Homeಮುಖಪುಟಬಿಹಾರದಲ್ಲಿ ಎನ್‌ಡಿಎ ಮೈತ್ರಿಗೆ ಹಿನ್ನೆಡೆ: ಬಿಜೆಪಿ ತೊರೆಯಲು ಮುಂದಾದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್

ಬಿಹಾರದಲ್ಲಿ ಎನ್‌ಡಿಎ ಮೈತ್ರಿಗೆ ಹಿನ್ನೆಡೆ: ಬಿಜೆಪಿ ತೊರೆಯಲು ಮುಂದಾದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್

- Advertisement -
- Advertisement -

ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಆರ್‌ಸಿಪಿ ಸಿಂಗ್ ಅವರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ತಮ್ಮದೇ ಆದ ರಾಜಕೀಯ ಸಂಘಟನೆಯನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಶನಿವಾರ ಘೋಷಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ತನ್ನ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ವಿವರಣೆಯನ್ನು ಕೇಳಿದ ನಂತರ ಅವರು 2023 ರಲ್ಲಿ ಬಿಜೆಪಿ ಸೇರಿದ್ದರು.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಸಿಂಗ್, “ನಾನು ನನ್ನ ಬಿಜೆಪಿ ಸದಸ್ಯತ್ವವನ್ನು ನವೀಕರಿಸಿಲ್ಲ, ನನ್ನ ಉದ್ದೇಶಗಳನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ನಾನು ಶೀಘ್ರದಲ್ಲೇ ನನ್ನದೇ ಆದ ರಾಜಕೀಯ ಪಕ್ಷವನ್ನು ರಚಿಸುತ್ತೇನೆ” ಎಂದು ಬಹಿರಂಗಪಡಿಸಿದರು.

ಕಳೆದ 18 ತಿಂಗಳಿಂದ ಬಿಜೆಪಿಯಲ್ಲಿ ಯಾವುದೇ ಮಹತ್ವದ ಜವಾಬ್ದಾರಿಯನ್ನು ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ”ನನಗೆ ರಾಜಕೀಯ ಸಂಘಟನೆಯನ್ನು ನಡೆಸಿ ಸುದೀರ್ಘ ಅನುಭವವಿರುವುದರಿಂದ ಅದನ್ನು ಪಕ್ಷದ ಲಾಭಕ್ಕಾಗಿ ಬಳಸಿಕೊಳ್ಳಬೇಕು ಎಂದು ಬಿಜೆಪಿ ನಾಯಕತ್ವದೊಂದಿಗೆ ಸಂವಹನ ನಡೆಸಿದ್ದೇನೆ. ಆದರೆ, ಬಿಜೆಪಿ ವಿಭಿನ್ನ ಶೈಲಿಯ ಕಾರ್ಯವನ್ನು ಹೊಂದಿದೆ ಮತ್ತು ನಾನು ಅದನ್ನು ಪ್ರಶಂಸಿಸುತ್ತೇನೆ” ಎಂದು ಅಸಮಾಧಾನ ಹೊರಹಾಕಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎಯಿಂದ ನಿರ್ಗಮಿಸುವುದನ್ನು ಮತ್ತು 2022 ರ ಆಗಸ್ಟ್‌ನಲ್ಲಿ ಮಹಾಘಟಬಂಧನ್‌ನೊಂದಿಗೆ ಅವರ ನಂತರದ ಹೊಂದಾಣಿಕೆಯನ್ನು ಎದುರಿಸಲು ಸಿಂಗ್ ಅವರ ಬಿಜೆಪಿ ಪ್ರವೇಶವನ್ನು ಒಂದು ಕಾರ್ಯತಂತ್ರದ ಕ್ರಮವೆಂದು ಪರಿಗಣಿಸಲಾಗಿತ್ತು. 2024 ರ ಜನವರಿಯಲ್ಲಿ ನಿಈಶ್ ಕುಮಾರ್ ಅವರು ಎನ್‌ಡಿಎಗೆ ಮರಳಿದ ನಂತರ, ಸಿಂಗ್ ಅವರು ಪಕ್ಷದೊಳಗೆ ರಾಜಕೀಯವಾಗಿ ಪ್ರತ್ಯೇಕತೆಯನ್ನು ಕಂಡುಕೊಂಡರು.

ತಮ್ಮ ಹಿಂದಿನ ಪಕ್ಷವಾದ ಜನತಾ ದಳ ಯುನೈಟೆಡ್ (ಜೆಡಿಯು) ಗೆ ಮರಳುವ ಸಾಧ್ಯತೆಯ ಬಗ್ಗೆ ಕೇಳಿದಾಗ, ಸಿಂಗ್ ಈದೃಢವಾಗಿ ತಿರಸ್ಕರಿಸಿದರು. “ನನಗೆ ನನ್ನದೇ ಆದ ರಾಜಕೀಯ ಶಕ್ತಿ ಇರುವುದರಿಂದ ಜನತಾ ದಳಕ್ಕೆ ಮರಳುವ ಅಗತ್ಯವಿಲ್ಲ; ನಿತೀಶ್ ಕುಮಾರ್ ಅವರೊಂದಿಗೆ ಇಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಆದರೆ, ನಮ್ಮ ನಡುವೆ ಹೊಂದಾಣಿಕೆಗೆ ಪ್ರಯತ್ನ ನಡೆದಿಲ್ಲ” ಎಂದರು.

2023 ರಲ್ಲಿ ಜೆಡಿಯು ತೊರೆದ ನಂತರ, ಸಿಂಗ್ ನಿತೀಶ್ ಕುಮಾರ್ ಮೇಲೆ ಕಟುವಾದ ದಾಳಿಯನ್ನು ಪ್ರಾರಂಭಿಸಿದರು. ಅವರನ್ನು ‘ಪಾಲ್ಟಿ ಮಾರ್’ (ನಿಷ್ಠೆಯನ್ನು ಬದಲಾಯಿಸುವ ವ್ಯಕ್ತಿ) ಎಂದು ಕರೆದರು.

ಭ್ರಷ್ಟಾಚಾರ ಆರೋಪದ ಮೇಲೆ ಪಕ್ಷವು ಅವರಿಗೆ ನೋಟಿಸ್ ಕಳುಹಿಸಿದ ನಂತರ ಆರ್‌ಸಿಪಿ ಸಿಂಗ್ ಜೆಡಿಯು ತೊರೆದಿದ್ದರು. ನಿತೀಶ್ ಕುಮಾರ್ ತಮ್ಮ ಏಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ ಎಂದು ರಾಜೀನಾಮೆ ನೀಡಿದ ನಂತರ ಹೇಳಿದ್ದ ಅವರು, ಜೆಡಿಯು ಪಕ್ಷವನ್ನು “ಮುಳುಗುತ್ತಿರುವ ಹಡಗು” ಎಂದು ಬಣ್ಣಿಸಿದ್ದರು.

ಇದನ್ನೂ ಓದಿ; ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...