Homeಕರ್ನಾಟಕಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ...

ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಏನೂ ಮಾಡಿದರೂ ಇಲ್ಲಿ ಪ್ರಚಾರ ಸಾಧ್ಯವಿಲ್ಲ ಎಂದು ಅರಿತ ನಂತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆಲ್ಲಗೆ ಒಬ್ಬಬ್ಬರಾಗಿ ಸ್ಥಳದಿಂದ ಕೊನೆಗೂ ನಿರ್ಗಮಿಸಿದ್ದಾರೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಜನಜಾಗೃತಿ ಮೂಡಿಸಲು ಮನೆ ಮನೆ ಭೇಟಿಗೆ ತೆರಳಿದ್ದ ಬಿಜೆಪಿ  ಮುಖಂಡರು, ಕಾರ್ಯಕರ್ತರನ್ನು ತಡೆದು ಧಿಕ್ಕಾರದ ಘೋಷಣೆ ಕೂಗಿ ವಾಪಸ್‌ ಕಳಿಸಿದ ಘಟನೆ ಇಂದು ಹೊಸಪೇಟೆಯಲ್ಲಿ ಜರುಗಿದೆ.

ಇದರಿಂದ ಬಿಜೆಪಿ ಕಾರ್ಯಕರ್ತರಿಗೆ ತೀವ್ರ ಮುಖಭಂಗವುಂಟಾಗಿದ್ದು ಒಂದು ಕರಪತ್ರ ಹಂಚದೆ ವಾಪಸ್‌ ತೆರಳಬೇಕಾಗ ಪರಿಸ್ಥಿತಿ ಉಂಟಾಗಿದೆ.

ಹೊಸಪೇಟೆಯ ಚಲವಾದಿಕೇರಿ ಓಣಿಗೆ ಇಂದು ಬೆಳಿಗ್ಗೆಯೇ ಹಲವು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಎಎ ಪರ ಪ್ರಚಾರಕ್ಕೆ ಹೊರಟಿದ್ದರು. ಬಿಜೆಪಿ ಕಾರ್ಯಕರ್ತರು ಬರುವ ವಿಷಯ ಗೊತ್ತಾಗುತ್ತಿದ್ದಂತೆ ಓಣಿಯ ಪ್ರವೇಶ ದ್ವಾರ ಬಳಿ ಸೇರಿದ ಸ್ಥಳೀಯ ನಿವಾಸಿಗಳು ಕಪ್ಪು ಬಾವುಟ ಪ್ರದರ್ಶಿಸಿ, ಗೋ ಬ್ಯಾಕ್, ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ.

ಅಲ್ಲದೇ ಬಿಜೆಪಿ, ಆರ್‌ಎಸ್‌ಎಸ್‌ನಿಂದ ಆಜಾದಿ, ಹಿಂದೂಸ್ತಾನ್ ಜಿಂದಾಬಾದ್, ಸಂವಿಧಾನ ಜಿಂದಾಬಾದ್‌ ಘೋಷಣೆಗಳನ್ನು ಕೂಗಿ ಓಣಿಗೆ ಪ್ರವೇಶ ನೀಡದೇ ತಡೆದಿದ್ದಾರೆ. ‘ನಾವು ಕರಪತ್ರಗಳನ್ನು ಕೊಟ್ಟು ಹೋಗಲು ಬಂದಿದ್ದೇವೆ. ಅದಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಬಿಜೆಪಿ ಮುಖಂಡರು ಮನವಿ ಮಾಡಿದರೂ ಅದಕ್ಕೆ ಸೊಪ್ಪು ಹಾಕದ ಸ್ಥಳೀಯರು ನೀವು ಇಲ್ಲಿಗೆ ಬರುವುದೇ ಬೇಡ, ನಿಮಗೆ ಪ್ರವೇಶವಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಎರೂ ಕಡೆಯವರ ನಡುವೆ ಪರಸ್ಪರ ವಾಗ್ವಾದ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಬಂದಿದ್ದು, ವಾತಾವರಣ ತಿಳಿಗೊಳಿಸಲು ಪ್ರಯತ್ನಿಸಿದರು. ನಾವು ಪ್ರಚಾರ ನಡೆಸಿಯೇ ಸಿದ್ದ ಎಂದು ಓಣಿ ಪ್ರವೇಶಿಸಿಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಜನರು ತಡೆದಿದ್ದಾರೆ. ಸ್ಥಳದಲ್ಲಿ ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಪೊಲೀಸರು ಅಸಹಾಯಕರಾಗಿ ಬಿಜೆಪಿಯವರಿಗೆ ಬುದ್ದಿ ಹೇಳಿದ್ದಾರೆ.

ಓಣಿಯಲ್ಲಿ ದಲಿತರು, ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ನಮಗೆ ಸಿಎಎ, ಎನ್‌ಆರ್‌ಸಿ ಬೇಡ. ಹಿಂದೂ ಮುಸ್ಲಿಮರು ಅಣ್ಣತಮ್ಮಂದಿರಂತೆ ಬದುಕುತ್ತಿದ್ದೇವೆ. ಈ ದೇಶ ನಮ್ಮದು. ಇಲ್ಲಿಯೇ ಹುಟ್ಟಿದ್ದೇವೆ, ಇಲ್ಲಿಯೇ ಸಾಯುತ್ತೇವೆ. ನೀವು ಇಲ್ಲಿ ಬಂದು ನಮ್ಮ ಸೌಹಾರ್ದ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನೂ ಮಾಡಿದರೂ ಇಲ್ಲಿ ಪ್ರಚಾರ ಸಾಧ್ಯವಿಲ್ಲ ಎಂದು ಅರಿತ ನಂತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆಲ್ಲಗೆ ಒಬ್ಬಬ್ಬರಾಗಿ ಸ್ಥಳದಿಂದ ಕೊನೆಗೂ ನಿರ್ಗಮಿಸಿದ್ದಾರೆ. ಪೊಲೀಸರು ನಿಟ್ಟುಸಿರುಬಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...