Homeಮುಖಪುಟಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

ಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

- Advertisement -
- Advertisement -

ಹೊಸ ರೈಲು ಸಂಖ್ಯೆ ಹಾಗೂ ಸಂಬಂಧಿತ ಇತರೆ ಮಾಹಿತಿಯ ಡೇಟಾವನ್ನು ನವೀಕರಣ ಮಾಡಲು ಭಾರತೀಯ ರೈಲ್ವೇಯು  ಮುಂದಾಗಿದೆ. ಹೀಗಾಗಿ, ಇಂದಿನಿಂದ (ಸೋಮವಾರ) ಏಳು ದಿನಗಳವರೆಗೆ ಪ್ರತಿದಿನ ಆರು ಗಂಟೆಗಳ ಕಾಲ ರೈಲ್ವೇ ಟಿಕೆಟ್‌ ಬುಕಿಂಗ್‌ ಮತ್ತು ರದ್ದತಿ ಸೇವೆ ಸ್ಥಗತಗೊಳ್ಳಲಿದೆ.

ಕೊರೊನಾ ಸೋಂಕು ಆಕ್ರಮಿಸಿದ್ದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೇವೆಗಳನ್ನು ಒದಗಿಸುವುದಕ್ಕಾಗಿ ರೈಲ್ವೇಯ ಹಲವು ರೀತಿಯ ಮಾರ್ಪಾಡುಗಳನ್ನು ಮಾಡಿತ್ತು. ಇದೀಗ ರೈಲ್ವೇ ಬುಕಿಂಗ್‌ ಮತ್ತು ರದ್ದತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಹಂತ ಹಂತವಾಗಿ ತರಲು ರೈಲ್ವೇ ಮುಂದಾಗಿದೆ. ಹೀಗಾಗಿ, ನವೆಂಬರ್‌ 1415 ಮಧ್ಯರಾತ್ರಿಯಿಂದ ನವೆಂಬರ್‌ 20-21 ರ ಮಧ್ಯರಾತ್ರಿಯವರೆಗೆ ಒಟ್ಟು ಏಳು ದಿನಗಳ ಕಾಲ ರಾತ್ರಿ 23:30 ಗಂಟೆಯಿಂದ ಮುಂಜಾನೆ 05:30 ಗಂಟೆವರೆಗೆ ಸೇವೆ ಸ್ಥಗಿತವಾಗಲಿದೆ.

ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ಈ ಸಂದರ್ಭದಲ್ಲಿ ಸಿಸ್ಟಮ್‌ ಡೇಟಾದ ನವೀಕರಣ ಮಾಡಲಾಗುತ್ತದೆ. ಹಾಗೆಯೇ ಹೊಸ ರೈಲು ಸಂಖ್ಯೆಗಳ ನವೀಕರಣ ಇತ್ಯಾದಿ ಅಪ್‌ಗ್ರೇಡ್‌ ಕಾರ್ಯವನ್ನು ಮಾಡಲಾಗುತ್ತದೆ. ಈ ವೇಳೆ, ಜನರು ರೈಲು ಟಿಕೆಟ್‌ಗಳನ್ನು ಬುಕ್‌ ಮಾಡಲು ಅಥವಾ ರದ್ದು ಮಾಡಲು ಸಾಧ್ಯವಾಗುವುದಿಲ್ಲ.

ಸಾಮಾನ್ಯವಾಗಿ ಜನರು ಯಾವ ಸಂದರ್ಭದಲ್ಲಿ ಹೆಚ್ಚಾಗಿ ರೈಲ್ವೇ ಬುಕಿಂಗ್ ಮತ್ತು ರದ್ದತಿಯ ಸೇವೆಯನ್ನು ಬಳಸುವುದಿಲ್ಲ ಎಂದು ಗಮನಿಸಿ, ಆ ಸಮಯದಲ್ಲಿ ಸೇವೆಯನ್ನು ಸ್ಥಗಿತ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಂಡು ಎಚ್ಚರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಜನರಿಗೆ ತೊಂದರೆ ಉಂಟಾಗದಂತೆ ರಾತ್ರಿ ಹೊತ್ತಿನಲ್ಲಿ ಸೇವೆ ಸ್ಥಗಿತ ಮಾಡಲಾಗಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದ್ದಾರೆ.

ರೈಲ್ವೆ ಸಿಬ್ಬಂದಿಗಳು ಈ ಅವಧಿಯಲ್ಲಿ ಹೊರಡುವ ರೈಲುಗಳ ಚಾರ್ಟ್‌ಅನ್ನು ಮೊದಲೇ ಸಿದ್ದಪಡಿಸುತ್ತಾರೆ. ಪಿಆರ್‌ಎಸ್‌ ಸೇವೆಗಳನ್ನು ಹೊರತುಪಡಿಸಿ, 139 ಸೇವೆಗಳು ಸೇರಿದಂತೆ ಎಲ್ಲಾ ಇತರ ವಿಚಾರಣೆ ಸೇವೆಗಳು ಅಡೆತಡೆಯಿಲ್ಲದೆ ಮುಂದುವರಿಯುತ್ತದೆ. ಪ್ರಯಾಣಿಕರ ಸೇವೆಗಳನ್ನು ಸಾಮಾನ್ಯಗೊಳಿಸಲು ಮತ್ತು ಮೇಲ್ದರ್ಜೆಗೇರಿಸುವ ಈ ಪ್ರಯತ್ನದಲ್ಲಿ ಸಚಿವಾಲಯಕ್ಕೆ ಜನರು ಬೆಂಬಲ ನೀಡಬೇಕು ಎಂದು ಸಚಿವಾಲಯ ವಿನಂತಿ ಮಾಡಿದೆ.

ಇದನ್ನೂ ಓದಿ: ವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡಿದ್ದರೆ ಓದಿ

ಕೊರೊನಾ ವೈರಸ್‌ ಸೋಂಕು ಸಂದರ್ಭದಲ್ಲಿ ಭಾರತೀಯ ರೈಲ್ವೆ ಆರಂಭಿಸಿದ್ದ ಕೆಲವು ವಿಶೇಷ ರೈಲುಗಳಲ್ಲಿ ಇನ್ನು ಮುಂದೆ ವಿಶೇಷ ಹಣೆಪಟ್ಟಿ ಇರುವುದಿಲ್ಲ. ರೈಲು ಪ್ರಯಾಣ ದರವು ಕೊರೊನಾ ವೈರಸ್‌ ಸೋಂಕಿಗೂ ಮುನ್ನವಿದ್ದಷ್ಟೇ ಇರಲಿದೆ ಎಂದು ಸಚಿವಾಲಯ ಹೇಳಿದೆ.

ವಿಶೇಷ ರೈಲಿನಲ್ಲಿ ಪ್ರಯಾಣಿಕರು ಸಾಮಾನ್ಯ ರೈಲುಗಳಿಗಿಂತ 30% ರಷ್ಟು ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತಿತ್ತು. ಈಗ ಈ ವಿಶೇಷ ಎಂಬ ಟ್ಯಾಗ್‌ ಅನ್ನು ತೆಗೆಯಲಾಗುತ್ತಿದ್ದು, ಪ್ರಯಾಣಿಕರ ಪ್ರಯಾಣ ದರವು ಕೊರೊನಾ ಸೋಂಕಿಗೂ ಮೊದಲಿದ್ದ ಸಾಮಾನ್ಯ ದರವೇ ಜಾರಿಗೆ ಬರಲಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...