Homeಮುಖಪುಟನಾವೇನು ಪ್ರಾಣಿಗಳೆ? : ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪ್ರತಿಭಟನೆ

ನಾವೇನು ಪ್ರಾಣಿಗಳೆ? : ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪ್ರತಿಭಟನೆ

ಈ ಮೊದಲು ಆಗ್ರಾದ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರ ಬಸ್‌ ಅನ್ನು ಹೊರಗೆ ನಿಲ್ಲಿಸಿ, ದಾಖಲು ಮಾಡಿಕೊಳ್ಳದೇ ಗಂಟೆಗಟ್ಟಲೇ ಗೇಟಿನಿಂದ ಆಚೆ ಕಾಯಿಸಿದ್ದ ಘಟನೆ ಜರುಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಸರ್ಕಾರ ಆಸ್ಪತ್ರೆಯ ಎದುರಿಗೆ ಹಲವಾರು ಕೊರೊನಾ ಸೋಂಕಿತರ ಗುಂಪು ಒಟ್ಟುಗೂಡಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪ್ರಯಾಗ್‌ರಾಜ್‌ನ ಕೋಟಾ ಬನಿ ಕ್ಯಾಟಗರಿ ಎಲ್ ಕೋವಿಡ್‌-19 ಆಸ್ಪತ್ರೆಯಲ್ಲಿ ಈ ಘಟನೆ ಜರುಗಿದ್ದು, ನಾವು ಪ್ರಾಣಿಗಳೆ ಎಂದು ಕೊರೊನಾ ಸೋಂಕಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಗುರುವಾರ ಸತತ ಎರಡು ಗಂಟೆಗಳಾದರೂ ಆಸ್ಪತ್ರೆಗೆ ನೀರು ಸರಬರಾಜು ಆಗದ ಕಾರಣ ಸಿಟ್ಟಿಗೆದ್ದ ಸೋಂಕಿತರು ಪ್ರತಿಭಟನೆ ನಡೆಸಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ಸೋಂಕಿತರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಸೋಂಕಿತರು ನಾವೇನು ಪ್ರಾಣಿಗಳೆ? ನಮಗೆ ಆಹಾರ ನೀರು ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್‌ ವಿಡಿಯೋದಲ್ಲಿ ವಿಡಿಯೋ ಮಾಡಿದವರು ಅಲ್ಲಿನ ಸೋಂಕಿತರನ್ನು, ಆಸ್ಪತ್ರೆಯ ಪ್ರವೇಶದ್ವಾರವನ್ನು ಮತ್ತು ನಾಮಫಲಕವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ಆತ ನಿಮಗೆ ಸಮರ್ಪಕವಾಗಿ ಆಹಾರ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಎಲ್ಲಾ ಸೋಂಕಿತರು ಇಲ್ಲ, ಇಲ್ಲ ಎಂದು ಉತ್ತರಿಸಿದ್ದಾರೆ. ಅರ್ಧ ಬೇಯಿಸಿದ ಆಹಾರಗಳನ್ನು ನೀಡುತ್ತಿದ್ದಾರೆ ಎಂದು ಹಿರಿಯ ವ್ಯಕ್ತಿಯೊಬ್ಬರು ದೂರಿದ್ದಾರೆ.

ಹಲವಾರು ವ್ಯಕ್ತಿಗಳು ಉತ್ತಮ ಆಹಾರಕ್ಕಾಗಿ ಅಲ್ಲಿನ ಅಧಿಕಾರಿಗಳಿಗೆ ಹಣ ನೀಡಿರುವುದಾಗಿ ತಿಳಿಸಿದ್ದಾರೆ. ಬೇಕಾದರೆ ಹಣ ತೆಗೆದುಕೊಳ್ಳಿ, ಆದರೆ ಇಂತಹ ಅಸಹ್ಯ ಪರಿಸ್ಥಿತಿಯಿಂದ ನಮ್ಮನ್ನು ಬಿಡುಗಡೆಗೊಳಿಸಿ. ನಾವು ನಮ್ಮ ಮನೆಗಳಿಗೆ ಹೋಗುತ್ತೇವೆ ಎಂದು ಮಹಿಳೆಯೊಬ್ಬರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತ ಪ್ರಯಾಗ್‌ರಾಜ್‌ನ ಮುಖ್ಯ ಆರೋಗ್ಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇಲ್ಲಿ ಯಾವಾಗಲೂ ನೀರು ಇರುತ್ತದೆ. ಇಂದು ಕೇವಲ ಎರಡು ಗಂಟೆಗಳ ಕಾಲ ಶುದ್ದ ನೀರು ಸರಬರಾಜು ಆಗಲು ವಿಳಂಬವಾಗಿದ್ದಕ್ಕೆ ಈ ಘಟನೆ ಜರುಗಿದೆ. ವಿದ್ಯುತ್‌ ಸಮಸ್ಯೆಯಿಂದಾಗಿ ನಾವು ಶುದ್ಧ ನೀರು ಸರಬರಾಜು ಮಾಡುವುದು ತಡವಾಯಿತು. ಕೂಡಲೇ ಮೆಕಾನಿಕ್‌ ಕರೆಸಿ ವಿದ್ಯುತ್‌ ಸಮಸ್ಯೆ ಸರಿಪಡಿಸಿ ನೀರಿನ ವ್ಯವಸ್ಥೆ ಮಾಡಿದೆವು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಸಮರ್ಪಕವಾಗಿ ನಡೆಸಿಕೊಳ್ಳುತ್ತಿಲ್ಲ ಎಂಬುದಕ್ಕೆ ಇದು ಎರಡನೆಯ ಉದಾಹರಣೆಯಾಗಿದೆ. ಈ ಮೊದಲು ಆಗ್ರಾದ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರ ಬಸ್‌ ಅನ್ನು ಹೊರಗೆ ನಿಲ್ಲಿಸಿ, ದಾಖಲು ಮಾಡಿಕೊಳ್ಳದೇ ಗಂಟೆಗಟ್ಟಲೇ ಗೇಟಿನಿಂದ ಆಚೆ ಕಾಯಿಸಿದ್ದ ಘಟನೆ ಜರುಗಿತ್ತು.


ಇದನ್ನೂ ಓದಿ: ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು 


ಇನ್ನು ಕಳೆದ ವಾರ ಉತ್ತರ ಪ್ರದೇಶ ಸರ್ಕಾರವು ಕೋವಿಡ್‌ -19 ಐಸೋಲೇಸನ್‌ ಲೆವಲ್‌2 ಮತ್ತು ಲೆವೆಲ್‌ 3 ವಾರ್ಡ್‌‌ಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸುವಂತೆ ಆದೇಶ ಹೊರಡಿಸಿತ್ತು. ಆದರೆ ತೀವ್ರ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಆ ಆದೇಶವನ್ನು ಹಿಂಪಡೆದಿತ್ತು.


ಇದನ್ನೂ ಓದಿ: ಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...