Homeಕರ್ನಾಟಕಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ...

ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಏನೂ ಮಾಡಿದರೂ ಇಲ್ಲಿ ಪ್ರಚಾರ ಸಾಧ್ಯವಿಲ್ಲ ಎಂದು ಅರಿತ ನಂತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆಲ್ಲಗೆ ಒಬ್ಬಬ್ಬರಾಗಿ ಸ್ಥಳದಿಂದ ಕೊನೆಗೂ ನಿರ್ಗಮಿಸಿದ್ದಾರೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಜನಜಾಗೃತಿ ಮೂಡಿಸಲು ಮನೆ ಮನೆ ಭೇಟಿಗೆ ತೆರಳಿದ್ದ ಬಿಜೆಪಿ  ಮುಖಂಡರು, ಕಾರ್ಯಕರ್ತರನ್ನು ತಡೆದು ಧಿಕ್ಕಾರದ ಘೋಷಣೆ ಕೂಗಿ ವಾಪಸ್‌ ಕಳಿಸಿದ ಘಟನೆ ಇಂದು ಹೊಸಪೇಟೆಯಲ್ಲಿ ಜರುಗಿದೆ.

ಇದರಿಂದ ಬಿಜೆಪಿ ಕಾರ್ಯಕರ್ತರಿಗೆ ತೀವ್ರ ಮುಖಭಂಗವುಂಟಾಗಿದ್ದು ಒಂದು ಕರಪತ್ರ ಹಂಚದೆ ವಾಪಸ್‌ ತೆರಳಬೇಕಾಗ ಪರಿಸ್ಥಿತಿ ಉಂಟಾಗಿದೆ.

ಹೊಸಪೇಟೆಯ ಚಲವಾದಿಕೇರಿ ಓಣಿಗೆ ಇಂದು ಬೆಳಿಗ್ಗೆಯೇ ಹಲವು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಎಎ ಪರ ಪ್ರಚಾರಕ್ಕೆ ಹೊರಟಿದ್ದರು. ಬಿಜೆಪಿ ಕಾರ್ಯಕರ್ತರು ಬರುವ ವಿಷಯ ಗೊತ್ತಾಗುತ್ತಿದ್ದಂತೆ ಓಣಿಯ ಪ್ರವೇಶ ದ್ವಾರ ಬಳಿ ಸೇರಿದ ಸ್ಥಳೀಯ ನಿವಾಸಿಗಳು ಕಪ್ಪು ಬಾವುಟ ಪ್ರದರ್ಶಿಸಿ, ಗೋ ಬ್ಯಾಕ್, ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ.

ಅಲ್ಲದೇ ಬಿಜೆಪಿ, ಆರ್‌ಎಸ್‌ಎಸ್‌ನಿಂದ ಆಜಾದಿ, ಹಿಂದೂಸ್ತಾನ್ ಜಿಂದಾಬಾದ್, ಸಂವಿಧಾನ ಜಿಂದಾಬಾದ್‌ ಘೋಷಣೆಗಳನ್ನು ಕೂಗಿ ಓಣಿಗೆ ಪ್ರವೇಶ ನೀಡದೇ ತಡೆದಿದ್ದಾರೆ. ‘ನಾವು ಕರಪತ್ರಗಳನ್ನು ಕೊಟ್ಟು ಹೋಗಲು ಬಂದಿದ್ದೇವೆ. ಅದಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಬಿಜೆಪಿ ಮುಖಂಡರು ಮನವಿ ಮಾಡಿದರೂ ಅದಕ್ಕೆ ಸೊಪ್ಪು ಹಾಕದ ಸ್ಥಳೀಯರು ನೀವು ಇಲ್ಲಿಗೆ ಬರುವುದೇ ಬೇಡ, ನಿಮಗೆ ಪ್ರವೇಶವಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಎರೂ ಕಡೆಯವರ ನಡುವೆ ಪರಸ್ಪರ ವಾಗ್ವಾದ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಬಂದಿದ್ದು, ವಾತಾವರಣ ತಿಳಿಗೊಳಿಸಲು ಪ್ರಯತ್ನಿಸಿದರು. ನಾವು ಪ್ರಚಾರ ನಡೆಸಿಯೇ ಸಿದ್ದ ಎಂದು ಓಣಿ ಪ್ರವೇಶಿಸಿಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಜನರು ತಡೆದಿದ್ದಾರೆ. ಸ್ಥಳದಲ್ಲಿ ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಪೊಲೀಸರು ಅಸಹಾಯಕರಾಗಿ ಬಿಜೆಪಿಯವರಿಗೆ ಬುದ್ದಿ ಹೇಳಿದ್ದಾರೆ.

ಓಣಿಯಲ್ಲಿ ದಲಿತರು, ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ನಮಗೆ ಸಿಎಎ, ಎನ್‌ಆರ್‌ಸಿ ಬೇಡ. ಹಿಂದೂ ಮುಸ್ಲಿಮರು ಅಣ್ಣತಮ್ಮಂದಿರಂತೆ ಬದುಕುತ್ತಿದ್ದೇವೆ. ಈ ದೇಶ ನಮ್ಮದು. ಇಲ್ಲಿಯೇ ಹುಟ್ಟಿದ್ದೇವೆ, ಇಲ್ಲಿಯೇ ಸಾಯುತ್ತೇವೆ. ನೀವು ಇಲ್ಲಿ ಬಂದು ನಮ್ಮ ಸೌಹಾರ್ದ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನೂ ಮಾಡಿದರೂ ಇಲ್ಲಿ ಪ್ರಚಾರ ಸಾಧ್ಯವಿಲ್ಲ ಎಂದು ಅರಿತ ನಂತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆಲ್ಲಗೆ ಒಬ್ಬಬ್ಬರಾಗಿ ಸ್ಥಳದಿಂದ ಕೊನೆಗೂ ನಿರ್ಗಮಿಸಿದ್ದಾರೆ. ಪೊಲೀಸರು ನಿಟ್ಟುಸಿರುಬಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...