Homeಮುಖಪುಟಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

ಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

- Advertisement -
- Advertisement -

ಹೊಸ ರೈಲು ಸಂಖ್ಯೆ ಹಾಗೂ ಸಂಬಂಧಿತ ಇತರೆ ಮಾಹಿತಿಯ ಡೇಟಾವನ್ನು ನವೀಕರಣ ಮಾಡಲು ಭಾರತೀಯ ರೈಲ್ವೇಯು  ಮುಂದಾಗಿದೆ. ಹೀಗಾಗಿ, ಇಂದಿನಿಂದ (ಸೋಮವಾರ) ಏಳು ದಿನಗಳವರೆಗೆ ಪ್ರತಿದಿನ ಆರು ಗಂಟೆಗಳ ಕಾಲ ರೈಲ್ವೇ ಟಿಕೆಟ್‌ ಬುಕಿಂಗ್‌ ಮತ್ತು ರದ್ದತಿ ಸೇವೆ ಸ್ಥಗತಗೊಳ್ಳಲಿದೆ.

ಕೊರೊನಾ ಸೋಂಕು ಆಕ್ರಮಿಸಿದ್ದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೇವೆಗಳನ್ನು ಒದಗಿಸುವುದಕ್ಕಾಗಿ ರೈಲ್ವೇಯ ಹಲವು ರೀತಿಯ ಮಾರ್ಪಾಡುಗಳನ್ನು ಮಾಡಿತ್ತು. ಇದೀಗ ರೈಲ್ವೇ ಬುಕಿಂಗ್‌ ಮತ್ತು ರದ್ದತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಹಂತ ಹಂತವಾಗಿ ತರಲು ರೈಲ್ವೇ ಮುಂದಾಗಿದೆ. ಹೀಗಾಗಿ, ನವೆಂಬರ್‌ 1415 ಮಧ್ಯರಾತ್ರಿಯಿಂದ ನವೆಂಬರ್‌ 20-21 ರ ಮಧ್ಯರಾತ್ರಿಯವರೆಗೆ ಒಟ್ಟು ಏಳು ದಿನಗಳ ಕಾಲ ರಾತ್ರಿ 23:30 ಗಂಟೆಯಿಂದ ಮುಂಜಾನೆ 05:30 ಗಂಟೆವರೆಗೆ ಸೇವೆ ಸ್ಥಗಿತವಾಗಲಿದೆ.

ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ಈ ಸಂದರ್ಭದಲ್ಲಿ ಸಿಸ್ಟಮ್‌ ಡೇಟಾದ ನವೀಕರಣ ಮಾಡಲಾಗುತ್ತದೆ. ಹಾಗೆಯೇ ಹೊಸ ರೈಲು ಸಂಖ್ಯೆಗಳ ನವೀಕರಣ ಇತ್ಯಾದಿ ಅಪ್‌ಗ್ರೇಡ್‌ ಕಾರ್ಯವನ್ನು ಮಾಡಲಾಗುತ್ತದೆ. ಈ ವೇಳೆ, ಜನರು ರೈಲು ಟಿಕೆಟ್‌ಗಳನ್ನು ಬುಕ್‌ ಮಾಡಲು ಅಥವಾ ರದ್ದು ಮಾಡಲು ಸಾಧ್ಯವಾಗುವುದಿಲ್ಲ.

ಸಾಮಾನ್ಯವಾಗಿ ಜನರು ಯಾವ ಸಂದರ್ಭದಲ್ಲಿ ಹೆಚ್ಚಾಗಿ ರೈಲ್ವೇ ಬುಕಿಂಗ್ ಮತ್ತು ರದ್ದತಿಯ ಸೇವೆಯನ್ನು ಬಳಸುವುದಿಲ್ಲ ಎಂದು ಗಮನಿಸಿ, ಆ ಸಮಯದಲ್ಲಿ ಸೇವೆಯನ್ನು ಸ್ಥಗಿತ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಂಡು ಎಚ್ಚರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಜನರಿಗೆ ತೊಂದರೆ ಉಂಟಾಗದಂತೆ ರಾತ್ರಿ ಹೊತ್ತಿನಲ್ಲಿ ಸೇವೆ ಸ್ಥಗಿತ ಮಾಡಲಾಗಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದ್ದಾರೆ.

ರೈಲ್ವೆ ಸಿಬ್ಬಂದಿಗಳು ಈ ಅವಧಿಯಲ್ಲಿ ಹೊರಡುವ ರೈಲುಗಳ ಚಾರ್ಟ್‌ಅನ್ನು ಮೊದಲೇ ಸಿದ್ದಪಡಿಸುತ್ತಾರೆ. ಪಿಆರ್‌ಎಸ್‌ ಸೇವೆಗಳನ್ನು ಹೊರತುಪಡಿಸಿ, 139 ಸೇವೆಗಳು ಸೇರಿದಂತೆ ಎಲ್ಲಾ ಇತರ ವಿಚಾರಣೆ ಸೇವೆಗಳು ಅಡೆತಡೆಯಿಲ್ಲದೆ ಮುಂದುವರಿಯುತ್ತದೆ. ಪ್ರಯಾಣಿಕರ ಸೇವೆಗಳನ್ನು ಸಾಮಾನ್ಯಗೊಳಿಸಲು ಮತ್ತು ಮೇಲ್ದರ್ಜೆಗೇರಿಸುವ ಈ ಪ್ರಯತ್ನದಲ್ಲಿ ಸಚಿವಾಲಯಕ್ಕೆ ಜನರು ಬೆಂಬಲ ನೀಡಬೇಕು ಎಂದು ಸಚಿವಾಲಯ ವಿನಂತಿ ಮಾಡಿದೆ.

ಇದನ್ನೂ ಓದಿ: ವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡಿದ್ದರೆ ಓದಿ

ಕೊರೊನಾ ವೈರಸ್‌ ಸೋಂಕು ಸಂದರ್ಭದಲ್ಲಿ ಭಾರತೀಯ ರೈಲ್ವೆ ಆರಂಭಿಸಿದ್ದ ಕೆಲವು ವಿಶೇಷ ರೈಲುಗಳಲ್ಲಿ ಇನ್ನು ಮುಂದೆ ವಿಶೇಷ ಹಣೆಪಟ್ಟಿ ಇರುವುದಿಲ್ಲ. ರೈಲು ಪ್ರಯಾಣ ದರವು ಕೊರೊನಾ ವೈರಸ್‌ ಸೋಂಕಿಗೂ ಮುನ್ನವಿದ್ದಷ್ಟೇ ಇರಲಿದೆ ಎಂದು ಸಚಿವಾಲಯ ಹೇಳಿದೆ.

ವಿಶೇಷ ರೈಲಿನಲ್ಲಿ ಪ್ರಯಾಣಿಕರು ಸಾಮಾನ್ಯ ರೈಲುಗಳಿಗಿಂತ 30% ರಷ್ಟು ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತಿತ್ತು. ಈಗ ಈ ವಿಶೇಷ ಎಂಬ ಟ್ಯಾಗ್‌ ಅನ್ನು ತೆಗೆಯಲಾಗುತ್ತಿದ್ದು, ಪ್ರಯಾಣಿಕರ ಪ್ರಯಾಣ ದರವು ಕೊರೊನಾ ಸೋಂಕಿಗೂ ಮೊದಲಿದ್ದ ಸಾಮಾನ್ಯ ದರವೇ ಜಾರಿಗೆ ಬರಲಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...