Homeಮುಖಪುಟಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

ಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

- Advertisement -
- Advertisement -

ಮೋದಿ ಸರ್ಕಾರಕ್ಕೆ ಏಳು ವರ್ಷವೋ, ಬಿಜೆಪಿ ಸರ್ಕಾರಕ್ಕೋ ಇಲ್ಲ ಎನ್‌ಡಿಎ ಸರ್ಕಾರಕ್ಕೋ? ಅಥವಾ ಸಂಘ ಪರಿವಾರದ ಹಿಡನ್ ಅಜೆಂಡಾ ಸ್ವತಂತ್ರ ಭಾರತದಲ್ಲಿ ಗರಿಷ್ಠ ಮಟ್ಟದಲ್ಲಿ ಕಾರ್ಯರೂಪಕ್ಕೆ ಇಳಿದ ಏಳು ವರ್ಷಗಳು ಎನ್ನುವುದೋ ಅಥವಾ ಅತಿ ವೇಗದಲ್ಲಿ ಬಂಡವಾಳಶಾಹಿಗಳ ಸಂಪತ್ತು ವೃದ್ಧಿ ಮತ್ತು ಅಷ್ಟೇ ಹಿಮ್ಮುಖ ವೇಗದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಎಂದು ಈ ಏಳು ವರ್ಷಗಳ ಅವಧಿಯನ್ನು ನೋಡುವುದೋ?

ಮೇಲಿನ ಎಲ್ಲದರ ಒಂದು ಕಲಸುಮೋಲೊಗರದ ಚಿತ್ರಣವೇ ನಿಜವಾದ ಸ್ಥಿತಿ. ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ತಂಡ ಬೆಂಗಳೂರಿನಲ್ಲಿ ಮಧ್ಯಪ್ರದೇಶದ ಆದಿವಾಸಿ ಗುಂಪೊಂದಕ್ಕೆ ನೆರವು ನೀಡುವ ಸಂದರ್ಭದಲ್ಲಿ, ಆ ಗುಂಪಿನ ಹಿರಿಯ ಸದಸ್ಯರೊಬ್ಬರು, ‘ಮೋದಿ ಇರುವವರೆಗೂ ಕೊರೋನಾ ಇರುತ್ತೆ’ ಎಂದು ಹೇಳಿದ್ದನ್ನು ಈ ಏಳು ವರ್ಷಗಳ ಆಡಳಿತದ ಪ್ರಬುದ್ಧ ವಿಮರ್ಶೆ ಎನ್ನಬಹುದು.

ಬ್ಯಾಂಕುಗಳ ಮುಂದೆ ತಮ್ಮದೇ ಹಣಕ್ಕಾಗಿ ನಿಂತ ಸರದಿ ಸಾಲುಗಳು ಈಗ ಆಸ್ಪತ್ರೆ ಮತ್ತು ಸ್ಮಶಾನಗಳ ಎದುರು ಕಾಣಿಸುತ್ತಿವೆ. ಇವೆರಡರ ನಡುವೆ ಕೆಲವೇ ಕೆಲವು ಅತಿ ಶ್ರೀಮಂತರು ಅಪರಿಮಿತ ಸಂಪತ್ತನ್ನು ಗುಡ್ಡ ಹಾಕಿದ್ದಾರೆ. ಬಿಜೆಪಿಯ ಪಾರ್ಟಿ ಫಂಡ್ ಕೂಡ ಭರ್ಜರಿ ಕಲೆಕ್ಷನ್ ಕಂಡಿದೆ, ಬಡವರು ಕಡು ಬಡವರಾಗಿದ್ದಾರೆ ಮತ್ತು ಮುಖ್ಯವಾಗಿ ಬಿಜೆಪಿ ಬೆಂಬಲಿಸುವ ವರ್ಗ ಎನ್ನಲಾದ ಮಧ್ಯಮವರ್ಗ ಈಗ ಸಂಕಷ್ಟಕ್ಕೆ ಸಿಲುಕುತ್ತಿದೆ.

ಎರಡು ವರ್ಷಗಳ ಹಿಂದೆ, 2019 ರ ಮೇ 30 ರಂದು ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಐದು ವರ್ಷಗಳ ಮೊದಲು, ಅವರು 2014 ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದ್ದು, ಆರ್ಥಿಕ ಸಮೃದ್ಧಿ, ಸಾಮಾಜಿಕ ಐಕ್ಯತೆ ಮತ್ತು ಸಮಗ್ರ ಅಭಿವೃದ್ಧಿಯ ಭರವಸೆ ನೀಡಿದ್ದರು. ಅವರ ಘೋಷಣೆಗಳು – “ಅಚ್ಚೆ ದಿನ್. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಒಂದು ಕೋಟಿ ಉದ್ಯೋಗಗಳು, ಕಪ್ಪುಹಣ ವಾಪಸ್‌ ತರುವುದು ಮತ್ತು ಎಲ್ಲರ ಅಕೌಂಟಿಗೆ 15 ಲಕ್ಷ ಹಣ ಇತ್ಯಾದಿ.

ಆದರೆ ಈಗ ಇವೆಲ್ಲವೂ ಜುಮ್ಲಾ ಎಂದು ದೃಢಪಟ್ಟಿದೆ. ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳ ನೆರವಿನಿಂದ ಅಸ್ತಿತ್ವದಲ್ಲಿಯೇ ಇಲ್ಲದ ಗುಜರಾತ್ ಮಾಡೆಲ್ ಎಂಬ ಮರಿಚೀಕೆಯನ್ನು ಬಿತ್ತಿ ಯುವಜನತೆ ಮತ್ತು ಮಧ್ಯಮವರ್ಗವನ್ನು ದಾರಿ ತಪ್ಪಿಸುತ್ತ ಬರಲಾಗಿತು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಈಗ ಬಹುತೇಕ ಜನರು ಭ್ರಮನಿರಸನ ಹೊಂದಿದ್ದಾರೆ ಮತ್ತು ಸಿನಿಕರಾಗಿದ್ದಾರೆ. ಆದರೂ ಈ ಏಳು ವರ್ಷಗಳಲ್ಲಿ ಸೃಷ್ಟಿಯಾದ ಭಕ್ತಗಣ ಎಂಬ ವಿಕ್ಷಿಪ್ತ ಪ್ರಭೇಧವೊಂದು ಅಂಧಾನುಕರಣೆಯಲ್ಲಿ ತೊಡಗಿದೆ. ಈ ಪ್ರಭೇದಕ್ಕೆ ಬೆಂಬಲವಾಗಿ ವಿಷಯವಸ್ತು ಒದಗಿಸಲು ಗೋದಿ ಮೀಡಿಯಾ ಎಂಬ ವಿಕೃತ ಪ್ರಭೇಧವೊಂದೂ ಜನ್ಮ ತಾಳಿದೆ. ಲೋಕಸಭೆಯಲ್ಲಿ ಆರಾಮದಾಯಕ ಬಹುಮತದ ಬೆಂಬಲವಿದೆ ಮತ್ತು ಹಲವಾರು ರಾಜ್ಯ ಸರ್ಕಾರಗಳು ಬಿಜೆಪಿಯ ನಿಯಂತ್ರಣದಲ್ಲಿವೆ. (ಇತ್ತೀಚಿನ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಮೋದಿ-ಶಾಗಳ ಗರ್ವಭಂಗ ಮಾಡಿದೆ).

ಮೊದಲ ಬಾರಿಗೆ, 2014ರಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸುಮಾರು ಶೇ. 38 ಮತಗಳನ್ನು ಪಡೆದಿವೆ, ಅದು 2019ರಲ್ಲಿ ಸುಮಾರು ಶೇ. 43ಕ್ಕೆ ಏರಿದೆ. ಮತ ಚಲಾಯಿಸಿದವರಲ್ಲಿ ಹೆಚ್ಚಿನವರು ಇನ್ನೂ ಬಿಜೆಪಿಯನ್ನು ವಿರೋಧಿಸಿದ್ದಾರೆ ಎಂದು ಇದು ತೋರಿಸಿದರೂ, ಪ್ರಜಾಪ್ರಭುತ್ವದ ನಿಯಮಗಳ ಪ್ರಕಾರ ಬಿಜೆಪಿಯೇ ವಿಜಯಶಾಲಿ ಹೌದು.

ಮೋದಿಯ ಆಡಳಿತದ ಎರಡು ನಿರ್ಣಾಯಕ ಲಕ್ಷಣಗಳು ಒಂದು ನವ-ಉದಾರವಾದಿ ಸಿದ್ಧಾಂತ. ಇದು ಅಂಬಾನಿ-ಅದಾನಿ ತರಹದವರಿಗೆ ಎಲ್ಲ ನೆರವು ನೀಡುವ ಪಾಲಿಸಿ. ಎರಡನೆಯದು ಭಾರತವು ಹಿಂದೂ ರಾಷ್ಟ್ರ ಅಥವಾ ಕೇವಲ ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆ. ಈ ಎರಡೂ ಸಿದ್ದಾಂತಗಳು ಕೈ ಜೋಡಿಸಿವೆ. ಹೀಗಾಗಿ ಇಲ್ಲಿ ಅಕ್ರಮ ಸಂಪತ್ತು ಮತ್ತು ಜನವಿರೋಧಿ ರಾಷ್ಟ್ರವಾದದ ನಡುವೆ ಸಹಜವಾಗಿಯೇ ಹೊಂದಾಣಿಕೆಯಾಗಿದೆ. ಈ ಏಳು ವರ್ಷಗಳಲ್ಲಿ ಈ ಎರಡರ ನಡುವಿನ ಪ್ರೀತಿ-ಪ್ರೇಮ, ಕೊಡುಕೊಳ್ಳುವಿಕೆ ತುಂಬ ಆಪ್ತವಾಗಿದೆ. ಇವತ್ತು ದೇಶದ ಎದುರು ಈ ಮೈತ್ರಿಯೇ ದುಸ್ವಪ್ನವಾಗಿದೆ. ಮೋದಿ ಎಂಬ ಕೃತಕ ಸೃಷ್ಟಿತ ಇಮೇಜ್ ಅನ್ನು ಬಳಸಿಕೊಂಡು ಈ ಶಕ್ತಿಗಳು ತಮ್ಮ ತಮ್ಮ ಹಿಡೆನ್ ಅಜೆಂಡಾ ಜಾರಿ ಮಾಡುತ್ತಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...