Homeಕರ್ನಾಟಕಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಇದೀಗ "ಹಿಂದಿ ಗೊತ್ತಿಲ್ಲ ಹೋಗೋ" ಮತ್ತು "ಕೇಂದ್ರ ಸರ್ಕಾರದ ಸೇವೆಗಳು ಕನ್ನಡದಲ್ಲೇ ಸಿಗಬೇಕು" ಎಂದು ಒತ್ತಾಯಿಸುವ #ServeInMyLanguage ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ಲ್ಲಿ ಮೊದಲ ಸ್ಥಾನದಲ್ಲಿದೆ.

- Advertisement -
- Advertisement -

ಹಿಂದಿ ದಿವಸ್‌ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ಸರ್ಕಾರದ ಸೇವೆ ನಮ್ಮ ಭಾಷೆಯಲ್ಲಿಯೇ ಇರಲಿ ಎಂದು ಆಗ್ರಹಿಸಿ #ServeInMyLanguage ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡ್ ಆಗುತ್ತಿದ್ದು, ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.

ಸೆಪ್ಟೆಂಬರ್‌ 14 ರಂದು ದೇಶದಾದ್ಯಂತ ಹಿಂದಿ ದಿನ ಆಚರಣೆ ಮಾಡಲಾಗುತ್ತಿದ್ದು, ನಿನ್ನೆ ’ಆ ದಿನಗಳು’ ಖ್ಯಾತಿಯ ನಟ ಚೇತನ್‌ “ಹಿಂದಿ ಗೊತ್ತಿಲ್ಲ ಹೋಗೋ” ಎಂಬ ಅಭಿಯಾನವನ್ನು ದ್ರಾವಿಡ ಆರ್ಮಿ ಸಂಘಟನೆಯ ನೇತೃತ್ವದಲ್ಲಿ ಪ್ರಾರಂಭಿಸಿದ್ದರು. ತಮಿಳು ನಾಡಿನಲ್ಲೂ ಚಿತ್ರ ಕಲಾವಿದರು “ಹಿಂದಿ ತೆರಿಯಾದ್ ಪೋಡಾ” ಅಭಿಯಾನವನ್ನು ಟ್ವಿಟ್ಟರ್‌ ಟ್ರೆಂಡ್ ಮಾಡಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇದೀಗ “ಹಿಂದಿ ಗೊತ್ತಿಲ್ಲ ಹೋಗೋ” ಮತ್ತು “ಕೇಂದ್ರ ಸರ್ಕಾರದ ಸೇವೆಗಳು ಕನ್ನಡದಲ್ಲೇ ಸಿಗಬೇಕು” ಎಂದು ಒತ್ತಾಯಿಸುವ #ServeInMyLanguage ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ಲ್ಲಿ ಮೊದಲ ಸ್ಥಾನದಲ್ಲಿದೆ.

ಕೇಂದ್ರ ಸರ್ಕಾರವೇ ಹಿಂದಿ ದಿನಕ್ಕೆ ಸಂಬಂಧಿಸಿದಂತೆ ಅನೇಕ ವಿಶೇಷ ಕಾರ್ಯಕ್ರಮಗಳನ್ನೂ ಆಯೋಜಿಸುತ್ತದೆ. ಆದರೆ, ಕರ್ನಾಟಕದಲ್ಲಿ ಇತ್ತೀಚೆಗೆ ಹಿಂದಿ ದಿನದ ವಿರುದ್ಧ ಅಪಸ್ವರಗಳು ಹಾಗೂ ಭಾರೀ ವಿರೋಧಗಳು ಕೇಳಿ ಬರುತ್ತಿವೆ. ಅಲ್ಲದೆ, ಹಲವಾರು ಹೋರಾಟಗಾರರು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಘೋಷಣೆಗಳಿಗೆ ಭಾರೀ ಜನಪ್ರಿಯತೆಯನ್ನೂ ತಂದುಕೊಡುವ ಮೂಲಕ ವಿಶೇಷವಾದ ಹೋರಾಟದ ಕಣವೊಂದನ್ನು ರೂಪಿಸಿದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಈ ಹಿನ್ನೆಲೆಯಲ್ಲಿ ಹಿಂದಿ ಭಾಷೆ ಹೇರಿಕೆಯ ವಿರುದ್ಧ ಕನ್ನಡಿಗರಲ್ಲಿ ಜನಾಭಿಪ್ರಾಯ ಮೂಡಿದ್ದು ಪರಿಣಾಮ ಇಂದು #ServeInMyLanguage ಎಂಬ ಹ್ಯಾಷ್ ಟ್ಯಾಗ್ ಅನ್ನು ಟ್ರೆಂಡಿಂಗ್ ಮಾಡುವ ಮೂಲಕ ಕನ್ನಡಿಗರು ಒಗ್ಗಟ್ಟಾಗಿ ಹಿಂದಿ ದಿವಸ್ ಅನ್ನು ವಿರೋಧಿಸಿದ್ದಾರೆ.

ಈ ಕುರಿತ ಮಾಹಿತಿಯನ್ನು ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಅರುಣ್ ಜಾವಗಲ್ ಎಂಬವರು, “ಕನ್ನಡದಲ್ಲಿ ಕೇಂದ್ರ ಸರಕಾರದ ಸೇವೆಗಳು ಸಿಗಬೇಕೆಂದು ಒತ್ತಾಯಿಸುವ #ServeInMyLanguage ಕಳೆದ 2-3 ಗಂಟೆಯಿಂದ trend ಆಗುತ್ತಿದೆ.” ಎಂದು ತಿಳಿಸಿದ್ದಾರೆ.

“ಮತ್ತೊಂದು ಟ್ವೀಟ್ ನಲ್ಲಿ ಕನ್ನಡ-ಕರ್ನಾಟಕ-ಕನ್ನಡಿಗರ ಉದ್ಯೋಗ/ತೆರಿಗೆ ಹಂಚಿಕೆ/ಭಾಷಾ ಹೇರಿಕೆ ಸಮಸ್ಯೆಗಳು ರಾಜಕೀಯ ಸಮಸ್ಯೆಗಳಾಗಬೇಕು, ಚುನಾವಣೆಯ ವಿಚಾರವಾಗಬೇಕು, ಸಮಸ್ಯೆಗಳ ಬಗ್ಗೆ ರಾಜಕೀಯ ಪಕ್ಷಗಳು ಮಾತನಾಡುವಂತೆ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ತಮಿಳುನಾಡಿನ 2003 ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ಬಿ. ಬಾಲಮುರುಗನ್ ಕೇಂದ್ರ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಗೆ ಆಗಸ್ಟ್ 09 ರಂದು ಬರೆದಿರುವ ಪತ್ರದಲ್ಲಿ, “ಹಿಂದಿ ಸೆಲ್‌ನಲ್ಲಿ ಕೆಲಸದ ಅಧಿಕೃತ ಸಂವಹನ ಭಾಷೆ ಹಿಂದಿ. ಅಧಿಕೃತವಾಗಿ ಎಲ್ಲಾ ಅಧಿಕಾರಿಗಳು ಹಿಂದಿ ಭಾಷೆಯನ್ನೇ ಬಳಸಬೇಕು ಮತ್ತು ಈ ಭಾಷೆಯಲ್ಲೇ ಮೇಲ್ವಿಚಾರಣೆ ಮಾಡಬೇಕು. ಆದರೆ, ನನಗೆ ಹಿಂದಿಯಲ್ಲಿ ABCD ಯೂ ಗೊತ್ತಿಲ್ಲ. ಹಾಗಾಗಿ ಹಿಂದಿ ಸೆಲ್‌ನಲ್ಲಿ ಕೆಲಸ ಮಾಡಲು ಆಸಕ್ತಿ ಇಲ್ಲ” ಎಂದು ಪತ್ರ ಬರೆದಿದ್ದು ರಾಷ್ಟ್ರ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿತ್ತು.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...