Homeಕರ್ನಾಟಕಬರಹಗಾರರಿಗೆ ಸರಣಿ ಜೀವ ಬೆದರಿಕೆ ಪತ್ರ: ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ದರಾಮಯ್ಯ ಆಕ್ರೋಶ

ಬರಹಗಾರರಿಗೆ ಸರಣಿ ಜೀವ ಬೆದರಿಕೆ ಪತ್ರ: ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷದ ನಾಯಕರುಗಳಿಗೆ ಪದೆ ಪದೆ ಜೀವ ಬೆದರಿಕೆಯ ಪತ್ರಗಳನ್ನು ದಾವಣಗೆರೆ, ಭದ್ರಾವತಿ, ಅಜ್ಜಂಪುರ ಮುಂತಾದ ಊರುಗಳಿಂದ ಪೋಸ್ಟ್ ಮಾಡಲಾಗುತ್ತಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ. ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ. ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ ಎಂದಿದ್ದಾರೆ.

ನಾಡಿನ ಬರಹಗಾರಗಾರರು, ಚಿಂತಕರುಗಳಿಗೆ ಬಹಿರಂಗವಾಗಿ ಜೀವ ಬೆದರಿಕೆ ಪತ್ರಗಳನ್ನು ಬರೆದರೂ ಸರ್ಕಾರ ಸುಮ್ಮನಿದೆಯೆಂದರೆ ಭಿನ್ನಮತ ಮತ್ತು ಭಿನ್ನ ಧ್ವನಿಗಳನ್ನು ದಮನಿಸಲು ಪ್ರಯತ್ನಿಸಲಾಗುತ್ತಿದೆ ಅಥವಾ ಪೊಲೀಸ್ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದರ್ಥ. ಅತ್ಯಂತ ಆಧುನಿಕ ವ್ಯವಸ್ಥೆ ಇದ್ದರೂ ದುರುಳರನ್ನು ಪತ್ತೆ ಹಚ್ಚದೆ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈಗಾಗಲೆ ನಾಡಿನ ಪ್ರಖ್ಯಾತ ಚಿಂತಕರು ಹಾಗೂ ಬಸವ ತತ್ವದ ಅನುಯಾಯಿಗಳಾಗಿದ್ದ ಡಾ.ಎಂ.ಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಇದೇ ಗೋಡ್ಸೆ ಸಂತತಿಯವರು ಹಾಗೂ ಮನು ಸಂಸ್ಕೃತಿಯ ಪ್ರತಿಪಾದಕರುಗಳು ಗುಂಡಿಟ್ಟು ಕೊಂದರು. ಕೊಲೆಗಾರರಲ್ಲಿ ಬಹುತೇಕರು ಬಿಜೆಪಿಯನ್ನು ಬೆಂಬಲಿಸುವ ಸನಾತನ ಸಂಸ್ಕೃತಿಯೆಂಬ ಸಂಘಟನೆಯ ಸದಸ್ಯರುಗಳಾಗಿದ್ದಾರೆಂಬ ಮಾಹಿತಿ ಇದೆ. ಈಗಷ್ಟೆ ಆ ಇಬ್ಬರು ಹುತಾತ್ಮ ಚಿಂತಕರನ್ನು ಕೊಂದವರ ವಿಚಾರಣೆ ಪ್ರಾರಂಭವಾಗಿದೆ. ಈ ಪ್ರಕರಣಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

‘ಸರ್ವಜನಾಂಗದ ಶಾಂತಿಯ ತೋಟ’ ಎಂದು ಹೆಸರಾದ ಕನ್ನಡ ನಾಡಿನಲ್ಲಿ ಸಮರ್ಥವಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸಬೇಕಾದ ತುರ್ತು ಅಗತ್ಯವಿದೆ. ಯಾಕೆಂದರೆ ನಾಡಿನಲ್ಲಿ ಪದೇ ಪದೇ ಕಾನೂನು ಸುವ್ಯವಸ್ಥೆ ಕುಸಿದು ಬೀಳುತ್ತಿದೆ. ಆದ್ದರಿಂದ ಸರ್ಕಾರ ಕ್ರಿಯಾಶೀಲವಾಗಬೇಕು. ಬೆದರಿಕೆ ಪತ್ರಗಳನ್ನು ಬರೆಯುತ್ತಿರುವ ದುರುಳರನ್ನು ಕೂಡಲೆ ಪತ್ತೆ ಹಚ್ಚಿ, ಶಿಕ್ಷೆ ವಿಧಿಸಿ ಪ್ರಜಾತಾಂತ್ರಿಕ ಮೌಲ್ಯಗಳನ್ನು ರಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...