Homeಅಂತರಾಷ್ಟ್ರೀಯಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

ಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

- Advertisement -
- Advertisement -

‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಮೂಲಕ ಗಾಝಾಗೆ ಮಾನವೀಯ ನೆರವು ತಲುಪಿಸಲು ಪ್ರಯತ್ನಿಸಿದ ಸುಮಾರು 137 ಹೋರಾಟಗಾರರನ್ನು ಇಸ್ರೇಲ್‌ ಬಂಧಿಸಿತ್ತು. ಶನಿವಾರ (ಅ.4) ಅವರೆಲ್ಲರನ್ನೂ ಟರ್ಕಿಗೆ ಗಡಿಪಾರು ಮಾಡಲಾಗಿದೆ.

ಟರ್ಕಿ ತಲುಪಿದ ಹೋರಾಟಗಾರರ ಪೈಕಿ ಇಬ್ಬರು, ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರನ್ನು ಬಂಧನದ ಸಮಯದಲ್ಲಿ ಇಸ್ರೇಲ್ ಸೇನೆ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಹೊಸ ಆರೋಪಗಳ ಬಗ್ಗೆ ಇಸ್ರೇಲಿ ನಾಯಕರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಅವರ ವಿದೇಶಾಂಗ ಸಚಿವಾಲಯವು ಬಂಧಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂಬ ವರದಿಗಳು ‘ಸಂಪೂರ್ಣ ಸುಳ್ಳು’ ಎಂದಿದೆ.

ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣದ ತಲುಪಿದ ಹೋರಾಟಗಾರರಲ್ಲಿ 36 ಟರ್ಕಿಶ್ ಪ್ರಜೆಗಳು, ಅಮೆರಿಕ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಅಲ್ಜೀರಿಯಾ, ಮೊರಾಕೊ, ಇಟಲಿ, ಕುವೈತ್, ಲಿಬಿಯಾ, ಮಲೇಷ್ಯಾ, ಮಾರಿಟಾನಿಯಾ, ಸ್ವಿಟ್ಜರ್ಲೆಂಡ್, ಟುನೀಶಿಯಾ ಮತ್ತು ಜೋರ್ಡಾನ್ ನಾಗರಿಕರು ಸೇರಿದ್ದಾರೆ ಎಂದು ಟರ್ಕಿಶ್ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ಗ್ರೇಟಾ ಥನ್‌ಬರ್ಗ್ ಅವರನ್ನು ‘ಭಯಾನಕವಾಗಿ ನಡೆಸಿಕೊಂಡರು’- ಹೋರಾಟಗಾರರ ಆರೋಪ

ಗ್ರೇಟಾ ಥನ್‌ಬರ್ಗ್ ಅವರನ್ನು ಇಸ್ರೇಲ್ ಸೇನೆ ಕೆಟ್ಟದ್ದಾಗಿ ನಡೆಸಿಕೊಂಡಿದೆ. ಆಕೆಯ ಕೂದಳು ಹಿಡಿದು ಎಳೆದಾಡಿದ್ದಾರೆ. ಇಸ್ರೇಲ್ ಧ್ವಜ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೋರಾಟಗಾರರಾದ ಮಲೇಷ್ಯಾದ ಪ್ರಜೆ ಹಜ್ವಾನಿ ಹೆಲ್ಮಿ ಮತ್ತು ಅಮೆರಿಕನ್ ಪ್ರಜೆ ವಿಂಡ್‌ಫೀಲ್ಡ್ ಬೀವರ್ ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣ ತಲುಪಿದಾಗ ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಇಸ್ರೇಲ್ ನಮ್ಮನ್ನು ಬಂಧಿಸಿದ್ದ ವೇಳೆ ಪ್ರಾಣಿಗಳಂತೆ ನಡೆಸಿಕೊಂಡಿದೆ. ಶುದ್ದ ಆಹಾರ, ನೀರು ಒದಗಿಸಿಲ್ಲ. ನಮ್ಮಲ್ಲಿದ್ದ ಔಷಧ ಮತ್ತು ಇತರ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು 28 ವರ್ಷದ ಹೆಲ್ಮಿ ಹೇಳಿದ್ದಾರೆ.

ಇಸ್ರೇಲ್‌ನ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಬಂದಾಗ ತನ್ನನ್ನು ಕೋಣೆಗೆ ತಳ್ಳಲಾಯಿತು. ಗ್ರೇಟಾ ಥನ್‌ಬರ್ಗ್ ಅವರನ್ನು ಭಯಾನಕವಾಗಿ ಮತ್ತು ಪ್ರೊಪಗಂಡವಾಗಿ ನಡೆಸಿಕೊಂಡರು ಎಂದು 43 ವರ್ಷದ ಬೀವರ್ ಆರೋಪಿಸಿದ್ದಾರೆ.

ಗಾಝಾಗೆ ನೆರವು ಹೊತ್ತು ಸಾಗಿದ್ದ ಸುಮಾರು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ತಂಡದ 40 ಬೋಟ್‌ಗಳನ್ನು ತಡೆದು, ಅವುಗಳಲ್ಲಿ ಇದ್ದ ಸುಮಾರು 450ಕ್ಕೂ ಹೆಚ್ಚು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿರುವುದಕ್ಕೆ ಜಾಗತಿಕ ಖಂಡನೆ ವ್ಯಕ್ತವಾಗಿದೆ.

ಬಂಧಿತ ಎಲ್ಲಾ ಮಾನವ ಹಕ್ಕು ಕಾರ್ಯಕರ್ತರು ಸುರಕ್ಷಿತ ಮತ್ತು ಉತ್ತಮ ಆರೋಗ್ಯದಲ್ಲಿದ್ದಾರೆ. ಇನ್ನುಳಿದವರನ್ನು ಸಾಧ್ಯವಾದಷ್ಟು ಬೇಗ ಗಡಿಪಾರು ಮಾಡಲಾಗುವುದು ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿದೆ.

ಪ್ರತ್ಯೇಕ ಪೋಸ್ಟ್‌ನಲ್ಲಿ, ಕೆಲವು ಫ್ಲೋಟಿಲ್ಲಾ ಸದಸ್ಯರು ದಾಖಲೆಗಳನ್ನು ಒದಗಿಸದೆ ಗಡಿಪಾರು ಪ್ರಕ್ರಿಯೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದೆ. ಈ ಆರೋಪವನ್ನು ನಾವು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ತಿಳಿಸಿದೆ.

ದೌರ್ಜನ್ಯದ ಆರೋಪಗಳನ್ನು ತಳ್ಳಿ ಹಾಕಿದ ಇಸ್ರೇಲ್

ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ 26 ಇಟಾಲಿಯನ್ನರಿದ್ದರು, ಇನ್ನೂ 15 ಜನರನ್ನು ಇಸ್ರೇಲ್‌ನಲ್ಲಿ ಬಂಧಿಸಲಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಇತರ ರಾಷ್ಟ್ರಗಳ ಹೋರಾಟಗಾರರೊಂದಿಗೆ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ ಎಂದು ಇಟಲಿಯ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಹೇಳಿದ್ದಾರೆ.

ಉಳಿದ ನಮ್ಮ ಪ್ರಜೆಗಳನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೊಮ್ಮೆ ಟೆಲ್ ಅವೀವ್‌ನಲ್ಲಿರುವ ಇಟಾಲಿಯನ್ ರಾಯಭಾರ ಕಚೇರಿಗೆ ಸೂಚನೆಗಳನ್ನು ನೀಡಿದ್ದೇನೆ ಎಂದು ತಜಾನಿ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಗ್ಲೋಬಲ್ ಫ್ಲೋಟಿಲ್ಲಾದಲ್ಲಿದ್ದ ಇಟಾಲಿಯನ್ನರ ಮೊದಲ ಗುಂಪು (ನಾಲ್ವರು ಸಂಸದರು) ಶುಕ್ರವಾರ ರೋಮ್‌ ತಲುಪಿದ್ದಾರೆ ಎಂದು ರಾಯಿಟರ್ಸ್ ತಿಳಿಸಿದೆ.

“ಕಾನೂನುಬದ್ಧವಾಗಿ ವರ್ತಿಸಿದವರು ಬೋಟ್‌ಗಳಲ್ಲಿ ಇದ್ದವರು, ಕಾನೂನುಬಾಹಿರವಾಗಿ ವರ್ತಿಸಿದವರು ಗಾಝಾಗೆ ಮಾನವೀಯ ನೆರವು ತಲುಪದಂತೆ ತಡೆದವರು” ಎಂದು ಫ್ಲೋಟಿಲ್ಲಾದ ಭಾಗವಾಗಿದ್ದ ಇಟಾಲಿಯನ್ ಸಂಸದರಲ್ಲಿ ಒಬ್ಬರಾದ ಆರ್ಟುರೊ ಸ್ಕಾಟೊ ರೋಮ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ನಮ್ಮನ್ನು ಕ್ರೂರವಾಗಿ ತಡೆಹಿಡಿಯಲಾಯಿತು … ಕ್ರೂರವಾಗಿ ಒತ್ತೆಯಾಳಾಗಿ ಇರಿಸಲಾಯಿತು” ಎಂದು ಇಟಲಿಯ ಮತ್ತೊಬ್ಬ ಸಂಸದೆ ಬೆನೆಡೆಟ್ಟಾ ಸ್ಕುಡೆರಿ ಆರೋಪಿಸಿದ್ದಾರೆ.

ಫ್ಲೋಟಿಲ್ಲಾ ಸದಸ್ಯರಿಗೆ ಕಾನೂನು ನೆರವು ನೀಡುವ ಇಸ್ರೇಲಿ ಗುಂಪಿನ ಅದಾಲಾ ಪ್ರಕಾರ, ಕೆಲವು ಬಂಧಿತರಿಗೆ ವಕೀಲರು, ನೀರು, ಔಷಧಿಗಳು ಮತ್ತು ಶೌಚಾಲಯಗಳಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಕೆಲವು ಹೋರಾಟಗಾರರು ‘ಫ್ರೀ ಪ್ಯಾಲೆಸ್ಟೈನ್’ ಎಂದು ಘೋಷಣೆ ಕೂಗಿದ ನಂತರ, ಅವರ ಕೈಗಳನ್ನು ಜಿಪ್-ಟೈ (ಕೇಬಲ್ ಟೈ) ಬಳಸಿ ಕಟ್ಟಿ, ಕನಿಷ್ಠ ಐದು ಗಂಟೆಗಳ ಕಾಲ ಮಂಡಿಯೂರಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ಆದಾಲ ವಿವರಿಸಿದ್ದಾರೆ.

ದಾಳಿ ನಿಲ್ಲಿಸುವಂತೆ ಟ್ರಂಪ್ ಕರೆ ಬೆನ್ನಲ್ಲೇ ಗಾಜಾದಲ್ಲಿ ಇಸ್ರೇಲ್ ದಾಳಿ; 6 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...