Homeಮುಖಪುಟನಾವೇನು ಪ್ರಾಣಿಗಳೆ? : ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪ್ರತಿಭಟನೆ

ನಾವೇನು ಪ್ರಾಣಿಗಳೆ? : ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪ್ರತಿಭಟನೆ

ಈ ಮೊದಲು ಆಗ್ರಾದ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರ ಬಸ್‌ ಅನ್ನು ಹೊರಗೆ ನಿಲ್ಲಿಸಿ, ದಾಖಲು ಮಾಡಿಕೊಳ್ಳದೇ ಗಂಟೆಗಟ್ಟಲೇ ಗೇಟಿನಿಂದ ಆಚೆ ಕಾಯಿಸಿದ್ದ ಘಟನೆ ಜರುಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಸರ್ಕಾರ ಆಸ್ಪತ್ರೆಯ ಎದುರಿಗೆ ಹಲವಾರು ಕೊರೊನಾ ಸೋಂಕಿತರ ಗುಂಪು ಒಟ್ಟುಗೂಡಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪ್ರಯಾಗ್‌ರಾಜ್‌ನ ಕೋಟಾ ಬನಿ ಕ್ಯಾಟಗರಿ ಎಲ್ ಕೋವಿಡ್‌-19 ಆಸ್ಪತ್ರೆಯಲ್ಲಿ ಈ ಘಟನೆ ಜರುಗಿದ್ದು, ನಾವು ಪ್ರಾಣಿಗಳೆ ಎಂದು ಕೊರೊನಾ ಸೋಂಕಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಗುರುವಾರ ಸತತ ಎರಡು ಗಂಟೆಗಳಾದರೂ ಆಸ್ಪತ್ರೆಗೆ ನೀರು ಸರಬರಾಜು ಆಗದ ಕಾರಣ ಸಿಟ್ಟಿಗೆದ್ದ ಸೋಂಕಿತರು ಪ್ರತಿಭಟನೆ ನಡೆಸಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ಸೋಂಕಿತರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಸೋಂಕಿತರು ನಾವೇನು ಪ್ರಾಣಿಗಳೆ? ನಮಗೆ ಆಹಾರ ನೀರು ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್‌ ವಿಡಿಯೋದಲ್ಲಿ ವಿಡಿಯೋ ಮಾಡಿದವರು ಅಲ್ಲಿನ ಸೋಂಕಿತರನ್ನು, ಆಸ್ಪತ್ರೆಯ ಪ್ರವೇಶದ್ವಾರವನ್ನು ಮತ್ತು ನಾಮಫಲಕವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ಆತ ನಿಮಗೆ ಸಮರ್ಪಕವಾಗಿ ಆಹಾರ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಎಲ್ಲಾ ಸೋಂಕಿತರು ಇಲ್ಲ, ಇಲ್ಲ ಎಂದು ಉತ್ತರಿಸಿದ್ದಾರೆ. ಅರ್ಧ ಬೇಯಿಸಿದ ಆಹಾರಗಳನ್ನು ನೀಡುತ್ತಿದ್ದಾರೆ ಎಂದು ಹಿರಿಯ ವ್ಯಕ್ತಿಯೊಬ್ಬರು ದೂರಿದ್ದಾರೆ.

ಹಲವಾರು ವ್ಯಕ್ತಿಗಳು ಉತ್ತಮ ಆಹಾರಕ್ಕಾಗಿ ಅಲ್ಲಿನ ಅಧಿಕಾರಿಗಳಿಗೆ ಹಣ ನೀಡಿರುವುದಾಗಿ ತಿಳಿಸಿದ್ದಾರೆ. ಬೇಕಾದರೆ ಹಣ ತೆಗೆದುಕೊಳ್ಳಿ, ಆದರೆ ಇಂತಹ ಅಸಹ್ಯ ಪರಿಸ್ಥಿತಿಯಿಂದ ನಮ್ಮನ್ನು ಬಿಡುಗಡೆಗೊಳಿಸಿ. ನಾವು ನಮ್ಮ ಮನೆಗಳಿಗೆ ಹೋಗುತ್ತೇವೆ ಎಂದು ಮಹಿಳೆಯೊಬ್ಬರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತ ಪ್ರಯಾಗ್‌ರಾಜ್‌ನ ಮುಖ್ಯ ಆರೋಗ್ಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇಲ್ಲಿ ಯಾವಾಗಲೂ ನೀರು ಇರುತ್ತದೆ. ಇಂದು ಕೇವಲ ಎರಡು ಗಂಟೆಗಳ ಕಾಲ ಶುದ್ದ ನೀರು ಸರಬರಾಜು ಆಗಲು ವಿಳಂಬವಾಗಿದ್ದಕ್ಕೆ ಈ ಘಟನೆ ಜರುಗಿದೆ. ವಿದ್ಯುತ್‌ ಸಮಸ್ಯೆಯಿಂದಾಗಿ ನಾವು ಶುದ್ಧ ನೀರು ಸರಬರಾಜು ಮಾಡುವುದು ತಡವಾಯಿತು. ಕೂಡಲೇ ಮೆಕಾನಿಕ್‌ ಕರೆಸಿ ವಿದ್ಯುತ್‌ ಸಮಸ್ಯೆ ಸರಿಪಡಿಸಿ ನೀರಿನ ವ್ಯವಸ್ಥೆ ಮಾಡಿದೆವು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಸಮರ್ಪಕವಾಗಿ ನಡೆಸಿಕೊಳ್ಳುತ್ತಿಲ್ಲ ಎಂಬುದಕ್ಕೆ ಇದು ಎರಡನೆಯ ಉದಾಹರಣೆಯಾಗಿದೆ. ಈ ಮೊದಲು ಆಗ್ರಾದ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರ ಬಸ್‌ ಅನ್ನು ಹೊರಗೆ ನಿಲ್ಲಿಸಿ, ದಾಖಲು ಮಾಡಿಕೊಳ್ಳದೇ ಗಂಟೆಗಟ್ಟಲೇ ಗೇಟಿನಿಂದ ಆಚೆ ಕಾಯಿಸಿದ್ದ ಘಟನೆ ಜರುಗಿತ್ತು.


ಇದನ್ನೂ ಓದಿ: ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು 


ಇನ್ನು ಕಳೆದ ವಾರ ಉತ್ತರ ಪ್ರದೇಶ ಸರ್ಕಾರವು ಕೋವಿಡ್‌ -19 ಐಸೋಲೇಸನ್‌ ಲೆವಲ್‌2 ಮತ್ತು ಲೆವೆಲ್‌ 3 ವಾರ್ಡ್‌‌ಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸುವಂತೆ ಆದೇಶ ಹೊರಡಿಸಿತ್ತು. ಆದರೆ ತೀವ್ರ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಆ ಆದೇಶವನ್ನು ಹಿಂಪಡೆದಿತ್ತು.


ಇದನ್ನೂ ಓದಿ: ಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...