Homeಮುಖಪುಟಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

ಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

- Advertisement -
- Advertisement -

ಹೊಸ ರೈಲು ಸಂಖ್ಯೆ ಹಾಗೂ ಸಂಬಂಧಿತ ಇತರೆ ಮಾಹಿತಿಯ ಡೇಟಾವನ್ನು ನವೀಕರಣ ಮಾಡಲು ಭಾರತೀಯ ರೈಲ್ವೇಯು  ಮುಂದಾಗಿದೆ. ಹೀಗಾಗಿ, ಇಂದಿನಿಂದ (ಸೋಮವಾರ) ಏಳು ದಿನಗಳವರೆಗೆ ಪ್ರತಿದಿನ ಆರು ಗಂಟೆಗಳ ಕಾಲ ರೈಲ್ವೇ ಟಿಕೆಟ್‌ ಬುಕಿಂಗ್‌ ಮತ್ತು ರದ್ದತಿ ಸೇವೆ ಸ್ಥಗತಗೊಳ್ಳಲಿದೆ.

ಕೊರೊನಾ ಸೋಂಕು ಆಕ್ರಮಿಸಿದ್ದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೇವೆಗಳನ್ನು ಒದಗಿಸುವುದಕ್ಕಾಗಿ ರೈಲ್ವೇಯ ಹಲವು ರೀತಿಯ ಮಾರ್ಪಾಡುಗಳನ್ನು ಮಾಡಿತ್ತು. ಇದೀಗ ರೈಲ್ವೇ ಬುಕಿಂಗ್‌ ಮತ್ತು ರದ್ದತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಹಂತ ಹಂತವಾಗಿ ತರಲು ರೈಲ್ವೇ ಮುಂದಾಗಿದೆ. ಹೀಗಾಗಿ, ನವೆಂಬರ್‌ 1415 ಮಧ್ಯರಾತ್ರಿಯಿಂದ ನವೆಂಬರ್‌ 20-21 ರ ಮಧ್ಯರಾತ್ರಿಯವರೆಗೆ ಒಟ್ಟು ಏಳು ದಿನಗಳ ಕಾಲ ರಾತ್ರಿ 23:30 ಗಂಟೆಯಿಂದ ಮುಂಜಾನೆ 05:30 ಗಂಟೆವರೆಗೆ ಸೇವೆ ಸ್ಥಗಿತವಾಗಲಿದೆ.

ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ಈ ಸಂದರ್ಭದಲ್ಲಿ ಸಿಸ್ಟಮ್‌ ಡೇಟಾದ ನವೀಕರಣ ಮಾಡಲಾಗುತ್ತದೆ. ಹಾಗೆಯೇ ಹೊಸ ರೈಲು ಸಂಖ್ಯೆಗಳ ನವೀಕರಣ ಇತ್ಯಾದಿ ಅಪ್‌ಗ್ರೇಡ್‌ ಕಾರ್ಯವನ್ನು ಮಾಡಲಾಗುತ್ತದೆ. ಈ ವೇಳೆ, ಜನರು ರೈಲು ಟಿಕೆಟ್‌ಗಳನ್ನು ಬುಕ್‌ ಮಾಡಲು ಅಥವಾ ರದ್ದು ಮಾಡಲು ಸಾಧ್ಯವಾಗುವುದಿಲ್ಲ.

ಸಾಮಾನ್ಯವಾಗಿ ಜನರು ಯಾವ ಸಂದರ್ಭದಲ್ಲಿ ಹೆಚ್ಚಾಗಿ ರೈಲ್ವೇ ಬುಕಿಂಗ್ ಮತ್ತು ರದ್ದತಿಯ ಸೇವೆಯನ್ನು ಬಳಸುವುದಿಲ್ಲ ಎಂದು ಗಮನಿಸಿ, ಆ ಸಮಯದಲ್ಲಿ ಸೇವೆಯನ್ನು ಸ್ಥಗಿತ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಂಡು ಎಚ್ಚರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಜನರಿಗೆ ತೊಂದರೆ ಉಂಟಾಗದಂತೆ ರಾತ್ರಿ ಹೊತ್ತಿನಲ್ಲಿ ಸೇವೆ ಸ್ಥಗಿತ ಮಾಡಲಾಗಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದ್ದಾರೆ.

ರೈಲ್ವೆ ಸಿಬ್ಬಂದಿಗಳು ಈ ಅವಧಿಯಲ್ಲಿ ಹೊರಡುವ ರೈಲುಗಳ ಚಾರ್ಟ್‌ಅನ್ನು ಮೊದಲೇ ಸಿದ್ದಪಡಿಸುತ್ತಾರೆ. ಪಿಆರ್‌ಎಸ್‌ ಸೇವೆಗಳನ್ನು ಹೊರತುಪಡಿಸಿ, 139 ಸೇವೆಗಳು ಸೇರಿದಂತೆ ಎಲ್ಲಾ ಇತರ ವಿಚಾರಣೆ ಸೇವೆಗಳು ಅಡೆತಡೆಯಿಲ್ಲದೆ ಮುಂದುವರಿಯುತ್ತದೆ. ಪ್ರಯಾಣಿಕರ ಸೇವೆಗಳನ್ನು ಸಾಮಾನ್ಯಗೊಳಿಸಲು ಮತ್ತು ಮೇಲ್ದರ್ಜೆಗೇರಿಸುವ ಈ ಪ್ರಯತ್ನದಲ್ಲಿ ಸಚಿವಾಲಯಕ್ಕೆ ಜನರು ಬೆಂಬಲ ನೀಡಬೇಕು ಎಂದು ಸಚಿವಾಲಯ ವಿನಂತಿ ಮಾಡಿದೆ.

ಇದನ್ನೂ ಓದಿ: ವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡಿದ್ದರೆ ಓದಿ

ಕೊರೊನಾ ವೈರಸ್‌ ಸೋಂಕು ಸಂದರ್ಭದಲ್ಲಿ ಭಾರತೀಯ ರೈಲ್ವೆ ಆರಂಭಿಸಿದ್ದ ಕೆಲವು ವಿಶೇಷ ರೈಲುಗಳಲ್ಲಿ ಇನ್ನು ಮುಂದೆ ವಿಶೇಷ ಹಣೆಪಟ್ಟಿ ಇರುವುದಿಲ್ಲ. ರೈಲು ಪ್ರಯಾಣ ದರವು ಕೊರೊನಾ ವೈರಸ್‌ ಸೋಂಕಿಗೂ ಮುನ್ನವಿದ್ದಷ್ಟೇ ಇರಲಿದೆ ಎಂದು ಸಚಿವಾಲಯ ಹೇಳಿದೆ.

ವಿಶೇಷ ರೈಲಿನಲ್ಲಿ ಪ್ರಯಾಣಿಕರು ಸಾಮಾನ್ಯ ರೈಲುಗಳಿಗಿಂತ 30% ರಷ್ಟು ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತಿತ್ತು. ಈಗ ಈ ವಿಶೇಷ ಎಂಬ ಟ್ಯಾಗ್‌ ಅನ್ನು ತೆಗೆಯಲಾಗುತ್ತಿದ್ದು, ಪ್ರಯಾಣಿಕರ ಪ್ರಯಾಣ ದರವು ಕೊರೊನಾ ಸೋಂಕಿಗೂ ಮೊದಲಿದ್ದ ಸಾಮಾನ್ಯ ದರವೇ ಜಾರಿಗೆ ಬರಲಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...