Homeಮುಖಪುಟಬಿಹಾರದಲ್ಲಿ ಎನ್‌ಡಿಎ ಮೈತ್ರಿಗೆ ಹಿನ್ನೆಡೆ: ಬಿಜೆಪಿ ತೊರೆಯಲು ಮುಂದಾದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್

ಬಿಹಾರದಲ್ಲಿ ಎನ್‌ಡಿಎ ಮೈತ್ರಿಗೆ ಹಿನ್ನೆಡೆ: ಬಿಜೆಪಿ ತೊರೆಯಲು ಮುಂದಾದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್

- Advertisement -
- Advertisement -

ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಆರ್‌ಸಿಪಿ ಸಿಂಗ್ ಅವರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ತಮ್ಮದೇ ಆದ ರಾಜಕೀಯ ಸಂಘಟನೆಯನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಶನಿವಾರ ಘೋಷಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ತನ್ನ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ವಿವರಣೆಯನ್ನು ಕೇಳಿದ ನಂತರ ಅವರು 2023 ರಲ್ಲಿ ಬಿಜೆಪಿ ಸೇರಿದ್ದರು.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಸಿಂಗ್, “ನಾನು ನನ್ನ ಬಿಜೆಪಿ ಸದಸ್ಯತ್ವವನ್ನು ನವೀಕರಿಸಿಲ್ಲ, ನನ್ನ ಉದ್ದೇಶಗಳನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ನಾನು ಶೀಘ್ರದಲ್ಲೇ ನನ್ನದೇ ಆದ ರಾಜಕೀಯ ಪಕ್ಷವನ್ನು ರಚಿಸುತ್ತೇನೆ” ಎಂದು ಬಹಿರಂಗಪಡಿಸಿದರು.

ಕಳೆದ 18 ತಿಂಗಳಿಂದ ಬಿಜೆಪಿಯಲ್ಲಿ ಯಾವುದೇ ಮಹತ್ವದ ಜವಾಬ್ದಾರಿಯನ್ನು ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ”ನನಗೆ ರಾಜಕೀಯ ಸಂಘಟನೆಯನ್ನು ನಡೆಸಿ ಸುದೀರ್ಘ ಅನುಭವವಿರುವುದರಿಂದ ಅದನ್ನು ಪಕ್ಷದ ಲಾಭಕ್ಕಾಗಿ ಬಳಸಿಕೊಳ್ಳಬೇಕು ಎಂದು ಬಿಜೆಪಿ ನಾಯಕತ್ವದೊಂದಿಗೆ ಸಂವಹನ ನಡೆಸಿದ್ದೇನೆ. ಆದರೆ, ಬಿಜೆಪಿ ವಿಭಿನ್ನ ಶೈಲಿಯ ಕಾರ್ಯವನ್ನು ಹೊಂದಿದೆ ಮತ್ತು ನಾನು ಅದನ್ನು ಪ್ರಶಂಸಿಸುತ್ತೇನೆ” ಎಂದು ಅಸಮಾಧಾನ ಹೊರಹಾಕಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎಯಿಂದ ನಿರ್ಗಮಿಸುವುದನ್ನು ಮತ್ತು 2022 ರ ಆಗಸ್ಟ್‌ನಲ್ಲಿ ಮಹಾಘಟಬಂಧನ್‌ನೊಂದಿಗೆ ಅವರ ನಂತರದ ಹೊಂದಾಣಿಕೆಯನ್ನು ಎದುರಿಸಲು ಸಿಂಗ್ ಅವರ ಬಿಜೆಪಿ ಪ್ರವೇಶವನ್ನು ಒಂದು ಕಾರ್ಯತಂತ್ರದ ಕ್ರಮವೆಂದು ಪರಿಗಣಿಸಲಾಗಿತ್ತು. 2024 ರ ಜನವರಿಯಲ್ಲಿ ನಿಈಶ್ ಕುಮಾರ್ ಅವರು ಎನ್‌ಡಿಎಗೆ ಮರಳಿದ ನಂತರ, ಸಿಂಗ್ ಅವರು ಪಕ್ಷದೊಳಗೆ ರಾಜಕೀಯವಾಗಿ ಪ್ರತ್ಯೇಕತೆಯನ್ನು ಕಂಡುಕೊಂಡರು.

ತಮ್ಮ ಹಿಂದಿನ ಪಕ್ಷವಾದ ಜನತಾ ದಳ ಯುನೈಟೆಡ್ (ಜೆಡಿಯು) ಗೆ ಮರಳುವ ಸಾಧ್ಯತೆಯ ಬಗ್ಗೆ ಕೇಳಿದಾಗ, ಸಿಂಗ್ ಈದೃಢವಾಗಿ ತಿರಸ್ಕರಿಸಿದರು. “ನನಗೆ ನನ್ನದೇ ಆದ ರಾಜಕೀಯ ಶಕ್ತಿ ಇರುವುದರಿಂದ ಜನತಾ ದಳಕ್ಕೆ ಮರಳುವ ಅಗತ್ಯವಿಲ್ಲ; ನಿತೀಶ್ ಕುಮಾರ್ ಅವರೊಂದಿಗೆ ಇಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಆದರೆ, ನಮ್ಮ ನಡುವೆ ಹೊಂದಾಣಿಕೆಗೆ ಪ್ರಯತ್ನ ನಡೆದಿಲ್ಲ” ಎಂದರು.

2023 ರಲ್ಲಿ ಜೆಡಿಯು ತೊರೆದ ನಂತರ, ಸಿಂಗ್ ನಿತೀಶ್ ಕುಮಾರ್ ಮೇಲೆ ಕಟುವಾದ ದಾಳಿಯನ್ನು ಪ್ರಾರಂಭಿಸಿದರು. ಅವರನ್ನು ‘ಪಾಲ್ಟಿ ಮಾರ್’ (ನಿಷ್ಠೆಯನ್ನು ಬದಲಾಯಿಸುವ ವ್ಯಕ್ತಿ) ಎಂದು ಕರೆದರು.

ಭ್ರಷ್ಟಾಚಾರ ಆರೋಪದ ಮೇಲೆ ಪಕ್ಷವು ಅವರಿಗೆ ನೋಟಿಸ್ ಕಳುಹಿಸಿದ ನಂತರ ಆರ್‌ಸಿಪಿ ಸಿಂಗ್ ಜೆಡಿಯು ತೊರೆದಿದ್ದರು. ನಿತೀಶ್ ಕುಮಾರ್ ತಮ್ಮ ಏಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ ಎಂದು ರಾಜೀನಾಮೆ ನೀಡಿದ ನಂತರ ಹೇಳಿದ್ದ ಅವರು, ಜೆಡಿಯು ಪಕ್ಷವನ್ನು “ಮುಳುಗುತ್ತಿರುವ ಹಡಗು” ಎಂದು ಬಣ್ಣಿಸಿದ್ದರು.

ಇದನ್ನೂ ಓದಿ; ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ...

ನೋಯ್ಡಾ ಕಾರ್ಮಿಕ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ, 7 ಎಫ್‌ಐಆರ್‌: ಅಶಾಂತಿಯ ಹಿಂದೆ ‘ಸಂಘಟಿತ ಸಿಂಡಿಕೇಟ್’ ಕುರಿತು ತನಿಖೆ

ನೋಯ್ಡಾದಲ್ಲಿ ಹಿಂಸಾತ್ಮಕವಾಗಿ ತಿರುಗಿದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಮಂಗಳವಾರ ಹೇಳಿದ್ದಾರೆ,...

“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್...