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಎನ್ನಲಾಗಿದೆ. ಆರೋಪಿಯು ನಂತರ ಕೊಲೆ ಮಾಡಿದ ವ್ಯಕ್ತಿಗಳನ್ನು ದರೋಡೆ ಮಾಡಿ, ಸಂತ್ರಸ್ತರು ಹಣ ನೀಡಲು ನಿರಾಕರಿಸಿದ ನಂತರ ಅವರನ್ನು ಕೊಲ್ಲುತ್ತಿದ್ದ. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಯು ತನ್ನ ಬಲಿಪಶುಗಳನ್ನು ತುಂಡು ಬಟ್ಟೆಯಿಂದ ಕತ್ತು ಹಿಸುಕಿದರೆ, ಇತರ ಪ್ರಕರಣಗಳಲ್ಲಿ ತಲೆಗೆ ಗಾಯಗಳಾಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಕೊಲೆಯಲ್ಲಿ, ಆರೋಪಿಯು ಬಲಿಪಶುವಿನ ಬೆನ್ನಿನ ಮೇಲೆ ‘ಧೋಕೆಬಾಜ್’ (ವಂಚಕ) ಎಂದು ಬರೆದಿದ್ದಾನೆ. ಮೃತ ವ್ಯಕ್ತಿ ಖಾಸಗಿ ಕಾರ್ಖಾನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಾಜಿ ಸೈನಿಕರಾಗಿದ್ದರು.

ಆಗಸ್ಟ್ 18 ರಂದು ಟೋಲ್ ಪ್ಲಾಜಾ ಮೋದ್ರಾದಲ್ಲಿ ಚಹಾ ಮತ್ತು ನೀರು ಬಡಿಸುತ್ತಿದ್ದ 37 ವರ್ಷದ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಆರಂಭದಲ್ಲಿ ಬಂಧಿಸಲಾಯಿತು. ವಿಚಾರಣೆ ವೇಳೆ ಸರೂಪ್ ಅವರು ಇನ್ನೂ 10 ಜನರನ್ನು ಕೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾನೆ. ಈ ಪೈಕಿ ಐದು ಪ್ರಕರಣಗಳು ಈವರೆಗೆ ದೃಢಪಟ್ಟಿದ್ದು, ಉಳಿದ ಕೊಲೆಗಳ ಪತ್ತೆಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 5 ರಂದು 34 ವರ್ಷದ ಟ್ರ್ಯಾಕ್ಟರ್ ರಿಪೇರಿ ಮಾಡುವವರ ಕೊಲೆ ಮತ್ತು ಜನವರಿ 24 ರಂದು ಕಾರಿನಲ್ಲಿ ಪತ್ತೆಯಾದ ಯುವಕನನ್ನು ಹತ್ಯೆ ಮಾಡಿದ ಪ್ರಕರಣಗಳು ಸೇರಿವೆ. ಹೋಶಿಯಾರ್ಪುರ್ ಮತ್ತು ಫತೇಗಢ್ ಜಿಲ್ಲೆಗಳಲ್ಲಿ ಕೃತ್ಯ ನಡೆದಿವೆ. ಕೂಲಿ ಕೆಲಸ ಮಾಡುತ್ತಿದ್ದ ಆರೋಪಿ ಮಾದಕ ವ್ಯಸನಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರಣಿ ಹಂತಕನ ಪ್ರಕಾರ, ಅವನು ಮೃತರ ಪಾದಗಳನ್ನು ಸ್ಪರ್ಶಿಸುತ್ತಿದ್ದನು ಮತ್ತು ಅವರನ್ನು ಕೊಂದ ನಂತರ ಪಶ್ಚಾತ್ತಾಪ ಪಡುತ್ತಿದ್ದನು. ನಶೆ ಏರಿದ ನಂತರವೇ ಅಪರಾಧಗಳನ್ನು ಎಸಗಿರುವುದಾಗಿ ಒಪ್ಪಿಕೊಂಡಿರುವ ಆತ, ಇನ್ನು ಮುಂದೆ ಅವುಗಳನ್ನು ನೆನಪಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾನೆ.

ಆರೋಪಿಯು ಮೂರು ಮದುವೆಯಾಗಿದ್ದನೆಂದು ವರದಿಯಾಗಿದೆ. ಆದರೆ, ಆತನ ಸಲಿಂಗಿಯಾಗಿದ್ದ ಕಾರಣ ಎರಡು ವರ್ಷಗಳ ಹಿಂದೆ ಆತನ ತನ್ನ ಮನೆ ತೊರೆದಿದ್ದ.

“ನಾವು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌| ಸೂರತ್‌ ಪೊಲೀಸರ ಕಾರ್ಯಾಚರಣೆ; 10, 12ನೇ ತರಗತಿವರೆಗೆ ಓದಿದ್ದ ನಕಲಿ ವೈದ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...