Homeಕರ್ನಾಟಕಏಳು ವರ್ಷ ಕಳೆದರೂ ವೇಗ ಪಡೆದುಕೊಳ್ಳದ ಗೌರಿ ಹತ್ಯೆ ಪ್ರಕರಣದ ವಿಚಾರಣೆ; ನಾಲ್ವರು ಆರೋಪಿಗಳಿಗೆ ಜಾಮೀನು

ಏಳು ವರ್ಷ ಕಳೆದರೂ ವೇಗ ಪಡೆದುಕೊಳ್ಳದ ಗೌರಿ ಹತ್ಯೆ ಪ್ರಕರಣದ ವಿಚಾರಣೆ; ನಾಲ್ವರು ಆರೋಪಿಗಳಿಗೆ ಜಾಮೀನು

- Advertisement -
- Advertisement -

ಸಾಮಾಜಿಕ ಹೋರಾಟಗಾರ್ತಿ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ನಾಳೆಗೆ ಏಳು ವರ್ಷ ಕಳೆದು ಎಂಟನೇ ವರ್ಷ ಆರಂಭವಾಗುತ್ತದೆ. ಸದಾ ಸತ್ಯದ ಪರವಾಗಿದ್ದ, ದಮನಿತರ ಹಕ್ಕುಗಳಿಗಾಗಿ ತಮ್ಮ ಪತ್ರಿಕೆಯನ್ನು ಮೀಸಲಿಟ್ಟಿದ್ದ ಅವರ ಸಾವು ದೇಶದ ಹಲವಾರು ಜನರಿಗೆ ಆಘಾತ ಮೂಡಿಸಿದ್ದಂತೂ ಸತ್ಯ. ಆದರೆ, ಕೊಲೆಯಾಗಿ ಏಳು ವರ್ಷ ಕಳೆದರೂ ಈವರೆಗೆ ವಿಚಾರಣೆ ಮುಗಿದು ಆರೋಪಿಗಳಿಗೆ ಶಿಕ್ಷೆಯಾಗಿಲ್ಲ ಎನ್ನುವ ಅಸಮಾಧಾನ ಬಹುತೇಕರದ್ದು.

ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನ ರಾಜರಾಜೇಶ್ವರಿನಗರದ ಅವರ ಮನೆಯ ಹೊರಗೆ ಗೌರಿಯನ್ನು ಗುಂಡಿಕ್ಕಿ ಕೊಲ್ಲಲಾಯಿತು. ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು (ಎಸ್‌ಐಟಿ) ಹತ್ಯೆಯನ್ನು ನಡೆಸಲು ಅಪರಿಚಿತ ಸಂಘಟನೆಯೊಂದು ಬಲಪಂಥೀಯ ಕಾರ್ಯಕರ್ತರನ್ನು ನೇಮಿಸಿಕೊಂಡಿದೆ ಎಂದು ಕಂಡುಹಿಡಿದಿದೆ. ಅದಕ್ಕೆ ತಕ್ಕನಾದ ಸಾಕಷ್ಟು ಪೂರಕ ಸಾಕ್ಷಿಗಳನ್ನೂ ತನ್ನ ಚಾರ್ಜ್‌ ಶೀಟ್‌ನಲ್ಲಿ ಸಲ್ಲಿಸಿದೆ.

ಕೋರ್ಟ್‌ ಕಲಾಪಗಳು ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಅಸಮಾಧಾನಗೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅವರ ಬೆಂಬಲಿಗರು ‘ವಿಶೇಷ ತ್ವರಿತ ನ್ಯಾಯಾಲಯ’ ಸ್ಥಾಪಿಸಿ ವಿಚಾರಣೆ ನಡೆಸುವಂತೆ ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ, ಸರ್ಕಾರಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿಲ್ಲ.

ನಾಲ್ವರು ಆರೋಪಿಗಳಿಗೆ ಜಾಮೀನು!

ಗೌರಿ ಹತ್ಯೆ ಪ್ರಕರಣದ ವಿಚಾರಣೆ ಕಳೆದ ಏಳು ವರ್ಷಗಳಿಂದ ಸುದೀರ್ಘವಾಗಿ ನಡೆಯುತ್ತಿದೆಯಾದರೂ ವೇಗ ಪಡೆದುಕೊಂಡಿಲ್ಲ. ಆದರೆ, ಇದೀಗ ‘ಮಾನವ ಹಕ್ಕುಗಳ’ ವಿಚಾರವನ್ನು ಗಮನದಲ್ಲಿ ಇಟ್ಟುಕೊಂಡು ಕೋರ್ಟ್‌ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

11ನೇ ಆರೋಪಿ ಮೋಹನ್ ನಾಯಕ್ ಅಲಿಯಾಸ್ ಸಂಪ, ಐದನೇ ಆರೋಪಿ ಅಮಿತ್ ರಾಮಚಂದ್ರ ದೇಗ್ವೆಕರ್ ಅಲಿಯಾಸ್ ಪ್ರದೀಪ್ ಮಹಾಜನ್, ಏಳನೇ ಆರೋಪಿ ಸುರೇಶ್ ಎಚ್‌.ಎಲ್. ಅಲಿಯಾಸ್ ಟೀಚರ್, 17ನೇ ಆರೋಪಿ ಕೆಟಿ ನವೀನ್ ಕುಮಾರ್ ಎಂಬುವವರಿಗೆ ಹೈಕೋರ್ಟ್‌ ಜಾಮೀನು ನೀಡಿದೆ. ಸುಪ್ರೀಂ ಕೋರ್ಟ್‌ ಕೂಡ ಈ ಆರೋಪಿಗಳ ಜಾಮೀನು ಆದೇಶವನ್ನು ಎತ್ತಿಹಿಡಿದಿದೆ.

ಆರನೇ ಆರೋಪಿ ಭರತ್ ಕುಮಾರ್, ಒಂಬತ್ತನೇ ಆರೋಪಿ ಸುಧನ್ವಾ ಗೊಂಡಾಲೆಕರ್, 13ನೇ ಆರೋಪಿ ಸುಜಿತ್ ಕುಮಾರ್ ಮತ್ತು 16ನೇ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಅವರ ಜಾಮೀನು ಅರ್ಜಿಗಳು ಹೈಕೋರ್ಟಿನಲ್ಲಿ ಬಾಕಿ ಉಳಿದಿವೆ.

ಇನ್ನು ಟ್ರಯಲ್ ಕೋರ್ಟಿನಲ್ಲಿ ಮೊದಲನೇ ಆರೋಪಿಯಾದ ಅಮೋಲ್ ಕಾಳೆ, 2ನೇ ಆರೋಪಿ ಪರಶುರಾಮ್ ವಾಗ್ಮೋರೆ ಮತ್ತು 3ನೇ ಆರೋಪಿ ಗಣೇಶ್‌ ಮಿಸ್ಕಿನ್ ಜಾಮೀನು ಅರ್ಜಿಗಳು ಬಾಕಿ ಉಳಿದಿವೆ. ಒಟ್ಟು 18 ಆರೋಪಿಗಳನ್ನು ಗೌರಿ ಹತ್ಯೆ ತನಿಖೆಗಾಗಿ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿತ್ತು.

2018 ರಲ್ಲಿ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದರೂ, ವಿಚಾರಣೆಯು ಇನ್ನೂ ಹೇಳಿಕೊಳ್ಳುವಂತ ಪ್ರಗತಿ ಸಾಧಿಸಿಲ್ಲ. 400ಕ್ಕೂ ಹೆಚ್ಚು ಸಾಕ್ಷಿಗಳು ಮತ್ತು ಸಾವಿರಕ್ಕೂ ಹೆಚ್ಚು ಪುರಾವೆಗಳಿವೆ. ವಿಚಾರಣೆ ನಿಧಾನವಾಗಿರುವದರಿಂದ 137 ಸಾಕ್ಷಿಗಳನ್ನು ಮಾತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. 2018ರಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಿದ್ದರೂ ವಿಚಾರಣೆ ಆರಂಭವಾಗಿದ್ದು ಮಾರ್ಚ್ 2022ರ ಕೊನೆಯಲ್ಲಿ. ಅಂದಿನಿಂದ ಈವರೆಗೆ ಮೂವರು ನ್ಯಾಯಾಧೀಶರು ಬದಲಾಗಿದ್ದಾರೆ.

ವಿಚಾರಣೆ ವಿಳಂಬದಿಂದ ಬಗ್ಗೆ ಗೌರಿ ಕುಟುಂಬ ಮತ್ತು ಅವರ ಅಭಿಮಾನಿಗಳು ಅಸಮಾಧಾನಗೊಂಡಿದ್ದಾರೆ. ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಬೇಕೆಂಬ ಬೇಡಿಕೆಯನ್ನು ಹಿಂದಿನ ಬಿಜೆಪಿ ಸರ್ಕಾರ ಮತ್ತು ಈಗಿನ ಕಾಂಗ್ರೆಸ್ ಸರ್ಕಾರ ಗಂಭಿರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. “2018 ರಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ, ಆದರೆ, ತ್ವರಿತ ವಿಚಾರಣೆಯ ಬದಲಿಗೆ, ವಿಚಾರಣೆಯನ್ನು ಎಳೆಯಲಾಗುತ್ತಿದೆ. ಸರ್ಕಾರವು ವಿಚಾರಣೆಯನ್ನು ವೇಗಗೊಳಿಸುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಗೌರಿ ಸಹೋದರಿ ಕವಿತಾ ಹಲವು ಬಾರಿ ಅಸಮಾಧಾನ ಹೊರಹಾಕಿದ್ದಾರೆ.

ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯು ನಾಲ್ವರು ವಿಚಾರವಾದಿಗಳಾದ ಎಂಎಂ ಕಲ್ಬುರ್ಗಿ, ಗೋವಿಂದ್ ಪನ್ಸಾರೆ, ನರೇಂದ್ರ ಧಾಬೋಲ್ಕರ್ ಮತ್ತು ಗೌರಿ ಲಂಕೇಶ್ ಅವರ ಹತ್ಯೆಗಳ ನಡುವಿನ ಸಂಬಂಧವನ್ನು ಬಹಿರಂಗಪಡಿಸಿದ ಕಾರಣ ಈ ವಿಚಾರಣೆಯು ನಿರ್ಣಾಯಕವಾಗಿದೆ. ತನಿಖೆಯ ಆರಂಭಿಕ ದಿನಗಳಲ್ಲಿ, ಎಸ್‌ಐಟಿ ಲಂಕೇಶ್ ಮತ್ತು 2015 ರ ಆಗಸ್ಟ್ 30 ರಂದು ಕೊಲೆಯಾದ ಪ್ರೊಫೆಸರ್ ಕಲ್ಬುರ್ಗಿ ಅವರ ಕೊಲೆಗಳ ನಡುವೆ ಸಂಪರ್ಕವನ್ನು ಕಂಡುಹಿಡಿದಿತ್ತು.  ಗೌರಿ ಅವರ ಮನೆಯಿಂದ ವಶಪಡಿಸಿಕೊಂಡ ನಾಲ್ಕು ಬುಲೆಟ್ ಸ್ಲಾಗ್‌ಗಳು ಮತ್ತು ಕಾರ್ಟ್ರಿಡ್ಜ್‌ಗಳು ಕಲ್ಬುರ್ಗಿಯ ಸ್ಲಗ್ ಮತ್ತು ಕಾರ್ಟ್ರಿಡ್ಜ್‌ಗಳಿಗೆ ಹೊಂದಿಕೆಯಾಗಿದ್ದವು. ಫೊರೆನ್ಸಿಕ್ ಲ್ಯಾಬ್‌ ವರದಿಯು ಎರಡೂ ಗುಂಡುಗಳನ್ನು ಒಂದೇ ಬಂದೂಕಿನಿಂದ ಹಾರಿಸಿರುವುದನ್ನು ಬಹಿರಂಗಪಡಿಸಿತ್ತು.

ಮಹಾರಾಷ್ಟ್ರದ ಮತ್ತೊಬ್ಬ ವಿಚಾರವಾದಿ ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮಹಾರಾಷ್ಟ್ರ ಎಸ್‌ಐಟಿ ಲಂಕೇಶ್ ಮತ್ತು ಪನ್ಸಾರೆ ಹತ್ಯೆಯಲ್ಲೂ ಇದೇ ಗನ್ ಬಳಸಿರುವುದು ಪತ್ತೆಯಾಗಿದೆ. ಆಗಸ್ಟ್ 20, 2013 ರಂದು ಹತ್ಯೆಯಾದ ಮಹಾರಾಷ್ಟ್ರ ಮೂಲದ ಮತ್ತೊಬ್ಬ ವಿಚಾರವಾದಿ ನರೇಂದ್ರ ಧಾಬೋಲ್ಕರ್ ಮತ್ತು ಗೌರಿ ಲಂಕೇಶ್ ಅವರ ಕೊಲೆಗಳ ನಡುವಿನ ಸಂಬಂಧವು ತನಿಖೆಯ ನಂತರದ ಹಂತಗಳಲ್ಲಿ ಹೊರಹೊಮ್ಮಿತು.

ಈ ಬಗ್ಗೆ ಗೌರಿ ಲಂಕೇಶ್ ಆಪ್ತರು ಹಾಗೂ ಸಾಮಾಜಿಕ ಚಿಂತಕರಾದ ಶಿವಸುಂದರ್ ಮಾತನಾಡಿ, “ಗೌರಿ ಲಂಕೇಶ್ ಹತ್ಯೆಯಾಗಿ ನಾಳೆಗೆ ಏಳು ವರ್ಷ. ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ.ಸಿಂಗ್ ಮತ್ತು ಅನುಚೇತ್ ಅವರ ನೇತೃತ್ವದಲ್ಲಿ ರಚಿಸಿದ ಎಸ್‌ಐಟಿ ಶ್ರಮವಹಿಸಿ, ಜಾಣ್ಮೆ, ತಂತ್ರಜ್ಞಾನ ಮತ್ತು ಕೌಶಲ್ಯಗಳನ್ನು ಬಳಸಿ 18 ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳೆಲ್ಲರೂ ಅತ್ಯಂತ ಕರ್ಮಠ ಹಾಗೂ ಭಯೋತ್ಪಾದಕ ಹಿಂದುತ್ವವಾದಿ ಸಂಘಟನೆಯಾದ ‘ಸನಾತನ ಸಂಸ್ಥೆ’ ಮತ್ತು ‘ಹಿಂದೂ ಜನಜಾಗೃತಿ ವೇದಿಕೆ’ಯಿಂದ ಪ್ರಭಾವಿತರೆಂಬುದು ತನಿಖೆಯಲ್ಲಿ ಸ್ಪಷ್ಟವಾಗಿದೆ. ಇದೇ ತಂಡವೇ ದೇಶದ ಪ್ರಖ್ಯಾತ ವಿಚಾರವಾದಿಗಳು ಮತ್ತು ಜನಪರ ಬುದ್ಧಿಜೀವಿಗಳಾದ ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಲ್ಕರ್ ಮತ್ತು ಪ್ರೊ. ಕಲಬುರ್ಗಿಯವರನ್ನು ಹತ್ಯೆ ಮಾಡಿ ರುವುದನ್ನು ಪೊಲೀಸರು ಸಂಗ್ರಹಿಸಿರುವ ಸಾಕ್ಷ್ಯಗಳು ಸ್ಪಷ್ಟಪಡಿಸಿವೆ” ಎಂದು ಹೇಳಿದರು.

“ಗೌರಿ ಹತ್ಯಾ ತನಿಖೆ ಮುಗಿದು 2018ರ ನವೆಂಬರ್‌ನಲ್ಲೇ ಚಾರ್ಜ್‌ಶೀಟ್ ದಾಖಲಿಸಿದರೂ 2022ರ ತನಕ ವಿಚಾರಣೆಯೇ ಪ್ರಾರಂಭವಾಗಲಿಲ್ಲ. ಚಾರ್ಜ್‌ಶೀಟ್ ಪ್ರಕಾರ ಪ್ರಕರಣದಲ್ಲಿ 400ಕ್ಕೂ ಹೆಚ್ಚು ಸಾಕ್ಷಿಗಳು ಮತ್ತು ಸಾವಿರಕ್ಕೂ ಹೆಚ್ಚು ಪುರಾವೆಗಳಿವೆ. ಆದರೂ ವಿಚಾರಣೆ ಆಮೆಗತಿಯಲ್ಲಿ ನಡೆದಿರುವುದರಿಂದ ಈವರೆಗೆ ಕೇವಲ 137 ಸಾಕ್ಷಿಗಳ ವಿಚಾರಣೆಯಾಗಿದೆ. ವಿಚಾರಣೆ ತ್ವರಿತಗತಿಯಲ್ಲಿ ನಡೆದು ಶಿಕ್ಷೆಯಾಗಬೇಕೆಂಬ ಉದ್ದೇಶದಿಂದ ಪ್ರಾಸಿಕ್ಯೂಶನ್ ವಕೀಲ ಪ್ರಖ್ಯಾತ ಜನಪರ ಅಡ್ವೊಕೇಟ್ ಬಾಲನ್ ಅವರು ಅಷ್ಟು ಮುಖ್ಯವಲ್ಲದ ನೂರಕ್ಕೂ ಹೆಚ್ಚು ಸಾಕ್ಷಿಗಳನ್ನು ಕೈಬಿಡಲು ಸಿದ್ಧವೆಂದು ಕೋರ್ಟಿಗೆ ತಿಳಿಸಿದ್ದಾರೆ. ಆದರೂ ವಿಚಾರಣೆ ಮುಗಿಯಲು ಇನ್ನೂ ಸಾಕಷ್ಟು ವಿಳಂಬವಾಗುತ್ತದೆ ಎಂಬ ವಾದವನ್ನು ಮುಂದಿಟ್ಟು ಈಗಾಗಲೇ ನಾಲ್ವರು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ” ಎಂದು ಅಸಮಾಧಾನ ಹೊರಹಾಕಿದರು.

ಇತ್ತೀಚೆಗಿನ ಪ್ರಮುಖ ಬೆಳವಣಿಗೆಗಳು ಕೆಳಗಿನಂತಿವೆ..

ಆರೋಪಿ ಮೋಹನ್ ನಾಯಕ್‌ಗೆ ಜಾಮೀನು: ಗೌರಿ ಲಂಕೇಶ್ ಹತ್ಯೆ ಪ್ರಕರಣದ 11 ಆರೋಪಿ ಎಂದು ಮೋಹನ್ ನಾಯಕ್ ಎನ್ ಅವರಿಗೆ ಕರ್ನಾಟಕ ಹೈಕೋರ್ಟ್ 2023 ರ ಡಿಸೆಂಬರ್ 09ರಂದು ಜಾಮೀನು ಮಂಜೂರು ಮಾಡಿತು.

ಪ್ರಕರಣದಲ್ಲಿ 527 ಚಾರ್ಜ್‌ಶೀಟ್ ಸಾಕ್ಷಿಗಳಿದ್ದು, ಕಳೆದ ಎರಡು ವರ್ಷಗಳಲ್ಲಿ 90 ಸಾಕ್ಷಿಗಳನ್ನು ಮಾತ್ರ ವಿಚಾರಣೆ ಮಾಡಲಾಗಿದೆ ಎಂಬುದನ್ನು ಗಮನಿಸಿದ ಕೋರ್ಟ್‌, 2019 ರ ಫೆಬ್ರುವರಿಯಲ್ಲಿ ಹೈಕೋರ್ಟ್, ನಾಯಕ್ ಅವರ ಹಿಂದಿನ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ವಿಚಾರಣೆಯನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದರೂ ಸಹ ಆತ ಜುಲೈ 18, 2018 ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಎಂಬುದನ್ನು ಕೋರ್ಟ್‌ ಗಂಭೀರವಾಗಿ ಪರಿಗಣಿಸಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಮೂಲದ ನಾಯಕ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ), 2000 ರ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಜಾಮೀನು ಮಂಜೂರಾತಿಯನ್ನು ಪರಿಶೀಲಿಸುವ ಸೀಮಿತ ಉದ್ದೇಶಕ್ಕಾಗಿ ಆರೋಪಗಳನ್ನು ವಿಶ್ಲೇಷಿಸುವಾಗ, ಆತ ಕೋಕಾ ಅಡಿಯಲ್ಲಿ ಸಂಘಟಿತ ಅಪರಾಧ ಎಸಗುವ ಸಿಂಡಿಕೇಟ್‌ನ ಸದಸ್ಯ ಎಂದು ಆರೋಪಿಸಲಾಗಿದ್ದರೂ, ದಾಖಲೆಯಲ್ಲಿರುವ ವಿಷಯವು ಆತನನ್ನು ಸಹ-ಸಹಕಾರರಾಗಿ ಹಾಜರುಪಡಿಸಿಲ್ಲ ಎಂದು ತೋರಿಸುತ್ತದೆ ಎಂದು ಹೈಕೋರ್ಟ್ ಗಮನಿಸಿದೆ.

ಕಾಯಿದೆಯ ಸೆಕ್ಷನ್ 3(2), 3(3) ಮತ್ತು 3(4) ರ ಅಡಿಯಲ್ಲಿ ಅಪರಾಧಗಳ ಆರೋಪಗಳು ಸಾಬೀತಾದರೂ, ಆತ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಗುರಿಯಾಗುವುದಿಲ್ಲ ಮತ್ತು ಕನಿಷ್ಠ ಶಿಕ್ಷೆ ಐದು ವರ್ಷಗಳು ಎಂದು ಹೈಕೋರ್ಟ್ ಹೇಳಿತ್ತು.

ನಾಯಕ್ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು ಮಂಜೂರು ಮಾಡಿದ ರಾಜ್ಯ ಹೈಕೋರ್ಟ್ ಆದೇಶದ ವಿರುದ್ಧ ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೇ ವರ್ಷದ ಆಗಸ್ಟ್‌ 22ರಂದು ವಜಾಗೊಳಿಸಿತು.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ ಸಿ ಶರ್ಮಾ ಅವರ ಪೀಠವು ಆರೋಪಿ ಮೋಹನ್ ನಾಯಕ್ ಅವರು ವಿಚಾರಣೆಯಲ್ಲಿ ವಿಚಾರಣಾ ನ್ಯಾಯಾಲಯದೊಂದಿಗೆ ಸಹಕರಿಸಿದ್ದಾರೆ ಮತ್ತು ಯಾವುದೇ ಮುಂದೂಡಿಕೆಯನ್ನು ಕೋರಿಲ್ಲ ಎಂದು ಗಮನಿಸಿದರು.

“ಉಚ್ಚ ನ್ಯಾಯಾಲಯವು ಅಂಗೀಕರಿಸಿದ ನಿರ್ಭೀತ ಆದೇಶಗಳಲ್ಲಿ ಮಧ್ಯಪ್ರವೇಶಿಸಲು ನಾವು ಒಲವು ತೋರುವುದಿಲ್ಲ. ಆದಾಗ್ಯೂ, ವಿಚಾರಣಾ ನ್ಯಾಯಾಲಯವು ತ್ವರಿತವಾಗಿ ವಿಚಾರಣೆಯನ್ನು ನಡೆಸಬೇಕು ಮತ್ತು ಎಲ್ಲಾ ಕಕ್ಷಿದಾರರು ವಿಚಾರಣೆಯನ್ನು ಮುಕ್ತಾಯಗೊಳಿಸುವಲ್ಲಿ ವಿಚಾರಣಾ ನ್ಯಾಯಾಲಯದೊಂದಿಗೆ ಸಹಕರಿಸಬೇಕು” ಎಂದು ಸುಪ್ರೀಂ ಕೋರ್ಟ್‌ ನಿರ್ದೇಶಿಸಿದೆ.

“ಆರೋಪಿ ಸಹಕರಿಸದಿದ್ದರೆ ಅಥವಾ ಅನಗತ್ಯ ಮುಂದೂಡಿಕೆ (ಗಳನ್ನು) ಕೇಳಿದರೆ ಅಥವಾ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದರೆ, ಕರ್ನಾಟಕ ರಾಜ್ಯ ಅಥವಾ ದೂರುದಾರರು ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಲು ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ. ಅಂತಹ ಯಾವುದೇ ಅರ್ಜಿಯನ್ನು ಸಲ್ಲಿಸಿದರೆ, ಅದನ್ನು ಅದರ ಸ್ವಂತ ಅರ್ಹತೆಯ ಮೇಲೆ ಮತ್ತು ಕಾನೂನಿನ ಪ್ರಕಾರ ನಿರ್ಧರಿಸಲಾಗುತ್ತದೆ” ಎಂದು ಪೀಠ ಹೇಳಿದೆ.

ಡಿಸೆಂಬರ್ 7, 2023 ರ ಹೈಕೋರ್ಟ್ ಆದೇಶದ ವಿರುದ್ಧ ಕವಿತಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ಇದುವರೆಗೆ 137 ಸಾಕ್ಷಿಗಳನ್ನು ಪ್ರಾಸಿಕ್ಯೂಷನ್ ವಿಚಾರಣೆ ನಡೆಸಿದೆ, 137 ಸಾಕ್ಷಿಗಳನ್ನು ಕೈಬಿಡಲಾಗಿದೆ ಮತ್ತು ಪ್ರಾಸಿಕ್ಯೂಷನ್ 150 ಸಾಕ್ಷಿಗಳನ್ನು ಕೈಬಿಡುವ ಸಾಧ್ಯತೆಯಿದೆ ಮತ್ತು ಈಗ ಸುಮಾರು 100 ಸಾಕ್ಷಿಗಳು ಇನ್ನೂ ಇದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ತೀರ್ಪಿಗೂ ಮೊದಲು ಆರೋಪಿಗೆ ನೋಟಿಸ್‌ ನೀಡಿದ್ದ ಸುಪ್ರೀಂಕೋರ್ಟ್‌

ಕವಿತಾ ಲಂಕೇಶ್ ಅರ್ಜಿ ವಜಾಗೊಳಿಸುವುದಕ್ಕೂ ಮೊದಲು ಗೌರಿ ಗೌರಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗೆ ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಆರೋಪಿಗೆ ನೋಟಿಸ್ ಜಾರಿ ಮಾಡಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಹತ್ಯೆಗೀಡಾದ ಪತ್ರಕರ್ತೆಯ ಸಹೋದರಿ ಕವಿತಾ ಲಂಕೇಶ್ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಅರ್ಜಿಯಲ್ಲಿ ಮೋಹನ್ ನಾಯಕ್‌ಗೆ ಜಾಮೀನು ರದ್ದುಗೊಳಿಸುವಂತೆ ಕವಿತಾ ಲಂಕೇಶ್ ಕೋರಿದ್ದರು.

ಗೌರಿ ಲಂಕೇಶ್‌ ಹತ್ಯೆ ಆರೋಪಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಡಿ.7, 2023ರಂದು ಜಾಮೀನು ನೀಡಿತ್ತು. ಮೋಹನ್ ನಾಯಕ್ ಪರ ಹೈಕೋರ್ಟ್‌ನಲ್ಲಿ ವಕೀಲ ಅಮರ್ ಕೊರಿಯಾ ವಾದ ಮಂಡಿಸಿದ್ದರು. ಗೌರಿ ಹತ್ಯೆಯ ಕ್ರಿಮಿನಲ್ ಪಿತೂರಿಯ ಭಾಗವಾಗಿರುವ ಮೋಹನ್ ನಾಯಕ್‌ಗೆ ನೀಡಲಾದ ಜಾಮೀನನ್ನು ರದ್ದುಗೊಳಿಸುವಂತೆ ನಿರ್ದೇಶನ ನೀಡುವಂತೆ ಕವಿತಾ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಆರೋಪಿಯು ಐದು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾನೆ ಮತ್ತು ವಿಚಾರಣೆಯಲ್ಲಿ ಅನಗತ್ಯ ವಿಳಂಬವನ್ನು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ಮಂಜೂರು ಮಾಡಿತ್ತು. ವಿಶೇಷ ತನಿಖಾ ತಂಡ(ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ. ನಾಯಕ್ ಪ್ರಕರಣದಲ್ಲಿ 11ನೇ ಆರೋಪಿಯಾಗಿದ್ದು, ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

‘ಪೊಲೀಸರು ನಮ್ಮನ್ನು ಬಂಧಿಸುವ ಮುನ್ನ ನಮ್ಮ ಕುಟುಂಬದ ಅಥವಾ ಹತ್ತಿರದ ಸದಸ್ಯರ ಗಮನಕ್ಕೆ ತಂದಿಲ್ಲ‌, ಪೊಲೀಸ್ ಬಂಧನದಲ್ಲಿದ್ದಾಗ ನಮಗೆ ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಆದ್ದರಿಂದ, ಪ್ರಕರಣದ ಬಗ್ಗೆ ವಿಶೇಷ ತನಿಖೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಗೌರಿ ಹತ್ಯೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಜುಲೈ 3ರಂದು ವಜಾಗೊಳಿಸಿದೆ.

ಪೊಲೀಸರು ಕಾನೂನು ಬಾಹಿರವಾಗಿ ನಮ್ಮನ್ನು ಬಂಧಿಸಿ, ಹಿಂಸೆ ನೀಡಿದ ಕುರಿತಂತೆ ವಿಶೇಷ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಕರಣದ ಆರೋಪಿಗಳಾದ ಸುಜಿತ್ ಕುಮಾರ್, ಮನೋಹರ ಎಡವೆ, ಅಮೋಲ್ ಕಾಳೆ ಮತ್ತು ಅಮಿತ್ ರಾಮಚಂದ್ರ ದಿಗ್ವೇಕರ್ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎನ್.ಎಸ್‌.ಸಂಜಯ ಗೌಡ ಅವರಿದ್ದ ಏಕಸದಸ್ಯ ಪೀಠ, ಈಗಾಗಲೇ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಾಗಾಗಿ, ಈ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿಯನ್ನು ಇತ್ಯರ್ಥಗೊಳಿಸಿದರು.

ಗೌರಿ ಹತ್ಯೆ ಆರೋಪಿಯನ್ನು ಭೇಟಿಯಾದ ಪ್ರತಾಪ್ ಸಿಂಹ

ದಿಟ್ಟ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಳೆದ ತಿಂಗಳು ಭೇಟಿಯಾಗಿದ್ದು, ಅದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ‌ಯು ಬಿಜೆಪಿ ಮುಖಂಡ ಪ್ರತಾಪ್ ಸಿಂಹ‌ ಸ್ನೇಹಿತ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ. ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಏಕಸದಸ್ಯ ಪೀಠವು ಆರೋಪಿಗಳಾದ ನವೀನ್ ಕುಮಾರ್, ಅಮಿತ್, ಎಚ್ಎಲ್ ಸುರೇಶ್ ಅವರಿಗೆ ಜುಲೈ 16ರಂದು ಜಾಮೀನು ನೀಡಿತ್ತು.

ಇದನ್ನೂ ಓದಿ; “ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ”: ರಾಧಿಕಾ ಶರತ್‌ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...