Homeಕರ್ನಾಟಕಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಇದೀಗ "ಹಿಂದಿ ಗೊತ್ತಿಲ್ಲ ಹೋಗೋ" ಮತ್ತು "ಕೇಂದ್ರ ಸರ್ಕಾರದ ಸೇವೆಗಳು ಕನ್ನಡದಲ್ಲೇ ಸಿಗಬೇಕು" ಎಂದು ಒತ್ತಾಯಿಸುವ #ServeInMyLanguage ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ಲ್ಲಿ ಮೊದಲ ಸ್ಥಾನದಲ್ಲಿದೆ.

- Advertisement -
- Advertisement -

ಹಿಂದಿ ದಿವಸ್‌ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ಸರ್ಕಾರದ ಸೇವೆ ನಮ್ಮ ಭಾಷೆಯಲ್ಲಿಯೇ ಇರಲಿ ಎಂದು ಆಗ್ರಹಿಸಿ #ServeInMyLanguage ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡ್ ಆಗುತ್ತಿದ್ದು, ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.

ಸೆಪ್ಟೆಂಬರ್‌ 14 ರಂದು ದೇಶದಾದ್ಯಂತ ಹಿಂದಿ ದಿನ ಆಚರಣೆ ಮಾಡಲಾಗುತ್ತಿದ್ದು, ನಿನ್ನೆ ’ಆ ದಿನಗಳು’ ಖ್ಯಾತಿಯ ನಟ ಚೇತನ್‌ “ಹಿಂದಿ ಗೊತ್ತಿಲ್ಲ ಹೋಗೋ” ಎಂಬ ಅಭಿಯಾನವನ್ನು ದ್ರಾವಿಡ ಆರ್ಮಿ ಸಂಘಟನೆಯ ನೇತೃತ್ವದಲ್ಲಿ ಪ್ರಾರಂಭಿಸಿದ್ದರು. ತಮಿಳು ನಾಡಿನಲ್ಲೂ ಚಿತ್ರ ಕಲಾವಿದರು “ಹಿಂದಿ ತೆರಿಯಾದ್ ಪೋಡಾ” ಅಭಿಯಾನವನ್ನು ಟ್ವಿಟ್ಟರ್‌ ಟ್ರೆಂಡ್ ಮಾಡಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇದೀಗ “ಹಿಂದಿ ಗೊತ್ತಿಲ್ಲ ಹೋಗೋ” ಮತ್ತು “ಕೇಂದ್ರ ಸರ್ಕಾರದ ಸೇವೆಗಳು ಕನ್ನಡದಲ್ಲೇ ಸಿಗಬೇಕು” ಎಂದು ಒತ್ತಾಯಿಸುವ #ServeInMyLanguage ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ಲ್ಲಿ ಮೊದಲ ಸ್ಥಾನದಲ್ಲಿದೆ.

ಕೇಂದ್ರ ಸರ್ಕಾರವೇ ಹಿಂದಿ ದಿನಕ್ಕೆ ಸಂಬಂಧಿಸಿದಂತೆ ಅನೇಕ ವಿಶೇಷ ಕಾರ್ಯಕ್ರಮಗಳನ್ನೂ ಆಯೋಜಿಸುತ್ತದೆ. ಆದರೆ, ಕರ್ನಾಟಕದಲ್ಲಿ ಇತ್ತೀಚೆಗೆ ಹಿಂದಿ ದಿನದ ವಿರುದ್ಧ ಅಪಸ್ವರಗಳು ಹಾಗೂ ಭಾರೀ ವಿರೋಧಗಳು ಕೇಳಿ ಬರುತ್ತಿವೆ. ಅಲ್ಲದೆ, ಹಲವಾರು ಹೋರಾಟಗಾರರು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಘೋಷಣೆಗಳಿಗೆ ಭಾರೀ ಜನಪ್ರಿಯತೆಯನ್ನೂ ತಂದುಕೊಡುವ ಮೂಲಕ ವಿಶೇಷವಾದ ಹೋರಾಟದ ಕಣವೊಂದನ್ನು ರೂಪಿಸಿದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಈ ಹಿನ್ನೆಲೆಯಲ್ಲಿ ಹಿಂದಿ ಭಾಷೆ ಹೇರಿಕೆಯ ವಿರುದ್ಧ ಕನ್ನಡಿಗರಲ್ಲಿ ಜನಾಭಿಪ್ರಾಯ ಮೂಡಿದ್ದು ಪರಿಣಾಮ ಇಂದು #ServeInMyLanguage ಎಂಬ ಹ್ಯಾಷ್ ಟ್ಯಾಗ್ ಅನ್ನು ಟ್ರೆಂಡಿಂಗ್ ಮಾಡುವ ಮೂಲಕ ಕನ್ನಡಿಗರು ಒಗ್ಗಟ್ಟಾಗಿ ಹಿಂದಿ ದಿವಸ್ ಅನ್ನು ವಿರೋಧಿಸಿದ್ದಾರೆ.

ಈ ಕುರಿತ ಮಾಹಿತಿಯನ್ನು ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಅರುಣ್ ಜಾವಗಲ್ ಎಂಬವರು, “ಕನ್ನಡದಲ್ಲಿ ಕೇಂದ್ರ ಸರಕಾರದ ಸೇವೆಗಳು ಸಿಗಬೇಕೆಂದು ಒತ್ತಾಯಿಸುವ #ServeInMyLanguage ಕಳೆದ 2-3 ಗಂಟೆಯಿಂದ trend ಆಗುತ್ತಿದೆ.” ಎಂದು ತಿಳಿಸಿದ್ದಾರೆ.

“ಮತ್ತೊಂದು ಟ್ವೀಟ್ ನಲ್ಲಿ ಕನ್ನಡ-ಕರ್ನಾಟಕ-ಕನ್ನಡಿಗರ ಉದ್ಯೋಗ/ತೆರಿಗೆ ಹಂಚಿಕೆ/ಭಾಷಾ ಹೇರಿಕೆ ಸಮಸ್ಯೆಗಳು ರಾಜಕೀಯ ಸಮಸ್ಯೆಗಳಾಗಬೇಕು, ಚುನಾವಣೆಯ ವಿಚಾರವಾಗಬೇಕು, ಸಮಸ್ಯೆಗಳ ಬಗ್ಗೆ ರಾಜಕೀಯ ಪಕ್ಷಗಳು ಮಾತನಾಡುವಂತೆ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ತಮಿಳುನಾಡಿನ 2003 ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ಬಿ. ಬಾಲಮುರುಗನ್ ಕೇಂದ್ರ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಗೆ ಆಗಸ್ಟ್ 09 ರಂದು ಬರೆದಿರುವ ಪತ್ರದಲ್ಲಿ, “ಹಿಂದಿ ಸೆಲ್‌ನಲ್ಲಿ ಕೆಲಸದ ಅಧಿಕೃತ ಸಂವಹನ ಭಾಷೆ ಹಿಂದಿ. ಅಧಿಕೃತವಾಗಿ ಎಲ್ಲಾ ಅಧಿಕಾರಿಗಳು ಹಿಂದಿ ಭಾಷೆಯನ್ನೇ ಬಳಸಬೇಕು ಮತ್ತು ಈ ಭಾಷೆಯಲ್ಲೇ ಮೇಲ್ವಿಚಾರಣೆ ಮಾಡಬೇಕು. ಆದರೆ, ನನಗೆ ಹಿಂದಿಯಲ್ಲಿ ABCD ಯೂ ಗೊತ್ತಿಲ್ಲ. ಹಾಗಾಗಿ ಹಿಂದಿ ಸೆಲ್‌ನಲ್ಲಿ ಕೆಲಸ ಮಾಡಲು ಆಸಕ್ತಿ ಇಲ್ಲ” ಎಂದು ಪತ್ರ ಬರೆದಿದ್ದು ರಾಷ್ಟ್ರ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿತ್ತು.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...