Homeಕರ್ನಾಟಕಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಇದೀಗ "ಹಿಂದಿ ಗೊತ್ತಿಲ್ಲ ಹೋಗೋ" ಮತ್ತು "ಕೇಂದ್ರ ಸರ್ಕಾರದ ಸೇವೆಗಳು ಕನ್ನಡದಲ್ಲೇ ಸಿಗಬೇಕು" ಎಂದು ಒತ್ತಾಯಿಸುವ #ServeInMyLanguage ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ಲ್ಲಿ ಮೊದಲ ಸ್ಥಾನದಲ್ಲಿದೆ.

- Advertisement -
- Advertisement -

ಹಿಂದಿ ದಿವಸ್‌ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ಸರ್ಕಾರದ ಸೇವೆ ನಮ್ಮ ಭಾಷೆಯಲ್ಲಿಯೇ ಇರಲಿ ಎಂದು ಆಗ್ರಹಿಸಿ #ServeInMyLanguage ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡ್ ಆಗುತ್ತಿದ್ದು, ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.

ಸೆಪ್ಟೆಂಬರ್‌ 14 ರಂದು ದೇಶದಾದ್ಯಂತ ಹಿಂದಿ ದಿನ ಆಚರಣೆ ಮಾಡಲಾಗುತ್ತಿದ್ದು, ನಿನ್ನೆ ’ಆ ದಿನಗಳು’ ಖ್ಯಾತಿಯ ನಟ ಚೇತನ್‌ “ಹಿಂದಿ ಗೊತ್ತಿಲ್ಲ ಹೋಗೋ” ಎಂಬ ಅಭಿಯಾನವನ್ನು ದ್ರಾವಿಡ ಆರ್ಮಿ ಸಂಘಟನೆಯ ನೇತೃತ್ವದಲ್ಲಿ ಪ್ರಾರಂಭಿಸಿದ್ದರು. ತಮಿಳು ನಾಡಿನಲ್ಲೂ ಚಿತ್ರ ಕಲಾವಿದರು “ಹಿಂದಿ ತೆರಿಯಾದ್ ಪೋಡಾ” ಅಭಿಯಾನವನ್ನು ಟ್ವಿಟ್ಟರ್‌ ಟ್ರೆಂಡ್ ಮಾಡಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇದೀಗ “ಹಿಂದಿ ಗೊತ್ತಿಲ್ಲ ಹೋಗೋ” ಮತ್ತು “ಕೇಂದ್ರ ಸರ್ಕಾರದ ಸೇವೆಗಳು ಕನ್ನಡದಲ್ಲೇ ಸಿಗಬೇಕು” ಎಂದು ಒತ್ತಾಯಿಸುವ #ServeInMyLanguage ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ಲ್ಲಿ ಮೊದಲ ಸ್ಥಾನದಲ್ಲಿದೆ.

ಕೇಂದ್ರ ಸರ್ಕಾರವೇ ಹಿಂದಿ ದಿನಕ್ಕೆ ಸಂಬಂಧಿಸಿದಂತೆ ಅನೇಕ ವಿಶೇಷ ಕಾರ್ಯಕ್ರಮಗಳನ್ನೂ ಆಯೋಜಿಸುತ್ತದೆ. ಆದರೆ, ಕರ್ನಾಟಕದಲ್ಲಿ ಇತ್ತೀಚೆಗೆ ಹಿಂದಿ ದಿನದ ವಿರುದ್ಧ ಅಪಸ್ವರಗಳು ಹಾಗೂ ಭಾರೀ ವಿರೋಧಗಳು ಕೇಳಿ ಬರುತ್ತಿವೆ. ಅಲ್ಲದೆ, ಹಲವಾರು ಹೋರಾಟಗಾರರು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಘೋಷಣೆಗಳಿಗೆ ಭಾರೀ ಜನಪ್ರಿಯತೆಯನ್ನೂ ತಂದುಕೊಡುವ ಮೂಲಕ ವಿಶೇಷವಾದ ಹೋರಾಟದ ಕಣವೊಂದನ್ನು ರೂಪಿಸಿದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಈ ಹಿನ್ನೆಲೆಯಲ್ಲಿ ಹಿಂದಿ ಭಾಷೆ ಹೇರಿಕೆಯ ವಿರುದ್ಧ ಕನ್ನಡಿಗರಲ್ಲಿ ಜನಾಭಿಪ್ರಾಯ ಮೂಡಿದ್ದು ಪರಿಣಾಮ ಇಂದು #ServeInMyLanguage ಎಂಬ ಹ್ಯಾಷ್ ಟ್ಯಾಗ್ ಅನ್ನು ಟ್ರೆಂಡಿಂಗ್ ಮಾಡುವ ಮೂಲಕ ಕನ್ನಡಿಗರು ಒಗ್ಗಟ್ಟಾಗಿ ಹಿಂದಿ ದಿವಸ್ ಅನ್ನು ವಿರೋಧಿಸಿದ್ದಾರೆ.

ಈ ಕುರಿತ ಮಾಹಿತಿಯನ್ನು ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಅರುಣ್ ಜಾವಗಲ್ ಎಂಬವರು, “ಕನ್ನಡದಲ್ಲಿ ಕೇಂದ್ರ ಸರಕಾರದ ಸೇವೆಗಳು ಸಿಗಬೇಕೆಂದು ಒತ್ತಾಯಿಸುವ #ServeInMyLanguage ಕಳೆದ 2-3 ಗಂಟೆಯಿಂದ trend ಆಗುತ್ತಿದೆ.” ಎಂದು ತಿಳಿಸಿದ್ದಾರೆ.

“ಮತ್ತೊಂದು ಟ್ವೀಟ್ ನಲ್ಲಿ ಕನ್ನಡ-ಕರ್ನಾಟಕ-ಕನ್ನಡಿಗರ ಉದ್ಯೋಗ/ತೆರಿಗೆ ಹಂಚಿಕೆ/ಭಾಷಾ ಹೇರಿಕೆ ಸಮಸ್ಯೆಗಳು ರಾಜಕೀಯ ಸಮಸ್ಯೆಗಳಾಗಬೇಕು, ಚುನಾವಣೆಯ ವಿಚಾರವಾಗಬೇಕು, ಸಮಸ್ಯೆಗಳ ಬಗ್ಗೆ ರಾಜಕೀಯ ಪಕ್ಷಗಳು ಮಾತನಾಡುವಂತೆ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ತಮಿಳುನಾಡಿನ 2003 ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ಬಿ. ಬಾಲಮುರುಗನ್ ಕೇಂದ್ರ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಗೆ ಆಗಸ್ಟ್ 09 ರಂದು ಬರೆದಿರುವ ಪತ್ರದಲ್ಲಿ, “ಹಿಂದಿ ಸೆಲ್‌ನಲ್ಲಿ ಕೆಲಸದ ಅಧಿಕೃತ ಸಂವಹನ ಭಾಷೆ ಹಿಂದಿ. ಅಧಿಕೃತವಾಗಿ ಎಲ್ಲಾ ಅಧಿಕಾರಿಗಳು ಹಿಂದಿ ಭಾಷೆಯನ್ನೇ ಬಳಸಬೇಕು ಮತ್ತು ಈ ಭಾಷೆಯಲ್ಲೇ ಮೇಲ್ವಿಚಾರಣೆ ಮಾಡಬೇಕು. ಆದರೆ, ನನಗೆ ಹಿಂದಿಯಲ್ಲಿ ABCD ಯೂ ಗೊತ್ತಿಲ್ಲ. ಹಾಗಾಗಿ ಹಿಂದಿ ಸೆಲ್‌ನಲ್ಲಿ ಕೆಲಸ ಮಾಡಲು ಆಸಕ್ತಿ ಇಲ್ಲ” ಎಂದು ಪತ್ರ ಬರೆದಿದ್ದು ರಾಷ್ಟ್ರ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿತ್ತು.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...