Homeಮುಖಪುಟಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

ಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

- Advertisement -
- Advertisement -

ಮೋದಿ ಸರ್ಕಾರಕ್ಕೆ ಏಳು ವರ್ಷವೋ, ಬಿಜೆಪಿ ಸರ್ಕಾರಕ್ಕೋ ಇಲ್ಲ ಎನ್‌ಡಿಎ ಸರ್ಕಾರಕ್ಕೋ? ಅಥವಾ ಸಂಘ ಪರಿವಾರದ ಹಿಡನ್ ಅಜೆಂಡಾ ಸ್ವತಂತ್ರ ಭಾರತದಲ್ಲಿ ಗರಿಷ್ಠ ಮಟ್ಟದಲ್ಲಿ ಕಾರ್ಯರೂಪಕ್ಕೆ ಇಳಿದ ಏಳು ವರ್ಷಗಳು ಎನ್ನುವುದೋ ಅಥವಾ ಅತಿ ವೇಗದಲ್ಲಿ ಬಂಡವಾಳಶಾಹಿಗಳ ಸಂಪತ್ತು ವೃದ್ಧಿ ಮತ್ತು ಅಷ್ಟೇ ಹಿಮ್ಮುಖ ವೇಗದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಎಂದು ಈ ಏಳು ವರ್ಷಗಳ ಅವಧಿಯನ್ನು ನೋಡುವುದೋ?

ಮೇಲಿನ ಎಲ್ಲದರ ಒಂದು ಕಲಸುಮೋಲೊಗರದ ಚಿತ್ರಣವೇ ನಿಜವಾದ ಸ್ಥಿತಿ. ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ತಂಡ ಬೆಂಗಳೂರಿನಲ್ಲಿ ಮಧ್ಯಪ್ರದೇಶದ ಆದಿವಾಸಿ ಗುಂಪೊಂದಕ್ಕೆ ನೆರವು ನೀಡುವ ಸಂದರ್ಭದಲ್ಲಿ, ಆ ಗುಂಪಿನ ಹಿರಿಯ ಸದಸ್ಯರೊಬ್ಬರು, ‘ಮೋದಿ ಇರುವವರೆಗೂ ಕೊರೋನಾ ಇರುತ್ತೆ’ ಎಂದು ಹೇಳಿದ್ದನ್ನು ಈ ಏಳು ವರ್ಷಗಳ ಆಡಳಿತದ ಪ್ರಬುದ್ಧ ವಿಮರ್ಶೆ ಎನ್ನಬಹುದು.

ಬ್ಯಾಂಕುಗಳ ಮುಂದೆ ತಮ್ಮದೇ ಹಣಕ್ಕಾಗಿ ನಿಂತ ಸರದಿ ಸಾಲುಗಳು ಈಗ ಆಸ್ಪತ್ರೆ ಮತ್ತು ಸ್ಮಶಾನಗಳ ಎದುರು ಕಾಣಿಸುತ್ತಿವೆ. ಇವೆರಡರ ನಡುವೆ ಕೆಲವೇ ಕೆಲವು ಅತಿ ಶ್ರೀಮಂತರು ಅಪರಿಮಿತ ಸಂಪತ್ತನ್ನು ಗುಡ್ಡ ಹಾಕಿದ್ದಾರೆ. ಬಿಜೆಪಿಯ ಪಾರ್ಟಿ ಫಂಡ್ ಕೂಡ ಭರ್ಜರಿ ಕಲೆಕ್ಷನ್ ಕಂಡಿದೆ, ಬಡವರು ಕಡು ಬಡವರಾಗಿದ್ದಾರೆ ಮತ್ತು ಮುಖ್ಯವಾಗಿ ಬಿಜೆಪಿ ಬೆಂಬಲಿಸುವ ವರ್ಗ ಎನ್ನಲಾದ ಮಧ್ಯಮವರ್ಗ ಈಗ ಸಂಕಷ್ಟಕ್ಕೆ ಸಿಲುಕುತ್ತಿದೆ.

ಎರಡು ವರ್ಷಗಳ ಹಿಂದೆ, 2019 ರ ಮೇ 30 ರಂದು ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಐದು ವರ್ಷಗಳ ಮೊದಲು, ಅವರು 2014 ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದ್ದು, ಆರ್ಥಿಕ ಸಮೃದ್ಧಿ, ಸಾಮಾಜಿಕ ಐಕ್ಯತೆ ಮತ್ತು ಸಮಗ್ರ ಅಭಿವೃದ್ಧಿಯ ಭರವಸೆ ನೀಡಿದ್ದರು. ಅವರ ಘೋಷಣೆಗಳು – “ಅಚ್ಚೆ ದಿನ್. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಒಂದು ಕೋಟಿ ಉದ್ಯೋಗಗಳು, ಕಪ್ಪುಹಣ ವಾಪಸ್‌ ತರುವುದು ಮತ್ತು ಎಲ್ಲರ ಅಕೌಂಟಿಗೆ 15 ಲಕ್ಷ ಹಣ ಇತ್ಯಾದಿ.

ಆದರೆ ಈಗ ಇವೆಲ್ಲವೂ ಜುಮ್ಲಾ ಎಂದು ದೃಢಪಟ್ಟಿದೆ. ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳ ನೆರವಿನಿಂದ ಅಸ್ತಿತ್ವದಲ್ಲಿಯೇ ಇಲ್ಲದ ಗುಜರಾತ್ ಮಾಡೆಲ್ ಎಂಬ ಮರಿಚೀಕೆಯನ್ನು ಬಿತ್ತಿ ಯುವಜನತೆ ಮತ್ತು ಮಧ್ಯಮವರ್ಗವನ್ನು ದಾರಿ ತಪ್ಪಿಸುತ್ತ ಬರಲಾಗಿತು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಈಗ ಬಹುತೇಕ ಜನರು ಭ್ರಮನಿರಸನ ಹೊಂದಿದ್ದಾರೆ ಮತ್ತು ಸಿನಿಕರಾಗಿದ್ದಾರೆ. ಆದರೂ ಈ ಏಳು ವರ್ಷಗಳಲ್ಲಿ ಸೃಷ್ಟಿಯಾದ ಭಕ್ತಗಣ ಎಂಬ ವಿಕ್ಷಿಪ್ತ ಪ್ರಭೇಧವೊಂದು ಅಂಧಾನುಕರಣೆಯಲ್ಲಿ ತೊಡಗಿದೆ. ಈ ಪ್ರಭೇದಕ್ಕೆ ಬೆಂಬಲವಾಗಿ ವಿಷಯವಸ್ತು ಒದಗಿಸಲು ಗೋದಿ ಮೀಡಿಯಾ ಎಂಬ ವಿಕೃತ ಪ್ರಭೇಧವೊಂದೂ ಜನ್ಮ ತಾಳಿದೆ. ಲೋಕಸಭೆಯಲ್ಲಿ ಆರಾಮದಾಯಕ ಬಹುಮತದ ಬೆಂಬಲವಿದೆ ಮತ್ತು ಹಲವಾರು ರಾಜ್ಯ ಸರ್ಕಾರಗಳು ಬಿಜೆಪಿಯ ನಿಯಂತ್ರಣದಲ್ಲಿವೆ. (ಇತ್ತೀಚಿನ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಮೋದಿ-ಶಾಗಳ ಗರ್ವಭಂಗ ಮಾಡಿದೆ).

ಮೊದಲ ಬಾರಿಗೆ, 2014ರಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸುಮಾರು ಶೇ. 38 ಮತಗಳನ್ನು ಪಡೆದಿವೆ, ಅದು 2019ರಲ್ಲಿ ಸುಮಾರು ಶೇ. 43ಕ್ಕೆ ಏರಿದೆ. ಮತ ಚಲಾಯಿಸಿದವರಲ್ಲಿ ಹೆಚ್ಚಿನವರು ಇನ್ನೂ ಬಿಜೆಪಿಯನ್ನು ವಿರೋಧಿಸಿದ್ದಾರೆ ಎಂದು ಇದು ತೋರಿಸಿದರೂ, ಪ್ರಜಾಪ್ರಭುತ್ವದ ನಿಯಮಗಳ ಪ್ರಕಾರ ಬಿಜೆಪಿಯೇ ವಿಜಯಶಾಲಿ ಹೌದು.

ಮೋದಿಯ ಆಡಳಿತದ ಎರಡು ನಿರ್ಣಾಯಕ ಲಕ್ಷಣಗಳು ಒಂದು ನವ-ಉದಾರವಾದಿ ಸಿದ್ಧಾಂತ. ಇದು ಅಂಬಾನಿ-ಅದಾನಿ ತರಹದವರಿಗೆ ಎಲ್ಲ ನೆರವು ನೀಡುವ ಪಾಲಿಸಿ. ಎರಡನೆಯದು ಭಾರತವು ಹಿಂದೂ ರಾಷ್ಟ್ರ ಅಥವಾ ಕೇವಲ ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆ. ಈ ಎರಡೂ ಸಿದ್ದಾಂತಗಳು ಕೈ ಜೋಡಿಸಿವೆ. ಹೀಗಾಗಿ ಇಲ್ಲಿ ಅಕ್ರಮ ಸಂಪತ್ತು ಮತ್ತು ಜನವಿರೋಧಿ ರಾಷ್ಟ್ರವಾದದ ನಡುವೆ ಸಹಜವಾಗಿಯೇ ಹೊಂದಾಣಿಕೆಯಾಗಿದೆ. ಈ ಏಳು ವರ್ಷಗಳಲ್ಲಿ ಈ ಎರಡರ ನಡುವಿನ ಪ್ರೀತಿ-ಪ್ರೇಮ, ಕೊಡುಕೊಳ್ಳುವಿಕೆ ತುಂಬ ಆಪ್ತವಾಗಿದೆ. ಇವತ್ತು ದೇಶದ ಎದುರು ಈ ಮೈತ್ರಿಯೇ ದುಸ್ವಪ್ನವಾಗಿದೆ. ಮೋದಿ ಎಂಬ ಕೃತಕ ಸೃಷ್ಟಿತ ಇಮೇಜ್ ಅನ್ನು ಬಳಸಿಕೊಂಡು ಈ ಶಕ್ತಿಗಳು ತಮ್ಮ ತಮ್ಮ ಹಿಡೆನ್ ಅಜೆಂಡಾ ಜಾರಿ ಮಾಡುತ್ತಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...