Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ 'ಸಾಹಿತ್ಯ ಉತ್ಸವ'ಕ್ಕೆ ಬಹಿಷ್ಕಾರ ಹಾಕಿದ...

ಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ ‘ಸಾಹಿತ್ಯ ಉತ್ಸವ’ಕ್ಕೆ ಬಹಿಷ್ಕಾರ ಹಾಕಿದ ಖ್ಯಾತ ಸಾಹಿತಿಗಳು

- Advertisement -
- Advertisement -

ಗಾಝಾ ಮೇಲಿನ ಯುದ್ಧವನ್ನು ತಡೆಯುವಲ್ಲಿ ವಿಫಲವಾದ ಕಾರಣ ಹಲವು ಸಾಹಿತಿಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಗುಂಪು ಅಮೆರಿಕದಲ್ಲಿ ನಡೆಯುವ ಪ್ರತಿಷ್ಠಿತ PEN ವಿಶ್ವ ಧ್ವನಿ ಉತ್ಸವವನ್ನು( PEN World Voices Festival) ಬಹಿಷ್ಕರಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಖ್ಯಾತ ಬರಹಗಾರರಾದ ನವೋಮಿ ಕ್ಲೈನ್, ಮಿಚೆಲ್ ಅಲೆಕ್ಸಾಂಡರ್, ಹಿಶಾಮ್ ಮಟರ್, ಇಸಾಬೆಲ್ಲಾ ಹಮ್ಮದ್, ಮಾಝಾ ಮೆಂಗಿಸ್ಟೆ, ಝೈನಾ ಅರಾಫತ್ ಮತ್ತು ಸುಸಾನ್ ಮುಅಡ್ಡಿ ದರ್ರಾಜ್ ಪತ್ರಕ್ಕೆ ಸಹಿ ಹಾಕಿರುವವರಲ್ಲಿ ಸೇರಿದ್ದಾರೆ,  ಇದಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗೆಗಿನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಇತರ ಬರಹಗಾರರನ್ನು ಒತ್ತಾಯಿಸಿದ್ದಾರೆ.

PEN ವಿಶ್ವ ಧ್ವನಿ ಉತ್ಸವವನ್ನು ವಿಶ್ವದ ಅತ್ಯಂತ ಪ್ರತಿಷ್ಠಿತ ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಒಂದೆಂದು ಹೆಸರಿಸಲಾಗಿದೆ ಮತ್ತು 2005ರಿಂದ ಈ ಕಾರ್ಯಕ್ರಮವನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ.

ಗಾಝಾದ ಮೇಲೆ ಇಸ್ರೇಲ್‌ ಯುದ್ಧ ನಡೆಸುತ್ತಿರುವ ಈ ಸನ್ನಿವೇಶದಲ್ಲಿ PEN ಅಮೆರಿಕಾ ಎಲ್ಲರಿಗೂ ಶಾಂತಿ ಮತ್ತು ಸಮಾನತೆ ಮತ್ತು ಬರಹಗಾರರಿಗೆ ಸ್ವಾತಂತ್ರ್ಯ ಕುರಿತ ಬದ್ಧತೆಗೆ ದ್ರೋಹ ಮಾಡಿದೆ ಎಂದು ನಾವು ನಂಬುತ್ತೇವೆ ಎಂದು ಪತ್ರದಲ್ಲಿ ಪ್ರತಿಪಾದಿಸಲಾಗಿದೆ. ಪತ್ರದಲ್ಲಿ ಗಾಝಾದಲ್ಲಿ ತಕ್ಷಣದ ಕದನ ವಿರಾಮವನ್ನು ಒತ್ತಾಯಿಸುವ ಇತರ ಮಾನವ ಹಕ್ಕುಗಳ ಸಂಘಟನೆಗಳೊಂದಿಗೆ ಸೇರಲು PEN ಅಮೆರಿಕ ಉತ್ಸುಕತೆಯನ್ನು ತೋರಿಲ್ಲ ಎಂದು ಉಲ್ಲೇಖಿಸಲಾಗಿದೆ.

600 ಬರಹಗಾರರು ಮತ್ತು ಕವಿಗಳ ಗುಂಪು ಗಾಝಾದ ಮೇಲೆ ದಾಳಿಯನ್ನು ಖಂಡಿಸದ PENನ ಸಾಪೇಕ್ಷ ಮೌನವನ್ನು ಖಂಡಿಸುವ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದಾರೆ. ಆ ಪತ್ರಕ್ಕೆ ಈಗ ರೊಕ್ಸೇನ್ ಗೇ, ಲಾರೆನ್ ಗ್ರಾಫ್, ಮೇರಿ-ಹೆಲೆನ್ ಬರ್ಟಿನೊ, ಕೀಸೆ ಲೇಮನ್, ಸಯೀದ್ ಜೋನ್ಸ್, ಕಾರ್ಮೆನ್ ಮರಿಯಾ ಮಚಾಡೊ, ಸೋಲ್ಮಾಜ್ ಷರೀಫ್, ಟಾಮಿ ಪಿಕೊ, ಲಾರಾ ವ್ಯಾನ್ ಡೆನ್ ಬರ್ಗ್ ಮತ್ತು ನಾನಾ ಕ್ವಾಮೆ ಅಡ್ಜೆ ಸೇರಿದಂತೆ 1300ಕ್ಕೂ ಹೆಚ್ಚು ಬರಹಗಾರರು ಸಹಿ ಹಾಕಿದ್ದಾರೆ.

ನ್ಯೂಯಾರ್ಕ್ ನಗರದಲ್ಲಿ ಈ ವರ್ಷದ PEN ವರ್ಲ್ಡ್ ವಾಯ್ಸ್ ಉತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಲು ನಮ್ಮಲ್ಲಿ ಪ್ರತಿಯೊಬ್ಬರನ್ನು ಆಹ್ವಾನಿಸಲಾಗಿದೆ. ನಾವು ಎಲ್ಲರೂ ಸೇರಿ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇವೆ. ನಮಗೆ ಉತ್ಸವದ ಬಹಿಷ್ಕಾರವಲ್ಲದೆ ಬೇರೆ ಆಯ್ಕೆ ಯಾಕಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದೇವೆ ಎಂದು ಹೇಳಿದ್ದಾರೆ.

ಗಾಝಾದ ಮೇಲೆ ಇಸ್ರೇಲ್‌ನ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ, PEN ಅಮೆರಿಕ ಎಲ್ಲರಿಗೂ ಶಾಂತಿ ಮತ್ತು ಸಮಾನತೆ ಮತ್ತು ಸ್ವಾತಂತ್ರ್ಯ ಮತ್ತು ಭದ್ರತೆಗೆ ಸಂಬಂಧಿಸಿದ ಪ್ರತಿಪಾದಿತ ಬದ್ಧತೆಗೆ ದ್ರೋಹ ಮಾಡಿದೆ ಎಂದು ನಾವು ನಂಬುತ್ತೇವೆ. 1948ರಲ್ಲಿ ಅಳವಡಿಸಿಕೊಂಡ PEN ತತ್ವದ ಪ್ರಕಾರ, ಜಗತ್ತಿನಲ್ಲಿ ಶಾಂತಿ ಮತ್ತು ಸಮಾನತೆಯಿಂದ ಬದುಕುವ ಒಂದು ಮಾನವೀಯತೆಯ ಆದರ್ಶವನ್ನು ಸಾಧಿಸಲು ತಮ್ಮ ಕೈಲಾದಷ್ಟು ಕೆಲಸ ಮಾಡುವುದು PEN ಸದಸ್ಯರ ಕರ್ತವ್ಯವಾಗಿದೆ ಎಂದು ಹೇಳುತ್ತದೆ. ಪ್ಯಾಲೆಸ್ತೀನ್‌ನಲ್ಲಿ ಕವಿಗಳು, ವಿದ್ವಾಂಸರು, ಕಾದಂಬರಿಕಾರರು ಮತ್ತು ಪತ್ರಕರ್ತರು ಮತ್ತು ಪ್ರಬಂಧಕಾರರು ತಮ್ಮ ಮಾತುಗಳನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳಲು ತಮ್ಮ ಜೀವನ ಮತ್ತು ಅವರ ಕುಟುಂಬಗಳ ಜೀವನವನ್ನು ಒಳಗೊಂಡಂತೆ ಎಲ್ಲವನ್ನೂ ಪಣಕ್ಕಿಟ್ಟಿದ್ದಾರೆ. ಆದರೂ PEN ಅಮೇರಿಕ ತುಳಿತಕ್ಕೊಳಗಾದವರ ಪರವಾಗಿ ದೃಢವಾಗಿ ನಿಲ್ಲಲಿಲ್ಲ ಎಂದು ಹೇಳಿದ್ದಾರೆ.

ನಿಮಗೆ ತಿಳಿದಿರುವಂತೆ, ಪ್ರಸ್ತುತ ಗಾಝಾದಲ್ಲಿ ನಾಗರಿಕರ ನರಮೇಧ ನಡೆಸಲಾಗುತ್ತಿದೆ, ಇದರ ಭಯಾನಕತೆಯನ್ನು ಪ್ರತಿದಿನ ಚಿತ್ರೀಕರಿಸಲಾಗುತ್ತಿದೆ ಮತ್ತು ಪ್ರಪಂಚದಾದ್ಯಂತ ವೈರಲ್‌ ಮಾಡಲಾಗಿದೆ. ಇಸ್ರೇಲ್‌ ಹತ್ಯಾಕಾಂಡಕ್ಕೆ ಈವರೆಗೆ 1,00,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 12,000ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 30,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಗಾಝಾದಲ್ಲಿ 70 ಪ್ರತಿಶತದಷ್ಟು ಮನೆಗಳು ಹಾನಿಗೊಳಗಾಗಿವೆ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಜನರು ಬರಗಾಲದ ಅಪಾಯದಲ್ಲಿದ್ದಾರೆ ಮತ್ತು ತಮ್ಮ ಮನೆಗಳ ಮೇಲೆ ಬಾಂಬ್ ದಾಳಿಯಿಂದ ಬದುಕುಳಿದ ನಂತರವೂ ಮಕ್ಕಳು ಮತ್ತು ವೃದ್ಧರು ಅಪೌಷ್ಟಿಕತೆ ಮತ್ತು ನಿರ್ಜಲೀಕರಣದಿಂದ ಸಾಯುತ್ತಿದ್ದಾರೆ. ಇದೆಲ್ಲದರ ಹೊರತಾಗಿಯೂ, ತಕ್ಷಣದ ಮತ್ತು ಬೇಷರತ್ತಾದ ಕದನ ವಿರಾಮದ ಬೇಡಿಕೆಗಳಲ್ಲಿ ಇತರ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳನ್ನು ಸೇರಲು PEN ಅಮೆರಿಕ ನಿರಾಕರಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಯುದ್ಧ ಪ್ರಾರಂಭಿಸಿದ ಬಳಿಕ ಇಸ್ರೇಲ್ ಸುಮಾರು ನೂರು ಪತ್ರಕರ್ತರು ಮತ್ತು ಮಾದ್ಯಮ ಕಾರ್ಯಕರ್ತರನ್ನು ಹತ್ಯೆ ಮಾಡಿದೆ. ಅಫ್ಘಾನಿಸ್ತಾನದಲ್ಲಿ ಯುದ್ಧದ ವೇಳೆ ಸಂಭವಿಸಿದ ಸಾವಿಗಿಂತ ಇದು ಅಧಿಕವಾಗಿದೆ. ಇಸ್ರೇಲ್ ಸುಮಾರು ನೂರು ಶಿಕ್ಷಣ ತಜ್ಞರು ಮತ್ತು ಬರಹಗಾರರನ್ನು ಹತ್ಯೆ ಮಾಡಿದೆ. PEN ಅಮೆರಿಕದಂತಹ ಸಂಸ್ಥೆಗಳು ಪ್ಯಾಲೆಸ್ತೀನ್ ಜನರ ಜೀವನ ಮತ್ತು ಸಂಸ್ಕೃತಿಯನ್ನು ನಾಶಮಾಡುವ ಸ್ಪಷ್ಟ ಪ್ರಯತ್ನದ ಮುಂದೆ ರಾಜಕೀಯ ತಟಸ್ಥತೆಯನ್ನು ಮುಂದುವರಿಸಿದರೆ, ಗಾಝಾದಲ್ಲಿ ಅವರ ಕಥೆಯನ್ನು ಹೇಳಲು ಯಾವುದೇ ಬರಹಗಾರರು ಉಳಿಯಲಿದ್ದಾರಾ ಎಂದು ಸಾಹಿತಿಗಳು ಮತ್ತು ಬರಹಗಾರರು ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...