Homeಕರ್ನಾಟಕಸೆ.13 ರಿಂದ ವಿಧಾನ ಮಂಡಲ ಅಧಿವೇಶನ: ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಸಿದ್ದ

ಸೆ.13 ರಿಂದ ವಿಧಾನ ಮಂಡಲ ಅಧಿವೇಶನ: ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಸಿದ್ದ

- Advertisement -
- Advertisement -

ಕರ್ನಾಟಕ ವಿಧಾನ ಮಂಡಲ ಅಧಿವೇಶನ ಸೆಪ್ಟೆಂಬರ್‌‌ 13 ರ ಸೋಮವಾರದಂದು ಆರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಅಧಿವೇಶನ ಇದಾಗಿದೆ. ಇದೇ ವೇಳೆ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ಲಸಿಕೆ ಕೊರತೆ ಸಹಿತ ಆಡಳಿತ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷ ಕಾಂಗ್ರೆಸ್ ಸಜ್ಜಾಗಿದೆ.

ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿವಾದಾತ್ಮಕ ಹೇಳಿಕೆಗಳು ಹಾಗೂ ಅವುಗಳನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದ ಬಿಜೆಪಿ ಮುಖಂಡರ ಹೇಳಿಕೆಗಳು ಅಧಿವೇಶನದಲ್ಲಿ ಚರ್ಚೆಗೆ ಬರುವ ಸಾಧ್ಯತೆಗಳಿವೆ.

ಇದನ್ನೂ ಓದಿ: ದಲಿತ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಸೆಪ್ಟೆಂಬರ್‌ 13 ರಂದು ‘ಚಲೋ ಶ್ರೀನಿವಾಸಪುರ’ ಆಂದೋಲನ

ಜೊತೆಗೆ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ನಡೆದ ಜಾತಿ ಗಣತಿ ವರದಿ ಸುತ್ತಲೂ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಕೋವಿಡ್ ಸಾವಿನ ಕುರಿತ ಸರ್ಕಾರದ ಸುಳ್ಳು ಅಂಕಿ-ಅಂಶಗಳು. ಕೋವಿಡ್ ಸಂದರ್ಭದಲ್ಲಿ ವಿವಿಧ ಸಮುದಾಯಗಳಿಗೆ ಸರ್ಕಾರ ಘೋಷಿಸಿದ್ದ ಪರಿಹಾರ. ಅತಿವೃಷ್ಟಿ ಸಂತ್ರಸ್ತರ ಮೇಲಿನ ನಿರ್ಲಕ್ಷ್ಯ, ರಾಜ್ಯದ ಅಭಿವೃದ್ಧಿಯಲ್ಲಿ ಆಗಿರುವ ಹಿನ್ನಡೆ ಹಾಗೂ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಅಧಿವೇಶನ ಚರ್ಚೆಯಲ್ಲಿ ಮುನ್ನಲೆಗೆ ಬರಲಿವೆ ಎಂದು ಹೇಳಲಾಗುತ್ತಿದೆ.

ಅಧಿವೇಶನದಲ್ಲಿ ಜೆಡಿಎಸ್ ನಡೆ ಏನು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಸೆ.13ರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಒಕ್ಕೂಟ ಸರ್ಕಾರದ ಅನುದಾನ, ಜಿಎಸ್‍ಟಿ ಬಾಕಿ ವಿಚಾರಗಳ ಜೊತೆಗೆ ರಾಜ್ಯದ ಜ್ವಲಂತ ಸಮಸ್ಯೆಗಳು ಈ ಅಧಿವೇಶನದಲ್ಲಿ ಚರ್ಚಿಸುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಸೆಪ್ಟೆಂಬರ್‌‌ 13 ರಿಂದ ಆರಂಭವಾಗಲಿರುವ ಅಧಿವೇಶನ ಒಟ್ಟು 10 ದಿನಗಳ ಕಾಲ ನಡೆಯಲಿದ್ದು, ಸಾರ್ವಜನಿಕ ವಲಯದಲ್ಲಿ ಕುತೂಹಲ ಮತ್ತು ನಿರೀಕ್ಷೆಗಳನ್ನು ಸೃಷ್ಟಿಸಿದೆ.

“ಸೆ.13ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ಗಂಟೆಯ ವರೆಗೆ ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವೇಳೆ ಕಾನೂನು ಭಂಗವನ್ನುಂಟು ಮಾಡುವ ಉದ್ದೇಶದಿಂದ ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ನಡೆಸುವುದು, ಶಸ್ತ್ರ, ದೊಣ್ಣೆ, ಮಾರಕಾಸ್ತ್ರ ಒಯ್ಯುವುದು, ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ನಿರ್ಬಂಧಿಸಿದ್ದು, ಯಾವುದೇ ವ್ಯಕ್ತಿಗಳ ಪ್ರತಿಕೃತಿ ಪ್ರದರ್ಶನ, ಪ್ರಚೋಧನಕಾರಿ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ತಿಳಿಸಿದ್ದಾರೆ.

ಇದನ್ನೂ ಓದಿ: ನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...