Homeಕರ್ನಾಟಕಇಂದಿನಿಂದ ಅಧಿವೇಶನ ಆರಂಭ; ವಿರೋಧ ಪಕ್ಷ ನಾಯಕನ ಆಯ್ಕೆ ಇನ್ನೂ ಆಗಿಲ್ಲ

ಇಂದಿನಿಂದ ಅಧಿವೇಶನ ಆರಂಭ; ವಿರೋಧ ಪಕ್ಷ ನಾಯಕನ ಆಯ್ಕೆ ಇನ್ನೂ ಆಗಿಲ್ಲ

- Advertisement -
- Advertisement -

ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಸೋಮವಾರ (ಜುಲೈ 3) ಆರಂಭವಾಗಲಿದೆ. ಆದರೆ ಈವರೆಗೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇಲ್ಲದೇ ಇರುವ ಸ್ಥಿತಿಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಜ್ಯುದಲ್ಲಿ ಚುನಾವಣೆ ಮುಗಿದು ಎರಡು ತಿಂಗಳಾಗುತ್ತಿದ್ದರೂ ಇನ್ನೂ ಬಿಜೆಪಿ ಮಾತ್ರ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಇಂತಹದ್ದೊಂದು ಸ್ಥಿತಿ ಇತ್ತೀಚಿನ ವರ್ಷಗಳಲ್ಲಿ ಬಂದಿರಲಿಲ್ಲ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇರುವುದಿಲ್ಲ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ”ಸೋಮವಾರವೇ ಸರ್ವ ಸಮೃತವಾಗಿ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುತ್ತದೆ” ಎಂದು ಹೇಳಿದ್ದಾರೆ.

ಇಷ್ಟು ದಿನಗಳು ಕಳೆದರೂ ಬಿಜೆಪಿಗೆ ವಿರೋಧ ನಾಯಕನ ಆಯ್ಕೆ ಮಾಡಲು ಸಾಧ್ಯವಾಗದಿರುವುದಕ್ಕೆ ಕಾಮಗ್ರೆಸ್ ದಿನನಿತ್ಯ ಕಾಲೆಳೆಯುತ್ತಲೇ ಇದೆ. ಆದರೂ ಬಿಜೆಪಿಯಲ್ಲಿನ ಗೊಂದಲ ಮಾತ್ರ ಪರಿಹಾರವಾಗಿಲ್ಲ.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ಆಡಳಿತ ಪಕ್ಷವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಸಜ್ಜು

10 ದಿನಗಳ ಕಲಾಪ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್‌ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನದಲ್ಲಿ ಗೊಂದಲ, ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ ರದ್ದತಿಗೆ ಮಸೂದೆ ಮಂಡನೆ ಮತ್ತಿತರ ವಿಚಾರಗಳು ಉಭಯ ಸದನಗಳಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.

ವಿಧಾನಸಭಾಧ್ಯಕ್ಷರಾಗಿರುವ ಯುಟಿ ಖಾದರ್ ಅವರು ಅಧಿವೇಶನದ ಬಗ್ಗೆ ಮಾತನಾಡಿದ್ದು, ”ಸ್ಪೀಕರ್ ಆಗಿ ನನಗೆ ಮೊದಲ ಅಧಿವೇಶನ ಬಹಳ ಆಸಕ್ತಿಯಿಂದ ಇದ್ದೇನೆ. ಪ್ರೀತಿ ಸೌಹಾರ್ದದಿಂದ ಅಧಿವೇಶನ ನಡೆಸಬೇಕು ಅಂದುಕೊಂಡಿದ್ದೇನೆ. ಎಲ್ಲ ಶಾಸಕರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ” ಎಂದರು.

ಮಧ್ಯಾಹ್ನ 12 ಗಂಟೆಗೆ ವಿಧಾನಸಭೆಯ ಸಭಾಂಗಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆ ಮೂಲಕ, ನೂತನ ಕಾಂಗ್ರೆಸ್‌ ಸರ್ಕಾರದ ಮೊದಲ ಅಧಿವೇಶನಕ್ಕೆ ಚಾಲನೆ ಸಿಗಲಿದೆ. ಹೊಸ ಸರ್ಕಾರದ ಮುನ್ನೋಟ, ಅಭಿವೃದ್ಧಿ ಯೋಜನೆಗಳ ಜೊತೆಗೆ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ವಾಗ್ದಾನ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.

ಜುಲೈ 1ರಿಂದ ಪ್ರಶೋತ್ತರ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಸೇರಿದಂತೆ ಕಾರ್ಯಕಲಾಪಗಳು ನಡೆಯಲಿವ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಮಂಡಿಸಲಿದ್ದಾರೆ. ಆಯವ್ಯಯದ ಗಾತ್ರ ಹೆಚ್ಚಾಗಲಿದೆ ಎಂಬ ಸುಳಿವನ್ನು ಈಗಾಗಲೇ ಮುಖ್ಯಮಂತ್ರಿ ನೀಡಿರುವುದರಿಂದ, ಈ ಬಜೆಟ್‌ನಲ್ಲಿ ಐದು ‘ಗ್ಯಾರಂಟಿ’ಗಳಿಗೆ ಆರ್ಥಿಕ ಸಂಪನ್ಮೂಲ ಒದಗಿಸುವ ಬಗ್ಗೆ ಪ್ರಸ್ತಾಪಿಸುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...