Homeಕರ್ನಾಟಕಭಕ್ತಾದಿಗಳ ಗಮನಕ್ಕೆ... ನಾಗೇಶ್ ಹೆಗಡೆಯವರ ಬರಹ

ಭಕ್ತಾದಿಗಳ ಗಮನಕ್ಕೆ… ನಾಗೇಶ್ ಹೆಗಡೆಯವರ ಬರಹ

ನೀರಿನ ಮಿತಬಳಕೆ ಮತ್ತು ಮರುಬಳಕೆಯ ಕುರಿತು ಇಲ್ಲಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ.

- Advertisement -
- Advertisement -

ಧರ್ಮಸ್ಥಳದ ‘ಖಾವಂದರು’ ಎಂದು ಭಕ್ತಾದಿಗಳಿಂದ ಕರೆಸಿಕೊಳ್ಳುವ ವೀರೇಂದ್ರ ಹೆಗ್ಗಡೆಯವರು, ಒಂದು ವಿಶೇಷ ಪತ್ರ ಬರೆದಿದ್ದಾರೆ. ಆ ಹಿನ್ನೆಲೆಯಲ್ಲಿ ಪತ್ರಕರ್ತ, ಪರಿಸರ ಕಾಳಜಿಯುಳ್ಳ ತಜ್ಞ ನಾಗೇಶ್ ಹೆಗಡೆಯವರು ಬರೆದಿದ್ದನ್ನು, ಬಳಸಿಕೊಳ್ಳಲು ನಮಗೆ ಅನುಮತಿ ನೀಡಿದ್ದಾರೆ.

ಭಕ್ತಾದಿಗಳ ಗಮನಕ್ಕೆ….
ತುಸು ಜಾಸ್ತಿ ಜನ ಈ ಪೋಸ್ಟ್ ನೋಡಲಿ ಎಂಬ ಉದ್ದೇಶದಿಂದ ಈ ಶಿರೋನಾಮೆ.
ಆಗಿದ್ದೇನೆಂದರೆ, ಧರ್ಮಸ್ಥಳದ ಬಳಿ ಹರಿಯುವ ನೇತ್ರಾವತಿ ನದಿಯಲ್ಲಿ ನೀರಿನ ತೀವ್ರ ಅಭಾವವಾಗಿದೆ. ಅದಕ್ಕೇ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಒಂದು ಪ್ರಕಟನೆ ಹೊರಡಿಸಿದ್ದಾರೆ. “ಆದುದರಿಂದ ಭಕ್ತಾದಿಗಳು ಮತ್ತು ಪ್ರವಾಸಿಗಳು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ಕೋರುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಇದೇ ಪ್ರಕಟನೆ ಹೀಗೆ ಇದ್ದಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು: “ಆದುದರಿಂದ ನೀರಿನ ಮಿತಬಳಕೆ ಮತ್ತು ಮರುಬಳಕೆಯ ಕುರಿತು ಇಲ್ಲಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ. ಮುಡಿ ಕೊಡುವ ಭಕ್ತರೂ ಕೇವಲ ಒಂದು ಬಕೆಟ್ ನೀರಿನಲ್ಲಿ ಸ್ನಾನ ಮಾಡಬಹುದು. ಬಳಸಿದ ನೀರನ್ನು ಮತ್ತೆ ಶುದ್ಧೀಕರಿಸಿ ಮರುಬಳಕೆ ಮಾಡುವ ವಿಧಾನಗಳನ್ನೂ ಇಲ್ಲಿ ತೋರಿಸುವ ಯೋಜನೆ ಇದೆ. ಅದು ಜಾರಿಗೆ ಬರಲು ತುಸು ತಡವಾಗಬಹುದು. ಸದ್ಯಕ್ಕೆ ನೀರನ್ನು ಮಿತವಾಗಿ ಬಳಸಲು ಬಲ್ಲವರಿಗಷ್ಟೇ ಇಲ್ಲಿ ಸ್ವಾಗತವಿದೆ’’.

ಅಭಾವದ ದಿನಗಳಲ್ಲಿ ನೀರನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿಸಿ ಹೇಳುವ ಅತ್ಯಮೂಲ್ಯ ಅವಕಾಶ ಇದಾಗಿತ್ತು. ಸರಕಾರವೇ ವಿವಿಧ ಜಿಲ್ಲೆಗಳಲ್ಲಿ ಆ ಕೆಲಸವನ್ನು ಕೈಗೊಳ್ಳಬೇಕಿತ್ತು. ಸಿಂಗಪುರದಲ್ಲಿ, ಚರಂಡಿ ನೀರನ್ನೂ ಹೇಗೆ ಶುದ್ಧೀಕರಿಸಿ ಕುಡಿಯಲು ಬಳಸುತ್ತಾರೆ, ನಮೀಬಿಯಾದ ಪ್ರವಾಸಿ ನಗರ ವಿಂಡ್ಹೋಕ್ ಮತ್ತು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಗಳಲ್ಲಿ ಜನರು ನೀರಿನ ತೀವ್ರ ಅಭಾವವನ್ನು ಹೇಗೆ ಎದುರಿಸುತ್ತಿದ್ದಾರೆ ಎಂಬುದರ ಬಗ್ಗೆ ಟಿವಿ ಚಾನೆಲ್ ಗಳಲ್ಲಿ ಪ್ರೈಮ್ ಟೈಮ್ ನಲ್ಲಿ ಸರಕಾರಿ ಖರ್ಚಿನಲ್ಲಿ ತಜ್ಞರ ಚರ್ಚೆ ಏರ್ಪಡಿಸಬಹುದಿತ್ತು. ಅಧಿಕಾರಿಗಳೇನೊ ಉಷ್ಟ್ರಪಕ್ಷಿಗಳಾಗಿದ್ದಾರೆ. ಸರಕಾರದ ಮುಖ್ಯಸ್ಥರಂತೂ ನೀರನ್ನು ಮರೆತು ಚಿನ್ನದ ರಥ, ರೆಸಾರ್ಟ್, ದೇಗುಲ, ಮಂದಿರಗಳ ಸುತ್ತು ಹೊಡೆಯುತ್ತಿದ್ದಾರೆ. ಧರ್ಮಸ್ಥಳವೂ ಈ ದಿನಗಳಲ್ಲಿ ಭಕ್ತರನ್ನು ಕೈಬಿಟ್ಟರೆ ಹೇಗೆ?

ಸುಮಾರು 25 ವರ್ಷಗಳ ಹಿಂದೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡಯವರಿಗೆ ನಾನೊಂದು ಪತ್ರ ಬರೆದಿದ್ದೆ. “ಭಕ್ತರು ತಿಂದು ಬಿಸಾಕಿದ ಊಟದ ಎಲೆಗಳ ತ್ಯಾಜ್ಯ ಹತ್ತು ಕಿಲೊಮೀಟರ್ ವರೆಗೂ ವಿಸ್ತರಿಸಿದೆ. ಅದೇ ತ್ಯಾಜ್ಯವನ್ನು ಬಯೊಡೈಜೆಸ್ಟರ್ ಮೂಲಕ ಸಂಸ್ಕರಿಸಿದರೆ ಅಡುಗೆ ಅನಿಲವೂ ಸಿಗುತ್ತದೆ, ಉತ್ತಮ ಕಾಂಪೋಸ್ಟ್ ಕೂಡ ಸಿಗುತ್ತದೆ” ಎಂದು ಅಂತರ್ದೇಶೀ ಪತ್ರದಲ್ಲಿ ಬರೆದಿದ್ದೆ. ಅದಕ್ಕೆ ಅವರು ತಕ್ಷಣ ಸ್ಪಂದಿಸಿ, “ಈ ವ್ಯವಸ್ಥೆ ಅಳವಡಿಸಲು ಸಿದ್ಧರಿದ್ದೇವೆ, ಮಾರ್ಗದರ್ಶನ ಎಲ್ಲಿ ಸಿಗುತ್ತದೆ?” ಎಂದು ನನಗೆ ಬರೆದಿದ್ದರು. ಈಗ ಅಲ್ಲಿ ತ್ಯಾಜ್ಯ ಸಂಸ್ಕರಣೆಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದೆ.

ಇದೇ ಉತ್ಸಾಹದಲ್ಲಿ ನೀರಿನ ನಿರ್ವಹಣೆಯ ತಂತ್ರಜ್ಞಾನವನ್ನೂ ಜಾರಿಗೆ ತರಬೇಕಾದ ತುರ್ತು ಅಲ್ಲಿ ಬಂದಿದೆ. ನೀರಿನ ಮಿತಬಳಕೆ, ಮರುಬಳಕೆ ಹಾಗೂ ನದಿಮರುಪೂರಣ ವ್ಯವಸ್ಥೆಯ ಪ್ರಾತ್ಯಕ್ಷಿಕೆ ನಮ್ಮ ಜನರಿಗೆ ತೀರ ಅಗತ್ಯವಾಗಿದೆ. (ದಶಕಗಳಿಂದ ಬತ್ತಿ ಹೋಗಿದ್ದ ನದಿಯನ್ನು ಮತ್ತೆ ಸಜೀವಗೊಳಿಸಿದ ಉದಾಹರಣೆ ರಾಜಸ್ತಾನದಲ್ಲಿದೆ). ಎಲ್ಲಕ್ಕಿಂತ ಮುಖ್ಯವಾಗಿ ನೇತ್ರಾವತಿಯ ನದಿಯನ್ನು ತಿರುಗಿಸುವ (ಎತ್ತಿನ ಹೊಳೆ) ಯೋಜನೆಯ ಭವಿಷ್ಯದ ಫಲಾನುಭವಿಗಳೆನಿಸಿದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ಭಕ್ತರಿಗೆ ಧರ್ಮಸ್ಥಳದಲ್ಲಿ ಈ ದಿನಗಳಲ್ಲೇ ನೀರಿನ ಮಿತಬಳಕೆಯ ಪ್ರಾತ್ಯಕ್ಷಿಕೆ ಕೊಡುವುದು ಒಳ್ಳೆಯದು!

ಹರಕೆ, ಪೂಜೆಗೆಂದು ಬರುವ ಎಮ್ಮೆಲ್ಲೆ, ಎಂಪಿ, ಮಂತ್ರಿಗಣಕ್ಕೆ ಕಡ್ಡಾಯವಾಗಿ ಇಂಥ ಪ್ರಾತ್ಯಕ್ಷಿಕೆಗಳನ್ನು ಮೊದಲು ತೋರಿಸಿ ಆಮೇಲೆ ದೇವರ ದರ್ಶನ ಮಾಡಿಸಬೇಕು. ನೇತ್ರಾವತಿ ನದಿಮೂಲವನ್ನು ದುಃಸ್ಥಿತಿಗೆ ತಂದ ಮರಳು ಗಣಿಗಾರಿಕೆ, ಹೆದ್ದಾರಿ ವಿಸ್ತರಣೆ, ಅರಣ್ಯನಾಶಗಳ ದೊಡ್ಡ ದೊಡ್ಡ ಚಿತ್ರಗಳು ಮಂತ್ರಿಗಳ ಸ್ನಾನದ ಮನೆಯಲ್ಲಿ ಇರಬೇಕು. ಅರ್ಧ ಬಕೆಟ್ ನೀರಲ್ಲಿ ಗಣ್ಯರು ಸ್ನಾನ ಮಾಡುವುದು ಭಕ್ತಾದಿಗಳ ಗಮನಕ್ಕೂ ಬರುವಂತಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...