Homeಕರ್ನಾಟಕಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ

ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ

- Advertisement -
- Advertisement -

ಕಾವೇರಿ ಜಲ ವಿವಾದ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ್ದು, ತಮಿಳುನಾಡಿಗೆ ಕೆಆರ್​ಎಸ್​ನಿಂದ 5000 ಕ್ಯೂಸೆಕ್​ ನೀರು ಹರಿಸಬೇಕು ಎಂದು ಆದೇಶ ಹೊರಡಿಸಿದೆ. ಹೀಗಾಗಿ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

CWMA ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.

ಕರ್ನಾಟಕದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ಸ್‌ ನೀರು ಬಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸುವ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ತಲಾ 5 ಸಾವಿರ ಕ್ಯೂಸೆಕ್ಸ್‌ ನೀರು ಹರಿಸಬೇಕು ಎಂದು ತಿಳಿಸಿದೆ.

ಕನ್ನಡ ನಾಡಿನಲ್ಲಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿಯೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಕರ್ನಾಟಕ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಈ ಬಗ್ಗೆ ಕರ್ನಾಟಕ ಹಾಗೂ ತಮಿಳುನಾಡು ಪರ ವಕೀಲರು ಪರಸ್ಪರ ವಾದ ಮಂಡಿಸಿದ್ದಾರೆ. ಇಲ್ಲಿದೆ ನೋಡಿ ಪರಸ್ಪರ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್‌ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್‌ ನೀಡು ಬಿಡುವಂತೆ ಆದೇಶ ಹೊರಡಿಸಿದೆ. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಗವಾಯ್‌ ಆದೇಶ ಹೊರಡಿಸಿದ್ದಾರೆ.

ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕಾಗುತ್ತದೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪ್ರಾಧಿಕಾರದ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌:  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣಾ ಸಮಿತಿ ಎರಡರಲ್ಲೂ ಜಲ, ಕೃಷಿ ತಜ್ಞರು ಇದ್ದಾರೆ. ಬರ, ಮಳೆ ಕೊರತೆ ಆಧರಿಸಿ ತೀರ್ಮಾನ ಕೈಗೊಂಡಿದ್ದರು. ಅಲ್ಲದೆ ಮತ್ತಿತರ ವಿಚಾರಗಳನ್ನು ಪರಿಗಣಿಸಿ 5000 ಕ್ಯೂಸೆಕ್ಸ್‌ ನೀರು ಬಿಡುಗಡೆ ತೀರ್ಮಾನ ಮಾಡಿದ್ದರು. ಸರಾಸರಿ ಒಳಹರಿವು ಕಡಿಮೆ ಆಗಿದೆ. ಸಂಕಷ್ಟ ಪರಿಸ್ಥಿತಿ ಈಗಲೂ ಇದೆ. ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ಇದನ್ನೆಲ್ಲ ಕಾವೇರಿ ಸಮಿತಿ ಮತ್ತು ಪ್ರಾಧಿಕಾರ ಆದ್ಯತೆಗೆ ತೆಗೆದುಕೊಂಡಿದೆ. ಹಾಗಾಗಿ ಎರಡು ಸಮಿತಿ ಮತ್ತು ಪ್ರಾಧಿಕಾರಗಳ ಅದೇಶಗಳನ್ನ ತಡೆಹಿಡಿಯಲು ಸಾಧ್ಯ ಇಲ್ಲ ಎಂದು ಸುಪ್ರೀಂಕೋರ್ಟ್ ಸಮಿತಿ, ಪ್ರಾಧಿಕಾರದ ಅದೇಶಗಳನ್ನ ಎತ್ತಿಹಿಡಿದಿದೆ.

ಇದನ್ನೂ ಓದಿ: ಕಾವೇರಿ ಜಲ ವಿವಾದ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...