Homeಮುಖಪುಟಜ್ಞಾನವಾಪಿ ಸಂಬಂಧಿತ ಏಳು ಮೊಕದ್ದಮೆ ಒಟ್ಟಿಗೆ ವಿಚಾರಣೆ ನಡೆಸಲಾಗುವುದು: ವಾರಣಾಸಿ ಕೋರ್ಟ್ ಆದೇಶ

ಜ್ಞಾನವಾಪಿ ಸಂಬಂಧಿತ ಏಳು ಮೊಕದ್ದಮೆ ಒಟ್ಟಿಗೆ ವಿಚಾರಣೆ ನಡೆಸಲಾಗುವುದು: ವಾರಣಾಸಿ ಕೋರ್ಟ್ ಆದೇಶ

- Advertisement -
- Advertisement -

ವಿವಿಧ ನ್ಯಾಯಾಲಯಗಳ ಮುಂದೆ ಬಾಕಿ ಇರುವ ಜ್ಞಾನವಾಪಿ ಸಂಬಂಧಿತ ಮೊಕದ್ದಮೆಗಳನ್ನು ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ವರ್ಗಾಯಿಸಲು ಕೋರಿ ಸಲ್ಲಿಸಲಾದ ಏಳು ಅರ್ಜಿಗಳನ್ನು ವಾರಣಾಸಿ ನ್ಯಾಯಾಲಯವು ಮಂಗಳವಾರ ಕ್ರೋಢೀಕರಿಸಿದೆ.

ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ತಮ್ಮ ವಿಶೇಷ ಅಧಿಕಾರ ಬಳಸಿ, ಪ್ರತಿವಾದಿಗಳ ಆಕ್ಷೇಪದ ನಡುವೆಯೂ ಪ್ರಕರಣಗಳನ್ನು ಕ್ರೋಢೀಕರಿಸಿ ವಿಚಾರಣೆ ನಡೆಸಲು ಆದೇಶ ನೀಡಿದರು ಎಂದು ಜ್ಞಾನವಾಪಿ ಮತ್ತು ಆದಿ ವಿಶ್ವೇಶ್ವರ್ ಪ್ರಕರಣಗಳ ಪರ ವಿಶೇಷ ವಕೀಲ ರಾಜೇಶ್ ಮಿಶ್ರಾ ಹೇಳಿದರು.

”ಈ ಎಲ್ಲಾ ಪ್ರಕರಣಗಳು ಬೇರೆ ಬೇರೆ ನ್ಯಾಯಾಲಯಗಳಲ್ಲಿ ಬಾಕಿ ಉಳಿದರೆ ವ್ಯತಿರಿಕ್ತ ಆದೇಶಗಳು ಬರುವ ಸಾಧ್ಯತೆ ಇದೆ” ಎಂದು ಜಿಲ್ಲಾ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ”ಈ ಎಲ್ಲಾ ಪ್ರಕರಣಗಳು ಒಂದೇ ನ್ಯಾಯಾಲಯದಲ್ಲಿ ಉಳಿದಿದ್ದರೆ, ಈ ಎಲ್ಲಾ ಪ್ರಕರಣಗಳಲ್ಲಿ ಯಾವುದೇ ವ್ಯತಿರಿಕ್ತ ತೀರ್ಪು ಅಥವಾ ಆದೇಶದ ಸಾಧ್ಯತೆ ಇರುವುದಿಲ್ಲ” ಎಂದು ಮಿಶ್ರಾ ಹೇಳಿದರು.

”ಒಂದೇ ನ್ಯಾಯಾಲಯದಲ್ಲಿ ಎರಡು ಅಥವಾ ಹೆಚ್ಚಿನ ಪ್ರಕರಣಗಳು ಬಾಕಿ ಇರುವಾಗ ಮತ್ತು ನ್ಯಾಯದ ಹಿತಾಸಕ್ತಿಯಿಂದ ನ್ಯಾಯಾಲಯವು ಅಭಿಪ್ರಾಯಪಟ್ಟರೆ, ಅವುಗಳ ಜಂಟಿ ವಿಚಾರಣೆಗೆ ಆದೇಶಿಸಬಹುದು” ಎಂದು ಸಿಪಿಸಿಯ 4ಎ ಆದೇಶವನ್ನು ಉಲ್ಲೇಖಿಸಿ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸುವುದು ನ್ಯಾಯದ ಹಿತದೃಷ್ಟಿಯಿಂದ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಶಿವಲಿಂಗದ ಕಾರ್ಬನ್‌ ಡೇಟಿಂಗ್‌ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಮುಂದೂಡಿದ ಸುಪ್ರೀಂ

ಇಡೀ ಜ್ಞಾನವಾಪಿ ಮಸೀದಿ ಸಂಕೀರ್ಣವನ್ನು ಸಮೀಕ್ಷೆ ಮಾಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಮುಸ್ಲಿಂ ಕಡೆಯವರು ಸೋಮವಾರ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದರು.

ಮುಸ್ಲಿಮರ ಪರ ವಾದ ಮಂಡಿಸಿದ್ದ ವಕೀಲ ಮೊಹಮ್ಮದ್ ತೊಹಿದ್ ಖಾನ್ ಅವರು, ಎಲ್ಲಾ ಏಳು ಪ್ರಕರಣಗಳ ವಿಚಾರಣೆಯನ್ನು ವಿರೋಧಿಸಿದರು. ”ಜ್ಞಾನವಾಪಿಗೆ ಸಂಬಂಧಿಸಿದ ವಿಷಯಗಳು ಇನ್ನೂ ಒಂದು ಹಂತಕ್ಕೆ ಬಂದಿಲ್ಲ, ಅವುಗಳನ್ನು ಒಟ್ಟಿಗೆ ಆಲಿಸುವ ನಿರ್ಧಾರ ಹಿಂತೆಗೆದುಕೊಳ್ಳಬೇಕು” ಎಂದು ಪ್ರತಿಪಾದಿಸಿದರು.

‘ಈಗಿನಂತೆ ಎಲ್ಲಾ ಪ್ರಕರಣಗಳ ಸಾಕ್ಷ್ಯವನ್ನು ನ್ಯಾಯಾಲಯವು ನೋಡಬೇಕಿತ್ತು. ಸಾಕ್ಷಿ ಒಂದೇ ಆಗಿದ್ದರೆ, ಅಂತಹ ತೀರ್ಪು ನೀಡಬಹುದು’ ಎಂದು ಖಾನ್ ಹೇಳಿದರು.

ಶೃಂಗಾರ್ ಗೌರಿ-ಜ್ಞಾನವಾಪಿ ಪ್ರಕರಣದ ದಾವೆದಾರರಾದ ಲಕ್ಷ್ಮಿ ದೇವಿ, ರೇಖಾ ಪಾಠಕ್, ಸೀತಾ ಸಾಹು ಮತ್ತು ಮಂಜು ವ್ಯಾಸ್ ಏಳು ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...