Homeಕರ್ನಾಟಕಭಕ್ತಾದಿಗಳ ಗಮನಕ್ಕೆ... ನಾಗೇಶ್ ಹೆಗಡೆಯವರ ಬರಹ

ಭಕ್ತಾದಿಗಳ ಗಮನಕ್ಕೆ… ನಾಗೇಶ್ ಹೆಗಡೆಯವರ ಬರಹ

ನೀರಿನ ಮಿತಬಳಕೆ ಮತ್ತು ಮರುಬಳಕೆಯ ಕುರಿತು ಇಲ್ಲಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ.

- Advertisement -
- Advertisement -

ಧರ್ಮಸ್ಥಳದ ‘ಖಾವಂದರು’ ಎಂದು ಭಕ್ತಾದಿಗಳಿಂದ ಕರೆಸಿಕೊಳ್ಳುವ ವೀರೇಂದ್ರ ಹೆಗ್ಗಡೆಯವರು, ಒಂದು ವಿಶೇಷ ಪತ್ರ ಬರೆದಿದ್ದಾರೆ. ಆ ಹಿನ್ನೆಲೆಯಲ್ಲಿ ಪತ್ರಕರ್ತ, ಪರಿಸರ ಕಾಳಜಿಯುಳ್ಳ ತಜ್ಞ ನಾಗೇಶ್ ಹೆಗಡೆಯವರು ಬರೆದಿದ್ದನ್ನು, ಬಳಸಿಕೊಳ್ಳಲು ನಮಗೆ ಅನುಮತಿ ನೀಡಿದ್ದಾರೆ.

ಭಕ್ತಾದಿಗಳ ಗಮನಕ್ಕೆ….
ತುಸು ಜಾಸ್ತಿ ಜನ ಈ ಪೋಸ್ಟ್ ನೋಡಲಿ ಎಂಬ ಉದ್ದೇಶದಿಂದ ಈ ಶಿರೋನಾಮೆ.
ಆಗಿದ್ದೇನೆಂದರೆ, ಧರ್ಮಸ್ಥಳದ ಬಳಿ ಹರಿಯುವ ನೇತ್ರಾವತಿ ನದಿಯಲ್ಲಿ ನೀರಿನ ತೀವ್ರ ಅಭಾವವಾಗಿದೆ. ಅದಕ್ಕೇ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಒಂದು ಪ್ರಕಟನೆ ಹೊರಡಿಸಿದ್ದಾರೆ. “ಆದುದರಿಂದ ಭಕ್ತಾದಿಗಳು ಮತ್ತು ಪ್ರವಾಸಿಗಳು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ಕೋರುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಇದೇ ಪ್ರಕಟನೆ ಹೀಗೆ ಇದ್ದಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು: “ಆದುದರಿಂದ ನೀರಿನ ಮಿತಬಳಕೆ ಮತ್ತು ಮರುಬಳಕೆಯ ಕುರಿತು ಇಲ್ಲಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ. ಮುಡಿ ಕೊಡುವ ಭಕ್ತರೂ ಕೇವಲ ಒಂದು ಬಕೆಟ್ ನೀರಿನಲ್ಲಿ ಸ್ನಾನ ಮಾಡಬಹುದು. ಬಳಸಿದ ನೀರನ್ನು ಮತ್ತೆ ಶುದ್ಧೀಕರಿಸಿ ಮರುಬಳಕೆ ಮಾಡುವ ವಿಧಾನಗಳನ್ನೂ ಇಲ್ಲಿ ತೋರಿಸುವ ಯೋಜನೆ ಇದೆ. ಅದು ಜಾರಿಗೆ ಬರಲು ತುಸು ತಡವಾಗಬಹುದು. ಸದ್ಯಕ್ಕೆ ನೀರನ್ನು ಮಿತವಾಗಿ ಬಳಸಲು ಬಲ್ಲವರಿಗಷ್ಟೇ ಇಲ್ಲಿ ಸ್ವಾಗತವಿದೆ’’.

ಅಭಾವದ ದಿನಗಳಲ್ಲಿ ನೀರನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿಸಿ ಹೇಳುವ ಅತ್ಯಮೂಲ್ಯ ಅವಕಾಶ ಇದಾಗಿತ್ತು. ಸರಕಾರವೇ ವಿವಿಧ ಜಿಲ್ಲೆಗಳಲ್ಲಿ ಆ ಕೆಲಸವನ್ನು ಕೈಗೊಳ್ಳಬೇಕಿತ್ತು. ಸಿಂಗಪುರದಲ್ಲಿ, ಚರಂಡಿ ನೀರನ್ನೂ ಹೇಗೆ ಶುದ್ಧೀಕರಿಸಿ ಕುಡಿಯಲು ಬಳಸುತ್ತಾರೆ, ನಮೀಬಿಯಾದ ಪ್ರವಾಸಿ ನಗರ ವಿಂಡ್ಹೋಕ್ ಮತ್ತು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಗಳಲ್ಲಿ ಜನರು ನೀರಿನ ತೀವ್ರ ಅಭಾವವನ್ನು ಹೇಗೆ ಎದುರಿಸುತ್ತಿದ್ದಾರೆ ಎಂಬುದರ ಬಗ್ಗೆ ಟಿವಿ ಚಾನೆಲ್ ಗಳಲ್ಲಿ ಪ್ರೈಮ್ ಟೈಮ್ ನಲ್ಲಿ ಸರಕಾರಿ ಖರ್ಚಿನಲ್ಲಿ ತಜ್ಞರ ಚರ್ಚೆ ಏರ್ಪಡಿಸಬಹುದಿತ್ತು. ಅಧಿಕಾರಿಗಳೇನೊ ಉಷ್ಟ್ರಪಕ್ಷಿಗಳಾಗಿದ್ದಾರೆ. ಸರಕಾರದ ಮುಖ್ಯಸ್ಥರಂತೂ ನೀರನ್ನು ಮರೆತು ಚಿನ್ನದ ರಥ, ರೆಸಾರ್ಟ್, ದೇಗುಲ, ಮಂದಿರಗಳ ಸುತ್ತು ಹೊಡೆಯುತ್ತಿದ್ದಾರೆ. ಧರ್ಮಸ್ಥಳವೂ ಈ ದಿನಗಳಲ್ಲಿ ಭಕ್ತರನ್ನು ಕೈಬಿಟ್ಟರೆ ಹೇಗೆ?

ಸುಮಾರು 25 ವರ್ಷಗಳ ಹಿಂದೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡಯವರಿಗೆ ನಾನೊಂದು ಪತ್ರ ಬರೆದಿದ್ದೆ. “ಭಕ್ತರು ತಿಂದು ಬಿಸಾಕಿದ ಊಟದ ಎಲೆಗಳ ತ್ಯಾಜ್ಯ ಹತ್ತು ಕಿಲೊಮೀಟರ್ ವರೆಗೂ ವಿಸ್ತರಿಸಿದೆ. ಅದೇ ತ್ಯಾಜ್ಯವನ್ನು ಬಯೊಡೈಜೆಸ್ಟರ್ ಮೂಲಕ ಸಂಸ್ಕರಿಸಿದರೆ ಅಡುಗೆ ಅನಿಲವೂ ಸಿಗುತ್ತದೆ, ಉತ್ತಮ ಕಾಂಪೋಸ್ಟ್ ಕೂಡ ಸಿಗುತ್ತದೆ” ಎಂದು ಅಂತರ್ದೇಶೀ ಪತ್ರದಲ್ಲಿ ಬರೆದಿದ್ದೆ. ಅದಕ್ಕೆ ಅವರು ತಕ್ಷಣ ಸ್ಪಂದಿಸಿ, “ಈ ವ್ಯವಸ್ಥೆ ಅಳವಡಿಸಲು ಸಿದ್ಧರಿದ್ದೇವೆ, ಮಾರ್ಗದರ್ಶನ ಎಲ್ಲಿ ಸಿಗುತ್ತದೆ?” ಎಂದು ನನಗೆ ಬರೆದಿದ್ದರು. ಈಗ ಅಲ್ಲಿ ತ್ಯಾಜ್ಯ ಸಂಸ್ಕರಣೆಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದೆ.

ಇದೇ ಉತ್ಸಾಹದಲ್ಲಿ ನೀರಿನ ನಿರ್ವಹಣೆಯ ತಂತ್ರಜ್ಞಾನವನ್ನೂ ಜಾರಿಗೆ ತರಬೇಕಾದ ತುರ್ತು ಅಲ್ಲಿ ಬಂದಿದೆ. ನೀರಿನ ಮಿತಬಳಕೆ, ಮರುಬಳಕೆ ಹಾಗೂ ನದಿಮರುಪೂರಣ ವ್ಯವಸ್ಥೆಯ ಪ್ರಾತ್ಯಕ್ಷಿಕೆ ನಮ್ಮ ಜನರಿಗೆ ತೀರ ಅಗತ್ಯವಾಗಿದೆ. (ದಶಕಗಳಿಂದ ಬತ್ತಿ ಹೋಗಿದ್ದ ನದಿಯನ್ನು ಮತ್ತೆ ಸಜೀವಗೊಳಿಸಿದ ಉದಾಹರಣೆ ರಾಜಸ್ತಾನದಲ್ಲಿದೆ). ಎಲ್ಲಕ್ಕಿಂತ ಮುಖ್ಯವಾಗಿ ನೇತ್ರಾವತಿಯ ನದಿಯನ್ನು ತಿರುಗಿಸುವ (ಎತ್ತಿನ ಹೊಳೆ) ಯೋಜನೆಯ ಭವಿಷ್ಯದ ಫಲಾನುಭವಿಗಳೆನಿಸಿದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ಭಕ್ತರಿಗೆ ಧರ್ಮಸ್ಥಳದಲ್ಲಿ ಈ ದಿನಗಳಲ್ಲೇ ನೀರಿನ ಮಿತಬಳಕೆಯ ಪ್ರಾತ್ಯಕ್ಷಿಕೆ ಕೊಡುವುದು ಒಳ್ಳೆಯದು!

ಹರಕೆ, ಪೂಜೆಗೆಂದು ಬರುವ ಎಮ್ಮೆಲ್ಲೆ, ಎಂಪಿ, ಮಂತ್ರಿಗಣಕ್ಕೆ ಕಡ್ಡಾಯವಾಗಿ ಇಂಥ ಪ್ರಾತ್ಯಕ್ಷಿಕೆಗಳನ್ನು ಮೊದಲು ತೋರಿಸಿ ಆಮೇಲೆ ದೇವರ ದರ್ಶನ ಮಾಡಿಸಬೇಕು. ನೇತ್ರಾವತಿ ನದಿಮೂಲವನ್ನು ದುಃಸ್ಥಿತಿಗೆ ತಂದ ಮರಳು ಗಣಿಗಾರಿಕೆ, ಹೆದ್ದಾರಿ ವಿಸ್ತರಣೆ, ಅರಣ್ಯನಾಶಗಳ ದೊಡ್ಡ ದೊಡ್ಡ ಚಿತ್ರಗಳು ಮಂತ್ರಿಗಳ ಸ್ನಾನದ ಮನೆಯಲ್ಲಿ ಇರಬೇಕು. ಅರ್ಧ ಬಕೆಟ್ ನೀರಲ್ಲಿ ಗಣ್ಯರು ಸ್ನಾನ ಮಾಡುವುದು ಭಕ್ತಾದಿಗಳ ಗಮನಕ್ಕೂ ಬರುವಂತಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...