Homeಕರ್ನಾಟಕಭಕ್ತಾದಿಗಳ ಗಮನಕ್ಕೆ... ನಾಗೇಶ್ ಹೆಗಡೆಯವರ ಬರಹ

ಭಕ್ತಾದಿಗಳ ಗಮನಕ್ಕೆ… ನಾಗೇಶ್ ಹೆಗಡೆಯವರ ಬರಹ

ನೀರಿನ ಮಿತಬಳಕೆ ಮತ್ತು ಮರುಬಳಕೆಯ ಕುರಿತು ಇಲ್ಲಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ.

- Advertisement -
- Advertisement -

ಧರ್ಮಸ್ಥಳದ ‘ಖಾವಂದರು’ ಎಂದು ಭಕ್ತಾದಿಗಳಿಂದ ಕರೆಸಿಕೊಳ್ಳುವ ವೀರೇಂದ್ರ ಹೆಗ್ಗಡೆಯವರು, ಒಂದು ವಿಶೇಷ ಪತ್ರ ಬರೆದಿದ್ದಾರೆ. ಆ ಹಿನ್ನೆಲೆಯಲ್ಲಿ ಪತ್ರಕರ್ತ, ಪರಿಸರ ಕಾಳಜಿಯುಳ್ಳ ತಜ್ಞ ನಾಗೇಶ್ ಹೆಗಡೆಯವರು ಬರೆದಿದ್ದನ್ನು, ಬಳಸಿಕೊಳ್ಳಲು ನಮಗೆ ಅನುಮತಿ ನೀಡಿದ್ದಾರೆ.

ಭಕ್ತಾದಿಗಳ ಗಮನಕ್ಕೆ….
ತುಸು ಜಾಸ್ತಿ ಜನ ಈ ಪೋಸ್ಟ್ ನೋಡಲಿ ಎಂಬ ಉದ್ದೇಶದಿಂದ ಈ ಶಿರೋನಾಮೆ.
ಆಗಿದ್ದೇನೆಂದರೆ, ಧರ್ಮಸ್ಥಳದ ಬಳಿ ಹರಿಯುವ ನೇತ್ರಾವತಿ ನದಿಯಲ್ಲಿ ನೀರಿನ ತೀವ್ರ ಅಭಾವವಾಗಿದೆ. ಅದಕ್ಕೇ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಒಂದು ಪ್ರಕಟನೆ ಹೊರಡಿಸಿದ್ದಾರೆ. “ಆದುದರಿಂದ ಭಕ್ತಾದಿಗಳು ಮತ್ತು ಪ್ರವಾಸಿಗಳು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ಕೋರುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಇದೇ ಪ್ರಕಟನೆ ಹೀಗೆ ಇದ್ದಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು: “ಆದುದರಿಂದ ನೀರಿನ ಮಿತಬಳಕೆ ಮತ್ತು ಮರುಬಳಕೆಯ ಕುರಿತು ಇಲ್ಲಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ. ಮುಡಿ ಕೊಡುವ ಭಕ್ತರೂ ಕೇವಲ ಒಂದು ಬಕೆಟ್ ನೀರಿನಲ್ಲಿ ಸ್ನಾನ ಮಾಡಬಹುದು. ಬಳಸಿದ ನೀರನ್ನು ಮತ್ತೆ ಶುದ್ಧೀಕರಿಸಿ ಮರುಬಳಕೆ ಮಾಡುವ ವಿಧಾನಗಳನ್ನೂ ಇಲ್ಲಿ ತೋರಿಸುವ ಯೋಜನೆ ಇದೆ. ಅದು ಜಾರಿಗೆ ಬರಲು ತುಸು ತಡವಾಗಬಹುದು. ಸದ್ಯಕ್ಕೆ ನೀರನ್ನು ಮಿತವಾಗಿ ಬಳಸಲು ಬಲ್ಲವರಿಗಷ್ಟೇ ಇಲ್ಲಿ ಸ್ವಾಗತವಿದೆ’’.

ಅಭಾವದ ದಿನಗಳಲ್ಲಿ ನೀರನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿಸಿ ಹೇಳುವ ಅತ್ಯಮೂಲ್ಯ ಅವಕಾಶ ಇದಾಗಿತ್ತು. ಸರಕಾರವೇ ವಿವಿಧ ಜಿಲ್ಲೆಗಳಲ್ಲಿ ಆ ಕೆಲಸವನ್ನು ಕೈಗೊಳ್ಳಬೇಕಿತ್ತು. ಸಿಂಗಪುರದಲ್ಲಿ, ಚರಂಡಿ ನೀರನ್ನೂ ಹೇಗೆ ಶುದ್ಧೀಕರಿಸಿ ಕುಡಿಯಲು ಬಳಸುತ್ತಾರೆ, ನಮೀಬಿಯಾದ ಪ್ರವಾಸಿ ನಗರ ವಿಂಡ್ಹೋಕ್ ಮತ್ತು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಗಳಲ್ಲಿ ಜನರು ನೀರಿನ ತೀವ್ರ ಅಭಾವವನ್ನು ಹೇಗೆ ಎದುರಿಸುತ್ತಿದ್ದಾರೆ ಎಂಬುದರ ಬಗ್ಗೆ ಟಿವಿ ಚಾನೆಲ್ ಗಳಲ್ಲಿ ಪ್ರೈಮ್ ಟೈಮ್ ನಲ್ಲಿ ಸರಕಾರಿ ಖರ್ಚಿನಲ್ಲಿ ತಜ್ಞರ ಚರ್ಚೆ ಏರ್ಪಡಿಸಬಹುದಿತ್ತು. ಅಧಿಕಾರಿಗಳೇನೊ ಉಷ್ಟ್ರಪಕ್ಷಿಗಳಾಗಿದ್ದಾರೆ. ಸರಕಾರದ ಮುಖ್ಯಸ್ಥರಂತೂ ನೀರನ್ನು ಮರೆತು ಚಿನ್ನದ ರಥ, ರೆಸಾರ್ಟ್, ದೇಗುಲ, ಮಂದಿರಗಳ ಸುತ್ತು ಹೊಡೆಯುತ್ತಿದ್ದಾರೆ. ಧರ್ಮಸ್ಥಳವೂ ಈ ದಿನಗಳಲ್ಲಿ ಭಕ್ತರನ್ನು ಕೈಬಿಟ್ಟರೆ ಹೇಗೆ?

ಸುಮಾರು 25 ವರ್ಷಗಳ ಹಿಂದೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡಯವರಿಗೆ ನಾನೊಂದು ಪತ್ರ ಬರೆದಿದ್ದೆ. “ಭಕ್ತರು ತಿಂದು ಬಿಸಾಕಿದ ಊಟದ ಎಲೆಗಳ ತ್ಯಾಜ್ಯ ಹತ್ತು ಕಿಲೊಮೀಟರ್ ವರೆಗೂ ವಿಸ್ತರಿಸಿದೆ. ಅದೇ ತ್ಯಾಜ್ಯವನ್ನು ಬಯೊಡೈಜೆಸ್ಟರ್ ಮೂಲಕ ಸಂಸ್ಕರಿಸಿದರೆ ಅಡುಗೆ ಅನಿಲವೂ ಸಿಗುತ್ತದೆ, ಉತ್ತಮ ಕಾಂಪೋಸ್ಟ್ ಕೂಡ ಸಿಗುತ್ತದೆ” ಎಂದು ಅಂತರ್ದೇಶೀ ಪತ್ರದಲ್ಲಿ ಬರೆದಿದ್ದೆ. ಅದಕ್ಕೆ ಅವರು ತಕ್ಷಣ ಸ್ಪಂದಿಸಿ, “ಈ ವ್ಯವಸ್ಥೆ ಅಳವಡಿಸಲು ಸಿದ್ಧರಿದ್ದೇವೆ, ಮಾರ್ಗದರ್ಶನ ಎಲ್ಲಿ ಸಿಗುತ್ತದೆ?” ಎಂದು ನನಗೆ ಬರೆದಿದ್ದರು. ಈಗ ಅಲ್ಲಿ ತ್ಯಾಜ್ಯ ಸಂಸ್ಕರಣೆಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದೆ.

ಇದೇ ಉತ್ಸಾಹದಲ್ಲಿ ನೀರಿನ ನಿರ್ವಹಣೆಯ ತಂತ್ರಜ್ಞಾನವನ್ನೂ ಜಾರಿಗೆ ತರಬೇಕಾದ ತುರ್ತು ಅಲ್ಲಿ ಬಂದಿದೆ. ನೀರಿನ ಮಿತಬಳಕೆ, ಮರುಬಳಕೆ ಹಾಗೂ ನದಿಮರುಪೂರಣ ವ್ಯವಸ್ಥೆಯ ಪ್ರಾತ್ಯಕ್ಷಿಕೆ ನಮ್ಮ ಜನರಿಗೆ ತೀರ ಅಗತ್ಯವಾಗಿದೆ. (ದಶಕಗಳಿಂದ ಬತ್ತಿ ಹೋಗಿದ್ದ ನದಿಯನ್ನು ಮತ್ತೆ ಸಜೀವಗೊಳಿಸಿದ ಉದಾಹರಣೆ ರಾಜಸ್ತಾನದಲ್ಲಿದೆ). ಎಲ್ಲಕ್ಕಿಂತ ಮುಖ್ಯವಾಗಿ ನೇತ್ರಾವತಿಯ ನದಿಯನ್ನು ತಿರುಗಿಸುವ (ಎತ್ತಿನ ಹೊಳೆ) ಯೋಜನೆಯ ಭವಿಷ್ಯದ ಫಲಾನುಭವಿಗಳೆನಿಸಿದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ಭಕ್ತರಿಗೆ ಧರ್ಮಸ್ಥಳದಲ್ಲಿ ಈ ದಿನಗಳಲ್ಲೇ ನೀರಿನ ಮಿತಬಳಕೆಯ ಪ್ರಾತ್ಯಕ್ಷಿಕೆ ಕೊಡುವುದು ಒಳ್ಳೆಯದು!

ಹರಕೆ, ಪೂಜೆಗೆಂದು ಬರುವ ಎಮ್ಮೆಲ್ಲೆ, ಎಂಪಿ, ಮಂತ್ರಿಗಣಕ್ಕೆ ಕಡ್ಡಾಯವಾಗಿ ಇಂಥ ಪ್ರಾತ್ಯಕ್ಷಿಕೆಗಳನ್ನು ಮೊದಲು ತೋರಿಸಿ ಆಮೇಲೆ ದೇವರ ದರ್ಶನ ಮಾಡಿಸಬೇಕು. ನೇತ್ರಾವತಿ ನದಿಮೂಲವನ್ನು ದುಃಸ್ಥಿತಿಗೆ ತಂದ ಮರಳು ಗಣಿಗಾರಿಕೆ, ಹೆದ್ದಾರಿ ವಿಸ್ತರಣೆ, ಅರಣ್ಯನಾಶಗಳ ದೊಡ್ಡ ದೊಡ್ಡ ಚಿತ್ರಗಳು ಮಂತ್ರಿಗಳ ಸ್ನಾನದ ಮನೆಯಲ್ಲಿ ಇರಬೇಕು. ಅರ್ಧ ಬಕೆಟ್ ನೀರಲ್ಲಿ ಗಣ್ಯರು ಸ್ನಾನ ಮಾಡುವುದು ಭಕ್ತಾದಿಗಳ ಗಮನಕ್ಕೂ ಬರುವಂತಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...