Homeಅಂತರಾಷ್ಟ್ರೀಯಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

ಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

- Advertisement -
- Advertisement -

‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಮೂಲಕ ಗಾಝಾಗೆ ಮಾನವೀಯ ನೆರವು ತಲುಪಿಸಲು ಪ್ರಯತ್ನಿಸಿದ ಸುಮಾರು 137 ಹೋರಾಟಗಾರರನ್ನು ಇಸ್ರೇಲ್‌ ಬಂಧಿಸಿತ್ತು. ಶನಿವಾರ (ಅ.4) ಅವರೆಲ್ಲರನ್ನೂ ಟರ್ಕಿಗೆ ಗಡಿಪಾರು ಮಾಡಲಾಗಿದೆ.

ಟರ್ಕಿ ತಲುಪಿದ ಹೋರಾಟಗಾರರ ಪೈಕಿ ಇಬ್ಬರು, ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರನ್ನು ಬಂಧನದ ಸಮಯದಲ್ಲಿ ಇಸ್ರೇಲ್ ಸೇನೆ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಹೊಸ ಆರೋಪಗಳ ಬಗ್ಗೆ ಇಸ್ರೇಲಿ ನಾಯಕರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಅವರ ವಿದೇಶಾಂಗ ಸಚಿವಾಲಯವು ಬಂಧಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂಬ ವರದಿಗಳು ‘ಸಂಪೂರ್ಣ ಸುಳ್ಳು’ ಎಂದಿದೆ.

ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣದ ತಲುಪಿದ ಹೋರಾಟಗಾರರಲ್ಲಿ 36 ಟರ್ಕಿಶ್ ಪ್ರಜೆಗಳು, ಅಮೆರಿಕ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಅಲ್ಜೀರಿಯಾ, ಮೊರಾಕೊ, ಇಟಲಿ, ಕುವೈತ್, ಲಿಬಿಯಾ, ಮಲೇಷ್ಯಾ, ಮಾರಿಟಾನಿಯಾ, ಸ್ವಿಟ್ಜರ್ಲೆಂಡ್, ಟುನೀಶಿಯಾ ಮತ್ತು ಜೋರ್ಡಾನ್ ನಾಗರಿಕರು ಸೇರಿದ್ದಾರೆ ಎಂದು ಟರ್ಕಿಶ್ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ಗ್ರೇಟಾ ಥನ್‌ಬರ್ಗ್ ಅವರನ್ನು ‘ಭಯಾನಕವಾಗಿ ನಡೆಸಿಕೊಂಡರು’- ಹೋರಾಟಗಾರರ ಆರೋಪ

ಗ್ರೇಟಾ ಥನ್‌ಬರ್ಗ್ ಅವರನ್ನು ಇಸ್ರೇಲ್ ಸೇನೆ ಕೆಟ್ಟದ್ದಾಗಿ ನಡೆಸಿಕೊಂಡಿದೆ. ಆಕೆಯ ಕೂದಳು ಹಿಡಿದು ಎಳೆದಾಡಿದ್ದಾರೆ. ಇಸ್ರೇಲ್ ಧ್ವಜ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೋರಾಟಗಾರರಾದ ಮಲೇಷ್ಯಾದ ಪ್ರಜೆ ಹಜ್ವಾನಿ ಹೆಲ್ಮಿ ಮತ್ತು ಅಮೆರಿಕನ್ ಪ್ರಜೆ ವಿಂಡ್‌ಫೀಲ್ಡ್ ಬೀವರ್ ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣ ತಲುಪಿದಾಗ ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಇಸ್ರೇಲ್ ನಮ್ಮನ್ನು ಬಂಧಿಸಿದ್ದ ವೇಳೆ ಪ್ರಾಣಿಗಳಂತೆ ನಡೆಸಿಕೊಂಡಿದೆ. ಶುದ್ದ ಆಹಾರ, ನೀರು ಒದಗಿಸಿಲ್ಲ. ನಮ್ಮಲ್ಲಿದ್ದ ಔಷಧ ಮತ್ತು ಇತರ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು 28 ವರ್ಷದ ಹೆಲ್ಮಿ ಹೇಳಿದ್ದಾರೆ.

ಇಸ್ರೇಲ್‌ನ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಬಂದಾಗ ತನ್ನನ್ನು ಕೋಣೆಗೆ ತಳ್ಳಲಾಯಿತು. ಗ್ರೇಟಾ ಥನ್‌ಬರ್ಗ್ ಅವರನ್ನು ಭಯಾನಕವಾಗಿ ಮತ್ತು ಪ್ರೊಪಗಂಡವಾಗಿ ನಡೆಸಿಕೊಂಡರು ಎಂದು 43 ವರ್ಷದ ಬೀವರ್ ಆರೋಪಿಸಿದ್ದಾರೆ.

ಗಾಝಾಗೆ ನೆರವು ಹೊತ್ತು ಸಾಗಿದ್ದ ಸುಮಾರು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ತಂಡದ 40 ಬೋಟ್‌ಗಳನ್ನು ತಡೆದು, ಅವುಗಳಲ್ಲಿ ಇದ್ದ ಸುಮಾರು 450ಕ್ಕೂ ಹೆಚ್ಚು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿರುವುದಕ್ಕೆ ಜಾಗತಿಕ ಖಂಡನೆ ವ್ಯಕ್ತವಾಗಿದೆ.

ಬಂಧಿತ ಎಲ್ಲಾ ಮಾನವ ಹಕ್ಕು ಕಾರ್ಯಕರ್ತರು ಸುರಕ್ಷಿತ ಮತ್ತು ಉತ್ತಮ ಆರೋಗ್ಯದಲ್ಲಿದ್ದಾರೆ. ಇನ್ನುಳಿದವರನ್ನು ಸಾಧ್ಯವಾದಷ್ಟು ಬೇಗ ಗಡಿಪಾರು ಮಾಡಲಾಗುವುದು ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿದೆ.

ಪ್ರತ್ಯೇಕ ಪೋಸ್ಟ್‌ನಲ್ಲಿ, ಕೆಲವು ಫ್ಲೋಟಿಲ್ಲಾ ಸದಸ್ಯರು ದಾಖಲೆಗಳನ್ನು ಒದಗಿಸದೆ ಗಡಿಪಾರು ಪ್ರಕ್ರಿಯೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದೆ. ಈ ಆರೋಪವನ್ನು ನಾವು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ತಿಳಿಸಿದೆ.

ದೌರ್ಜನ್ಯದ ಆರೋಪಗಳನ್ನು ತಳ್ಳಿ ಹಾಕಿದ ಇಸ್ರೇಲ್

ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ 26 ಇಟಾಲಿಯನ್ನರಿದ್ದರು, ಇನ್ನೂ 15 ಜನರನ್ನು ಇಸ್ರೇಲ್‌ನಲ್ಲಿ ಬಂಧಿಸಲಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಇತರ ರಾಷ್ಟ್ರಗಳ ಹೋರಾಟಗಾರರೊಂದಿಗೆ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ ಎಂದು ಇಟಲಿಯ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಹೇಳಿದ್ದಾರೆ.

ಉಳಿದ ನಮ್ಮ ಪ್ರಜೆಗಳನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೊಮ್ಮೆ ಟೆಲ್ ಅವೀವ್‌ನಲ್ಲಿರುವ ಇಟಾಲಿಯನ್ ರಾಯಭಾರ ಕಚೇರಿಗೆ ಸೂಚನೆಗಳನ್ನು ನೀಡಿದ್ದೇನೆ ಎಂದು ತಜಾನಿ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಗ್ಲೋಬಲ್ ಫ್ಲೋಟಿಲ್ಲಾದಲ್ಲಿದ್ದ ಇಟಾಲಿಯನ್ನರ ಮೊದಲ ಗುಂಪು (ನಾಲ್ವರು ಸಂಸದರು) ಶುಕ್ರವಾರ ರೋಮ್‌ ತಲುಪಿದ್ದಾರೆ ಎಂದು ರಾಯಿಟರ್ಸ್ ತಿಳಿಸಿದೆ.

“ಕಾನೂನುಬದ್ಧವಾಗಿ ವರ್ತಿಸಿದವರು ಬೋಟ್‌ಗಳಲ್ಲಿ ಇದ್ದವರು, ಕಾನೂನುಬಾಹಿರವಾಗಿ ವರ್ತಿಸಿದವರು ಗಾಝಾಗೆ ಮಾನವೀಯ ನೆರವು ತಲುಪದಂತೆ ತಡೆದವರು” ಎಂದು ಫ್ಲೋಟಿಲ್ಲಾದ ಭಾಗವಾಗಿದ್ದ ಇಟಾಲಿಯನ್ ಸಂಸದರಲ್ಲಿ ಒಬ್ಬರಾದ ಆರ್ಟುರೊ ಸ್ಕಾಟೊ ರೋಮ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ನಮ್ಮನ್ನು ಕ್ರೂರವಾಗಿ ತಡೆಹಿಡಿಯಲಾಯಿತು … ಕ್ರೂರವಾಗಿ ಒತ್ತೆಯಾಳಾಗಿ ಇರಿಸಲಾಯಿತು” ಎಂದು ಇಟಲಿಯ ಮತ್ತೊಬ್ಬ ಸಂಸದೆ ಬೆನೆಡೆಟ್ಟಾ ಸ್ಕುಡೆರಿ ಆರೋಪಿಸಿದ್ದಾರೆ.

ಫ್ಲೋಟಿಲ್ಲಾ ಸದಸ್ಯರಿಗೆ ಕಾನೂನು ನೆರವು ನೀಡುವ ಇಸ್ರೇಲಿ ಗುಂಪಿನ ಅದಾಲಾ ಪ್ರಕಾರ, ಕೆಲವು ಬಂಧಿತರಿಗೆ ವಕೀಲರು, ನೀರು, ಔಷಧಿಗಳು ಮತ್ತು ಶೌಚಾಲಯಗಳಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಕೆಲವು ಹೋರಾಟಗಾರರು ‘ಫ್ರೀ ಪ್ಯಾಲೆಸ್ಟೈನ್’ ಎಂದು ಘೋಷಣೆ ಕೂಗಿದ ನಂತರ, ಅವರ ಕೈಗಳನ್ನು ಜಿಪ್-ಟೈ (ಕೇಬಲ್ ಟೈ) ಬಳಸಿ ಕಟ್ಟಿ, ಕನಿಷ್ಠ ಐದು ಗಂಟೆಗಳ ಕಾಲ ಮಂಡಿಯೂರಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ಆದಾಲ ವಿವರಿಸಿದ್ದಾರೆ.

ದಾಳಿ ನಿಲ್ಲಿಸುವಂತೆ ಟ್ರಂಪ್ ಕರೆ ಬೆನ್ನಲ್ಲೇ ಗಾಜಾದಲ್ಲಿ ಇಸ್ರೇಲ್ ದಾಳಿ; 6 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...