Homeಮುಖಪುಟಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

ಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

- Advertisement -
- Advertisement -

ಮೋದಿ ಸರ್ಕಾರಕ್ಕೆ ಏಳು ವರ್ಷವೋ, ಬಿಜೆಪಿ ಸರ್ಕಾರಕ್ಕೋ ಇಲ್ಲ ಎನ್‌ಡಿಎ ಸರ್ಕಾರಕ್ಕೋ? ಅಥವಾ ಸಂಘ ಪರಿವಾರದ ಹಿಡನ್ ಅಜೆಂಡಾ ಸ್ವತಂತ್ರ ಭಾರತದಲ್ಲಿ ಗರಿಷ್ಠ ಮಟ್ಟದಲ್ಲಿ ಕಾರ್ಯರೂಪಕ್ಕೆ ಇಳಿದ ಏಳು ವರ್ಷಗಳು ಎನ್ನುವುದೋ ಅಥವಾ ಅತಿ ವೇಗದಲ್ಲಿ ಬಂಡವಾಳಶಾಹಿಗಳ ಸಂಪತ್ತು ವೃದ್ಧಿ ಮತ್ತು ಅಷ್ಟೇ ಹಿಮ್ಮುಖ ವೇಗದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಎಂದು ಈ ಏಳು ವರ್ಷಗಳ ಅವಧಿಯನ್ನು ನೋಡುವುದೋ?

ಮೇಲಿನ ಎಲ್ಲದರ ಒಂದು ಕಲಸುಮೋಲೊಗರದ ಚಿತ್ರಣವೇ ನಿಜವಾದ ಸ್ಥಿತಿ. ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ತಂಡ ಬೆಂಗಳೂರಿನಲ್ಲಿ ಮಧ್ಯಪ್ರದೇಶದ ಆದಿವಾಸಿ ಗುಂಪೊಂದಕ್ಕೆ ನೆರವು ನೀಡುವ ಸಂದರ್ಭದಲ್ಲಿ, ಆ ಗುಂಪಿನ ಹಿರಿಯ ಸದಸ್ಯರೊಬ್ಬರು, ‘ಮೋದಿ ಇರುವವರೆಗೂ ಕೊರೋನಾ ಇರುತ್ತೆ’ ಎಂದು ಹೇಳಿದ್ದನ್ನು ಈ ಏಳು ವರ್ಷಗಳ ಆಡಳಿತದ ಪ್ರಬುದ್ಧ ವಿಮರ್ಶೆ ಎನ್ನಬಹುದು.

ಬ್ಯಾಂಕುಗಳ ಮುಂದೆ ತಮ್ಮದೇ ಹಣಕ್ಕಾಗಿ ನಿಂತ ಸರದಿ ಸಾಲುಗಳು ಈಗ ಆಸ್ಪತ್ರೆ ಮತ್ತು ಸ್ಮಶಾನಗಳ ಎದುರು ಕಾಣಿಸುತ್ತಿವೆ. ಇವೆರಡರ ನಡುವೆ ಕೆಲವೇ ಕೆಲವು ಅತಿ ಶ್ರೀಮಂತರು ಅಪರಿಮಿತ ಸಂಪತ್ತನ್ನು ಗುಡ್ಡ ಹಾಕಿದ್ದಾರೆ. ಬಿಜೆಪಿಯ ಪಾರ್ಟಿ ಫಂಡ್ ಕೂಡ ಭರ್ಜರಿ ಕಲೆಕ್ಷನ್ ಕಂಡಿದೆ, ಬಡವರು ಕಡು ಬಡವರಾಗಿದ್ದಾರೆ ಮತ್ತು ಮುಖ್ಯವಾಗಿ ಬಿಜೆಪಿ ಬೆಂಬಲಿಸುವ ವರ್ಗ ಎನ್ನಲಾದ ಮಧ್ಯಮವರ್ಗ ಈಗ ಸಂಕಷ್ಟಕ್ಕೆ ಸಿಲುಕುತ್ತಿದೆ.

ಎರಡು ವರ್ಷಗಳ ಹಿಂದೆ, 2019 ರ ಮೇ 30 ರಂದು ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಐದು ವರ್ಷಗಳ ಮೊದಲು, ಅವರು 2014 ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದ್ದು, ಆರ್ಥಿಕ ಸಮೃದ್ಧಿ, ಸಾಮಾಜಿಕ ಐಕ್ಯತೆ ಮತ್ತು ಸಮಗ್ರ ಅಭಿವೃದ್ಧಿಯ ಭರವಸೆ ನೀಡಿದ್ದರು. ಅವರ ಘೋಷಣೆಗಳು – “ಅಚ್ಚೆ ದಿನ್. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಒಂದು ಕೋಟಿ ಉದ್ಯೋಗಗಳು, ಕಪ್ಪುಹಣ ವಾಪಸ್‌ ತರುವುದು ಮತ್ತು ಎಲ್ಲರ ಅಕೌಂಟಿಗೆ 15 ಲಕ್ಷ ಹಣ ಇತ್ಯಾದಿ.

ಆದರೆ ಈಗ ಇವೆಲ್ಲವೂ ಜುಮ್ಲಾ ಎಂದು ದೃಢಪಟ್ಟಿದೆ. ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳ ನೆರವಿನಿಂದ ಅಸ್ತಿತ್ವದಲ್ಲಿಯೇ ಇಲ್ಲದ ಗುಜರಾತ್ ಮಾಡೆಲ್ ಎಂಬ ಮರಿಚೀಕೆಯನ್ನು ಬಿತ್ತಿ ಯುವಜನತೆ ಮತ್ತು ಮಧ್ಯಮವರ್ಗವನ್ನು ದಾರಿ ತಪ್ಪಿಸುತ್ತ ಬರಲಾಗಿತು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಈಗ ಬಹುತೇಕ ಜನರು ಭ್ರಮನಿರಸನ ಹೊಂದಿದ್ದಾರೆ ಮತ್ತು ಸಿನಿಕರಾಗಿದ್ದಾರೆ. ಆದರೂ ಈ ಏಳು ವರ್ಷಗಳಲ್ಲಿ ಸೃಷ್ಟಿಯಾದ ಭಕ್ತಗಣ ಎಂಬ ವಿಕ್ಷಿಪ್ತ ಪ್ರಭೇಧವೊಂದು ಅಂಧಾನುಕರಣೆಯಲ್ಲಿ ತೊಡಗಿದೆ. ಈ ಪ್ರಭೇದಕ್ಕೆ ಬೆಂಬಲವಾಗಿ ವಿಷಯವಸ್ತು ಒದಗಿಸಲು ಗೋದಿ ಮೀಡಿಯಾ ಎಂಬ ವಿಕೃತ ಪ್ರಭೇಧವೊಂದೂ ಜನ್ಮ ತಾಳಿದೆ. ಲೋಕಸಭೆಯಲ್ಲಿ ಆರಾಮದಾಯಕ ಬಹುಮತದ ಬೆಂಬಲವಿದೆ ಮತ್ತು ಹಲವಾರು ರಾಜ್ಯ ಸರ್ಕಾರಗಳು ಬಿಜೆಪಿಯ ನಿಯಂತ್ರಣದಲ್ಲಿವೆ. (ಇತ್ತೀಚಿನ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಮೋದಿ-ಶಾಗಳ ಗರ್ವಭಂಗ ಮಾಡಿದೆ).

ಮೊದಲ ಬಾರಿಗೆ, 2014ರಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸುಮಾರು ಶೇ. 38 ಮತಗಳನ್ನು ಪಡೆದಿವೆ, ಅದು 2019ರಲ್ಲಿ ಸುಮಾರು ಶೇ. 43ಕ್ಕೆ ಏರಿದೆ. ಮತ ಚಲಾಯಿಸಿದವರಲ್ಲಿ ಹೆಚ್ಚಿನವರು ಇನ್ನೂ ಬಿಜೆಪಿಯನ್ನು ವಿರೋಧಿಸಿದ್ದಾರೆ ಎಂದು ಇದು ತೋರಿಸಿದರೂ, ಪ್ರಜಾಪ್ರಭುತ್ವದ ನಿಯಮಗಳ ಪ್ರಕಾರ ಬಿಜೆಪಿಯೇ ವಿಜಯಶಾಲಿ ಹೌದು.

ಮೋದಿಯ ಆಡಳಿತದ ಎರಡು ನಿರ್ಣಾಯಕ ಲಕ್ಷಣಗಳು ಒಂದು ನವ-ಉದಾರವಾದಿ ಸಿದ್ಧಾಂತ. ಇದು ಅಂಬಾನಿ-ಅದಾನಿ ತರಹದವರಿಗೆ ಎಲ್ಲ ನೆರವು ನೀಡುವ ಪಾಲಿಸಿ. ಎರಡನೆಯದು ಭಾರತವು ಹಿಂದೂ ರಾಷ್ಟ್ರ ಅಥವಾ ಕೇವಲ ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆ. ಈ ಎರಡೂ ಸಿದ್ದಾಂತಗಳು ಕೈ ಜೋಡಿಸಿವೆ. ಹೀಗಾಗಿ ಇಲ್ಲಿ ಅಕ್ರಮ ಸಂಪತ್ತು ಮತ್ತು ಜನವಿರೋಧಿ ರಾಷ್ಟ್ರವಾದದ ನಡುವೆ ಸಹಜವಾಗಿಯೇ ಹೊಂದಾಣಿಕೆಯಾಗಿದೆ. ಈ ಏಳು ವರ್ಷಗಳಲ್ಲಿ ಈ ಎರಡರ ನಡುವಿನ ಪ್ರೀತಿ-ಪ್ರೇಮ, ಕೊಡುಕೊಳ್ಳುವಿಕೆ ತುಂಬ ಆಪ್ತವಾಗಿದೆ. ಇವತ್ತು ದೇಶದ ಎದುರು ಈ ಮೈತ್ರಿಯೇ ದುಸ್ವಪ್ನವಾಗಿದೆ. ಮೋದಿ ಎಂಬ ಕೃತಕ ಸೃಷ್ಟಿತ ಇಮೇಜ್ ಅನ್ನು ಬಳಸಿಕೊಂಡು ಈ ಶಕ್ತಿಗಳು ತಮ್ಮ ತಮ್ಮ ಹಿಡೆನ್ ಅಜೆಂಡಾ ಜಾರಿ ಮಾಡುತ್ತಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...