Homeಮುಖಪುಟಬಿಹಾರದಲ್ಲಿ ಎನ್‌ಡಿಎ ಮೈತ್ರಿಗೆ ಹಿನ್ನೆಡೆ: ಬಿಜೆಪಿ ತೊರೆಯಲು ಮುಂದಾದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್

ಬಿಹಾರದಲ್ಲಿ ಎನ್‌ಡಿಎ ಮೈತ್ರಿಗೆ ಹಿನ್ನೆಡೆ: ಬಿಜೆಪಿ ತೊರೆಯಲು ಮುಂದಾದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್

- Advertisement -
- Advertisement -

ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಆರ್‌ಸಿಪಿ ಸಿಂಗ್ ಅವರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ತಮ್ಮದೇ ಆದ ರಾಜಕೀಯ ಸಂಘಟನೆಯನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಶನಿವಾರ ಘೋಷಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ತನ್ನ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ವಿವರಣೆಯನ್ನು ಕೇಳಿದ ನಂತರ ಅವರು 2023 ರಲ್ಲಿ ಬಿಜೆಪಿ ಸೇರಿದ್ದರು.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಸಿಂಗ್, “ನಾನು ನನ್ನ ಬಿಜೆಪಿ ಸದಸ್ಯತ್ವವನ್ನು ನವೀಕರಿಸಿಲ್ಲ, ನನ್ನ ಉದ್ದೇಶಗಳನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ನಾನು ಶೀಘ್ರದಲ್ಲೇ ನನ್ನದೇ ಆದ ರಾಜಕೀಯ ಪಕ್ಷವನ್ನು ರಚಿಸುತ್ತೇನೆ” ಎಂದು ಬಹಿರಂಗಪಡಿಸಿದರು.

ಕಳೆದ 18 ತಿಂಗಳಿಂದ ಬಿಜೆಪಿಯಲ್ಲಿ ಯಾವುದೇ ಮಹತ್ವದ ಜವಾಬ್ದಾರಿಯನ್ನು ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ”ನನಗೆ ರಾಜಕೀಯ ಸಂಘಟನೆಯನ್ನು ನಡೆಸಿ ಸುದೀರ್ಘ ಅನುಭವವಿರುವುದರಿಂದ ಅದನ್ನು ಪಕ್ಷದ ಲಾಭಕ್ಕಾಗಿ ಬಳಸಿಕೊಳ್ಳಬೇಕು ಎಂದು ಬಿಜೆಪಿ ನಾಯಕತ್ವದೊಂದಿಗೆ ಸಂವಹನ ನಡೆಸಿದ್ದೇನೆ. ಆದರೆ, ಬಿಜೆಪಿ ವಿಭಿನ್ನ ಶೈಲಿಯ ಕಾರ್ಯವನ್ನು ಹೊಂದಿದೆ ಮತ್ತು ನಾನು ಅದನ್ನು ಪ್ರಶಂಸಿಸುತ್ತೇನೆ” ಎಂದು ಅಸಮಾಧಾನ ಹೊರಹಾಕಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎಯಿಂದ ನಿರ್ಗಮಿಸುವುದನ್ನು ಮತ್ತು 2022 ರ ಆಗಸ್ಟ್‌ನಲ್ಲಿ ಮಹಾಘಟಬಂಧನ್‌ನೊಂದಿಗೆ ಅವರ ನಂತರದ ಹೊಂದಾಣಿಕೆಯನ್ನು ಎದುರಿಸಲು ಸಿಂಗ್ ಅವರ ಬಿಜೆಪಿ ಪ್ರವೇಶವನ್ನು ಒಂದು ಕಾರ್ಯತಂತ್ರದ ಕ್ರಮವೆಂದು ಪರಿಗಣಿಸಲಾಗಿತ್ತು. 2024 ರ ಜನವರಿಯಲ್ಲಿ ನಿಈಶ್ ಕುಮಾರ್ ಅವರು ಎನ್‌ಡಿಎಗೆ ಮರಳಿದ ನಂತರ, ಸಿಂಗ್ ಅವರು ಪಕ್ಷದೊಳಗೆ ರಾಜಕೀಯವಾಗಿ ಪ್ರತ್ಯೇಕತೆಯನ್ನು ಕಂಡುಕೊಂಡರು.

ತಮ್ಮ ಹಿಂದಿನ ಪಕ್ಷವಾದ ಜನತಾ ದಳ ಯುನೈಟೆಡ್ (ಜೆಡಿಯು) ಗೆ ಮರಳುವ ಸಾಧ್ಯತೆಯ ಬಗ್ಗೆ ಕೇಳಿದಾಗ, ಸಿಂಗ್ ಈದೃಢವಾಗಿ ತಿರಸ್ಕರಿಸಿದರು. “ನನಗೆ ನನ್ನದೇ ಆದ ರಾಜಕೀಯ ಶಕ್ತಿ ಇರುವುದರಿಂದ ಜನತಾ ದಳಕ್ಕೆ ಮರಳುವ ಅಗತ್ಯವಿಲ್ಲ; ನಿತೀಶ್ ಕುಮಾರ್ ಅವರೊಂದಿಗೆ ಇಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಆದರೆ, ನಮ್ಮ ನಡುವೆ ಹೊಂದಾಣಿಕೆಗೆ ಪ್ರಯತ್ನ ನಡೆದಿಲ್ಲ” ಎಂದರು.

2023 ರಲ್ಲಿ ಜೆಡಿಯು ತೊರೆದ ನಂತರ, ಸಿಂಗ್ ನಿತೀಶ್ ಕುಮಾರ್ ಮೇಲೆ ಕಟುವಾದ ದಾಳಿಯನ್ನು ಪ್ರಾರಂಭಿಸಿದರು. ಅವರನ್ನು ‘ಪಾಲ್ಟಿ ಮಾರ್’ (ನಿಷ್ಠೆಯನ್ನು ಬದಲಾಯಿಸುವ ವ್ಯಕ್ತಿ) ಎಂದು ಕರೆದರು.

ಭ್ರಷ್ಟಾಚಾರ ಆರೋಪದ ಮೇಲೆ ಪಕ್ಷವು ಅವರಿಗೆ ನೋಟಿಸ್ ಕಳುಹಿಸಿದ ನಂತರ ಆರ್‌ಸಿಪಿ ಸಿಂಗ್ ಜೆಡಿಯು ತೊರೆದಿದ್ದರು. ನಿತೀಶ್ ಕುಮಾರ್ ತಮ್ಮ ಏಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ ಎಂದು ರಾಜೀನಾಮೆ ನೀಡಿದ ನಂತರ ಹೇಳಿದ್ದ ಅವರು, ಜೆಡಿಯು ಪಕ್ಷವನ್ನು “ಮುಳುಗುತ್ತಿರುವ ಹಡಗು” ಎಂದು ಬಣ್ಣಿಸಿದ್ದರು.

ಇದನ್ನೂ ಓದಿ; ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...