Homeಅಂತರಾಷ್ಟ್ರೀಯಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

ಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

- Advertisement -
- Advertisement -

‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಮೂಲಕ ಗಾಝಾಗೆ ಮಾನವೀಯ ನೆರವು ತಲುಪಿಸಲು ಪ್ರಯತ್ನಿಸಿದ ಸುಮಾರು 137 ಹೋರಾಟಗಾರರನ್ನು ಇಸ್ರೇಲ್‌ ಬಂಧಿಸಿತ್ತು. ಶನಿವಾರ (ಅ.4) ಅವರೆಲ್ಲರನ್ನೂ ಟರ್ಕಿಗೆ ಗಡಿಪಾರು ಮಾಡಲಾಗಿದೆ.

ಟರ್ಕಿ ತಲುಪಿದ ಹೋರಾಟಗಾರರ ಪೈಕಿ ಇಬ್ಬರು, ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರನ್ನು ಬಂಧನದ ಸಮಯದಲ್ಲಿ ಇಸ್ರೇಲ್ ಸೇನೆ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಹೊಸ ಆರೋಪಗಳ ಬಗ್ಗೆ ಇಸ್ರೇಲಿ ನಾಯಕರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಅವರ ವಿದೇಶಾಂಗ ಸಚಿವಾಲಯವು ಬಂಧಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂಬ ವರದಿಗಳು ‘ಸಂಪೂರ್ಣ ಸುಳ್ಳು’ ಎಂದಿದೆ.

ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣದ ತಲುಪಿದ ಹೋರಾಟಗಾರರಲ್ಲಿ 36 ಟರ್ಕಿಶ್ ಪ್ರಜೆಗಳು, ಅಮೆರಿಕ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಅಲ್ಜೀರಿಯಾ, ಮೊರಾಕೊ, ಇಟಲಿ, ಕುವೈತ್, ಲಿಬಿಯಾ, ಮಲೇಷ್ಯಾ, ಮಾರಿಟಾನಿಯಾ, ಸ್ವಿಟ್ಜರ್ಲೆಂಡ್, ಟುನೀಶಿಯಾ ಮತ್ತು ಜೋರ್ಡಾನ್ ನಾಗರಿಕರು ಸೇರಿದ್ದಾರೆ ಎಂದು ಟರ್ಕಿಶ್ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ಗ್ರೇಟಾ ಥನ್‌ಬರ್ಗ್ ಅವರನ್ನು ‘ಭಯಾನಕವಾಗಿ ನಡೆಸಿಕೊಂಡರು’- ಹೋರಾಟಗಾರರ ಆರೋಪ

ಗ್ರೇಟಾ ಥನ್‌ಬರ್ಗ್ ಅವರನ್ನು ಇಸ್ರೇಲ್ ಸೇನೆ ಕೆಟ್ಟದ್ದಾಗಿ ನಡೆಸಿಕೊಂಡಿದೆ. ಆಕೆಯ ಕೂದಳು ಹಿಡಿದು ಎಳೆದಾಡಿದ್ದಾರೆ. ಇಸ್ರೇಲ್ ಧ್ವಜ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೋರಾಟಗಾರರಾದ ಮಲೇಷ್ಯಾದ ಪ್ರಜೆ ಹಜ್ವಾನಿ ಹೆಲ್ಮಿ ಮತ್ತು ಅಮೆರಿಕನ್ ಪ್ರಜೆ ವಿಂಡ್‌ಫೀಲ್ಡ್ ಬೀವರ್ ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣ ತಲುಪಿದಾಗ ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಇಸ್ರೇಲ್ ನಮ್ಮನ್ನು ಬಂಧಿಸಿದ್ದ ವೇಳೆ ಪ್ರಾಣಿಗಳಂತೆ ನಡೆಸಿಕೊಂಡಿದೆ. ಶುದ್ದ ಆಹಾರ, ನೀರು ಒದಗಿಸಿಲ್ಲ. ನಮ್ಮಲ್ಲಿದ್ದ ಔಷಧ ಮತ್ತು ಇತರ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು 28 ವರ್ಷದ ಹೆಲ್ಮಿ ಹೇಳಿದ್ದಾರೆ.

ಇಸ್ರೇಲ್‌ನ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಬಂದಾಗ ತನ್ನನ್ನು ಕೋಣೆಗೆ ತಳ್ಳಲಾಯಿತು. ಗ್ರೇಟಾ ಥನ್‌ಬರ್ಗ್ ಅವರನ್ನು ಭಯಾನಕವಾಗಿ ಮತ್ತು ಪ್ರೊಪಗಂಡವಾಗಿ ನಡೆಸಿಕೊಂಡರು ಎಂದು 43 ವರ್ಷದ ಬೀವರ್ ಆರೋಪಿಸಿದ್ದಾರೆ.

ಗಾಝಾಗೆ ನೆರವು ಹೊತ್ತು ಸಾಗಿದ್ದ ಸುಮಾರು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ತಂಡದ 40 ಬೋಟ್‌ಗಳನ್ನು ತಡೆದು, ಅವುಗಳಲ್ಲಿ ಇದ್ದ ಸುಮಾರು 450ಕ್ಕೂ ಹೆಚ್ಚು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿರುವುದಕ್ಕೆ ಜಾಗತಿಕ ಖಂಡನೆ ವ್ಯಕ್ತವಾಗಿದೆ.

ಬಂಧಿತ ಎಲ್ಲಾ ಮಾನವ ಹಕ್ಕು ಕಾರ್ಯಕರ್ತರು ಸುರಕ್ಷಿತ ಮತ್ತು ಉತ್ತಮ ಆರೋಗ್ಯದಲ್ಲಿದ್ದಾರೆ. ಇನ್ನುಳಿದವರನ್ನು ಸಾಧ್ಯವಾದಷ್ಟು ಬೇಗ ಗಡಿಪಾರು ಮಾಡಲಾಗುವುದು ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿದೆ.

ಪ್ರತ್ಯೇಕ ಪೋಸ್ಟ್‌ನಲ್ಲಿ, ಕೆಲವು ಫ್ಲೋಟಿಲ್ಲಾ ಸದಸ್ಯರು ದಾಖಲೆಗಳನ್ನು ಒದಗಿಸದೆ ಗಡಿಪಾರು ಪ್ರಕ್ರಿಯೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದೆ. ಈ ಆರೋಪವನ್ನು ನಾವು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ತಿಳಿಸಿದೆ.

ದೌರ್ಜನ್ಯದ ಆರೋಪಗಳನ್ನು ತಳ್ಳಿ ಹಾಕಿದ ಇಸ್ರೇಲ್

ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ 26 ಇಟಾಲಿಯನ್ನರಿದ್ದರು, ಇನ್ನೂ 15 ಜನರನ್ನು ಇಸ್ರೇಲ್‌ನಲ್ಲಿ ಬಂಧಿಸಲಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಇತರ ರಾಷ್ಟ್ರಗಳ ಹೋರಾಟಗಾರರೊಂದಿಗೆ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ ಎಂದು ಇಟಲಿಯ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಹೇಳಿದ್ದಾರೆ.

ಉಳಿದ ನಮ್ಮ ಪ್ರಜೆಗಳನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೊಮ್ಮೆ ಟೆಲ್ ಅವೀವ್‌ನಲ್ಲಿರುವ ಇಟಾಲಿಯನ್ ರಾಯಭಾರ ಕಚೇರಿಗೆ ಸೂಚನೆಗಳನ್ನು ನೀಡಿದ್ದೇನೆ ಎಂದು ತಜಾನಿ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಗ್ಲೋಬಲ್ ಫ್ಲೋಟಿಲ್ಲಾದಲ್ಲಿದ್ದ ಇಟಾಲಿಯನ್ನರ ಮೊದಲ ಗುಂಪು (ನಾಲ್ವರು ಸಂಸದರು) ಶುಕ್ರವಾರ ರೋಮ್‌ ತಲುಪಿದ್ದಾರೆ ಎಂದು ರಾಯಿಟರ್ಸ್ ತಿಳಿಸಿದೆ.

“ಕಾನೂನುಬದ್ಧವಾಗಿ ವರ್ತಿಸಿದವರು ಬೋಟ್‌ಗಳಲ್ಲಿ ಇದ್ದವರು, ಕಾನೂನುಬಾಹಿರವಾಗಿ ವರ್ತಿಸಿದವರು ಗಾಝಾಗೆ ಮಾನವೀಯ ನೆರವು ತಲುಪದಂತೆ ತಡೆದವರು” ಎಂದು ಫ್ಲೋಟಿಲ್ಲಾದ ಭಾಗವಾಗಿದ್ದ ಇಟಾಲಿಯನ್ ಸಂಸದರಲ್ಲಿ ಒಬ್ಬರಾದ ಆರ್ಟುರೊ ಸ್ಕಾಟೊ ರೋಮ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ನಮ್ಮನ್ನು ಕ್ರೂರವಾಗಿ ತಡೆಹಿಡಿಯಲಾಯಿತು … ಕ್ರೂರವಾಗಿ ಒತ್ತೆಯಾಳಾಗಿ ಇರಿಸಲಾಯಿತು” ಎಂದು ಇಟಲಿಯ ಮತ್ತೊಬ್ಬ ಸಂಸದೆ ಬೆನೆಡೆಟ್ಟಾ ಸ್ಕುಡೆರಿ ಆರೋಪಿಸಿದ್ದಾರೆ.

ಫ್ಲೋಟಿಲ್ಲಾ ಸದಸ್ಯರಿಗೆ ಕಾನೂನು ನೆರವು ನೀಡುವ ಇಸ್ರೇಲಿ ಗುಂಪಿನ ಅದಾಲಾ ಪ್ರಕಾರ, ಕೆಲವು ಬಂಧಿತರಿಗೆ ವಕೀಲರು, ನೀರು, ಔಷಧಿಗಳು ಮತ್ತು ಶೌಚಾಲಯಗಳಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಕೆಲವು ಹೋರಾಟಗಾರರು ‘ಫ್ರೀ ಪ್ಯಾಲೆಸ್ಟೈನ್’ ಎಂದು ಘೋಷಣೆ ಕೂಗಿದ ನಂತರ, ಅವರ ಕೈಗಳನ್ನು ಜಿಪ್-ಟೈ (ಕೇಬಲ್ ಟೈ) ಬಳಸಿ ಕಟ್ಟಿ, ಕನಿಷ್ಠ ಐದು ಗಂಟೆಗಳ ಕಾಲ ಮಂಡಿಯೂರಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ಆದಾಲ ವಿವರಿಸಿದ್ದಾರೆ.

ದಾಳಿ ನಿಲ್ಲಿಸುವಂತೆ ಟ್ರಂಪ್ ಕರೆ ಬೆನ್ನಲ್ಲೇ ಗಾಜಾದಲ್ಲಿ ಇಸ್ರೇಲ್ ದಾಳಿ; 6 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...