Homeಮುಖಪುಟಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

ಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

- Advertisement -
- Advertisement -

ಮೋದಿ ಸರ್ಕಾರಕ್ಕೆ ಏಳು ವರ್ಷವೋ, ಬಿಜೆಪಿ ಸರ್ಕಾರಕ್ಕೋ ಇಲ್ಲ ಎನ್‌ಡಿಎ ಸರ್ಕಾರಕ್ಕೋ? ಅಥವಾ ಸಂಘ ಪರಿವಾರದ ಹಿಡನ್ ಅಜೆಂಡಾ ಸ್ವತಂತ್ರ ಭಾರತದಲ್ಲಿ ಗರಿಷ್ಠ ಮಟ್ಟದಲ್ಲಿ ಕಾರ್ಯರೂಪಕ್ಕೆ ಇಳಿದ ಏಳು ವರ್ಷಗಳು ಎನ್ನುವುದೋ ಅಥವಾ ಅತಿ ವೇಗದಲ್ಲಿ ಬಂಡವಾಳಶಾಹಿಗಳ ಸಂಪತ್ತು ವೃದ್ಧಿ ಮತ್ತು ಅಷ್ಟೇ ಹಿಮ್ಮುಖ ವೇಗದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಎಂದು ಈ ಏಳು ವರ್ಷಗಳ ಅವಧಿಯನ್ನು ನೋಡುವುದೋ?

ಮೇಲಿನ ಎಲ್ಲದರ ಒಂದು ಕಲಸುಮೋಲೊಗರದ ಚಿತ್ರಣವೇ ನಿಜವಾದ ಸ್ಥಿತಿ. ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ತಂಡ ಬೆಂಗಳೂರಿನಲ್ಲಿ ಮಧ್ಯಪ್ರದೇಶದ ಆದಿವಾಸಿ ಗುಂಪೊಂದಕ್ಕೆ ನೆರವು ನೀಡುವ ಸಂದರ್ಭದಲ್ಲಿ, ಆ ಗುಂಪಿನ ಹಿರಿಯ ಸದಸ್ಯರೊಬ್ಬರು, ‘ಮೋದಿ ಇರುವವರೆಗೂ ಕೊರೋನಾ ಇರುತ್ತೆ’ ಎಂದು ಹೇಳಿದ್ದನ್ನು ಈ ಏಳು ವರ್ಷಗಳ ಆಡಳಿತದ ಪ್ರಬುದ್ಧ ವಿಮರ್ಶೆ ಎನ್ನಬಹುದು.

ಬ್ಯಾಂಕುಗಳ ಮುಂದೆ ತಮ್ಮದೇ ಹಣಕ್ಕಾಗಿ ನಿಂತ ಸರದಿ ಸಾಲುಗಳು ಈಗ ಆಸ್ಪತ್ರೆ ಮತ್ತು ಸ್ಮಶಾನಗಳ ಎದುರು ಕಾಣಿಸುತ್ತಿವೆ. ಇವೆರಡರ ನಡುವೆ ಕೆಲವೇ ಕೆಲವು ಅತಿ ಶ್ರೀಮಂತರು ಅಪರಿಮಿತ ಸಂಪತ್ತನ್ನು ಗುಡ್ಡ ಹಾಕಿದ್ದಾರೆ. ಬಿಜೆಪಿಯ ಪಾರ್ಟಿ ಫಂಡ್ ಕೂಡ ಭರ್ಜರಿ ಕಲೆಕ್ಷನ್ ಕಂಡಿದೆ, ಬಡವರು ಕಡು ಬಡವರಾಗಿದ್ದಾರೆ ಮತ್ತು ಮುಖ್ಯವಾಗಿ ಬಿಜೆಪಿ ಬೆಂಬಲಿಸುವ ವರ್ಗ ಎನ್ನಲಾದ ಮಧ್ಯಮವರ್ಗ ಈಗ ಸಂಕಷ್ಟಕ್ಕೆ ಸಿಲುಕುತ್ತಿದೆ.

ಎರಡು ವರ್ಷಗಳ ಹಿಂದೆ, 2019 ರ ಮೇ 30 ರಂದು ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಐದು ವರ್ಷಗಳ ಮೊದಲು, ಅವರು 2014 ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದ್ದು, ಆರ್ಥಿಕ ಸಮೃದ್ಧಿ, ಸಾಮಾಜಿಕ ಐಕ್ಯತೆ ಮತ್ತು ಸಮಗ್ರ ಅಭಿವೃದ್ಧಿಯ ಭರವಸೆ ನೀಡಿದ್ದರು. ಅವರ ಘೋಷಣೆಗಳು – “ಅಚ್ಚೆ ದಿನ್. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಒಂದು ಕೋಟಿ ಉದ್ಯೋಗಗಳು, ಕಪ್ಪುಹಣ ವಾಪಸ್‌ ತರುವುದು ಮತ್ತು ಎಲ್ಲರ ಅಕೌಂಟಿಗೆ 15 ಲಕ್ಷ ಹಣ ಇತ್ಯಾದಿ.

ಆದರೆ ಈಗ ಇವೆಲ್ಲವೂ ಜುಮ್ಲಾ ಎಂದು ದೃಢಪಟ್ಟಿದೆ. ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳ ನೆರವಿನಿಂದ ಅಸ್ತಿತ್ವದಲ್ಲಿಯೇ ಇಲ್ಲದ ಗುಜರಾತ್ ಮಾಡೆಲ್ ಎಂಬ ಮರಿಚೀಕೆಯನ್ನು ಬಿತ್ತಿ ಯುವಜನತೆ ಮತ್ತು ಮಧ್ಯಮವರ್ಗವನ್ನು ದಾರಿ ತಪ್ಪಿಸುತ್ತ ಬರಲಾಗಿತು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಈಗ ಬಹುತೇಕ ಜನರು ಭ್ರಮನಿರಸನ ಹೊಂದಿದ್ದಾರೆ ಮತ್ತು ಸಿನಿಕರಾಗಿದ್ದಾರೆ. ಆದರೂ ಈ ಏಳು ವರ್ಷಗಳಲ್ಲಿ ಸೃಷ್ಟಿಯಾದ ಭಕ್ತಗಣ ಎಂಬ ವಿಕ್ಷಿಪ್ತ ಪ್ರಭೇಧವೊಂದು ಅಂಧಾನುಕರಣೆಯಲ್ಲಿ ತೊಡಗಿದೆ. ಈ ಪ್ರಭೇದಕ್ಕೆ ಬೆಂಬಲವಾಗಿ ವಿಷಯವಸ್ತು ಒದಗಿಸಲು ಗೋದಿ ಮೀಡಿಯಾ ಎಂಬ ವಿಕೃತ ಪ್ರಭೇಧವೊಂದೂ ಜನ್ಮ ತಾಳಿದೆ. ಲೋಕಸಭೆಯಲ್ಲಿ ಆರಾಮದಾಯಕ ಬಹುಮತದ ಬೆಂಬಲವಿದೆ ಮತ್ತು ಹಲವಾರು ರಾಜ್ಯ ಸರ್ಕಾರಗಳು ಬಿಜೆಪಿಯ ನಿಯಂತ್ರಣದಲ್ಲಿವೆ. (ಇತ್ತೀಚಿನ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಮೋದಿ-ಶಾಗಳ ಗರ್ವಭಂಗ ಮಾಡಿದೆ).

ಮೊದಲ ಬಾರಿಗೆ, 2014ರಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸುಮಾರು ಶೇ. 38 ಮತಗಳನ್ನು ಪಡೆದಿವೆ, ಅದು 2019ರಲ್ಲಿ ಸುಮಾರು ಶೇ. 43ಕ್ಕೆ ಏರಿದೆ. ಮತ ಚಲಾಯಿಸಿದವರಲ್ಲಿ ಹೆಚ್ಚಿನವರು ಇನ್ನೂ ಬಿಜೆಪಿಯನ್ನು ವಿರೋಧಿಸಿದ್ದಾರೆ ಎಂದು ಇದು ತೋರಿಸಿದರೂ, ಪ್ರಜಾಪ್ರಭುತ್ವದ ನಿಯಮಗಳ ಪ್ರಕಾರ ಬಿಜೆಪಿಯೇ ವಿಜಯಶಾಲಿ ಹೌದು.

ಮೋದಿಯ ಆಡಳಿತದ ಎರಡು ನಿರ್ಣಾಯಕ ಲಕ್ಷಣಗಳು ಒಂದು ನವ-ಉದಾರವಾದಿ ಸಿದ್ಧಾಂತ. ಇದು ಅಂಬಾನಿ-ಅದಾನಿ ತರಹದವರಿಗೆ ಎಲ್ಲ ನೆರವು ನೀಡುವ ಪಾಲಿಸಿ. ಎರಡನೆಯದು ಭಾರತವು ಹಿಂದೂ ರಾಷ್ಟ್ರ ಅಥವಾ ಕೇವಲ ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆ. ಈ ಎರಡೂ ಸಿದ್ದಾಂತಗಳು ಕೈ ಜೋಡಿಸಿವೆ. ಹೀಗಾಗಿ ಇಲ್ಲಿ ಅಕ್ರಮ ಸಂಪತ್ತು ಮತ್ತು ಜನವಿರೋಧಿ ರಾಷ್ಟ್ರವಾದದ ನಡುವೆ ಸಹಜವಾಗಿಯೇ ಹೊಂದಾಣಿಕೆಯಾಗಿದೆ. ಈ ಏಳು ವರ್ಷಗಳಲ್ಲಿ ಈ ಎರಡರ ನಡುವಿನ ಪ್ರೀತಿ-ಪ್ರೇಮ, ಕೊಡುಕೊಳ್ಳುವಿಕೆ ತುಂಬ ಆಪ್ತವಾಗಿದೆ. ಇವತ್ತು ದೇಶದ ಎದುರು ಈ ಮೈತ್ರಿಯೇ ದುಸ್ವಪ್ನವಾಗಿದೆ. ಮೋದಿ ಎಂಬ ಕೃತಕ ಸೃಷ್ಟಿತ ಇಮೇಜ್ ಅನ್ನು ಬಳಸಿಕೊಂಡು ಈ ಶಕ್ತಿಗಳು ತಮ್ಮ ತಮ್ಮ ಹಿಡೆನ್ ಅಜೆಂಡಾ ಜಾರಿ ಮಾಡುತ್ತಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...