Homeಮುಖಪುಟಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಮತ್ತೆ 7 ಲೈಂಗಿಕ ದೌರ್ಜನ್ಯದ ದೂರು

ಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಮತ್ತೆ 7 ಲೈಂಗಿಕ ದೌರ್ಜನ್ಯದ ದೂರು

- Advertisement -
- Advertisement -

ಚೆನ್ನೈನ ಪ್ರಸಿದ್ಧ ಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದಿವೆ. ಏಳಕ್ಕೂ ಹೆಚ್ಚು ಮಹಿಳಾ ಕ್ರೀಡಾಪಟುಗಳು ತಮ್ಮ ಮೇಲೆ ನಟರಾಜನ್‌ ಅವರು ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಎರಡು ತಿಂಗಳ ಹಿಂದೆ 19 ವರ್ಷದ ರಾಷ್ಟ್ರ ಮಟ್ಟದ ಕ್ರೀಡಾಪಟು ಒಬ್ಬರು ನಾಗರಾಜನ್ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.

ನಾಗರಾಜನ್ ವಿರುದ್ಧ ಆರೋಪ ಮಾಡಿರುವ ಕ್ರೀಡಾಪಟುಗಳೆಲ್ಲರು 30 ವರ್ಷ ಮೇಲ್ಪಟ್ಟವರಾಗಿದ್ದು ಅನೇಕ ವರ್ಷಗಳ ಕಾಲ ತಮ್ಮ ಕೋಚ್‌ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದರು. ವಿಷಯವನ್ನು ಬಹಿರಂಗಗೊಳಿಸಿದರೆ ತರಬೇತಿಯನ್ನು ನಿಲ್ಲಿಸುವುದಾಗಿ ಬೆದರಿಕೆ ಒಡ್ಡಿದ್ದರು ಎಂದು ಕ್ರೀಡಾಪಟುಗಳು ಆರೋಪಿಸಿದ್ದಾರೆ.

ಆರೋಪಿತ ಕೋಚ್‌  ನಾಗರಾಜನ್‌ ಹೆಚ್ಚಾಗಿ ಜ್ಯೂನಿಯರ್‌ ಲೆವೆಲ್‌ ಕ್ರೀಡಾಪಟುಗಳನ್ನು ತರಬೇತುಗೊಳಿಸುತ್ತಿದ್ದರು. ತಾವು ಅಪ್ರಾಪ್ತ ವಯಸ್ಕರಾಗಿದ್ದಾಗಲೇ ತಮ್ಮ ಮೇಲೆ ದೌರ್ಜನ್ಯ ನಡೆದಿದೆ ಎಂದು  ಮಹಿಳಾ ಕ್ರೀಡಾಪಟುಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

2013 ರಿಂದ 2020 ರ ವರೆಗೆ ನಟರಾಜನ್‌ 19 ವರ್ಷದ ಕ್ರೀಡಾಪಟು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಚೆನ್ನೈ ಡೆಪ್ಯುಟಿ ಕಮಿಷನರ್‌ ಎಸ್‌. ಮಹೇಶ್ವರನ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ನಾಗರಾಜನ್‌ ವಿರುದ್ಧ ಅದೇ ತರಹದ 7 ಪ್ರಕರಣಗಳು ದಾಖಲಾಗಿವೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

2013-2020 ರ ಅವಧಿಯಲ್ಲಿ 13 ವರ್ಷ ವಯಸ್ಸಿನವಳಾಗಿದ್ದಾಗಿನಿಂದ ಕೋಚ್‌ ತನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದರು. ದಿನದ ತರಬೇತಿ ಮುಗಿದ ನಂತರ ಇತರ ಸಹ ಕ್ರೀಡಾಪಟುಗಳನ್ನು ಕಳುಹಿಸಿ ನನ್ನನ್ನು ಚಿಕ್ಕ ಕೋಣೆಗೆ ಕರೆದುಕೊಂಡು ಹೋಗಿ ಫಿಸಿಯೋ ಥೆರಪಿ ಹೆಸರಿನಲ್ಲಿ ದೌರ್ಜನ್ಯವನ್ನು ಎಸಗುತ್ತಿದ್ದರು. ಅನೇಕ ಸಾರಿ ನಾನು ಇದರ ವಿರುದ್ಧ ಪ್ರತಿಭಟಿಸಿದಾಗ ಕ್ರೀಡಾಕೂಟಗಳಿಂದ ಹೊರಹಾಕುವುದು ಮತ್ತು ಸ್ಪರ್ಧೆಗೆ ಅವಕಾಶವನ್ನು ನಿರಾಕರಿಸುವ ಬೆದರಿಕೆ ಹಾಕಿದರು ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ಹೇಳಿದ್ದಾರೆ.

ಪೊಲೀಸರು ತನಿಖಾಧಿಕಾರಿಯ ದೂರವಾಣಿ ಸಂಖ್ಯೆ ಮತ್ತು ಇಮೇಲ್‌ ವಿಳಾಸವನ್ನು ಸಾರ್ವಜನಿಕಗೊಳಿಸಿದ ನಂತರ ನಾಗರಾಜನ್‌ ವಿರುದ್ಧ ಏಳು ದೂರುಗಳು ಬಂದಿವೆ. ೮ ನೇ ತರಗತಿಯಲ್ಲಿರುವಾಗ ಕೋಚ್‌ ಸರ್‌ ನನ್ನೊಂದಿಗೆ ಬೇರೆ ರೀತಿಯಲ್ಲಿ ನಡೆದುಕೊಳ್ಳಲು ಆರಂಭಿಸಿದರು. ಅದು ೭ ವರ್ಷಗಳ ಕಾಲ ನಡೆಯಿತು. ಈ ಘಟನೆಗಳಿಂದ ನನ್ನ ಮಾನಸಿಕ ಆರೋಗ್ಯ ಹದಗೆಟ್ಟಿತು. ಆತ್ಮಹತ್ಯೆಯ ಮನಸ್ಥಿತಿ ಬೆಳೆಯಲು ಕಾರಣವಾಗಿತ್ತು ಎಂದು ಮತ್ತೊಬ್ಬ ಕ್ರೀಡಾಪಟು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮೇ 28 ರಂದು ನಾಗರಾಜನ್‌ ವಿರುದ್ಧ ಮೊದಲ ದೂರು ದಾಖಲಾಗಿತ್ತು. ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಆರೋಪಿತ ಕೋಚ್ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಗರಾಜನ್‌ ವಿರುದ್ಧ ಐಪಿಸಿ ಮತ್ತು ಪೋಸ್ಕೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರತಿಯೊಂದು ದೂರು ಕೂಡ ಆರೋಪಿಯ ಕರಾಳ ಕೃತ್ಯಗಳನ್ನು ಬಹಿರಂಗಗೊಳಿಸಿದೆ ಎಂದು ಉಪ ಪೊಲೀಸ್ ಆಯುಕ್ತೆ ಹೆಚ್‌. ಜಯಲಕ್ಷ್ಮಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...