Homeದಲಿತ್ ಫೈಲ್ಸ್ದೊಡ್ಡಬಳ್ಳಾಪುರ: ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಆರೋಪಿಗಳ ಬಂಧನಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಆರೋಪಿಗಳ ಬಂಧನಕ್ಕೆ ಒತ್ತಾಯ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕನಕೇನಹಳ್ಳಿ ಗ್ರಾಮದ ಸರ್ವೆ ನಂ 58ರ ಸರ್ಕಾರಿ ಜಾಗದಲ್ಲಿ ವಾಸವಿದ್ದ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರಜಾ ವಿಮೋಚನಾ ಚಳವಳಿಯ ನೇತೃತ್ವದಲ್ಲಿ ಶುಕ್ರವಾರ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, “ಘಟನೆ ನಡೆದ 5 ದಿನ ಕಳದರೂ ಆರೋಪಿಗಳನ್ನು ಬಂಧಿಸಿಲ್ಲ, ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರದ ಸಾಮಾಜಿಕ ಕಾರ್ಯಕರ್ತರಾದ ರಾಜು ಸಣ್ಣಕ್ಕಿಯವರು ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಕನಕೇನಹಳ್ಳಿಯ ಸರ್ವೆ ನಂ58 ರಲ್ಲಿ 3.20 ಎಕರೆ ಇನಾಮ್ತಿ ಸರ್ಕಾರಿ ಜಮೀನಿದೆ. ಅಲ್ಲಿ ಗ್ರಾಮದ ಹೆಚ್ಚಿನ ದಲಿತರು ಮತ್ತು ಕೆಲ ಇತರ ಸಮುದಾಯಗಳು ಗುಡಿಸಲು, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಮುತ್ತುರಾಜೇಗೌಡ ಎಂಬ ಸವರ್ಣೀಯ ಸಮುದಾಯದ ವ್ಯಕ್ತಿ ಅಲ್ಲಿಯೇ ಮನೆ ಕಟ್ಟಿಕೊಂಡಿದ್ದು, ದಲಿತರನ್ನು ಅಲ್ಲಿಂದ ಒಕ್ಕಲೆಬ್ಬಿಸಿ ಇಡೀ ಜಮೀನನ್ನು ಕಬಳಿಸಲು ಯತ್ನಿಸಿದ್ದರು. ಅವರು ಮತ್ತು ಅವರ ಪುತ್ರ ಸೇರಿಕೊಂಡು ಮೇ 03ರ ರಾತ್ರಿ 10.30ರ ಸಮಯದಲ್ಲಿ ನಾಗಮ್ಮ ಮತ್ತು ಹನುಮಕ್ಕನವರ ದಲಿತ ಕುಟುಂಬಗಳ ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ” ಎಂದರು.

ಮುತ್ತುರಾಜೇಗೌಡ ಇಡೀ ಜಮೀನು ತನಗೆ ಸೇರಬೇಕೆಂದು ಎ.ಸಿ, ಡಿ.ಸಿ ಮತ್ತು ಕೆಳ ಹಂತದ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಿದಾಗ ಅವೆಲ್ಲವೂ ವಜಾಗೊಂಡಿವೆ. ಈಗ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲವು ಸಹ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹೀಗಿರುವಾಗ ಹೆದರಿಸಿ, ಬೆದರಿಸಿ ದಲಿತರನ್ನು ಅಲ್ಲಿಂದ ಎತ್ತಂಗಡಿ ಮಾಡಲು ಈ ರೀತಿ ಬೆಂಕಿ ಹಚ್ಚಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರೆ ಮೊದ ಮೊದಲು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು. ಆದರೆ ಪ್ರತಿಭಟನೆಗಳು ನಡೆದ ನಂತರ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಆರೋಪಿಗಳನ್ನು ಬಂಧಿಸಿಲ್ಲ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂತ್ರಸ್ತ ದಲಿತರಿಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ದಲಿತ್ ಫೈಲ್ಸ್: ದಲಿತ ದಮನಿತರ ಮೇಲಿನ ದೌರ್ಜನ್ಯಗಳು-ಪ್ರತಿರೋಧದ ಸುದ್ದಿಗಳನ್ನು ಇಲ್ಲಿ ಓದಿ

ಗ್ರಾಮದಲ್ಲಿ ದಲಿತರಿಗೆ ಸಣ್ಣ ಸಣ್ಣ ಮನೆಗಳಷ್ಟೆ ಇವೆ. ಹಾಗಾಗಿ ಅವರು ಅನಿವಾರ್ಯವಾಗಿ ಸರ್ಕಾರಿ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ತಹಶೀಲ್ದಾರ್‌ರವರು ಬೇರೆಡೆ 11 ಕುಂಟೆ ಜಾಗ ನೀಡುವುದಾಗಿ ಹೇಳಿದ್ದಾರೆ. ಆದರೆ 50ಕ್ಕೂ ಹೆಚ್ಚು ದಲಿತ ಕುಟುಂಬಗಳಿಗೆ ಆ ಜಾಗ ಸಾಲುವುದಿಲ್ಲ ಮಾತ್ರವಲ್ಲ, ಅದು ನಿಜವಾಗಿಯೂ ದಲಿತರ ಕೈಗೆ ಸಿಗುವುದು ಅಷ್ಟು ಸುಲಭವಲ್ಲ. ಹಾಗಾಗಿ ಸದ್ಯ ದಲಿತರು ಇರುವ ಜಾಗವನ್ನು ಅವರ ಹೆಸರಿಗೆ ಮಾಡಿ ಹಕ್ಕುಪತ್ರ ನೀಡಬೇಕು. ಅವರಿಗೆ ರಕ್ಷಣೆ ಒದಗಿಸಬೇಕು ಎಂದು ಪ್ರಜಾ ವಿಮೋಚನಾ ಚಳವಳಿಯ ಅಧ್ಯಕ್ಷರಾದ ಮುನಿ ಆಂಜನಪ್ಪ ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಪೊಲೀಸರು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತೇವೆ ಎಂದು ಡಿವೈಎಸ್‌ಪಿ ನಾಗರಾಜು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...