Homeಮುಖಪುಟಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

ಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

- Advertisement -
- Advertisement -

ಮೋದಿ ಸರ್ಕಾರಕ್ಕೆ ಏಳು ವರ್ಷವೋ, ಬಿಜೆಪಿ ಸರ್ಕಾರಕ್ಕೋ ಇಲ್ಲ ಎನ್‌ಡಿಎ ಸರ್ಕಾರಕ್ಕೋ? ಅಥವಾ ಸಂಘ ಪರಿವಾರದ ಹಿಡನ್ ಅಜೆಂಡಾ ಸ್ವತಂತ್ರ ಭಾರತದಲ್ಲಿ ಗರಿಷ್ಠ ಮಟ್ಟದಲ್ಲಿ ಕಾರ್ಯರೂಪಕ್ಕೆ ಇಳಿದ ಏಳು ವರ್ಷಗಳು ಎನ್ನುವುದೋ ಅಥವಾ ಅತಿ ವೇಗದಲ್ಲಿ ಬಂಡವಾಳಶಾಹಿಗಳ ಸಂಪತ್ತು ವೃದ್ಧಿ ಮತ್ತು ಅಷ್ಟೇ ಹಿಮ್ಮುಖ ವೇಗದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಎಂದು ಈ ಏಳು ವರ್ಷಗಳ ಅವಧಿಯನ್ನು ನೋಡುವುದೋ?

ಮೇಲಿನ ಎಲ್ಲದರ ಒಂದು ಕಲಸುಮೋಲೊಗರದ ಚಿತ್ರಣವೇ ನಿಜವಾದ ಸ್ಥಿತಿ. ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ತಂಡ ಬೆಂಗಳೂರಿನಲ್ಲಿ ಮಧ್ಯಪ್ರದೇಶದ ಆದಿವಾಸಿ ಗುಂಪೊಂದಕ್ಕೆ ನೆರವು ನೀಡುವ ಸಂದರ್ಭದಲ್ಲಿ, ಆ ಗುಂಪಿನ ಹಿರಿಯ ಸದಸ್ಯರೊಬ್ಬರು, ‘ಮೋದಿ ಇರುವವರೆಗೂ ಕೊರೋನಾ ಇರುತ್ತೆ’ ಎಂದು ಹೇಳಿದ್ದನ್ನು ಈ ಏಳು ವರ್ಷಗಳ ಆಡಳಿತದ ಪ್ರಬುದ್ಧ ವಿಮರ್ಶೆ ಎನ್ನಬಹುದು.

ಬ್ಯಾಂಕುಗಳ ಮುಂದೆ ತಮ್ಮದೇ ಹಣಕ್ಕಾಗಿ ನಿಂತ ಸರದಿ ಸಾಲುಗಳು ಈಗ ಆಸ್ಪತ್ರೆ ಮತ್ತು ಸ್ಮಶಾನಗಳ ಎದುರು ಕಾಣಿಸುತ್ತಿವೆ. ಇವೆರಡರ ನಡುವೆ ಕೆಲವೇ ಕೆಲವು ಅತಿ ಶ್ರೀಮಂತರು ಅಪರಿಮಿತ ಸಂಪತ್ತನ್ನು ಗುಡ್ಡ ಹಾಕಿದ್ದಾರೆ. ಬಿಜೆಪಿಯ ಪಾರ್ಟಿ ಫಂಡ್ ಕೂಡ ಭರ್ಜರಿ ಕಲೆಕ್ಷನ್ ಕಂಡಿದೆ, ಬಡವರು ಕಡು ಬಡವರಾಗಿದ್ದಾರೆ ಮತ್ತು ಮುಖ್ಯವಾಗಿ ಬಿಜೆಪಿ ಬೆಂಬಲಿಸುವ ವರ್ಗ ಎನ್ನಲಾದ ಮಧ್ಯಮವರ್ಗ ಈಗ ಸಂಕಷ್ಟಕ್ಕೆ ಸಿಲುಕುತ್ತಿದೆ.

ಎರಡು ವರ್ಷಗಳ ಹಿಂದೆ, 2019 ರ ಮೇ 30 ರಂದು ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಐದು ವರ್ಷಗಳ ಮೊದಲು, ಅವರು 2014 ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದ್ದು, ಆರ್ಥಿಕ ಸಮೃದ್ಧಿ, ಸಾಮಾಜಿಕ ಐಕ್ಯತೆ ಮತ್ತು ಸಮಗ್ರ ಅಭಿವೃದ್ಧಿಯ ಭರವಸೆ ನೀಡಿದ್ದರು. ಅವರ ಘೋಷಣೆಗಳು – “ಅಚ್ಚೆ ದಿನ್. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಒಂದು ಕೋಟಿ ಉದ್ಯೋಗಗಳು, ಕಪ್ಪುಹಣ ವಾಪಸ್‌ ತರುವುದು ಮತ್ತು ಎಲ್ಲರ ಅಕೌಂಟಿಗೆ 15 ಲಕ್ಷ ಹಣ ಇತ್ಯಾದಿ.

ಆದರೆ ಈಗ ಇವೆಲ್ಲವೂ ಜುಮ್ಲಾ ಎಂದು ದೃಢಪಟ್ಟಿದೆ. ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳ ನೆರವಿನಿಂದ ಅಸ್ತಿತ್ವದಲ್ಲಿಯೇ ಇಲ್ಲದ ಗುಜರಾತ್ ಮಾಡೆಲ್ ಎಂಬ ಮರಿಚೀಕೆಯನ್ನು ಬಿತ್ತಿ ಯುವಜನತೆ ಮತ್ತು ಮಧ್ಯಮವರ್ಗವನ್ನು ದಾರಿ ತಪ್ಪಿಸುತ್ತ ಬರಲಾಗಿತು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಈಗ ಬಹುತೇಕ ಜನರು ಭ್ರಮನಿರಸನ ಹೊಂದಿದ್ದಾರೆ ಮತ್ತು ಸಿನಿಕರಾಗಿದ್ದಾರೆ. ಆದರೂ ಈ ಏಳು ವರ್ಷಗಳಲ್ಲಿ ಸೃಷ್ಟಿಯಾದ ಭಕ್ತಗಣ ಎಂಬ ವಿಕ್ಷಿಪ್ತ ಪ್ರಭೇಧವೊಂದು ಅಂಧಾನುಕರಣೆಯಲ್ಲಿ ತೊಡಗಿದೆ. ಈ ಪ್ರಭೇದಕ್ಕೆ ಬೆಂಬಲವಾಗಿ ವಿಷಯವಸ್ತು ಒದಗಿಸಲು ಗೋದಿ ಮೀಡಿಯಾ ಎಂಬ ವಿಕೃತ ಪ್ರಭೇಧವೊಂದೂ ಜನ್ಮ ತಾಳಿದೆ. ಲೋಕಸಭೆಯಲ್ಲಿ ಆರಾಮದಾಯಕ ಬಹುಮತದ ಬೆಂಬಲವಿದೆ ಮತ್ತು ಹಲವಾರು ರಾಜ್ಯ ಸರ್ಕಾರಗಳು ಬಿಜೆಪಿಯ ನಿಯಂತ್ರಣದಲ್ಲಿವೆ. (ಇತ್ತೀಚಿನ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಮೋದಿ-ಶಾಗಳ ಗರ್ವಭಂಗ ಮಾಡಿದೆ).

ಮೊದಲ ಬಾರಿಗೆ, 2014ರಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸುಮಾರು ಶೇ. 38 ಮತಗಳನ್ನು ಪಡೆದಿವೆ, ಅದು 2019ರಲ್ಲಿ ಸುಮಾರು ಶೇ. 43ಕ್ಕೆ ಏರಿದೆ. ಮತ ಚಲಾಯಿಸಿದವರಲ್ಲಿ ಹೆಚ್ಚಿನವರು ಇನ್ನೂ ಬಿಜೆಪಿಯನ್ನು ವಿರೋಧಿಸಿದ್ದಾರೆ ಎಂದು ಇದು ತೋರಿಸಿದರೂ, ಪ್ರಜಾಪ್ರಭುತ್ವದ ನಿಯಮಗಳ ಪ್ರಕಾರ ಬಿಜೆಪಿಯೇ ವಿಜಯಶಾಲಿ ಹೌದು.

ಮೋದಿಯ ಆಡಳಿತದ ಎರಡು ನಿರ್ಣಾಯಕ ಲಕ್ಷಣಗಳು ಒಂದು ನವ-ಉದಾರವಾದಿ ಸಿದ್ಧಾಂತ. ಇದು ಅಂಬಾನಿ-ಅದಾನಿ ತರಹದವರಿಗೆ ಎಲ್ಲ ನೆರವು ನೀಡುವ ಪಾಲಿಸಿ. ಎರಡನೆಯದು ಭಾರತವು ಹಿಂದೂ ರಾಷ್ಟ್ರ ಅಥವಾ ಕೇವಲ ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆ. ಈ ಎರಡೂ ಸಿದ್ದಾಂತಗಳು ಕೈ ಜೋಡಿಸಿವೆ. ಹೀಗಾಗಿ ಇಲ್ಲಿ ಅಕ್ರಮ ಸಂಪತ್ತು ಮತ್ತು ಜನವಿರೋಧಿ ರಾಷ್ಟ್ರವಾದದ ನಡುವೆ ಸಹಜವಾಗಿಯೇ ಹೊಂದಾಣಿಕೆಯಾಗಿದೆ. ಈ ಏಳು ವರ್ಷಗಳಲ್ಲಿ ಈ ಎರಡರ ನಡುವಿನ ಪ್ರೀತಿ-ಪ್ರೇಮ, ಕೊಡುಕೊಳ್ಳುವಿಕೆ ತುಂಬ ಆಪ್ತವಾಗಿದೆ. ಇವತ್ತು ದೇಶದ ಎದುರು ಈ ಮೈತ್ರಿಯೇ ದುಸ್ವಪ್ನವಾಗಿದೆ. ಮೋದಿ ಎಂಬ ಕೃತಕ ಸೃಷ್ಟಿತ ಇಮೇಜ್ ಅನ್ನು ಬಳಸಿಕೊಂಡು ಈ ಶಕ್ತಿಗಳು ತಮ್ಮ ತಮ್ಮ ಹಿಡೆನ್ ಅಜೆಂಡಾ ಜಾರಿ ಮಾಡುತ್ತಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....