Homeಕರ್ನಾಟಕಇಂದಿನಿಂದ ಅಧಿವೇಶನ ಆರಂಭ; ವಿರೋಧ ಪಕ್ಷ ನಾಯಕನ ಆಯ್ಕೆ ಇನ್ನೂ ಆಗಿಲ್ಲ

ಇಂದಿನಿಂದ ಅಧಿವೇಶನ ಆರಂಭ; ವಿರೋಧ ಪಕ್ಷ ನಾಯಕನ ಆಯ್ಕೆ ಇನ್ನೂ ಆಗಿಲ್ಲ

- Advertisement -
- Advertisement -

ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಸೋಮವಾರ (ಜುಲೈ 3) ಆರಂಭವಾಗಲಿದೆ. ಆದರೆ ಈವರೆಗೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇಲ್ಲದೇ ಇರುವ ಸ್ಥಿತಿಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಜ್ಯುದಲ್ಲಿ ಚುನಾವಣೆ ಮುಗಿದು ಎರಡು ತಿಂಗಳಾಗುತ್ತಿದ್ದರೂ ಇನ್ನೂ ಬಿಜೆಪಿ ಮಾತ್ರ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಇಂತಹದ್ದೊಂದು ಸ್ಥಿತಿ ಇತ್ತೀಚಿನ ವರ್ಷಗಳಲ್ಲಿ ಬಂದಿರಲಿಲ್ಲ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇರುವುದಿಲ್ಲ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ”ಸೋಮವಾರವೇ ಸರ್ವ ಸಮೃತವಾಗಿ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುತ್ತದೆ” ಎಂದು ಹೇಳಿದ್ದಾರೆ.

ಇಷ್ಟು ದಿನಗಳು ಕಳೆದರೂ ಬಿಜೆಪಿಗೆ ವಿರೋಧ ನಾಯಕನ ಆಯ್ಕೆ ಮಾಡಲು ಸಾಧ್ಯವಾಗದಿರುವುದಕ್ಕೆ ಕಾಮಗ್ರೆಸ್ ದಿನನಿತ್ಯ ಕಾಲೆಳೆಯುತ್ತಲೇ ಇದೆ. ಆದರೂ ಬಿಜೆಪಿಯಲ್ಲಿನ ಗೊಂದಲ ಮಾತ್ರ ಪರಿಹಾರವಾಗಿಲ್ಲ.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ಆಡಳಿತ ಪಕ್ಷವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಸಜ್ಜು

10 ದಿನಗಳ ಕಲಾಪ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್‌ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನದಲ್ಲಿ ಗೊಂದಲ, ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ ರದ್ದತಿಗೆ ಮಸೂದೆ ಮಂಡನೆ ಮತ್ತಿತರ ವಿಚಾರಗಳು ಉಭಯ ಸದನಗಳಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.

ವಿಧಾನಸಭಾಧ್ಯಕ್ಷರಾಗಿರುವ ಯುಟಿ ಖಾದರ್ ಅವರು ಅಧಿವೇಶನದ ಬಗ್ಗೆ ಮಾತನಾಡಿದ್ದು, ”ಸ್ಪೀಕರ್ ಆಗಿ ನನಗೆ ಮೊದಲ ಅಧಿವೇಶನ ಬಹಳ ಆಸಕ್ತಿಯಿಂದ ಇದ್ದೇನೆ. ಪ್ರೀತಿ ಸೌಹಾರ್ದದಿಂದ ಅಧಿವೇಶನ ನಡೆಸಬೇಕು ಅಂದುಕೊಂಡಿದ್ದೇನೆ. ಎಲ್ಲ ಶಾಸಕರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ” ಎಂದರು.

ಮಧ್ಯಾಹ್ನ 12 ಗಂಟೆಗೆ ವಿಧಾನಸಭೆಯ ಸಭಾಂಗಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆ ಮೂಲಕ, ನೂತನ ಕಾಂಗ್ರೆಸ್‌ ಸರ್ಕಾರದ ಮೊದಲ ಅಧಿವೇಶನಕ್ಕೆ ಚಾಲನೆ ಸಿಗಲಿದೆ. ಹೊಸ ಸರ್ಕಾರದ ಮುನ್ನೋಟ, ಅಭಿವೃದ್ಧಿ ಯೋಜನೆಗಳ ಜೊತೆಗೆ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ವಾಗ್ದಾನ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.

ಜುಲೈ 1ರಿಂದ ಪ್ರಶೋತ್ತರ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಸೇರಿದಂತೆ ಕಾರ್ಯಕಲಾಪಗಳು ನಡೆಯಲಿವ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಮಂಡಿಸಲಿದ್ದಾರೆ. ಆಯವ್ಯಯದ ಗಾತ್ರ ಹೆಚ್ಚಾಗಲಿದೆ ಎಂಬ ಸುಳಿವನ್ನು ಈಗಾಗಲೇ ಮುಖ್ಯಮಂತ್ರಿ ನೀಡಿರುವುದರಿಂದ, ಈ ಬಜೆಟ್‌ನಲ್ಲಿ ಐದು ‘ಗ್ಯಾರಂಟಿ’ಗಳಿಗೆ ಆರ್ಥಿಕ ಸಂಪನ್ಮೂಲ ಒದಗಿಸುವ ಬಗ್ಗೆ ಪ್ರಸ್ತಾಪಿಸುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...