Homeಕರ್ನಾಟಕಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಇದೀಗ "ಹಿಂದಿ ಗೊತ್ತಿಲ್ಲ ಹೋಗೋ" ಮತ್ತು "ಕೇಂದ್ರ ಸರ್ಕಾರದ ಸೇವೆಗಳು ಕನ್ನಡದಲ್ಲೇ ಸಿಗಬೇಕು" ಎಂದು ಒತ್ತಾಯಿಸುವ #ServeInMyLanguage ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ಲ್ಲಿ ಮೊದಲ ಸ್ಥಾನದಲ್ಲಿದೆ.

- Advertisement -
- Advertisement -

ಹಿಂದಿ ದಿವಸ್‌ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ಸರ್ಕಾರದ ಸೇವೆ ನಮ್ಮ ಭಾಷೆಯಲ್ಲಿಯೇ ಇರಲಿ ಎಂದು ಆಗ್ರಹಿಸಿ #ServeInMyLanguage ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡ್ ಆಗುತ್ತಿದ್ದು, ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.

ಸೆಪ್ಟೆಂಬರ್‌ 14 ರಂದು ದೇಶದಾದ್ಯಂತ ಹಿಂದಿ ದಿನ ಆಚರಣೆ ಮಾಡಲಾಗುತ್ತಿದ್ದು, ನಿನ್ನೆ ’ಆ ದಿನಗಳು’ ಖ್ಯಾತಿಯ ನಟ ಚೇತನ್‌ “ಹಿಂದಿ ಗೊತ್ತಿಲ್ಲ ಹೋಗೋ” ಎಂಬ ಅಭಿಯಾನವನ್ನು ದ್ರಾವಿಡ ಆರ್ಮಿ ಸಂಘಟನೆಯ ನೇತೃತ್ವದಲ್ಲಿ ಪ್ರಾರಂಭಿಸಿದ್ದರು. ತಮಿಳು ನಾಡಿನಲ್ಲೂ ಚಿತ್ರ ಕಲಾವಿದರು “ಹಿಂದಿ ತೆರಿಯಾದ್ ಪೋಡಾ” ಅಭಿಯಾನವನ್ನು ಟ್ವಿಟ್ಟರ್‌ ಟ್ರೆಂಡ್ ಮಾಡಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇದೀಗ “ಹಿಂದಿ ಗೊತ್ತಿಲ್ಲ ಹೋಗೋ” ಮತ್ತು “ಕೇಂದ್ರ ಸರ್ಕಾರದ ಸೇವೆಗಳು ಕನ್ನಡದಲ್ಲೇ ಸಿಗಬೇಕು” ಎಂದು ಒತ್ತಾಯಿಸುವ #ServeInMyLanguage ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ಲ್ಲಿ ಮೊದಲ ಸ್ಥಾನದಲ್ಲಿದೆ.

ಕೇಂದ್ರ ಸರ್ಕಾರವೇ ಹಿಂದಿ ದಿನಕ್ಕೆ ಸಂಬಂಧಿಸಿದಂತೆ ಅನೇಕ ವಿಶೇಷ ಕಾರ್ಯಕ್ರಮಗಳನ್ನೂ ಆಯೋಜಿಸುತ್ತದೆ. ಆದರೆ, ಕರ್ನಾಟಕದಲ್ಲಿ ಇತ್ತೀಚೆಗೆ ಹಿಂದಿ ದಿನದ ವಿರುದ್ಧ ಅಪಸ್ವರಗಳು ಹಾಗೂ ಭಾರೀ ವಿರೋಧಗಳು ಕೇಳಿ ಬರುತ್ತಿವೆ. ಅಲ್ಲದೆ, ಹಲವಾರು ಹೋರಾಟಗಾರರು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಘೋಷಣೆಗಳಿಗೆ ಭಾರೀ ಜನಪ್ರಿಯತೆಯನ್ನೂ ತಂದುಕೊಡುವ ಮೂಲಕ ವಿಶೇಷವಾದ ಹೋರಾಟದ ಕಣವೊಂದನ್ನು ರೂಪಿಸಿದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಈ ಹಿನ್ನೆಲೆಯಲ್ಲಿ ಹಿಂದಿ ಭಾಷೆ ಹೇರಿಕೆಯ ವಿರುದ್ಧ ಕನ್ನಡಿಗರಲ್ಲಿ ಜನಾಭಿಪ್ರಾಯ ಮೂಡಿದ್ದು ಪರಿಣಾಮ ಇಂದು #ServeInMyLanguage ಎಂಬ ಹ್ಯಾಷ್ ಟ್ಯಾಗ್ ಅನ್ನು ಟ್ರೆಂಡಿಂಗ್ ಮಾಡುವ ಮೂಲಕ ಕನ್ನಡಿಗರು ಒಗ್ಗಟ್ಟಾಗಿ ಹಿಂದಿ ದಿವಸ್ ಅನ್ನು ವಿರೋಧಿಸಿದ್ದಾರೆ.

ಈ ಕುರಿತ ಮಾಹಿತಿಯನ್ನು ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಅರುಣ್ ಜಾವಗಲ್ ಎಂಬವರು, “ಕನ್ನಡದಲ್ಲಿ ಕೇಂದ್ರ ಸರಕಾರದ ಸೇವೆಗಳು ಸಿಗಬೇಕೆಂದು ಒತ್ತಾಯಿಸುವ #ServeInMyLanguage ಕಳೆದ 2-3 ಗಂಟೆಯಿಂದ trend ಆಗುತ್ತಿದೆ.” ಎಂದು ತಿಳಿಸಿದ್ದಾರೆ.

“ಮತ್ತೊಂದು ಟ್ವೀಟ್ ನಲ್ಲಿ ಕನ್ನಡ-ಕರ್ನಾಟಕ-ಕನ್ನಡಿಗರ ಉದ್ಯೋಗ/ತೆರಿಗೆ ಹಂಚಿಕೆ/ಭಾಷಾ ಹೇರಿಕೆ ಸಮಸ್ಯೆಗಳು ರಾಜಕೀಯ ಸಮಸ್ಯೆಗಳಾಗಬೇಕು, ಚುನಾವಣೆಯ ವಿಚಾರವಾಗಬೇಕು, ಸಮಸ್ಯೆಗಳ ಬಗ್ಗೆ ರಾಜಕೀಯ ಪಕ್ಷಗಳು ಮಾತನಾಡುವಂತೆ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ತಮಿಳುನಾಡಿನ 2003 ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ಬಿ. ಬಾಲಮುರುಗನ್ ಕೇಂದ್ರ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಗೆ ಆಗಸ್ಟ್ 09 ರಂದು ಬರೆದಿರುವ ಪತ್ರದಲ್ಲಿ, “ಹಿಂದಿ ಸೆಲ್‌ನಲ್ಲಿ ಕೆಲಸದ ಅಧಿಕೃತ ಸಂವಹನ ಭಾಷೆ ಹಿಂದಿ. ಅಧಿಕೃತವಾಗಿ ಎಲ್ಲಾ ಅಧಿಕಾರಿಗಳು ಹಿಂದಿ ಭಾಷೆಯನ್ನೇ ಬಳಸಬೇಕು ಮತ್ತು ಈ ಭಾಷೆಯಲ್ಲೇ ಮೇಲ್ವಿಚಾರಣೆ ಮಾಡಬೇಕು. ಆದರೆ, ನನಗೆ ಹಿಂದಿಯಲ್ಲಿ ABCD ಯೂ ಗೊತ್ತಿಲ್ಲ. ಹಾಗಾಗಿ ಹಿಂದಿ ಸೆಲ್‌ನಲ್ಲಿ ಕೆಲಸ ಮಾಡಲು ಆಸಕ್ತಿ ಇಲ್ಲ” ಎಂದು ಪತ್ರ ಬರೆದಿದ್ದು ರಾಷ್ಟ್ರ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿತ್ತು.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...