Homeಮುಖಪುಟನಾವೇನು ಪ್ರಾಣಿಗಳೆ? : ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪ್ರತಿಭಟನೆ

ನಾವೇನು ಪ್ರಾಣಿಗಳೆ? : ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪ್ರತಿಭಟನೆ

ಈ ಮೊದಲು ಆಗ್ರಾದ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರ ಬಸ್‌ ಅನ್ನು ಹೊರಗೆ ನಿಲ್ಲಿಸಿ, ದಾಖಲು ಮಾಡಿಕೊಳ್ಳದೇ ಗಂಟೆಗಟ್ಟಲೇ ಗೇಟಿನಿಂದ ಆಚೆ ಕಾಯಿಸಿದ್ದ ಘಟನೆ ಜರುಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಸರ್ಕಾರ ಆಸ್ಪತ್ರೆಯ ಎದುರಿಗೆ ಹಲವಾರು ಕೊರೊನಾ ಸೋಂಕಿತರ ಗುಂಪು ಒಟ್ಟುಗೂಡಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪ್ರಯಾಗ್‌ರಾಜ್‌ನ ಕೋಟಾ ಬನಿ ಕ್ಯಾಟಗರಿ ಎಲ್ ಕೋವಿಡ್‌-19 ಆಸ್ಪತ್ರೆಯಲ್ಲಿ ಈ ಘಟನೆ ಜರುಗಿದ್ದು, ನಾವು ಪ್ರಾಣಿಗಳೆ ಎಂದು ಕೊರೊನಾ ಸೋಂಕಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಗುರುವಾರ ಸತತ ಎರಡು ಗಂಟೆಗಳಾದರೂ ಆಸ್ಪತ್ರೆಗೆ ನೀರು ಸರಬರಾಜು ಆಗದ ಕಾರಣ ಸಿಟ್ಟಿಗೆದ್ದ ಸೋಂಕಿತರು ಪ್ರತಿಭಟನೆ ನಡೆಸಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ಸೋಂಕಿತರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಸೋಂಕಿತರು ನಾವೇನು ಪ್ರಾಣಿಗಳೆ? ನಮಗೆ ಆಹಾರ ನೀರು ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್‌ ವಿಡಿಯೋದಲ್ಲಿ ವಿಡಿಯೋ ಮಾಡಿದವರು ಅಲ್ಲಿನ ಸೋಂಕಿತರನ್ನು, ಆಸ್ಪತ್ರೆಯ ಪ್ರವೇಶದ್ವಾರವನ್ನು ಮತ್ತು ನಾಮಫಲಕವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ಆತ ನಿಮಗೆ ಸಮರ್ಪಕವಾಗಿ ಆಹಾರ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಎಲ್ಲಾ ಸೋಂಕಿತರು ಇಲ್ಲ, ಇಲ್ಲ ಎಂದು ಉತ್ತರಿಸಿದ್ದಾರೆ. ಅರ್ಧ ಬೇಯಿಸಿದ ಆಹಾರಗಳನ್ನು ನೀಡುತ್ತಿದ್ದಾರೆ ಎಂದು ಹಿರಿಯ ವ್ಯಕ್ತಿಯೊಬ್ಬರು ದೂರಿದ್ದಾರೆ.

ಹಲವಾರು ವ್ಯಕ್ತಿಗಳು ಉತ್ತಮ ಆಹಾರಕ್ಕಾಗಿ ಅಲ್ಲಿನ ಅಧಿಕಾರಿಗಳಿಗೆ ಹಣ ನೀಡಿರುವುದಾಗಿ ತಿಳಿಸಿದ್ದಾರೆ. ಬೇಕಾದರೆ ಹಣ ತೆಗೆದುಕೊಳ್ಳಿ, ಆದರೆ ಇಂತಹ ಅಸಹ್ಯ ಪರಿಸ್ಥಿತಿಯಿಂದ ನಮ್ಮನ್ನು ಬಿಡುಗಡೆಗೊಳಿಸಿ. ನಾವು ನಮ್ಮ ಮನೆಗಳಿಗೆ ಹೋಗುತ್ತೇವೆ ಎಂದು ಮಹಿಳೆಯೊಬ್ಬರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತ ಪ್ರಯಾಗ್‌ರಾಜ್‌ನ ಮುಖ್ಯ ಆರೋಗ್ಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇಲ್ಲಿ ಯಾವಾಗಲೂ ನೀರು ಇರುತ್ತದೆ. ಇಂದು ಕೇವಲ ಎರಡು ಗಂಟೆಗಳ ಕಾಲ ಶುದ್ದ ನೀರು ಸರಬರಾಜು ಆಗಲು ವಿಳಂಬವಾಗಿದ್ದಕ್ಕೆ ಈ ಘಟನೆ ಜರುಗಿದೆ. ವಿದ್ಯುತ್‌ ಸಮಸ್ಯೆಯಿಂದಾಗಿ ನಾವು ಶುದ್ಧ ನೀರು ಸರಬರಾಜು ಮಾಡುವುದು ತಡವಾಯಿತು. ಕೂಡಲೇ ಮೆಕಾನಿಕ್‌ ಕರೆಸಿ ವಿದ್ಯುತ್‌ ಸಮಸ್ಯೆ ಸರಿಪಡಿಸಿ ನೀರಿನ ವ್ಯವಸ್ಥೆ ಮಾಡಿದೆವು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಸಮರ್ಪಕವಾಗಿ ನಡೆಸಿಕೊಳ್ಳುತ್ತಿಲ್ಲ ಎಂಬುದಕ್ಕೆ ಇದು ಎರಡನೆಯ ಉದಾಹರಣೆಯಾಗಿದೆ. ಈ ಮೊದಲು ಆಗ್ರಾದ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರ ಬಸ್‌ ಅನ್ನು ಹೊರಗೆ ನಿಲ್ಲಿಸಿ, ದಾಖಲು ಮಾಡಿಕೊಳ್ಳದೇ ಗಂಟೆಗಟ್ಟಲೇ ಗೇಟಿನಿಂದ ಆಚೆ ಕಾಯಿಸಿದ್ದ ಘಟನೆ ಜರುಗಿತ್ತು.


ಇದನ್ನೂ ಓದಿ: ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು 


ಇನ್ನು ಕಳೆದ ವಾರ ಉತ್ತರ ಪ್ರದೇಶ ಸರ್ಕಾರವು ಕೋವಿಡ್‌ -19 ಐಸೋಲೇಸನ್‌ ಲೆವಲ್‌2 ಮತ್ತು ಲೆವೆಲ್‌ 3 ವಾರ್ಡ್‌‌ಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸುವಂತೆ ಆದೇಶ ಹೊರಡಿಸಿತ್ತು. ಆದರೆ ತೀವ್ರ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಆ ಆದೇಶವನ್ನು ಹಿಂಪಡೆದಿತ್ತು.


ಇದನ್ನೂ ಓದಿ: ಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...