Homeಕರ್ನಾಟಕಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಇದೀಗ "ಹಿಂದಿ ಗೊತ್ತಿಲ್ಲ ಹೋಗೋ" ಮತ್ತು "ಕೇಂದ್ರ ಸರ್ಕಾರದ ಸೇವೆಗಳು ಕನ್ನಡದಲ್ಲೇ ಸಿಗಬೇಕು" ಎಂದು ಒತ್ತಾಯಿಸುವ #ServeInMyLanguage ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ಲ್ಲಿ ಮೊದಲ ಸ್ಥಾನದಲ್ಲಿದೆ.

- Advertisement -
- Advertisement -

ಹಿಂದಿ ದಿವಸ್‌ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ಸರ್ಕಾರದ ಸೇವೆ ನಮ್ಮ ಭಾಷೆಯಲ್ಲಿಯೇ ಇರಲಿ ಎಂದು ಆಗ್ರಹಿಸಿ #ServeInMyLanguage ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡ್ ಆಗುತ್ತಿದ್ದು, ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.

ಸೆಪ್ಟೆಂಬರ್‌ 14 ರಂದು ದೇಶದಾದ್ಯಂತ ಹಿಂದಿ ದಿನ ಆಚರಣೆ ಮಾಡಲಾಗುತ್ತಿದ್ದು, ನಿನ್ನೆ ’ಆ ದಿನಗಳು’ ಖ್ಯಾತಿಯ ನಟ ಚೇತನ್‌ “ಹಿಂದಿ ಗೊತ್ತಿಲ್ಲ ಹೋಗೋ” ಎಂಬ ಅಭಿಯಾನವನ್ನು ದ್ರಾವಿಡ ಆರ್ಮಿ ಸಂಘಟನೆಯ ನೇತೃತ್ವದಲ್ಲಿ ಪ್ರಾರಂಭಿಸಿದ್ದರು. ತಮಿಳು ನಾಡಿನಲ್ಲೂ ಚಿತ್ರ ಕಲಾವಿದರು “ಹಿಂದಿ ತೆರಿಯಾದ್ ಪೋಡಾ” ಅಭಿಯಾನವನ್ನು ಟ್ವಿಟ್ಟರ್‌ ಟ್ರೆಂಡ್ ಮಾಡಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇದೀಗ “ಹಿಂದಿ ಗೊತ್ತಿಲ್ಲ ಹೋಗೋ” ಮತ್ತು “ಕೇಂದ್ರ ಸರ್ಕಾರದ ಸೇವೆಗಳು ಕನ್ನಡದಲ್ಲೇ ಸಿಗಬೇಕು” ಎಂದು ಒತ್ತಾಯಿಸುವ #ServeInMyLanguage ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ಲ್ಲಿ ಮೊದಲ ಸ್ಥಾನದಲ್ಲಿದೆ.

ಕೇಂದ್ರ ಸರ್ಕಾರವೇ ಹಿಂದಿ ದಿನಕ್ಕೆ ಸಂಬಂಧಿಸಿದಂತೆ ಅನೇಕ ವಿಶೇಷ ಕಾರ್ಯಕ್ರಮಗಳನ್ನೂ ಆಯೋಜಿಸುತ್ತದೆ. ಆದರೆ, ಕರ್ನಾಟಕದಲ್ಲಿ ಇತ್ತೀಚೆಗೆ ಹಿಂದಿ ದಿನದ ವಿರುದ್ಧ ಅಪಸ್ವರಗಳು ಹಾಗೂ ಭಾರೀ ವಿರೋಧಗಳು ಕೇಳಿ ಬರುತ್ತಿವೆ. ಅಲ್ಲದೆ, ಹಲವಾರು ಹೋರಾಟಗಾರರು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಘೋಷಣೆಗಳಿಗೆ ಭಾರೀ ಜನಪ್ರಿಯತೆಯನ್ನೂ ತಂದುಕೊಡುವ ಮೂಲಕ ವಿಶೇಷವಾದ ಹೋರಾಟದ ಕಣವೊಂದನ್ನು ರೂಪಿಸಿದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಈ ಹಿನ್ನೆಲೆಯಲ್ಲಿ ಹಿಂದಿ ಭಾಷೆ ಹೇರಿಕೆಯ ವಿರುದ್ಧ ಕನ್ನಡಿಗರಲ್ಲಿ ಜನಾಭಿಪ್ರಾಯ ಮೂಡಿದ್ದು ಪರಿಣಾಮ ಇಂದು #ServeInMyLanguage ಎಂಬ ಹ್ಯಾಷ್ ಟ್ಯಾಗ್ ಅನ್ನು ಟ್ರೆಂಡಿಂಗ್ ಮಾಡುವ ಮೂಲಕ ಕನ್ನಡಿಗರು ಒಗ್ಗಟ್ಟಾಗಿ ಹಿಂದಿ ದಿವಸ್ ಅನ್ನು ವಿರೋಧಿಸಿದ್ದಾರೆ.

ಈ ಕುರಿತ ಮಾಹಿತಿಯನ್ನು ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಅರುಣ್ ಜಾವಗಲ್ ಎಂಬವರು, “ಕನ್ನಡದಲ್ಲಿ ಕೇಂದ್ರ ಸರಕಾರದ ಸೇವೆಗಳು ಸಿಗಬೇಕೆಂದು ಒತ್ತಾಯಿಸುವ #ServeInMyLanguage ಕಳೆದ 2-3 ಗಂಟೆಯಿಂದ trend ಆಗುತ್ತಿದೆ.” ಎಂದು ತಿಳಿಸಿದ್ದಾರೆ.

“ಮತ್ತೊಂದು ಟ್ವೀಟ್ ನಲ್ಲಿ ಕನ್ನಡ-ಕರ್ನಾಟಕ-ಕನ್ನಡಿಗರ ಉದ್ಯೋಗ/ತೆರಿಗೆ ಹಂಚಿಕೆ/ಭಾಷಾ ಹೇರಿಕೆ ಸಮಸ್ಯೆಗಳು ರಾಜಕೀಯ ಸಮಸ್ಯೆಗಳಾಗಬೇಕು, ಚುನಾವಣೆಯ ವಿಚಾರವಾಗಬೇಕು, ಸಮಸ್ಯೆಗಳ ಬಗ್ಗೆ ರಾಜಕೀಯ ಪಕ್ಷಗಳು ಮಾತನಾಡುವಂತೆ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ತಮಿಳುನಾಡಿನ 2003 ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ಬಿ. ಬಾಲಮುರುಗನ್ ಕೇಂದ್ರ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಗೆ ಆಗಸ್ಟ್ 09 ರಂದು ಬರೆದಿರುವ ಪತ್ರದಲ್ಲಿ, “ಹಿಂದಿ ಸೆಲ್‌ನಲ್ಲಿ ಕೆಲಸದ ಅಧಿಕೃತ ಸಂವಹನ ಭಾಷೆ ಹಿಂದಿ. ಅಧಿಕೃತವಾಗಿ ಎಲ್ಲಾ ಅಧಿಕಾರಿಗಳು ಹಿಂದಿ ಭಾಷೆಯನ್ನೇ ಬಳಸಬೇಕು ಮತ್ತು ಈ ಭಾಷೆಯಲ್ಲೇ ಮೇಲ್ವಿಚಾರಣೆ ಮಾಡಬೇಕು. ಆದರೆ, ನನಗೆ ಹಿಂದಿಯಲ್ಲಿ ABCD ಯೂ ಗೊತ್ತಿಲ್ಲ. ಹಾಗಾಗಿ ಹಿಂದಿ ಸೆಲ್‌ನಲ್ಲಿ ಕೆಲಸ ಮಾಡಲು ಆಸಕ್ತಿ ಇಲ್ಲ” ಎಂದು ಪತ್ರ ಬರೆದಿದ್ದು ರಾಷ್ಟ್ರ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿತ್ತು.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...