Homeಕರ್ನಾಟಕಭಕ್ತಾದಿಗಳ ಗಮನಕ್ಕೆ... ನಾಗೇಶ್ ಹೆಗಡೆಯವರ ಬರಹ

ಭಕ್ತಾದಿಗಳ ಗಮನಕ್ಕೆ… ನಾಗೇಶ್ ಹೆಗಡೆಯವರ ಬರಹ

ನೀರಿನ ಮಿತಬಳಕೆ ಮತ್ತು ಮರುಬಳಕೆಯ ಕುರಿತು ಇಲ್ಲಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ.

- Advertisement -
- Advertisement -

ಧರ್ಮಸ್ಥಳದ ‘ಖಾವಂದರು’ ಎಂದು ಭಕ್ತಾದಿಗಳಿಂದ ಕರೆಸಿಕೊಳ್ಳುವ ವೀರೇಂದ್ರ ಹೆಗ್ಗಡೆಯವರು, ಒಂದು ವಿಶೇಷ ಪತ್ರ ಬರೆದಿದ್ದಾರೆ. ಆ ಹಿನ್ನೆಲೆಯಲ್ಲಿ ಪತ್ರಕರ್ತ, ಪರಿಸರ ಕಾಳಜಿಯುಳ್ಳ ತಜ್ಞ ನಾಗೇಶ್ ಹೆಗಡೆಯವರು ಬರೆದಿದ್ದನ್ನು, ಬಳಸಿಕೊಳ್ಳಲು ನಮಗೆ ಅನುಮತಿ ನೀಡಿದ್ದಾರೆ.

ಭಕ್ತಾದಿಗಳ ಗಮನಕ್ಕೆ….
ತುಸು ಜಾಸ್ತಿ ಜನ ಈ ಪೋಸ್ಟ್ ನೋಡಲಿ ಎಂಬ ಉದ್ದೇಶದಿಂದ ಈ ಶಿರೋನಾಮೆ.
ಆಗಿದ್ದೇನೆಂದರೆ, ಧರ್ಮಸ್ಥಳದ ಬಳಿ ಹರಿಯುವ ನೇತ್ರಾವತಿ ನದಿಯಲ್ಲಿ ನೀರಿನ ತೀವ್ರ ಅಭಾವವಾಗಿದೆ. ಅದಕ್ಕೇ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಒಂದು ಪ್ರಕಟನೆ ಹೊರಡಿಸಿದ್ದಾರೆ. “ಆದುದರಿಂದ ಭಕ್ತಾದಿಗಳು ಮತ್ತು ಪ್ರವಾಸಿಗಳು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ಕೋರುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಇದೇ ಪ್ರಕಟನೆ ಹೀಗೆ ಇದ್ದಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು: “ಆದುದರಿಂದ ನೀರಿನ ಮಿತಬಳಕೆ ಮತ್ತು ಮರುಬಳಕೆಯ ಕುರಿತು ಇಲ್ಲಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ. ಮುಡಿ ಕೊಡುವ ಭಕ್ತರೂ ಕೇವಲ ಒಂದು ಬಕೆಟ್ ನೀರಿನಲ್ಲಿ ಸ್ನಾನ ಮಾಡಬಹುದು. ಬಳಸಿದ ನೀರನ್ನು ಮತ್ತೆ ಶುದ್ಧೀಕರಿಸಿ ಮರುಬಳಕೆ ಮಾಡುವ ವಿಧಾನಗಳನ್ನೂ ಇಲ್ಲಿ ತೋರಿಸುವ ಯೋಜನೆ ಇದೆ. ಅದು ಜಾರಿಗೆ ಬರಲು ತುಸು ತಡವಾಗಬಹುದು. ಸದ್ಯಕ್ಕೆ ನೀರನ್ನು ಮಿತವಾಗಿ ಬಳಸಲು ಬಲ್ಲವರಿಗಷ್ಟೇ ಇಲ್ಲಿ ಸ್ವಾಗತವಿದೆ’’.

ಅಭಾವದ ದಿನಗಳಲ್ಲಿ ನೀರನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿಸಿ ಹೇಳುವ ಅತ್ಯಮೂಲ್ಯ ಅವಕಾಶ ಇದಾಗಿತ್ತು. ಸರಕಾರವೇ ವಿವಿಧ ಜಿಲ್ಲೆಗಳಲ್ಲಿ ಆ ಕೆಲಸವನ್ನು ಕೈಗೊಳ್ಳಬೇಕಿತ್ತು. ಸಿಂಗಪುರದಲ್ಲಿ, ಚರಂಡಿ ನೀರನ್ನೂ ಹೇಗೆ ಶುದ್ಧೀಕರಿಸಿ ಕುಡಿಯಲು ಬಳಸುತ್ತಾರೆ, ನಮೀಬಿಯಾದ ಪ್ರವಾಸಿ ನಗರ ವಿಂಡ್ಹೋಕ್ ಮತ್ತು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಗಳಲ್ಲಿ ಜನರು ನೀರಿನ ತೀವ್ರ ಅಭಾವವನ್ನು ಹೇಗೆ ಎದುರಿಸುತ್ತಿದ್ದಾರೆ ಎಂಬುದರ ಬಗ್ಗೆ ಟಿವಿ ಚಾನೆಲ್ ಗಳಲ್ಲಿ ಪ್ರೈಮ್ ಟೈಮ್ ನಲ್ಲಿ ಸರಕಾರಿ ಖರ್ಚಿನಲ್ಲಿ ತಜ್ಞರ ಚರ್ಚೆ ಏರ್ಪಡಿಸಬಹುದಿತ್ತು. ಅಧಿಕಾರಿಗಳೇನೊ ಉಷ್ಟ್ರಪಕ್ಷಿಗಳಾಗಿದ್ದಾರೆ. ಸರಕಾರದ ಮುಖ್ಯಸ್ಥರಂತೂ ನೀರನ್ನು ಮರೆತು ಚಿನ್ನದ ರಥ, ರೆಸಾರ್ಟ್, ದೇಗುಲ, ಮಂದಿರಗಳ ಸುತ್ತು ಹೊಡೆಯುತ್ತಿದ್ದಾರೆ. ಧರ್ಮಸ್ಥಳವೂ ಈ ದಿನಗಳಲ್ಲಿ ಭಕ್ತರನ್ನು ಕೈಬಿಟ್ಟರೆ ಹೇಗೆ?

ಸುಮಾರು 25 ವರ್ಷಗಳ ಹಿಂದೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡಯವರಿಗೆ ನಾನೊಂದು ಪತ್ರ ಬರೆದಿದ್ದೆ. “ಭಕ್ತರು ತಿಂದು ಬಿಸಾಕಿದ ಊಟದ ಎಲೆಗಳ ತ್ಯಾಜ್ಯ ಹತ್ತು ಕಿಲೊಮೀಟರ್ ವರೆಗೂ ವಿಸ್ತರಿಸಿದೆ. ಅದೇ ತ್ಯಾಜ್ಯವನ್ನು ಬಯೊಡೈಜೆಸ್ಟರ್ ಮೂಲಕ ಸಂಸ್ಕರಿಸಿದರೆ ಅಡುಗೆ ಅನಿಲವೂ ಸಿಗುತ್ತದೆ, ಉತ್ತಮ ಕಾಂಪೋಸ್ಟ್ ಕೂಡ ಸಿಗುತ್ತದೆ” ಎಂದು ಅಂತರ್ದೇಶೀ ಪತ್ರದಲ್ಲಿ ಬರೆದಿದ್ದೆ. ಅದಕ್ಕೆ ಅವರು ತಕ್ಷಣ ಸ್ಪಂದಿಸಿ, “ಈ ವ್ಯವಸ್ಥೆ ಅಳವಡಿಸಲು ಸಿದ್ಧರಿದ್ದೇವೆ, ಮಾರ್ಗದರ್ಶನ ಎಲ್ಲಿ ಸಿಗುತ್ತದೆ?” ಎಂದು ನನಗೆ ಬರೆದಿದ್ದರು. ಈಗ ಅಲ್ಲಿ ತ್ಯಾಜ್ಯ ಸಂಸ್ಕರಣೆಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದೆ.

ಇದೇ ಉತ್ಸಾಹದಲ್ಲಿ ನೀರಿನ ನಿರ್ವಹಣೆಯ ತಂತ್ರಜ್ಞಾನವನ್ನೂ ಜಾರಿಗೆ ತರಬೇಕಾದ ತುರ್ತು ಅಲ್ಲಿ ಬಂದಿದೆ. ನೀರಿನ ಮಿತಬಳಕೆ, ಮರುಬಳಕೆ ಹಾಗೂ ನದಿಮರುಪೂರಣ ವ್ಯವಸ್ಥೆಯ ಪ್ರಾತ್ಯಕ್ಷಿಕೆ ನಮ್ಮ ಜನರಿಗೆ ತೀರ ಅಗತ್ಯವಾಗಿದೆ. (ದಶಕಗಳಿಂದ ಬತ್ತಿ ಹೋಗಿದ್ದ ನದಿಯನ್ನು ಮತ್ತೆ ಸಜೀವಗೊಳಿಸಿದ ಉದಾಹರಣೆ ರಾಜಸ್ತಾನದಲ್ಲಿದೆ). ಎಲ್ಲಕ್ಕಿಂತ ಮುಖ್ಯವಾಗಿ ನೇತ್ರಾವತಿಯ ನದಿಯನ್ನು ತಿರುಗಿಸುವ (ಎತ್ತಿನ ಹೊಳೆ) ಯೋಜನೆಯ ಭವಿಷ್ಯದ ಫಲಾನುಭವಿಗಳೆನಿಸಿದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ಭಕ್ತರಿಗೆ ಧರ್ಮಸ್ಥಳದಲ್ಲಿ ಈ ದಿನಗಳಲ್ಲೇ ನೀರಿನ ಮಿತಬಳಕೆಯ ಪ್ರಾತ್ಯಕ್ಷಿಕೆ ಕೊಡುವುದು ಒಳ್ಳೆಯದು!

ಹರಕೆ, ಪೂಜೆಗೆಂದು ಬರುವ ಎಮ್ಮೆಲ್ಲೆ, ಎಂಪಿ, ಮಂತ್ರಿಗಣಕ್ಕೆ ಕಡ್ಡಾಯವಾಗಿ ಇಂಥ ಪ್ರಾತ್ಯಕ್ಷಿಕೆಗಳನ್ನು ಮೊದಲು ತೋರಿಸಿ ಆಮೇಲೆ ದೇವರ ದರ್ಶನ ಮಾಡಿಸಬೇಕು. ನೇತ್ರಾವತಿ ನದಿಮೂಲವನ್ನು ದುಃಸ್ಥಿತಿಗೆ ತಂದ ಮರಳು ಗಣಿಗಾರಿಕೆ, ಹೆದ್ದಾರಿ ವಿಸ್ತರಣೆ, ಅರಣ್ಯನಾಶಗಳ ದೊಡ್ಡ ದೊಡ್ಡ ಚಿತ್ರಗಳು ಮಂತ್ರಿಗಳ ಸ್ನಾನದ ಮನೆಯಲ್ಲಿ ಇರಬೇಕು. ಅರ್ಧ ಬಕೆಟ್ ನೀರಲ್ಲಿ ಗಣ್ಯರು ಸ್ನಾನ ಮಾಡುವುದು ಭಕ್ತಾದಿಗಳ ಗಮನಕ್ಕೂ ಬರುವಂತಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...