Homeಕರ್ನಾಟಕಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ...

ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಏನೂ ಮಾಡಿದರೂ ಇಲ್ಲಿ ಪ್ರಚಾರ ಸಾಧ್ಯವಿಲ್ಲ ಎಂದು ಅರಿತ ನಂತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆಲ್ಲಗೆ ಒಬ್ಬಬ್ಬರಾಗಿ ಸ್ಥಳದಿಂದ ಕೊನೆಗೂ ನಿರ್ಗಮಿಸಿದ್ದಾರೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಜನಜಾಗೃತಿ ಮೂಡಿಸಲು ಮನೆ ಮನೆ ಭೇಟಿಗೆ ತೆರಳಿದ್ದ ಬಿಜೆಪಿ  ಮುಖಂಡರು, ಕಾರ್ಯಕರ್ತರನ್ನು ತಡೆದು ಧಿಕ್ಕಾರದ ಘೋಷಣೆ ಕೂಗಿ ವಾಪಸ್‌ ಕಳಿಸಿದ ಘಟನೆ ಇಂದು ಹೊಸಪೇಟೆಯಲ್ಲಿ ಜರುಗಿದೆ.

ಇದರಿಂದ ಬಿಜೆಪಿ ಕಾರ್ಯಕರ್ತರಿಗೆ ತೀವ್ರ ಮುಖಭಂಗವುಂಟಾಗಿದ್ದು ಒಂದು ಕರಪತ್ರ ಹಂಚದೆ ವಾಪಸ್‌ ತೆರಳಬೇಕಾಗ ಪರಿಸ್ಥಿತಿ ಉಂಟಾಗಿದೆ.

ಹೊಸಪೇಟೆಯ ಚಲವಾದಿಕೇರಿ ಓಣಿಗೆ ಇಂದು ಬೆಳಿಗ್ಗೆಯೇ ಹಲವು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಎಎ ಪರ ಪ್ರಚಾರಕ್ಕೆ ಹೊರಟಿದ್ದರು. ಬಿಜೆಪಿ ಕಾರ್ಯಕರ್ತರು ಬರುವ ವಿಷಯ ಗೊತ್ತಾಗುತ್ತಿದ್ದಂತೆ ಓಣಿಯ ಪ್ರವೇಶ ದ್ವಾರ ಬಳಿ ಸೇರಿದ ಸ್ಥಳೀಯ ನಿವಾಸಿಗಳು ಕಪ್ಪು ಬಾವುಟ ಪ್ರದರ್ಶಿಸಿ, ಗೋ ಬ್ಯಾಕ್, ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ.

ಅಲ್ಲದೇ ಬಿಜೆಪಿ, ಆರ್‌ಎಸ್‌ಎಸ್‌ನಿಂದ ಆಜಾದಿ, ಹಿಂದೂಸ್ತಾನ್ ಜಿಂದಾಬಾದ್, ಸಂವಿಧಾನ ಜಿಂದಾಬಾದ್‌ ಘೋಷಣೆಗಳನ್ನು ಕೂಗಿ ಓಣಿಗೆ ಪ್ರವೇಶ ನೀಡದೇ ತಡೆದಿದ್ದಾರೆ. ‘ನಾವು ಕರಪತ್ರಗಳನ್ನು ಕೊಟ್ಟು ಹೋಗಲು ಬಂದಿದ್ದೇವೆ. ಅದಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಬಿಜೆಪಿ ಮುಖಂಡರು ಮನವಿ ಮಾಡಿದರೂ ಅದಕ್ಕೆ ಸೊಪ್ಪು ಹಾಕದ ಸ್ಥಳೀಯರು ನೀವು ಇಲ್ಲಿಗೆ ಬರುವುದೇ ಬೇಡ, ನಿಮಗೆ ಪ್ರವೇಶವಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಎರೂ ಕಡೆಯವರ ನಡುವೆ ಪರಸ್ಪರ ವಾಗ್ವಾದ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಬಂದಿದ್ದು, ವಾತಾವರಣ ತಿಳಿಗೊಳಿಸಲು ಪ್ರಯತ್ನಿಸಿದರು. ನಾವು ಪ್ರಚಾರ ನಡೆಸಿಯೇ ಸಿದ್ದ ಎಂದು ಓಣಿ ಪ್ರವೇಶಿಸಿಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಜನರು ತಡೆದಿದ್ದಾರೆ. ಸ್ಥಳದಲ್ಲಿ ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಪೊಲೀಸರು ಅಸಹಾಯಕರಾಗಿ ಬಿಜೆಪಿಯವರಿಗೆ ಬುದ್ದಿ ಹೇಳಿದ್ದಾರೆ.

ಓಣಿಯಲ್ಲಿ ದಲಿತರು, ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ನಮಗೆ ಸಿಎಎ, ಎನ್‌ಆರ್‌ಸಿ ಬೇಡ. ಹಿಂದೂ ಮುಸ್ಲಿಮರು ಅಣ್ಣತಮ್ಮಂದಿರಂತೆ ಬದುಕುತ್ತಿದ್ದೇವೆ. ಈ ದೇಶ ನಮ್ಮದು. ಇಲ್ಲಿಯೇ ಹುಟ್ಟಿದ್ದೇವೆ, ಇಲ್ಲಿಯೇ ಸಾಯುತ್ತೇವೆ. ನೀವು ಇಲ್ಲಿ ಬಂದು ನಮ್ಮ ಸೌಹಾರ್ದ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನೂ ಮಾಡಿದರೂ ಇಲ್ಲಿ ಪ್ರಚಾರ ಸಾಧ್ಯವಿಲ್ಲ ಎಂದು ಅರಿತ ನಂತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆಲ್ಲಗೆ ಒಬ್ಬಬ್ಬರಾಗಿ ಸ್ಥಳದಿಂದ ಕೊನೆಗೂ ನಿರ್ಗಮಿಸಿದ್ದಾರೆ. ಪೊಲೀಸರು ನಿಟ್ಟುಸಿರುಬಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...