Homeಮುಖಪುಟನಾವೇನು ಪ್ರಾಣಿಗಳೆ? : ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪ್ರತಿಭಟನೆ

ನಾವೇನು ಪ್ರಾಣಿಗಳೆ? : ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪ್ರತಿಭಟನೆ

ಈ ಮೊದಲು ಆಗ್ರಾದ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರ ಬಸ್‌ ಅನ್ನು ಹೊರಗೆ ನಿಲ್ಲಿಸಿ, ದಾಖಲು ಮಾಡಿಕೊಳ್ಳದೇ ಗಂಟೆಗಟ್ಟಲೇ ಗೇಟಿನಿಂದ ಆಚೆ ಕಾಯಿಸಿದ್ದ ಘಟನೆ ಜರುಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಸರ್ಕಾರ ಆಸ್ಪತ್ರೆಯ ಎದುರಿಗೆ ಹಲವಾರು ಕೊರೊನಾ ಸೋಂಕಿತರ ಗುಂಪು ಒಟ್ಟುಗೂಡಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪ್ರಯಾಗ್‌ರಾಜ್‌ನ ಕೋಟಾ ಬನಿ ಕ್ಯಾಟಗರಿ ಎಲ್ ಕೋವಿಡ್‌-19 ಆಸ್ಪತ್ರೆಯಲ್ಲಿ ಈ ಘಟನೆ ಜರುಗಿದ್ದು, ನಾವು ಪ್ರಾಣಿಗಳೆ ಎಂದು ಕೊರೊನಾ ಸೋಂಕಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಗುರುವಾರ ಸತತ ಎರಡು ಗಂಟೆಗಳಾದರೂ ಆಸ್ಪತ್ರೆಗೆ ನೀರು ಸರಬರಾಜು ಆಗದ ಕಾರಣ ಸಿಟ್ಟಿಗೆದ್ದ ಸೋಂಕಿತರು ಪ್ರತಿಭಟನೆ ನಡೆಸಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ಸೋಂಕಿತರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಸೋಂಕಿತರು ನಾವೇನು ಪ್ರಾಣಿಗಳೆ? ನಮಗೆ ಆಹಾರ ನೀರು ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್‌ ವಿಡಿಯೋದಲ್ಲಿ ವಿಡಿಯೋ ಮಾಡಿದವರು ಅಲ್ಲಿನ ಸೋಂಕಿತರನ್ನು, ಆಸ್ಪತ್ರೆಯ ಪ್ರವೇಶದ್ವಾರವನ್ನು ಮತ್ತು ನಾಮಫಲಕವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ಆತ ನಿಮಗೆ ಸಮರ್ಪಕವಾಗಿ ಆಹಾರ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಎಲ್ಲಾ ಸೋಂಕಿತರು ಇಲ್ಲ, ಇಲ್ಲ ಎಂದು ಉತ್ತರಿಸಿದ್ದಾರೆ. ಅರ್ಧ ಬೇಯಿಸಿದ ಆಹಾರಗಳನ್ನು ನೀಡುತ್ತಿದ್ದಾರೆ ಎಂದು ಹಿರಿಯ ವ್ಯಕ್ತಿಯೊಬ್ಬರು ದೂರಿದ್ದಾರೆ.

ಹಲವಾರು ವ್ಯಕ್ತಿಗಳು ಉತ್ತಮ ಆಹಾರಕ್ಕಾಗಿ ಅಲ್ಲಿನ ಅಧಿಕಾರಿಗಳಿಗೆ ಹಣ ನೀಡಿರುವುದಾಗಿ ತಿಳಿಸಿದ್ದಾರೆ. ಬೇಕಾದರೆ ಹಣ ತೆಗೆದುಕೊಳ್ಳಿ, ಆದರೆ ಇಂತಹ ಅಸಹ್ಯ ಪರಿಸ್ಥಿತಿಯಿಂದ ನಮ್ಮನ್ನು ಬಿಡುಗಡೆಗೊಳಿಸಿ. ನಾವು ನಮ್ಮ ಮನೆಗಳಿಗೆ ಹೋಗುತ್ತೇವೆ ಎಂದು ಮಹಿಳೆಯೊಬ್ಬರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತ ಪ್ರಯಾಗ್‌ರಾಜ್‌ನ ಮುಖ್ಯ ಆರೋಗ್ಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇಲ್ಲಿ ಯಾವಾಗಲೂ ನೀರು ಇರುತ್ತದೆ. ಇಂದು ಕೇವಲ ಎರಡು ಗಂಟೆಗಳ ಕಾಲ ಶುದ್ದ ನೀರು ಸರಬರಾಜು ಆಗಲು ವಿಳಂಬವಾಗಿದ್ದಕ್ಕೆ ಈ ಘಟನೆ ಜರುಗಿದೆ. ವಿದ್ಯುತ್‌ ಸಮಸ್ಯೆಯಿಂದಾಗಿ ನಾವು ಶುದ್ಧ ನೀರು ಸರಬರಾಜು ಮಾಡುವುದು ತಡವಾಯಿತು. ಕೂಡಲೇ ಮೆಕಾನಿಕ್‌ ಕರೆಸಿ ವಿದ್ಯುತ್‌ ಸಮಸ್ಯೆ ಸರಿಪಡಿಸಿ ನೀರಿನ ವ್ಯವಸ್ಥೆ ಮಾಡಿದೆವು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಸಮರ್ಪಕವಾಗಿ ನಡೆಸಿಕೊಳ್ಳುತ್ತಿಲ್ಲ ಎಂಬುದಕ್ಕೆ ಇದು ಎರಡನೆಯ ಉದಾಹರಣೆಯಾಗಿದೆ. ಈ ಮೊದಲು ಆಗ್ರಾದ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರ ಬಸ್‌ ಅನ್ನು ಹೊರಗೆ ನಿಲ್ಲಿಸಿ, ದಾಖಲು ಮಾಡಿಕೊಳ್ಳದೇ ಗಂಟೆಗಟ್ಟಲೇ ಗೇಟಿನಿಂದ ಆಚೆ ಕಾಯಿಸಿದ್ದ ಘಟನೆ ಜರುಗಿತ್ತು.


ಇದನ್ನೂ ಓದಿ: ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು 


ಇನ್ನು ಕಳೆದ ವಾರ ಉತ್ತರ ಪ್ರದೇಶ ಸರ್ಕಾರವು ಕೋವಿಡ್‌ -19 ಐಸೋಲೇಸನ್‌ ಲೆವಲ್‌2 ಮತ್ತು ಲೆವೆಲ್‌ 3 ವಾರ್ಡ್‌‌ಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸುವಂತೆ ಆದೇಶ ಹೊರಡಿಸಿತ್ತು. ಆದರೆ ತೀವ್ರ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಆ ಆದೇಶವನ್ನು ಹಿಂಪಡೆದಿತ್ತು.


ಇದನ್ನೂ ಓದಿ: ಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...