Homeಮುಖಪುಟಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಮತ್ತೆ 7 ಲೈಂಗಿಕ ದೌರ್ಜನ್ಯದ ದೂರು

ಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಮತ್ತೆ 7 ಲೈಂಗಿಕ ದೌರ್ಜನ್ಯದ ದೂರು

- Advertisement -
- Advertisement -

ಚೆನ್ನೈನ ಪ್ರಸಿದ್ಧ ಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದಿವೆ. ಏಳಕ್ಕೂ ಹೆಚ್ಚು ಮಹಿಳಾ ಕ್ರೀಡಾಪಟುಗಳು ತಮ್ಮ ಮೇಲೆ ನಟರಾಜನ್‌ ಅವರು ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಎರಡು ತಿಂಗಳ ಹಿಂದೆ 19 ವರ್ಷದ ರಾಷ್ಟ್ರ ಮಟ್ಟದ ಕ್ರೀಡಾಪಟು ಒಬ್ಬರು ನಾಗರಾಜನ್ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.

ನಾಗರಾಜನ್ ವಿರುದ್ಧ ಆರೋಪ ಮಾಡಿರುವ ಕ್ರೀಡಾಪಟುಗಳೆಲ್ಲರು 30 ವರ್ಷ ಮೇಲ್ಪಟ್ಟವರಾಗಿದ್ದು ಅನೇಕ ವರ್ಷಗಳ ಕಾಲ ತಮ್ಮ ಕೋಚ್‌ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದರು. ವಿಷಯವನ್ನು ಬಹಿರಂಗಗೊಳಿಸಿದರೆ ತರಬೇತಿಯನ್ನು ನಿಲ್ಲಿಸುವುದಾಗಿ ಬೆದರಿಕೆ ಒಡ್ಡಿದ್ದರು ಎಂದು ಕ್ರೀಡಾಪಟುಗಳು ಆರೋಪಿಸಿದ್ದಾರೆ.

ಆರೋಪಿತ ಕೋಚ್‌  ನಾಗರಾಜನ್‌ ಹೆಚ್ಚಾಗಿ ಜ್ಯೂನಿಯರ್‌ ಲೆವೆಲ್‌ ಕ್ರೀಡಾಪಟುಗಳನ್ನು ತರಬೇತುಗೊಳಿಸುತ್ತಿದ್ದರು. ತಾವು ಅಪ್ರಾಪ್ತ ವಯಸ್ಕರಾಗಿದ್ದಾಗಲೇ ತಮ್ಮ ಮೇಲೆ ದೌರ್ಜನ್ಯ ನಡೆದಿದೆ ಎಂದು  ಮಹಿಳಾ ಕ್ರೀಡಾಪಟುಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

2013 ರಿಂದ 2020 ರ ವರೆಗೆ ನಟರಾಜನ್‌ 19 ವರ್ಷದ ಕ್ರೀಡಾಪಟು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಚೆನ್ನೈ ಡೆಪ್ಯುಟಿ ಕಮಿಷನರ್‌ ಎಸ್‌. ಮಹೇಶ್ವರನ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ನಾಗರಾಜನ್‌ ವಿರುದ್ಧ ಅದೇ ತರಹದ 7 ಪ್ರಕರಣಗಳು ದಾಖಲಾಗಿವೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

2013-2020 ರ ಅವಧಿಯಲ್ಲಿ 13 ವರ್ಷ ವಯಸ್ಸಿನವಳಾಗಿದ್ದಾಗಿನಿಂದ ಕೋಚ್‌ ತನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದರು. ದಿನದ ತರಬೇತಿ ಮುಗಿದ ನಂತರ ಇತರ ಸಹ ಕ್ರೀಡಾಪಟುಗಳನ್ನು ಕಳುಹಿಸಿ ನನ್ನನ್ನು ಚಿಕ್ಕ ಕೋಣೆಗೆ ಕರೆದುಕೊಂಡು ಹೋಗಿ ಫಿಸಿಯೋ ಥೆರಪಿ ಹೆಸರಿನಲ್ಲಿ ದೌರ್ಜನ್ಯವನ್ನು ಎಸಗುತ್ತಿದ್ದರು. ಅನೇಕ ಸಾರಿ ನಾನು ಇದರ ವಿರುದ್ಧ ಪ್ರತಿಭಟಿಸಿದಾಗ ಕ್ರೀಡಾಕೂಟಗಳಿಂದ ಹೊರಹಾಕುವುದು ಮತ್ತು ಸ್ಪರ್ಧೆಗೆ ಅವಕಾಶವನ್ನು ನಿರಾಕರಿಸುವ ಬೆದರಿಕೆ ಹಾಕಿದರು ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ಹೇಳಿದ್ದಾರೆ.

ಪೊಲೀಸರು ತನಿಖಾಧಿಕಾರಿಯ ದೂರವಾಣಿ ಸಂಖ್ಯೆ ಮತ್ತು ಇಮೇಲ್‌ ವಿಳಾಸವನ್ನು ಸಾರ್ವಜನಿಕಗೊಳಿಸಿದ ನಂತರ ನಾಗರಾಜನ್‌ ವಿರುದ್ಧ ಏಳು ದೂರುಗಳು ಬಂದಿವೆ. ೮ ನೇ ತರಗತಿಯಲ್ಲಿರುವಾಗ ಕೋಚ್‌ ಸರ್‌ ನನ್ನೊಂದಿಗೆ ಬೇರೆ ರೀತಿಯಲ್ಲಿ ನಡೆದುಕೊಳ್ಳಲು ಆರಂಭಿಸಿದರು. ಅದು ೭ ವರ್ಷಗಳ ಕಾಲ ನಡೆಯಿತು. ಈ ಘಟನೆಗಳಿಂದ ನನ್ನ ಮಾನಸಿಕ ಆರೋಗ್ಯ ಹದಗೆಟ್ಟಿತು. ಆತ್ಮಹತ್ಯೆಯ ಮನಸ್ಥಿತಿ ಬೆಳೆಯಲು ಕಾರಣವಾಗಿತ್ತು ಎಂದು ಮತ್ತೊಬ್ಬ ಕ್ರೀಡಾಪಟು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮೇ 28 ರಂದು ನಾಗರಾಜನ್‌ ವಿರುದ್ಧ ಮೊದಲ ದೂರು ದಾಖಲಾಗಿತ್ತು. ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಆರೋಪಿತ ಕೋಚ್ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಗರಾಜನ್‌ ವಿರುದ್ಧ ಐಪಿಸಿ ಮತ್ತು ಪೋಸ್ಕೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರತಿಯೊಂದು ದೂರು ಕೂಡ ಆರೋಪಿಯ ಕರಾಳ ಕೃತ್ಯಗಳನ್ನು ಬಹಿರಂಗಗೊಳಿಸಿದೆ ಎಂದು ಉಪ ಪೊಲೀಸ್ ಆಯುಕ್ತೆ ಹೆಚ್‌. ಜಯಲಕ್ಷ್ಮಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...